Homeಫ್ಯಾಕ್ಟ್‌ಚೆಕ್FACT CHECK : ಕಳೆದ 7 ವರ್ಷಗಳಲ್ಲಿ ಯಾವುದೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ ಎಂಬ ಕೇಂದ್ರ...

FACT CHECK : ಕಳೆದ 7 ವರ್ಷಗಳಲ್ಲಿ ಯಾವುದೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ ಎಂಬ ಕೇಂದ್ರ ಶಿಕ್ಷಣ ಸಚಿವರ ಹೇಳಿಕೆ ನಿಜವೇ? ಇಲ್ಲಿದೆ ಸತ್ಯಾಸತ್ಯತೆ

- Advertisement -
- Advertisement -

ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಕಳೆದ ಏಳು ವರ್ಷಗಳಲ್ಲಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ ಎಂಬುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದ್ದರು.

ಜುಲೈ 22ರಂದು ಲೋಕಸಭೆಯಲ್ಲಿ ಮಾತನಾಡಿದ್ದ ಪ್ರಧಾನ್ “ಗೌರವಾನ್ವಿತ ಸದಸ್ಯರು ಕಳೆದ 7 ವರ್ಷಗಳಲ್ಲಿ 70 ಬಾರಿ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವ ಕುರಿತು ಪ್ರಶ್ನೆ ಎತ್ತಿದ್ದಾರೆ. ಸರ್, ಸಂಪೂರ್ಣ ಜವಾಬ್ದಾರಿಯೊಂದಿಗೆ ನಾನು ಸದನಕ್ಕೆ ಹೇಳುತ್ತಿದ್ದೇನೆ, ಕಳೆದ 7 ವರ್ಷಗಳಲ್ಲಿ ಯಾವುದೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವುದಕ್ಕೆ ಪುರಾವೆಗಳಿಲ್ಲ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದೆ. ತೀರ್ಪು ಬಂದ ಮೇಲೆ ಈ ಬಗ್ಗೆ ಗೊತ್ತಾಗಲಿದೆ” ಎಂದಿದ್ದರು.

ವಿಡಿಯೋ ಲಿಂಕ್ ಇಲ್ಲಿದೆ (8:50 ನಿಮಿಷದಿಂದ ಸಚಿವರ ಹೇಳಿಕೆಯಿದೆ)

ರಾಜಸ್ಥಾನದ ಚುರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ರಾಹುಲ್ ಕಸ್ವಾನ್ ಅವರು ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಕೇಳಿದ ಪ್ರಶ್ನೆಗೆ ಧರ್ಮೇಂದ್ರ ಪ್ರಧಾನ್ ಮೇಲಿನಂತೆ ಪ್ರತಿಕ್ರಿಯಿಸಿದ್ದರು.

ಹಾಗಾದರೆ, ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದಂತೆ ಕಳೆದ 7 ವರ್ಷಗಳಲ್ಲಿ ಯಾವುದೇ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲವೇ? ಎಂದು ನೋಡೋಣ.

ಫ್ಯಾಕ್ಟ್‌ಚೆಕ್ : ಯಾವುದೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ ಎಂಬ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಹೇಳಿಕೆ ಸುಳ್ಳು ಎಂಬುವುದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ. ಪ್ರಮುಖ ಪ್ರಶ್ನೆ ಪತ್ರಿಕೆಗಳ ಸೋರಿಕೆಯ ಕುರಿತು ಮಾಹಿತಿ ಕೆಳಗಿದೆ.

ಯುಜಿಸಿ-ನೆಟ್ 2024 ಪ್ರಶ್ನೆ ಪತ್ರಿಕೆ ಸೋರಿಕೆ : ವರದಿಗಳ ಪ್ರಕಾರ, ಜೂನ್ 2024ರಲ್ಲಿ ಯುಜಿಸಿ-ನೆಟ್ (ವಿಶ್ವವಿದ್ಯಾಲಯ ಅನುದಾನ ಆಯೋಗ – ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಪರೀಕ್ಷೆಗಳು ನಡೆದ ಮರು ದಿನ ಅದನ್ನು ರದ್ದುಗೊಳಿಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಸುಳಿವು ಸಿಕ್ಕ ಹಿನ್ನೆಲೆ ರದ್ದುಗೊಳಿಸಿರುವುದಾಗಿ ಸ್ವತಃ ಸಚಿವರೇ ತಿಳಿಸಿದ್ದರು.

ಜೂನ್ 20 ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಸಚಿವ ಪ್ರಧಾನ್ “ಯುಜಿಸಿ ಅಧ್ಯಕ್ಷರು ಡಾರ್ಕ್ ನೆಟ್‌ನಲ್ಲಿ ಕೆಲವು ಪ್ರಶ್ನೆಗಳು ಸೋರಿಕೆಯಾದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ ಎಂದು ತಿಳಿಸಿದ್ದರು.

ಸೋರಿಕೆಯಾಗಿರುವ ಪ್ರಶ್ನೆಗಳು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ) ಸಿದ್ಧಪಡಿಸಿರುವ ಮೂಲ ಪ್ರಶ್ನೆ ಪತ್ರಿಕೆಗೆ ಹೊಂದಿಕೆಯಾಗುತ್ತಿವೆ ಎಂದು ಅವರು ಉಲ್ಲೇಖಿಸಿದ್ದರು.

ಸೋರಿಕೆಯಾಗಿರುವ ಪ್ರಶ್ನೆಗಳು ಮತ್ತು ಮೂಲ ಪತ್ರಿಕೆಯ ಪ್ರಶ್ನೆಗಳು ಒಂದೇ ಎಂದು ಖಚಿತವಾದ ಹಿನ್ನೆಲೆ ಪರೀಕ್ಷೆ ರದ್ದುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಲ್ಲದೆ, ಈ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ)ದ ತನಿಖೆಗೆ ವಹಿಸಲಾಗಿದೆ ಎಂದಿದ್ದರು.

ರದ್ದುಗೊಂಡಿರುವ ಯುಜಿಸಿ-ನೆಟ್ ಮರು ಪರೀಕ್ಷೆಗೆ ಈ ವರ್ಷದ ಆಗಸ್ಟ್ 21 ಮತ್ತು ಸೆಪ್ಟೆಂಬರ್ 4 ರ ನಡುವೆ ದಿನಾಂಕ ನಿಗದಿಪಡಿಸಲಾಗಿದೆ.

ವಿಡಿಯೋ ಲಿಂಕ್ ಇಲ್ಲಿದೆ 

ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ ವಿಷಯಗಳು ಮತ್ತು ಪ್ರಕರಣವನ್ನು ಸಿಬಿಐಗೆ ವಹಿಸಿರುವುದು ಯುಜಿಸಿ-ನೆಟ್ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವುದನ್ನು ಖಚಿತಪಡಿಸಿದೆ.

ಯುಜಿಸಿ-ನೆಟ್ ಹಿಂದಿ ಪ್ರಶ್ನೆ ಪತ್ರಿಕೆ 2021: ಡಿಸೆಂಬರ್ 26, 2021ರಂದು ನಡೆದ ಯುಜಿಸಿ-ನೆಟ್ ಹಿಂದಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಹರಿಯಾಣ ಪೊಲೀಸರ ತಂಡವು ಈ ಪ್ರಕರಣ ಸಂಬಂಧ ಸಿಆರ್‌ಪಿಎಫ್‌ ಕಾನ್‌ಸ್ಟೇಬಲ್ ಒಬ್ಬರನ್ನು ಬಂಧಿಸಲು ಪ್ರಯತ್ನಿಸುತ್ತಿದೆ ಎಂದು ಡಿಸೆಂಬರ್ 30, 2021ರಂದು ಇಂಡಿಯಾ ಟುಡೇ ವರದಿ ಮಾಡಿತ್ತು.

ಪ್ರಕರಣದ ಬೆಳವಣಿಗೆಗಳ ಬಗ್ಗೆ ತನಿಖಾ ತಂಡಕ್ಕೆ ತಿಳಿಸುವಂತೆ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ಪ್ರತಿಯನ್ನು ಯುಜಿಸಿಗೆ ಕಳುಹಿಸಲಾಗಿತ್ತು.

ಡಿಸೆಂಬರ್ 30, 2022ರಂದು ಇಂಡಿಯನ್ ಎಕ್ಸ್‌ಪ್ರೆಸ್ ತನ್ನ ವರದಿಯಲ್ಲಿ, ಪ್ರಶ್ನೆ ಪತ್ರಿಕೆ ಸೋರಿಕೆಯ ಬಗ್ಗೆ ಮಾಹಿತಿ ಪಡೆದ ನಂತರ ಪಂಜಾಬ್‌ನ ಜಿಂದ್ ಮತ್ತು ಭಿವಾನಿ ಜಿಲ್ಲೆಗಳ ಸುಮಾರು ಒಂಬತ್ತು ಜನರನ್ನು ಬಂಧಿಸಲಾಗಿದೆ ಎಂದು ಹೇಳಿತ್ತು.

ಆರೋಪಿಗಳಲ್ಲಿ ಒಬ್ಬನಾದ ವಿಕಾಸ್ ಎಂಬಾತ ಪರೀಕ್ಷೆ ನಡೆಯುವ ಸುಮಾರು ಆರು ಗಂಟೆಗಳ ಮೊದಲು ಪ್ರಶ್ನೆ ಪತ್ರಿಕೆಯನ್ನು ವಾಟ್ಸಾಪ್‌ನಲ್ಲಿ ಕಳುಹಿಸಿದ್ದ ಎಂದು ಬಂಧಿತ ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

“ಹಿಂದಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ 150 ಪ್ರಶ್ನೆಗಳನ್ನು ಮುಂಚಿತವಾಗಿ ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ” ಎಂದು ಆರೋಪಿಗಳು ಹೇಳಿಕೊಂಡಿದ್ದಾರೆ. ಈ ಪ್ರಶ್ನೆಗಳನ್ನು ಅವರ ಸೆಲ್‌ಫೋನ್‌ನಲ್ಲಿಯೂ ನಾವು ಕಂಡುಕೊಂಡಿದ್ದೇವೆ. ಆದರೆ ಇನ್ನೂ ನಾವು ಅದನ್ನು ಯುಜಿಸಿ ಅಧಿಕಾರಿಗಳಿಂದ ಪರಿಶೀಲಿಸಲು ಬಯಸುತ್ತೇವೆ” ಎಂದು ಅದು ಅಧಿಕಾರಿಯೊಬ್ಬರನ್ನು ಹೇಳಿದ್ದಾಗಿ ವರದಿಯಲ್ಲಿ ತಿಳಿಸಲಾಗಿತ್ತು.

ನೀಟ್ 2021 ಪ್ರಶ್ನೆ ಪತ್ರಿಕೆ ಸೋರಿಕೆ : ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ರಾಜಸ್ಥಾನದ ಸಿಕಾರ್‌ನಲ್ಲಿ ವ್ಯಕ್ತಿಯೊಬ್ಬ ಪ್ರಶ್ನೆ ಪತ್ರಿಕೆಯ ಫೋಟೋ ಸೆರೆಹಿಡಿದು ಇತರರಿಗೆ ಕಳುಹಿಸಿದ ನಂತರ ಅದು ಸೋರಿಕೆಯಾಗಿತ್ತು.

ಈ ಸಂಬಂಧ ಜೈಪುರ ಪೊಲೀಸರು ರಾಜಸ್ಥಾನದ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (RIET) ನಲ್ಲಿರುವ ಪರೀಕ್ಷಾ ಕೇಂದ್ರದಿಂದ ಬಾಲಕಿ ಸೇರಿದಂತೆ ಸುಮಾರು ಎಂಟು ಜನರನ್ನು ಬಂಧಿಸಿದ್ದರು.

ಆರೋಪಿ ದಿನೇಶ್ವರಿ ಕುಮಾರ್, ಆಕೆಯ ಚಿಕ್ಕಪ್ಪ, ಪರೀಕ್ಷಾ ನಿರೀಕ್ಷಕ ರಾಮ್ ಸಿಂಗ್ ಮತ್ತು ಪರೀಕ್ಷಾ ಕೇಂದ್ರದ ಆಡಳಿತ ಘಟಕದ ಉಸ್ತುವಾರಿ ಮುಖೇಶ್ ಅವರನ್ನು ಬಂಧಿಸಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ತಿಳಿಸಿತ್ತು.

ರಾಮ್ ಸಿಂಗ್ ಮತ್ತು ಮುಖೇಶ್ ಅವರು ಜೈಪುರದ ಚಿತ್ರಕೂಟ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳಿಗೆ ಪ್ರಶ್ನೆ ಪತ್ರಿಕೆಯ ಫೋಟೋಗಳನ್ನು ಕಳುಹಿಸಿದ್ದರು. ನಂತರ ಅವರು ಅದನ್ನು ಸಿಕಾರ್‌ನಲ್ಲಿರುವ ಇತರರಿಗೆ ರವಾನಿಸಿದ್ದರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಇತರ ಪರೀಕ್ಷಾ ಅಕ್ರಮಗಳು : ಸೆಪ್ಟೆಂಬರ್ 2021ರಲ್ಲಿ, ಹರಿಯಾಣದ ಸೋನೆಪತ್‌ನಲ್ಲಿರುವ ಕೇಂದ್ರದಿಂದ ರಿಮೋಟ್ ಪ್ರವೇಶದ ಮೂಲಕ ಅಭ್ಯರ್ಥಿಗಳ ಪ್ರಶ್ನೆ ಪತ್ರಿಕೆಯನ್ನು ಪರಿಹರಿಸಿದ್ದಕ್ಕಾಗಿ ಅಫಿನಿಟಿ ಎಜುಕೇಶನ್ ಪ್ರೈವೇಟ್ ಲಿಮಿಟೆಡ್, ಅದರ ನಿರ್ದೇಶಕರು, ಉದ್ಯೋಗಿಗಳು ಮತ್ತು ಇತರರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು.

ಪರೀಕ್ಷೆ ನಡೆಸಿದ ಸಾಫ್ಟ್‌ವೇರ್ ಅನ್ನು ಹ್ಯಾಕ್ ಮಾಡಿದ ಆರೋಪದ ಮೇಲೆ ಅಕ್ಟೋಬರ್ 2022 ರಲ್ಲಿ ಮಿಖಾಯಿಲ್ ಶಾರ್ಗಿನ್ ಎಂಬ ರಷ್ಯಾದ ಹ್ಯಾಕರ್ ಅನ್ನು ಸಿಬಿಐ ಬಂಧಿಸಿತ್ತು.

2021ರ ಜೆಇಇ ಮುಖ್ಯ ಪರೀಕ್ಷೆಯ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಆಗಿದ್ದ ವಿನಯ್ ದಹಿಯಾ ಅವರನ್ನು ಮಾರ್ಚ್ 2023 ರಲ್ಲಿ ಸಿಬಿಐ ಬಂಧಿಸಿತ್ತು.

ನಾವು ಮೇಲೆ ಉಲ್ಲೇಖಿಸಿ ಕೆಲ ಪ್ರಕರಣಗಳು ಕಳೆದ ಕೆಲ ವರ್ಷಗಳಲ್ಲಿ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ ಎಂಬುವುದನ್ನು ಪುಷ್ಠೀಕರಿಸುತ್ತದೆ. ಹಾಗಾಗಿ, ಯಾವುದೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ ಎಂಬ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಹೇಳಿಕೆ ಸುಳ್ಳು

ನೀಟ್ -ಯುಜಿ 2024 ಪ್ರಶ್ನೆ ಪತ್ರಿಕೆಯೂ ಸೋರಿಕೆಯಾಗಿದೆ. ಹಾಗಾಗಿ ಮರು ಪರೀಕ್ಷೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ಈ ಸಂಬಂಧ ಜುಲೈ 23, 2024ರಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, “ನೀಟ್-ಯುಜಿ ಮರು ಪರೀಕ್ಷೆ ಇಲ್ಲ, ಪರೀಕ್ಷಾ ಪಾವಿತ್ರ್ಯ ಉಲ್ಲಂಘಿಸಲಾಗಿದೆ ಎಂದು ತೀರ್ಮಾನಿಸಲು ಸಾಧ್ಯವಿಲ್ಲ” ಎಂದಿದೆ.

ಇದನ್ನೂ ಓದಿ : FACT CHECK : ಮುಸ್ಲಿಮರು ಹಿಂದೂ ದೇವಾಲಯ ಕೆಡವಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...