Homeನಿಜವೋ ಸುಳ್ಳೋFact check: ಭಾವುಕರಾಗಿ ಅಳುವ 93ರ ಈ ವೃದ್ದ ಕೊರೊನಾದಿಂದ ಚೇತರಿಸಿದ ವ್ಯಕ್ತಿಯೇ?

Fact check: ಭಾವುಕರಾಗಿ ಅಳುವ 93ರ ಈ ವೃದ್ದ ಕೊರೊನಾದಿಂದ ಚೇತರಿಸಿದ ವ್ಯಕ್ತಿಯೇ?

- Advertisement -
- Advertisement -

ತನ್ನ ಪ್ರೇಯಸಿಗೆ ಬರೆದ ಹಳೆಯ ಪ್ರೇಮ ಪತ್ರ ಓದುತ್ತಾ ದುಃಖಿಸುವ ವೃದ್ದರೊಬ್ಬರ ಫೋಟೋವೊಂದನ್ನು ಕೊರೊನಾ ಸೋಕಿನಿಂದ ಚೇತರಿಕೆ ಹೊಂದಿದ ಇಟಲಿಯ ವ್ಯಕ್ತಿ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣದಲ್ಲಿ ಹರಡಲಾಗಿದೆ.

ಈ ಚಿತ್ರ ಐದು ವರ್ಷದ ಹಿಂದಿನ ಚಿತ್ರವಾಗಿದ್ದು, ವಾಸ್ತವದಲ್ಲಿ ಆ ವ್ಯಕ್ತಿ ಇಟಲಿಯವರಲ್ಲ. ಚಿತ್ರದಲ್ಲಿ, ಕೊಲೊರಾಡೋ ಮೂಲದ ಬಿಲ್ ಮೂರ್‌ ಎಂಬ ಎರಡನೇ ಮಹಾಯುದ್ಧದಲ್ಲಿ ಭಾಗವಹಿಸಿದ ಮಾಜಿ ಸೈನಿಕ ತಾನು ಮದುವೆಯಾಗಲು ನಿಶ್ಚಿತ ಮಾಡಿಕೊಂಡಿದ್ದ ಪ್ರೇಯಸಿಗೆ ಬರೆದ ಪತ್ರವನ್ನು ಓದುತ್ತಾ ಭಾವುಕನಾಗುವುದು ಕಾಣಬಹುದಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲಾದ ಸಂದೇಶದಲ್ಲಿ, “93 ವರ್ಷದ ವ್ಯಕ್ತಿಯಲ್ಲಿ ವೆಂಟಿಲೇಟರ್ ಬಿಲ್ಲು ಕಟ್ಟುವಂತೆ ಹೇಳಿದಾಗ, ಇದುವರೆಗೆ ಯಾವುದೆ ಬಿಲ್ಲು ಪಡೆಯದೆ ಉಚಿತವಾಗಿ ಉಸಿರಾಡಿಸಿದ ದೇವರ ಅನುಗ್ರಹವನ್ನು ನೆನೆದು ಭಾವುಕನಾಗುತ್ತಾನೆ” ಎಂದು ಬಿತ್ತರಿಸಲಾಗಿದೆ.

ನಾನು ಬಿಲ್ಲು ಕಟ್ಟುತ್ತೇನೆ. ಹಣದ ಬಗ್ಗೆ ಚಿಂತೆಯಿಲ್ಲ. ಆದರೆ 93 ವರ್ಷಗಳ ಕಾಲ ಯಾವುದೇ ಹಣವಿಲ್ಲದೇ ನನಗೆ ಉಸಿರಾಡಲು ಅವಕಾಶ ಮಾಡಿಕೊಟ್ಟ ದೇವರ ಋಣವನ್ನು ಹೇಗೆ ತೀರಿಸಲಿ ಎಂದು ಭಾವುಕರಾಗಿದ್ದಾರೆ ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ.

? After the 93 year old man in Italy got better in the hospital, he was told to pay for the ventilator for one day, and…

Posted by Nermeen Mohamed Ezzat on Thursday, April 2, 2020

 

ಅಲ್ಲದೇ ಹಲವಾರು ಜನರು ಇದನ್ನು ಹೀಗೆಯೆ ಹಂಚಿಕೊಂಡಿದ್ದಾರೆ. ನೋಡಲು ಇಲ್ಲಿ ಕ್ಲಿಕ್ ಮಾಡಿ.

ಮೂರ್ ಅವರ ಚಿತ್ರ, ಇದೇ ರೀತಿಯ ನಿರೂಪಣೆಯೊಂದಿಗೆ ಇನ್‌ಸ್ಟಾಗ್ರಾಮ್ ಶೀರ್ಷಿಕೆಯಂತೆ ಕಾಣುವ ಸ್ಕ್ರೀನ್‌ಶಾಟ್ ಒಂದು ಬಿಜೆಪಿಯ ಮುಖಂಡ ಮತ್ತು ನಟ ಪರೇಶ್ ರಾವಲ್ ಅವರು ಟ್ವೀಟ್ ಮಾಡಿದ್ದಾರೆ. ತನ್ನ ಟ್ವೀಟ್‌ನಲ್ಲಿ ಅವರು, “ಮಾನವ ಜನಾಂಗವಾದ ನಾವು ಅರ್ಥಮಾಡಿಕೊಳ್ಳುತ್ತಿದ್ದೇವೆ ಎಂದು ಭಾವಿಸುತ್ತೇನೆ” ಎಂದು ಬರೆದಿದ್ದರು.

ಅಲ್ಲದೆ ಇನ್ನೂ ಕೆಲವರು ಇದನ್ನು ಟ್ವೀಟ್ ಮಾಡಿದ್ದರು.

 

ಇಟಲಿಯಲ್ಲಿ ಎರಡು ಕೊರೊನಾ ಪ್ರಕರಣಗಳು ವರದಿಯಾದ ನಂತರ, ಇಟಲಿಯೂ ಜನವರಿ 31 ರಿಂದ ಕೊರೊನಾ ತುರ್ತು ಪರಿಸ್ಥಿತಿಯನ್ನು ಘೋಷಿಸಿತು. ಇದುವರೆಗೆ ಇಟಲಿಯಲ್ಲಿ ಕೊರೊನಾ ಸೋಂಕಿನಿಂದ 19,468 ಸಾವುಗಳು ಮತ್ತು 32,534 ಚೇತರಿಕೆಯಾಗಿದ್ದಾರೆಂದು ವರದಿಯಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಚಿತ್ರವೂ ವೈರಲಾಗುತ್ತಿರುವುದರಿವಂದ “ಭೂಮ್ ಲೈವ್” ಚಿತ್ರದ ಬಗ್ಗೆ ಫ್ಯಾಕ್ಟ್ ಚೆಕ್ ನಡೆಸಿ, ಚಿತ್ರವು ಐದು ವರ್ಷ ಹಳೆಯದಾಗಿದೆ ಮತ್ತು ಇದು ಇಟಲಿಯಲ್ಲಿ ನಡೆದ ಘಟನೆಯಲ್ಲ ಎಂದು ಕಂಡುಕೊಂಡಿದೆ.

ಇದರ ಮೂಲ ಚಿತ್ರವನ್ನು ಮಾರ್ಚ್ 2015 ರಿಂದ ಎಬಿಸಿ ನ್ಯೂಸ್ ಎಂಬ ಸುದ್ದಿಜಾಲದ ವರದಿಯಲ್ಲಿ ಅಪ್‌ಲೋಡ್ ಮಾಡಲಾಗಿತ್ತು. ಚಿತ್ರದಲ್ಲಿರವುದು ನಾನ್‌ಜೆಜೆನೇರಿಯನ್ ಕೊಲೊರಾಡೋ ಮೂಲದ ಎರಡನೇ ಮಹಾಯುದ್ಧದ ಮಾಜಿಸೈನಿಕ ಬಿಲ್ ಮೂರ್. ಯುದ್ಧದ ಸಮಯದಲ್ಲಿ ತನ್ನ ಪ್ರೇಯಸಿಗೆ ಅವರು ಬರೆದ ಪತ್ರ ಕಂಡುಬಂದಿದೆ ಎಂದು ತಿಳಿಸಿದ ನಂತರ ಅವರು ಭಾವುಕರಾಗಿದ್ದರು.

“1944 ರಲ್ಲಿ 20 ವರ್ಷ ಬಿಲ್ ಮೂರ್ ಅವರು ಬರ್ನಾಡಿಯನ್ ಎಂಬ ಯುವತಿಗೆ ಬರೆದ ಪತ್ರವನ್ನು 70 ವರ್ಷಗಳ ನಂತರ ಕಂಡು ಹಿಡಿದು ಓದಿದಾಗ ಮೂರ್ ಭಾವುಕರಗಿದ್ದರು. ವರದಿಯ ವೀಡಿಯೊದಲ್ಲಿ 52 ಸೆಕೆಂಡುಗಳ ನಂತರ ಮೂರ್‌ ಅಂಚೆಚೀಟಿ ಒಡೆಯುವುದನ್ನು ಕಾಣಬಹುದು.

ಇವರಿಗೂ ಕೊರೊನಾದಿಂದ ಗುಣಮುಖರಾದ ರೋಗಿಗೂ ಯಾವುದೇ ಸಂಬಂಧವಿಲ್ಲ. ತಪ್ಪಾಗಿ ಇವರ ಚಿತ್ರವನ್ನು ಬಳಸಿಕೊಳ್ಳಲಾಗಿದೆ ಅಷ್ಟೆ.

ಅಧೀಕೃತ ವರದಿಯಂತೆ ಇಟಲಿಯ ಆರೋಗ್ಯ ರಕ್ಷಣಾ ವ್ಯವಸ್ಥೆಯು ವೆಚ್ಚಗಳನ್ನು ಒಳಗೊಂಡಿದೆ. ರಾಷ್ಟ್ರೀಯ ಆರೋಗ್ಯ ಸೇವೆ (ಎನ್‌ಎಚ್‌ಎಸ್) ಅಡಿಯಲ್ಲಿ ಇಟಲಿಯ ಸಾರ್ವಜನಿಕವಾಗಿ ಧನಸಹಾಯ ಪಡೆದ ಆರೋಗ್ಯ ನೀತಿ ಸಾರ್ವತ್ರಿಕತೆಯನ್ನು ಒಳಗೊಳ್ಳುತ್ತದೆ ಮತ್ತು ಸ್ವಯಂಚಾಲಿತವಾಗಿ ಎಲ್ಲಾ ನಾಗರಿಕರು ಮತ್ತು ಕಾನೂನುಬದ್ಧ ವಿದೇಶಿ ನಿವಾಸಿಗಳು ಈ ವರ್ಗಕ್ಕೆ ಸೇರುತ್ತಾರೆ.

ಮತ್ತೊಂದು ವರದಿಯ ಪ್ರಕಾರ, ಆರೋಗ್ಯ ವ್ಯವಸ್ಥೆಯಲ್ಲಿ ಖಾಸಗಿ ಆರೋಗ್ಯ ವಿಮೆ ಸೀಮಿತ ಪಾತ್ರ ವಹಿಸುತ್ತದೆ. ಇಟಲಿಯಲ್ಲಿ ಖಾಸಗಿ ಆರೋಗ್ಯ ವಿಮೆ ಎರಡು ವಿಧದ ಕಾರ್ಪೊರೇಟ್ ಆಗಿದೆ, ಇದಕ್ಕಾಗಿ ಕಂಪನಿಗಳು ಸ್ವಂತ ಉದ್ಯೋಗಿಗಳನ್ನು ಮತ್ತು ಕೆಲವೊಮ್ಮೆ ಅವರ ಕುಟುಂಬಗಳನ್ನು ಒಳಗೊಳ್ಳುತ್ತವೆ. ಕಾರ್ಪೊರೇಟ್ ಅಲ್ಲದ ವ್ಯಕ್ತಿಗಳು ತಮ್ಮ ಅಥವಾ ತಮ್ಮ ಕುಟುಂಬಗಳಿಗೆ ವಿಮೆಯನ್ನು ಖರೀದಿಸಬಹುದು. ಆದ್ದರಿಂದ ಇಟಲಿಯಲ್ಲಿ ಆರೋಗ್ಯ ಸೇವೆಗಳ ವಿಮೆಯನ್ನು ಪಡೆದ ನಂತರ ರೋಗಿಗಳು ವೈಯಕ್ತಿಕವಾಗಿ ಪಾವತಿಸುವ ಸಾಧ್ಯತೆ ಕಡಿಮೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....