Homeಫ್ಯಾಕ್ಟ್‌ಚೆಕ್FACT CHECK : ಕಳೆದ 7 ವರ್ಷಗಳಲ್ಲಿ ಯಾವುದೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ ಎಂಬ ಕೇಂದ್ರ...

FACT CHECK : ಕಳೆದ 7 ವರ್ಷಗಳಲ್ಲಿ ಯಾವುದೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ ಎಂಬ ಕೇಂದ್ರ ಶಿಕ್ಷಣ ಸಚಿವರ ಹೇಳಿಕೆ ನಿಜವೇ? ಇಲ್ಲಿದೆ ಸತ್ಯಾಸತ್ಯತೆ

- Advertisement -
- Advertisement -

ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಕಳೆದ ಏಳು ವರ್ಷಗಳಲ್ಲಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ ಎಂಬುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದ್ದರು.

ಜುಲೈ 22ರಂದು ಲೋಕಸಭೆಯಲ್ಲಿ ಮಾತನಾಡಿದ್ದ ಪ್ರಧಾನ್ “ಗೌರವಾನ್ವಿತ ಸದಸ್ಯರು ಕಳೆದ 7 ವರ್ಷಗಳಲ್ಲಿ 70 ಬಾರಿ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವ ಕುರಿತು ಪ್ರಶ್ನೆ ಎತ್ತಿದ್ದಾರೆ. ಸರ್, ಸಂಪೂರ್ಣ ಜವಾಬ್ದಾರಿಯೊಂದಿಗೆ ನಾನು ಸದನಕ್ಕೆ ಹೇಳುತ್ತಿದ್ದೇನೆ, ಕಳೆದ 7 ವರ್ಷಗಳಲ್ಲಿ ಯಾವುದೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವುದಕ್ಕೆ ಪುರಾವೆಗಳಿಲ್ಲ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದೆ. ತೀರ್ಪು ಬಂದ ಮೇಲೆ ಈ ಬಗ್ಗೆ ಗೊತ್ತಾಗಲಿದೆ” ಎಂದಿದ್ದರು.

ವಿಡಿಯೋ ಲಿಂಕ್ ಇಲ್ಲಿದೆ (8:50 ನಿಮಿಷದಿಂದ ಸಚಿವರ ಹೇಳಿಕೆಯಿದೆ)

ರಾಜಸ್ಥಾನದ ಚುರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ರಾಹುಲ್ ಕಸ್ವಾನ್ ಅವರು ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಕೇಳಿದ ಪ್ರಶ್ನೆಗೆ ಧರ್ಮೇಂದ್ರ ಪ್ರಧಾನ್ ಮೇಲಿನಂತೆ ಪ್ರತಿಕ್ರಿಯಿಸಿದ್ದರು.

ಹಾಗಾದರೆ, ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದಂತೆ ಕಳೆದ 7 ವರ್ಷಗಳಲ್ಲಿ ಯಾವುದೇ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲವೇ? ಎಂದು ನೋಡೋಣ.

ಫ್ಯಾಕ್ಟ್‌ಚೆಕ್ : ಯಾವುದೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ ಎಂಬ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಹೇಳಿಕೆ ಸುಳ್ಳು ಎಂಬುವುದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ. ಪ್ರಮುಖ ಪ್ರಶ್ನೆ ಪತ್ರಿಕೆಗಳ ಸೋರಿಕೆಯ ಕುರಿತು ಮಾಹಿತಿ ಕೆಳಗಿದೆ.

ಯುಜಿಸಿ-ನೆಟ್ 2024 ಪ್ರಶ್ನೆ ಪತ್ರಿಕೆ ಸೋರಿಕೆ : ವರದಿಗಳ ಪ್ರಕಾರ, ಜೂನ್ 2024ರಲ್ಲಿ ಯುಜಿಸಿ-ನೆಟ್ (ವಿಶ್ವವಿದ್ಯಾಲಯ ಅನುದಾನ ಆಯೋಗ – ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಪರೀಕ್ಷೆಗಳು ನಡೆದ ಮರು ದಿನ ಅದನ್ನು ರದ್ದುಗೊಳಿಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಸುಳಿವು ಸಿಕ್ಕ ಹಿನ್ನೆಲೆ ರದ್ದುಗೊಳಿಸಿರುವುದಾಗಿ ಸ್ವತಃ ಸಚಿವರೇ ತಿಳಿಸಿದ್ದರು.

ಜೂನ್ 20 ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಸಚಿವ ಪ್ರಧಾನ್ “ಯುಜಿಸಿ ಅಧ್ಯಕ್ಷರು ಡಾರ್ಕ್ ನೆಟ್‌ನಲ್ಲಿ ಕೆಲವು ಪ್ರಶ್ನೆಗಳು ಸೋರಿಕೆಯಾದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ ಎಂದು ತಿಳಿಸಿದ್ದರು.

ಸೋರಿಕೆಯಾಗಿರುವ ಪ್ರಶ್ನೆಗಳು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ) ಸಿದ್ಧಪಡಿಸಿರುವ ಮೂಲ ಪ್ರಶ್ನೆ ಪತ್ರಿಕೆಗೆ ಹೊಂದಿಕೆಯಾಗುತ್ತಿವೆ ಎಂದು ಅವರು ಉಲ್ಲೇಖಿಸಿದ್ದರು.

ಸೋರಿಕೆಯಾಗಿರುವ ಪ್ರಶ್ನೆಗಳು ಮತ್ತು ಮೂಲ ಪತ್ರಿಕೆಯ ಪ್ರಶ್ನೆಗಳು ಒಂದೇ ಎಂದು ಖಚಿತವಾದ ಹಿನ್ನೆಲೆ ಪರೀಕ್ಷೆ ರದ್ದುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಲ್ಲದೆ, ಈ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ)ದ ತನಿಖೆಗೆ ವಹಿಸಲಾಗಿದೆ ಎಂದಿದ್ದರು.

ರದ್ದುಗೊಂಡಿರುವ ಯುಜಿಸಿ-ನೆಟ್ ಮರು ಪರೀಕ್ಷೆಗೆ ಈ ವರ್ಷದ ಆಗಸ್ಟ್ 21 ಮತ್ತು ಸೆಪ್ಟೆಂಬರ್ 4 ರ ನಡುವೆ ದಿನಾಂಕ ನಿಗದಿಪಡಿಸಲಾಗಿದೆ.

ವಿಡಿಯೋ ಲಿಂಕ್ ಇಲ್ಲಿದೆ 

ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ ವಿಷಯಗಳು ಮತ್ತು ಪ್ರಕರಣವನ್ನು ಸಿಬಿಐಗೆ ವಹಿಸಿರುವುದು ಯುಜಿಸಿ-ನೆಟ್ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವುದನ್ನು ಖಚಿತಪಡಿಸಿದೆ.

ಯುಜಿಸಿ-ನೆಟ್ ಹಿಂದಿ ಪ್ರಶ್ನೆ ಪತ್ರಿಕೆ 2021: ಡಿಸೆಂಬರ್ 26, 2021ರಂದು ನಡೆದ ಯುಜಿಸಿ-ನೆಟ್ ಹಿಂದಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಹರಿಯಾಣ ಪೊಲೀಸರ ತಂಡವು ಈ ಪ್ರಕರಣ ಸಂಬಂಧ ಸಿಆರ್‌ಪಿಎಫ್‌ ಕಾನ್‌ಸ್ಟೇಬಲ್ ಒಬ್ಬರನ್ನು ಬಂಧಿಸಲು ಪ್ರಯತ್ನಿಸುತ್ತಿದೆ ಎಂದು ಡಿಸೆಂಬರ್ 30, 2021ರಂದು ಇಂಡಿಯಾ ಟುಡೇ ವರದಿ ಮಾಡಿತ್ತು.

ಪ್ರಕರಣದ ಬೆಳವಣಿಗೆಗಳ ಬಗ್ಗೆ ತನಿಖಾ ತಂಡಕ್ಕೆ ತಿಳಿಸುವಂತೆ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ಪ್ರತಿಯನ್ನು ಯುಜಿಸಿಗೆ ಕಳುಹಿಸಲಾಗಿತ್ತು.

ಡಿಸೆಂಬರ್ 30, 2022ರಂದು ಇಂಡಿಯನ್ ಎಕ್ಸ್‌ಪ್ರೆಸ್ ತನ್ನ ವರದಿಯಲ್ಲಿ, ಪ್ರಶ್ನೆ ಪತ್ರಿಕೆ ಸೋರಿಕೆಯ ಬಗ್ಗೆ ಮಾಹಿತಿ ಪಡೆದ ನಂತರ ಪಂಜಾಬ್‌ನ ಜಿಂದ್ ಮತ್ತು ಭಿವಾನಿ ಜಿಲ್ಲೆಗಳ ಸುಮಾರು ಒಂಬತ್ತು ಜನರನ್ನು ಬಂಧಿಸಲಾಗಿದೆ ಎಂದು ಹೇಳಿತ್ತು.

ಆರೋಪಿಗಳಲ್ಲಿ ಒಬ್ಬನಾದ ವಿಕಾಸ್ ಎಂಬಾತ ಪರೀಕ್ಷೆ ನಡೆಯುವ ಸುಮಾರು ಆರು ಗಂಟೆಗಳ ಮೊದಲು ಪ್ರಶ್ನೆ ಪತ್ರಿಕೆಯನ್ನು ವಾಟ್ಸಾಪ್‌ನಲ್ಲಿ ಕಳುಹಿಸಿದ್ದ ಎಂದು ಬಂಧಿತ ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

“ಹಿಂದಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ 150 ಪ್ರಶ್ನೆಗಳನ್ನು ಮುಂಚಿತವಾಗಿ ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ” ಎಂದು ಆರೋಪಿಗಳು ಹೇಳಿಕೊಂಡಿದ್ದಾರೆ. ಈ ಪ್ರಶ್ನೆಗಳನ್ನು ಅವರ ಸೆಲ್‌ಫೋನ್‌ನಲ್ಲಿಯೂ ನಾವು ಕಂಡುಕೊಂಡಿದ್ದೇವೆ. ಆದರೆ ಇನ್ನೂ ನಾವು ಅದನ್ನು ಯುಜಿಸಿ ಅಧಿಕಾರಿಗಳಿಂದ ಪರಿಶೀಲಿಸಲು ಬಯಸುತ್ತೇವೆ” ಎಂದು ಅದು ಅಧಿಕಾರಿಯೊಬ್ಬರನ್ನು ಹೇಳಿದ್ದಾಗಿ ವರದಿಯಲ್ಲಿ ತಿಳಿಸಲಾಗಿತ್ತು.

ನೀಟ್ 2021 ಪ್ರಶ್ನೆ ಪತ್ರಿಕೆ ಸೋರಿಕೆ : ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ರಾಜಸ್ಥಾನದ ಸಿಕಾರ್‌ನಲ್ಲಿ ವ್ಯಕ್ತಿಯೊಬ್ಬ ಪ್ರಶ್ನೆ ಪತ್ರಿಕೆಯ ಫೋಟೋ ಸೆರೆಹಿಡಿದು ಇತರರಿಗೆ ಕಳುಹಿಸಿದ ನಂತರ ಅದು ಸೋರಿಕೆಯಾಗಿತ್ತು.

ಈ ಸಂಬಂಧ ಜೈಪುರ ಪೊಲೀಸರು ರಾಜಸ್ಥಾನದ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (RIET) ನಲ್ಲಿರುವ ಪರೀಕ್ಷಾ ಕೇಂದ್ರದಿಂದ ಬಾಲಕಿ ಸೇರಿದಂತೆ ಸುಮಾರು ಎಂಟು ಜನರನ್ನು ಬಂಧಿಸಿದ್ದರು.

ಆರೋಪಿ ದಿನೇಶ್ವರಿ ಕುಮಾರ್, ಆಕೆಯ ಚಿಕ್ಕಪ್ಪ, ಪರೀಕ್ಷಾ ನಿರೀಕ್ಷಕ ರಾಮ್ ಸಿಂಗ್ ಮತ್ತು ಪರೀಕ್ಷಾ ಕೇಂದ್ರದ ಆಡಳಿತ ಘಟಕದ ಉಸ್ತುವಾರಿ ಮುಖೇಶ್ ಅವರನ್ನು ಬಂಧಿಸಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ತಿಳಿಸಿತ್ತು.

ರಾಮ್ ಸಿಂಗ್ ಮತ್ತು ಮುಖೇಶ್ ಅವರು ಜೈಪುರದ ಚಿತ್ರಕೂಟ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳಿಗೆ ಪ್ರಶ್ನೆ ಪತ್ರಿಕೆಯ ಫೋಟೋಗಳನ್ನು ಕಳುಹಿಸಿದ್ದರು. ನಂತರ ಅವರು ಅದನ್ನು ಸಿಕಾರ್‌ನಲ್ಲಿರುವ ಇತರರಿಗೆ ರವಾನಿಸಿದ್ದರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಇತರ ಪರೀಕ್ಷಾ ಅಕ್ರಮಗಳು : ಸೆಪ್ಟೆಂಬರ್ 2021ರಲ್ಲಿ, ಹರಿಯಾಣದ ಸೋನೆಪತ್‌ನಲ್ಲಿರುವ ಕೇಂದ್ರದಿಂದ ರಿಮೋಟ್ ಪ್ರವೇಶದ ಮೂಲಕ ಅಭ್ಯರ್ಥಿಗಳ ಪ್ರಶ್ನೆ ಪತ್ರಿಕೆಯನ್ನು ಪರಿಹರಿಸಿದ್ದಕ್ಕಾಗಿ ಅಫಿನಿಟಿ ಎಜುಕೇಶನ್ ಪ್ರೈವೇಟ್ ಲಿಮಿಟೆಡ್, ಅದರ ನಿರ್ದೇಶಕರು, ಉದ್ಯೋಗಿಗಳು ಮತ್ತು ಇತರರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು.

ಪರೀಕ್ಷೆ ನಡೆಸಿದ ಸಾಫ್ಟ್‌ವೇರ್ ಅನ್ನು ಹ್ಯಾಕ್ ಮಾಡಿದ ಆರೋಪದ ಮೇಲೆ ಅಕ್ಟೋಬರ್ 2022 ರಲ್ಲಿ ಮಿಖಾಯಿಲ್ ಶಾರ್ಗಿನ್ ಎಂಬ ರಷ್ಯಾದ ಹ್ಯಾಕರ್ ಅನ್ನು ಸಿಬಿಐ ಬಂಧಿಸಿತ್ತು.

2021ರ ಜೆಇಇ ಮುಖ್ಯ ಪರೀಕ್ಷೆಯ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಆಗಿದ್ದ ವಿನಯ್ ದಹಿಯಾ ಅವರನ್ನು ಮಾರ್ಚ್ 2023 ರಲ್ಲಿ ಸಿಬಿಐ ಬಂಧಿಸಿತ್ತು.

ನಾವು ಮೇಲೆ ಉಲ್ಲೇಖಿಸಿ ಕೆಲ ಪ್ರಕರಣಗಳು ಕಳೆದ ಕೆಲ ವರ್ಷಗಳಲ್ಲಿ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ ಎಂಬುವುದನ್ನು ಪುಷ್ಠೀಕರಿಸುತ್ತದೆ. ಹಾಗಾಗಿ, ಯಾವುದೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ ಎಂಬ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಹೇಳಿಕೆ ಸುಳ್ಳು

ನೀಟ್ -ಯುಜಿ 2024 ಪ್ರಶ್ನೆ ಪತ್ರಿಕೆಯೂ ಸೋರಿಕೆಯಾಗಿದೆ. ಹಾಗಾಗಿ ಮರು ಪರೀಕ್ಷೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ಈ ಸಂಬಂಧ ಜುಲೈ 23, 2024ರಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, “ನೀಟ್-ಯುಜಿ ಮರು ಪರೀಕ್ಷೆ ಇಲ್ಲ, ಪರೀಕ್ಷಾ ಪಾವಿತ್ರ್ಯ ಉಲ್ಲಂಘಿಸಲಾಗಿದೆ ಎಂದು ತೀರ್ಮಾನಿಸಲು ಸಾಧ್ಯವಿಲ್ಲ” ಎಂದಿದೆ.

ಇದನ್ನೂ ಓದಿ : FACT CHECK : ಮುಸ್ಲಿಮರು ಹಿಂದೂ ದೇವಾಲಯ ಕೆಡವಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...