Homeಫ್ಯಾಕ್ಟ್‌ಚೆಕ್FACT CHECK : ಕಳೆದ 7 ವರ್ಷಗಳಲ್ಲಿ ಯಾವುದೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ ಎಂಬ ಕೇಂದ್ರ...

FACT CHECK : ಕಳೆದ 7 ವರ್ಷಗಳಲ್ಲಿ ಯಾವುದೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ ಎಂಬ ಕೇಂದ್ರ ಶಿಕ್ಷಣ ಸಚಿವರ ಹೇಳಿಕೆ ನಿಜವೇ? ಇಲ್ಲಿದೆ ಸತ್ಯಾಸತ್ಯತೆ

- Advertisement -
- Advertisement -

ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಕಳೆದ ಏಳು ವರ್ಷಗಳಲ್ಲಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ ಎಂಬುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದ್ದರು.

ಜುಲೈ 22ರಂದು ಲೋಕಸಭೆಯಲ್ಲಿ ಮಾತನಾಡಿದ್ದ ಪ್ರಧಾನ್ “ಗೌರವಾನ್ವಿತ ಸದಸ್ಯರು ಕಳೆದ 7 ವರ್ಷಗಳಲ್ಲಿ 70 ಬಾರಿ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವ ಕುರಿತು ಪ್ರಶ್ನೆ ಎತ್ತಿದ್ದಾರೆ. ಸರ್, ಸಂಪೂರ್ಣ ಜವಾಬ್ದಾರಿಯೊಂದಿಗೆ ನಾನು ಸದನಕ್ಕೆ ಹೇಳುತ್ತಿದ್ದೇನೆ, ಕಳೆದ 7 ವರ್ಷಗಳಲ್ಲಿ ಯಾವುದೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವುದಕ್ಕೆ ಪುರಾವೆಗಳಿಲ್ಲ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದೆ. ತೀರ್ಪು ಬಂದ ಮೇಲೆ ಈ ಬಗ್ಗೆ ಗೊತ್ತಾಗಲಿದೆ” ಎಂದಿದ್ದರು.

ವಿಡಿಯೋ ಲಿಂಕ್ ಇಲ್ಲಿದೆ (8:50 ನಿಮಿಷದಿಂದ ಸಚಿವರ ಹೇಳಿಕೆಯಿದೆ)

ರಾಜಸ್ಥಾನದ ಚುರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ರಾಹುಲ್ ಕಸ್ವಾನ್ ಅವರು ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಕೇಳಿದ ಪ್ರಶ್ನೆಗೆ ಧರ್ಮೇಂದ್ರ ಪ್ರಧಾನ್ ಮೇಲಿನಂತೆ ಪ್ರತಿಕ್ರಿಯಿಸಿದ್ದರು.

ಹಾಗಾದರೆ, ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದಂತೆ ಕಳೆದ 7 ವರ್ಷಗಳಲ್ಲಿ ಯಾವುದೇ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲವೇ? ಎಂದು ನೋಡೋಣ.

ಫ್ಯಾಕ್ಟ್‌ಚೆಕ್ : ಯಾವುದೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ ಎಂಬ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಹೇಳಿಕೆ ಸುಳ್ಳು ಎಂಬುವುದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ. ಪ್ರಮುಖ ಪ್ರಶ್ನೆ ಪತ್ರಿಕೆಗಳ ಸೋರಿಕೆಯ ಕುರಿತು ಮಾಹಿತಿ ಕೆಳಗಿದೆ.

ಯುಜಿಸಿ-ನೆಟ್ 2024 ಪ್ರಶ್ನೆ ಪತ್ರಿಕೆ ಸೋರಿಕೆ : ವರದಿಗಳ ಪ್ರಕಾರ, ಜೂನ್ 2024ರಲ್ಲಿ ಯುಜಿಸಿ-ನೆಟ್ (ವಿಶ್ವವಿದ್ಯಾಲಯ ಅನುದಾನ ಆಯೋಗ – ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಪರೀಕ್ಷೆಗಳು ನಡೆದ ಮರು ದಿನ ಅದನ್ನು ರದ್ದುಗೊಳಿಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಸುಳಿವು ಸಿಕ್ಕ ಹಿನ್ನೆಲೆ ರದ್ದುಗೊಳಿಸಿರುವುದಾಗಿ ಸ್ವತಃ ಸಚಿವರೇ ತಿಳಿಸಿದ್ದರು.

ಜೂನ್ 20 ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಸಚಿವ ಪ್ರಧಾನ್ “ಯುಜಿಸಿ ಅಧ್ಯಕ್ಷರು ಡಾರ್ಕ್ ನೆಟ್‌ನಲ್ಲಿ ಕೆಲವು ಪ್ರಶ್ನೆಗಳು ಸೋರಿಕೆಯಾದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ ಎಂದು ತಿಳಿಸಿದ್ದರು.

ಸೋರಿಕೆಯಾಗಿರುವ ಪ್ರಶ್ನೆಗಳು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ) ಸಿದ್ಧಪಡಿಸಿರುವ ಮೂಲ ಪ್ರಶ್ನೆ ಪತ್ರಿಕೆಗೆ ಹೊಂದಿಕೆಯಾಗುತ್ತಿವೆ ಎಂದು ಅವರು ಉಲ್ಲೇಖಿಸಿದ್ದರು.

ಸೋರಿಕೆಯಾಗಿರುವ ಪ್ರಶ್ನೆಗಳು ಮತ್ತು ಮೂಲ ಪತ್ರಿಕೆಯ ಪ್ರಶ್ನೆಗಳು ಒಂದೇ ಎಂದು ಖಚಿತವಾದ ಹಿನ್ನೆಲೆ ಪರೀಕ್ಷೆ ರದ್ದುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಲ್ಲದೆ, ಈ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ)ದ ತನಿಖೆಗೆ ವಹಿಸಲಾಗಿದೆ ಎಂದಿದ್ದರು.

ರದ್ದುಗೊಂಡಿರುವ ಯುಜಿಸಿ-ನೆಟ್ ಮರು ಪರೀಕ್ಷೆಗೆ ಈ ವರ್ಷದ ಆಗಸ್ಟ್ 21 ಮತ್ತು ಸೆಪ್ಟೆಂಬರ್ 4 ರ ನಡುವೆ ದಿನಾಂಕ ನಿಗದಿಪಡಿಸಲಾಗಿದೆ.

ವಿಡಿಯೋ ಲಿಂಕ್ ಇಲ್ಲಿದೆ 

ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ ವಿಷಯಗಳು ಮತ್ತು ಪ್ರಕರಣವನ್ನು ಸಿಬಿಐಗೆ ವಹಿಸಿರುವುದು ಯುಜಿಸಿ-ನೆಟ್ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವುದನ್ನು ಖಚಿತಪಡಿಸಿದೆ.

ಯುಜಿಸಿ-ನೆಟ್ ಹಿಂದಿ ಪ್ರಶ್ನೆ ಪತ್ರಿಕೆ 2021: ಡಿಸೆಂಬರ್ 26, 2021ರಂದು ನಡೆದ ಯುಜಿಸಿ-ನೆಟ್ ಹಿಂದಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಹರಿಯಾಣ ಪೊಲೀಸರ ತಂಡವು ಈ ಪ್ರಕರಣ ಸಂಬಂಧ ಸಿಆರ್‌ಪಿಎಫ್‌ ಕಾನ್‌ಸ್ಟೇಬಲ್ ಒಬ್ಬರನ್ನು ಬಂಧಿಸಲು ಪ್ರಯತ್ನಿಸುತ್ತಿದೆ ಎಂದು ಡಿಸೆಂಬರ್ 30, 2021ರಂದು ಇಂಡಿಯಾ ಟುಡೇ ವರದಿ ಮಾಡಿತ್ತು.

ಪ್ರಕರಣದ ಬೆಳವಣಿಗೆಗಳ ಬಗ್ಗೆ ತನಿಖಾ ತಂಡಕ್ಕೆ ತಿಳಿಸುವಂತೆ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ಪ್ರತಿಯನ್ನು ಯುಜಿಸಿಗೆ ಕಳುಹಿಸಲಾಗಿತ್ತು.

ಡಿಸೆಂಬರ್ 30, 2022ರಂದು ಇಂಡಿಯನ್ ಎಕ್ಸ್‌ಪ್ರೆಸ್ ತನ್ನ ವರದಿಯಲ್ಲಿ, ಪ್ರಶ್ನೆ ಪತ್ರಿಕೆ ಸೋರಿಕೆಯ ಬಗ್ಗೆ ಮಾಹಿತಿ ಪಡೆದ ನಂತರ ಪಂಜಾಬ್‌ನ ಜಿಂದ್ ಮತ್ತು ಭಿವಾನಿ ಜಿಲ್ಲೆಗಳ ಸುಮಾರು ಒಂಬತ್ತು ಜನರನ್ನು ಬಂಧಿಸಲಾಗಿದೆ ಎಂದು ಹೇಳಿತ್ತು.

ಆರೋಪಿಗಳಲ್ಲಿ ಒಬ್ಬನಾದ ವಿಕಾಸ್ ಎಂಬಾತ ಪರೀಕ್ಷೆ ನಡೆಯುವ ಸುಮಾರು ಆರು ಗಂಟೆಗಳ ಮೊದಲು ಪ್ರಶ್ನೆ ಪತ್ರಿಕೆಯನ್ನು ವಾಟ್ಸಾಪ್‌ನಲ್ಲಿ ಕಳುಹಿಸಿದ್ದ ಎಂದು ಬಂಧಿತ ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

“ಹಿಂದಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ 150 ಪ್ರಶ್ನೆಗಳನ್ನು ಮುಂಚಿತವಾಗಿ ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ” ಎಂದು ಆರೋಪಿಗಳು ಹೇಳಿಕೊಂಡಿದ್ದಾರೆ. ಈ ಪ್ರಶ್ನೆಗಳನ್ನು ಅವರ ಸೆಲ್‌ಫೋನ್‌ನಲ್ಲಿಯೂ ನಾವು ಕಂಡುಕೊಂಡಿದ್ದೇವೆ. ಆದರೆ ಇನ್ನೂ ನಾವು ಅದನ್ನು ಯುಜಿಸಿ ಅಧಿಕಾರಿಗಳಿಂದ ಪರಿಶೀಲಿಸಲು ಬಯಸುತ್ತೇವೆ” ಎಂದು ಅದು ಅಧಿಕಾರಿಯೊಬ್ಬರನ್ನು ಹೇಳಿದ್ದಾಗಿ ವರದಿಯಲ್ಲಿ ತಿಳಿಸಲಾಗಿತ್ತು.

ನೀಟ್ 2021 ಪ್ರಶ್ನೆ ಪತ್ರಿಕೆ ಸೋರಿಕೆ : ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ರಾಜಸ್ಥಾನದ ಸಿಕಾರ್‌ನಲ್ಲಿ ವ್ಯಕ್ತಿಯೊಬ್ಬ ಪ್ರಶ್ನೆ ಪತ್ರಿಕೆಯ ಫೋಟೋ ಸೆರೆಹಿಡಿದು ಇತರರಿಗೆ ಕಳುಹಿಸಿದ ನಂತರ ಅದು ಸೋರಿಕೆಯಾಗಿತ್ತು.

ಈ ಸಂಬಂಧ ಜೈಪುರ ಪೊಲೀಸರು ರಾಜಸ್ಥಾನದ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (RIET) ನಲ್ಲಿರುವ ಪರೀಕ್ಷಾ ಕೇಂದ್ರದಿಂದ ಬಾಲಕಿ ಸೇರಿದಂತೆ ಸುಮಾರು ಎಂಟು ಜನರನ್ನು ಬಂಧಿಸಿದ್ದರು.

ಆರೋಪಿ ದಿನೇಶ್ವರಿ ಕುಮಾರ್, ಆಕೆಯ ಚಿಕ್ಕಪ್ಪ, ಪರೀಕ್ಷಾ ನಿರೀಕ್ಷಕ ರಾಮ್ ಸಿಂಗ್ ಮತ್ತು ಪರೀಕ್ಷಾ ಕೇಂದ್ರದ ಆಡಳಿತ ಘಟಕದ ಉಸ್ತುವಾರಿ ಮುಖೇಶ್ ಅವರನ್ನು ಬಂಧಿಸಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ತಿಳಿಸಿತ್ತು.

ರಾಮ್ ಸಿಂಗ್ ಮತ್ತು ಮುಖೇಶ್ ಅವರು ಜೈಪುರದ ಚಿತ್ರಕೂಟ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳಿಗೆ ಪ್ರಶ್ನೆ ಪತ್ರಿಕೆಯ ಫೋಟೋಗಳನ್ನು ಕಳುಹಿಸಿದ್ದರು. ನಂತರ ಅವರು ಅದನ್ನು ಸಿಕಾರ್‌ನಲ್ಲಿರುವ ಇತರರಿಗೆ ರವಾನಿಸಿದ್ದರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಇತರ ಪರೀಕ್ಷಾ ಅಕ್ರಮಗಳು : ಸೆಪ್ಟೆಂಬರ್ 2021ರಲ್ಲಿ, ಹರಿಯಾಣದ ಸೋನೆಪತ್‌ನಲ್ಲಿರುವ ಕೇಂದ್ರದಿಂದ ರಿಮೋಟ್ ಪ್ರವೇಶದ ಮೂಲಕ ಅಭ್ಯರ್ಥಿಗಳ ಪ್ರಶ್ನೆ ಪತ್ರಿಕೆಯನ್ನು ಪರಿಹರಿಸಿದ್ದಕ್ಕಾಗಿ ಅಫಿನಿಟಿ ಎಜುಕೇಶನ್ ಪ್ರೈವೇಟ್ ಲಿಮಿಟೆಡ್, ಅದರ ನಿರ್ದೇಶಕರು, ಉದ್ಯೋಗಿಗಳು ಮತ್ತು ಇತರರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು.

ಪರೀಕ್ಷೆ ನಡೆಸಿದ ಸಾಫ್ಟ್‌ವೇರ್ ಅನ್ನು ಹ್ಯಾಕ್ ಮಾಡಿದ ಆರೋಪದ ಮೇಲೆ ಅಕ್ಟೋಬರ್ 2022 ರಲ್ಲಿ ಮಿಖಾಯಿಲ್ ಶಾರ್ಗಿನ್ ಎಂಬ ರಷ್ಯಾದ ಹ್ಯಾಕರ್ ಅನ್ನು ಸಿಬಿಐ ಬಂಧಿಸಿತ್ತು.

2021ರ ಜೆಇಇ ಮುಖ್ಯ ಪರೀಕ್ಷೆಯ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಆಗಿದ್ದ ವಿನಯ್ ದಹಿಯಾ ಅವರನ್ನು ಮಾರ್ಚ್ 2023 ರಲ್ಲಿ ಸಿಬಿಐ ಬಂಧಿಸಿತ್ತು.

ನಾವು ಮೇಲೆ ಉಲ್ಲೇಖಿಸಿ ಕೆಲ ಪ್ರಕರಣಗಳು ಕಳೆದ ಕೆಲ ವರ್ಷಗಳಲ್ಲಿ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ ಎಂಬುವುದನ್ನು ಪುಷ್ಠೀಕರಿಸುತ್ತದೆ. ಹಾಗಾಗಿ, ಯಾವುದೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ ಎಂಬ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಹೇಳಿಕೆ ಸುಳ್ಳು

ನೀಟ್ -ಯುಜಿ 2024 ಪ್ರಶ್ನೆ ಪತ್ರಿಕೆಯೂ ಸೋರಿಕೆಯಾಗಿದೆ. ಹಾಗಾಗಿ ಮರು ಪರೀಕ್ಷೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ಈ ಸಂಬಂಧ ಜುಲೈ 23, 2024ರಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, “ನೀಟ್-ಯುಜಿ ಮರು ಪರೀಕ್ಷೆ ಇಲ್ಲ, ಪರೀಕ್ಷಾ ಪಾವಿತ್ರ್ಯ ಉಲ್ಲಂಘಿಸಲಾಗಿದೆ ಎಂದು ತೀರ್ಮಾನಿಸಲು ಸಾಧ್ಯವಿಲ್ಲ” ಎಂದಿದೆ.

ಇದನ್ನೂ ಓದಿ : FACT CHECK : ಮುಸ್ಲಿಮರು ಹಿಂದೂ ದೇವಾಲಯ ಕೆಡವಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...