Homeಫ್ಯಾಕ್ಟ್‌ಚೆಕ್FACT CHECK : ಕಳೆದ 7 ವರ್ಷಗಳಲ್ಲಿ ಯಾವುದೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ ಎಂಬ ಕೇಂದ್ರ...

FACT CHECK : ಕಳೆದ 7 ವರ್ಷಗಳಲ್ಲಿ ಯಾವುದೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ ಎಂಬ ಕೇಂದ್ರ ಶಿಕ್ಷಣ ಸಚಿವರ ಹೇಳಿಕೆ ನಿಜವೇ? ಇಲ್ಲಿದೆ ಸತ್ಯಾಸತ್ಯತೆ

- Advertisement -
- Advertisement -

ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಕಳೆದ ಏಳು ವರ್ಷಗಳಲ್ಲಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ ಎಂಬುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದ್ದರು.

ಜುಲೈ 22ರಂದು ಲೋಕಸಭೆಯಲ್ಲಿ ಮಾತನಾಡಿದ್ದ ಪ್ರಧಾನ್ “ಗೌರವಾನ್ವಿತ ಸದಸ್ಯರು ಕಳೆದ 7 ವರ್ಷಗಳಲ್ಲಿ 70 ಬಾರಿ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವ ಕುರಿತು ಪ್ರಶ್ನೆ ಎತ್ತಿದ್ದಾರೆ. ಸರ್, ಸಂಪೂರ್ಣ ಜವಾಬ್ದಾರಿಯೊಂದಿಗೆ ನಾನು ಸದನಕ್ಕೆ ಹೇಳುತ್ತಿದ್ದೇನೆ, ಕಳೆದ 7 ವರ್ಷಗಳಲ್ಲಿ ಯಾವುದೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವುದಕ್ಕೆ ಪುರಾವೆಗಳಿಲ್ಲ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದೆ. ತೀರ್ಪು ಬಂದ ಮೇಲೆ ಈ ಬಗ್ಗೆ ಗೊತ್ತಾಗಲಿದೆ” ಎಂದಿದ್ದರು.

ವಿಡಿಯೋ ಲಿಂಕ್ ಇಲ್ಲಿದೆ (8:50 ನಿಮಿಷದಿಂದ ಸಚಿವರ ಹೇಳಿಕೆಯಿದೆ)

ರಾಜಸ್ಥಾನದ ಚುರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ರಾಹುಲ್ ಕಸ್ವಾನ್ ಅವರು ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಕೇಳಿದ ಪ್ರಶ್ನೆಗೆ ಧರ್ಮೇಂದ್ರ ಪ್ರಧಾನ್ ಮೇಲಿನಂತೆ ಪ್ರತಿಕ್ರಿಯಿಸಿದ್ದರು.

ಹಾಗಾದರೆ, ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದಂತೆ ಕಳೆದ 7 ವರ್ಷಗಳಲ್ಲಿ ಯಾವುದೇ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲವೇ? ಎಂದು ನೋಡೋಣ.

ಫ್ಯಾಕ್ಟ್‌ಚೆಕ್ : ಯಾವುದೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ ಎಂಬ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಹೇಳಿಕೆ ಸುಳ್ಳು ಎಂಬುವುದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ. ಪ್ರಮುಖ ಪ್ರಶ್ನೆ ಪತ್ರಿಕೆಗಳ ಸೋರಿಕೆಯ ಕುರಿತು ಮಾಹಿತಿ ಕೆಳಗಿದೆ.

ಯುಜಿಸಿ-ನೆಟ್ 2024 ಪ್ರಶ್ನೆ ಪತ್ರಿಕೆ ಸೋರಿಕೆ : ವರದಿಗಳ ಪ್ರಕಾರ, ಜೂನ್ 2024ರಲ್ಲಿ ಯುಜಿಸಿ-ನೆಟ್ (ವಿಶ್ವವಿದ್ಯಾಲಯ ಅನುದಾನ ಆಯೋಗ – ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಪರೀಕ್ಷೆಗಳು ನಡೆದ ಮರು ದಿನ ಅದನ್ನು ರದ್ದುಗೊಳಿಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಸುಳಿವು ಸಿಕ್ಕ ಹಿನ್ನೆಲೆ ರದ್ದುಗೊಳಿಸಿರುವುದಾಗಿ ಸ್ವತಃ ಸಚಿವರೇ ತಿಳಿಸಿದ್ದರು.

ಜೂನ್ 20 ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಸಚಿವ ಪ್ರಧಾನ್ “ಯುಜಿಸಿ ಅಧ್ಯಕ್ಷರು ಡಾರ್ಕ್ ನೆಟ್‌ನಲ್ಲಿ ಕೆಲವು ಪ್ರಶ್ನೆಗಳು ಸೋರಿಕೆಯಾದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ ಎಂದು ತಿಳಿಸಿದ್ದರು.

ಸೋರಿಕೆಯಾಗಿರುವ ಪ್ರಶ್ನೆಗಳು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ) ಸಿದ್ಧಪಡಿಸಿರುವ ಮೂಲ ಪ್ರಶ್ನೆ ಪತ್ರಿಕೆಗೆ ಹೊಂದಿಕೆಯಾಗುತ್ತಿವೆ ಎಂದು ಅವರು ಉಲ್ಲೇಖಿಸಿದ್ದರು.

ಸೋರಿಕೆಯಾಗಿರುವ ಪ್ರಶ್ನೆಗಳು ಮತ್ತು ಮೂಲ ಪತ್ರಿಕೆಯ ಪ್ರಶ್ನೆಗಳು ಒಂದೇ ಎಂದು ಖಚಿತವಾದ ಹಿನ್ನೆಲೆ ಪರೀಕ್ಷೆ ರದ್ದುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಲ್ಲದೆ, ಈ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ)ದ ತನಿಖೆಗೆ ವಹಿಸಲಾಗಿದೆ ಎಂದಿದ್ದರು.

ರದ್ದುಗೊಂಡಿರುವ ಯುಜಿಸಿ-ನೆಟ್ ಮರು ಪರೀಕ್ಷೆಗೆ ಈ ವರ್ಷದ ಆಗಸ್ಟ್ 21 ಮತ್ತು ಸೆಪ್ಟೆಂಬರ್ 4 ರ ನಡುವೆ ದಿನಾಂಕ ನಿಗದಿಪಡಿಸಲಾಗಿದೆ.

ವಿಡಿಯೋ ಲಿಂಕ್ ಇಲ್ಲಿದೆ 

ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ ವಿಷಯಗಳು ಮತ್ತು ಪ್ರಕರಣವನ್ನು ಸಿಬಿಐಗೆ ವಹಿಸಿರುವುದು ಯುಜಿಸಿ-ನೆಟ್ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವುದನ್ನು ಖಚಿತಪಡಿಸಿದೆ.

ಯುಜಿಸಿ-ನೆಟ್ ಹಿಂದಿ ಪ್ರಶ್ನೆ ಪತ್ರಿಕೆ 2021: ಡಿಸೆಂಬರ್ 26, 2021ರಂದು ನಡೆದ ಯುಜಿಸಿ-ನೆಟ್ ಹಿಂದಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಹರಿಯಾಣ ಪೊಲೀಸರ ತಂಡವು ಈ ಪ್ರಕರಣ ಸಂಬಂಧ ಸಿಆರ್‌ಪಿಎಫ್‌ ಕಾನ್‌ಸ್ಟೇಬಲ್ ಒಬ್ಬರನ್ನು ಬಂಧಿಸಲು ಪ್ರಯತ್ನಿಸುತ್ತಿದೆ ಎಂದು ಡಿಸೆಂಬರ್ 30, 2021ರಂದು ಇಂಡಿಯಾ ಟುಡೇ ವರದಿ ಮಾಡಿತ್ತು.

ಪ್ರಕರಣದ ಬೆಳವಣಿಗೆಗಳ ಬಗ್ಗೆ ತನಿಖಾ ತಂಡಕ್ಕೆ ತಿಳಿಸುವಂತೆ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ಪ್ರತಿಯನ್ನು ಯುಜಿಸಿಗೆ ಕಳುಹಿಸಲಾಗಿತ್ತು.

ಡಿಸೆಂಬರ್ 30, 2022ರಂದು ಇಂಡಿಯನ್ ಎಕ್ಸ್‌ಪ್ರೆಸ್ ತನ್ನ ವರದಿಯಲ್ಲಿ, ಪ್ರಶ್ನೆ ಪತ್ರಿಕೆ ಸೋರಿಕೆಯ ಬಗ್ಗೆ ಮಾಹಿತಿ ಪಡೆದ ನಂತರ ಪಂಜಾಬ್‌ನ ಜಿಂದ್ ಮತ್ತು ಭಿವಾನಿ ಜಿಲ್ಲೆಗಳ ಸುಮಾರು ಒಂಬತ್ತು ಜನರನ್ನು ಬಂಧಿಸಲಾಗಿದೆ ಎಂದು ಹೇಳಿತ್ತು.

ಆರೋಪಿಗಳಲ್ಲಿ ಒಬ್ಬನಾದ ವಿಕಾಸ್ ಎಂಬಾತ ಪರೀಕ್ಷೆ ನಡೆಯುವ ಸುಮಾರು ಆರು ಗಂಟೆಗಳ ಮೊದಲು ಪ್ರಶ್ನೆ ಪತ್ರಿಕೆಯನ್ನು ವಾಟ್ಸಾಪ್‌ನಲ್ಲಿ ಕಳುಹಿಸಿದ್ದ ಎಂದು ಬಂಧಿತ ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

“ಹಿಂದಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ 150 ಪ್ರಶ್ನೆಗಳನ್ನು ಮುಂಚಿತವಾಗಿ ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ” ಎಂದು ಆರೋಪಿಗಳು ಹೇಳಿಕೊಂಡಿದ್ದಾರೆ. ಈ ಪ್ರಶ್ನೆಗಳನ್ನು ಅವರ ಸೆಲ್‌ಫೋನ್‌ನಲ್ಲಿಯೂ ನಾವು ಕಂಡುಕೊಂಡಿದ್ದೇವೆ. ಆದರೆ ಇನ್ನೂ ನಾವು ಅದನ್ನು ಯುಜಿಸಿ ಅಧಿಕಾರಿಗಳಿಂದ ಪರಿಶೀಲಿಸಲು ಬಯಸುತ್ತೇವೆ” ಎಂದು ಅದು ಅಧಿಕಾರಿಯೊಬ್ಬರನ್ನು ಹೇಳಿದ್ದಾಗಿ ವರದಿಯಲ್ಲಿ ತಿಳಿಸಲಾಗಿತ್ತು.

ನೀಟ್ 2021 ಪ್ರಶ್ನೆ ಪತ್ರಿಕೆ ಸೋರಿಕೆ : ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ರಾಜಸ್ಥಾನದ ಸಿಕಾರ್‌ನಲ್ಲಿ ವ್ಯಕ್ತಿಯೊಬ್ಬ ಪ್ರಶ್ನೆ ಪತ್ರಿಕೆಯ ಫೋಟೋ ಸೆರೆಹಿಡಿದು ಇತರರಿಗೆ ಕಳುಹಿಸಿದ ನಂತರ ಅದು ಸೋರಿಕೆಯಾಗಿತ್ತು.

ಈ ಸಂಬಂಧ ಜೈಪುರ ಪೊಲೀಸರು ರಾಜಸ್ಥಾನದ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (RIET) ನಲ್ಲಿರುವ ಪರೀಕ್ಷಾ ಕೇಂದ್ರದಿಂದ ಬಾಲಕಿ ಸೇರಿದಂತೆ ಸುಮಾರು ಎಂಟು ಜನರನ್ನು ಬಂಧಿಸಿದ್ದರು.

ಆರೋಪಿ ದಿನೇಶ್ವರಿ ಕುಮಾರ್, ಆಕೆಯ ಚಿಕ್ಕಪ್ಪ, ಪರೀಕ್ಷಾ ನಿರೀಕ್ಷಕ ರಾಮ್ ಸಿಂಗ್ ಮತ್ತು ಪರೀಕ್ಷಾ ಕೇಂದ್ರದ ಆಡಳಿತ ಘಟಕದ ಉಸ್ತುವಾರಿ ಮುಖೇಶ್ ಅವರನ್ನು ಬಂಧಿಸಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ತಿಳಿಸಿತ್ತು.

ರಾಮ್ ಸಿಂಗ್ ಮತ್ತು ಮುಖೇಶ್ ಅವರು ಜೈಪುರದ ಚಿತ್ರಕೂಟ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳಿಗೆ ಪ್ರಶ್ನೆ ಪತ್ರಿಕೆಯ ಫೋಟೋಗಳನ್ನು ಕಳುಹಿಸಿದ್ದರು. ನಂತರ ಅವರು ಅದನ್ನು ಸಿಕಾರ್‌ನಲ್ಲಿರುವ ಇತರರಿಗೆ ರವಾನಿಸಿದ್ದರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಇತರ ಪರೀಕ್ಷಾ ಅಕ್ರಮಗಳು : ಸೆಪ್ಟೆಂಬರ್ 2021ರಲ್ಲಿ, ಹರಿಯಾಣದ ಸೋನೆಪತ್‌ನಲ್ಲಿರುವ ಕೇಂದ್ರದಿಂದ ರಿಮೋಟ್ ಪ್ರವೇಶದ ಮೂಲಕ ಅಭ್ಯರ್ಥಿಗಳ ಪ್ರಶ್ನೆ ಪತ್ರಿಕೆಯನ್ನು ಪರಿಹರಿಸಿದ್ದಕ್ಕಾಗಿ ಅಫಿನಿಟಿ ಎಜುಕೇಶನ್ ಪ್ರೈವೇಟ್ ಲಿಮಿಟೆಡ್, ಅದರ ನಿರ್ದೇಶಕರು, ಉದ್ಯೋಗಿಗಳು ಮತ್ತು ಇತರರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು.

ಪರೀಕ್ಷೆ ನಡೆಸಿದ ಸಾಫ್ಟ್‌ವೇರ್ ಅನ್ನು ಹ್ಯಾಕ್ ಮಾಡಿದ ಆರೋಪದ ಮೇಲೆ ಅಕ್ಟೋಬರ್ 2022 ರಲ್ಲಿ ಮಿಖಾಯಿಲ್ ಶಾರ್ಗಿನ್ ಎಂಬ ರಷ್ಯಾದ ಹ್ಯಾಕರ್ ಅನ್ನು ಸಿಬಿಐ ಬಂಧಿಸಿತ್ತು.

2021ರ ಜೆಇಇ ಮುಖ್ಯ ಪರೀಕ್ಷೆಯ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಆಗಿದ್ದ ವಿನಯ್ ದಹಿಯಾ ಅವರನ್ನು ಮಾರ್ಚ್ 2023 ರಲ್ಲಿ ಸಿಬಿಐ ಬಂಧಿಸಿತ್ತು.

ನಾವು ಮೇಲೆ ಉಲ್ಲೇಖಿಸಿ ಕೆಲ ಪ್ರಕರಣಗಳು ಕಳೆದ ಕೆಲ ವರ್ಷಗಳಲ್ಲಿ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ ಎಂಬುವುದನ್ನು ಪುಷ್ಠೀಕರಿಸುತ್ತದೆ. ಹಾಗಾಗಿ, ಯಾವುದೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ ಎಂಬ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಹೇಳಿಕೆ ಸುಳ್ಳು

ನೀಟ್ -ಯುಜಿ 2024 ಪ್ರಶ್ನೆ ಪತ್ರಿಕೆಯೂ ಸೋರಿಕೆಯಾಗಿದೆ. ಹಾಗಾಗಿ ಮರು ಪರೀಕ್ಷೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ಈ ಸಂಬಂಧ ಜುಲೈ 23, 2024ರಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, “ನೀಟ್-ಯುಜಿ ಮರು ಪರೀಕ್ಷೆ ಇಲ್ಲ, ಪರೀಕ್ಷಾ ಪಾವಿತ್ರ್ಯ ಉಲ್ಲಂಘಿಸಲಾಗಿದೆ ಎಂದು ತೀರ್ಮಾನಿಸಲು ಸಾಧ್ಯವಿಲ್ಲ” ಎಂದಿದೆ.

ಇದನ್ನೂ ಓದಿ : FACT CHECK : ಮುಸ್ಲಿಮರು ಹಿಂದೂ ದೇವಾಲಯ ಕೆಡವಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...