Homeನಿಜವೋ ಸುಳ್ಳೋFact check: ಭಾವುಕರಾಗಿ ಅಳುವ 93ರ ಈ ವೃದ್ದ ಕೊರೊನಾದಿಂದ ಚೇತರಿಸಿದ ವ್ಯಕ್ತಿಯೇ?

Fact check: ಭಾವುಕರಾಗಿ ಅಳುವ 93ರ ಈ ವೃದ್ದ ಕೊರೊನಾದಿಂದ ಚೇತರಿಸಿದ ವ್ಯಕ್ತಿಯೇ?

- Advertisement -
- Advertisement -

ತನ್ನ ಪ್ರೇಯಸಿಗೆ ಬರೆದ ಹಳೆಯ ಪ್ರೇಮ ಪತ್ರ ಓದುತ್ತಾ ದುಃಖಿಸುವ ವೃದ್ದರೊಬ್ಬರ ಫೋಟೋವೊಂದನ್ನು ಕೊರೊನಾ ಸೋಕಿನಿಂದ ಚೇತರಿಕೆ ಹೊಂದಿದ ಇಟಲಿಯ ವ್ಯಕ್ತಿ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣದಲ್ಲಿ ಹರಡಲಾಗಿದೆ.

ಈ ಚಿತ್ರ ಐದು ವರ್ಷದ ಹಿಂದಿನ ಚಿತ್ರವಾಗಿದ್ದು, ವಾಸ್ತವದಲ್ಲಿ ಆ ವ್ಯಕ್ತಿ ಇಟಲಿಯವರಲ್ಲ. ಚಿತ್ರದಲ್ಲಿ, ಕೊಲೊರಾಡೋ ಮೂಲದ ಬಿಲ್ ಮೂರ್‌ ಎಂಬ ಎರಡನೇ ಮಹಾಯುದ್ಧದಲ್ಲಿ ಭಾಗವಹಿಸಿದ ಮಾಜಿ ಸೈನಿಕ ತಾನು ಮದುವೆಯಾಗಲು ನಿಶ್ಚಿತ ಮಾಡಿಕೊಂಡಿದ್ದ ಪ್ರೇಯಸಿಗೆ ಬರೆದ ಪತ್ರವನ್ನು ಓದುತ್ತಾ ಭಾವುಕನಾಗುವುದು ಕಾಣಬಹುದಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲಾದ ಸಂದೇಶದಲ್ಲಿ, “93 ವರ್ಷದ ವ್ಯಕ್ತಿಯಲ್ಲಿ ವೆಂಟಿಲೇಟರ್ ಬಿಲ್ಲು ಕಟ್ಟುವಂತೆ ಹೇಳಿದಾಗ, ಇದುವರೆಗೆ ಯಾವುದೆ ಬಿಲ್ಲು ಪಡೆಯದೆ ಉಚಿತವಾಗಿ ಉಸಿರಾಡಿಸಿದ ದೇವರ ಅನುಗ್ರಹವನ್ನು ನೆನೆದು ಭಾವುಕನಾಗುತ್ತಾನೆ” ಎಂದು ಬಿತ್ತರಿಸಲಾಗಿದೆ.

ನಾನು ಬಿಲ್ಲು ಕಟ್ಟುತ್ತೇನೆ. ಹಣದ ಬಗ್ಗೆ ಚಿಂತೆಯಿಲ್ಲ. ಆದರೆ 93 ವರ್ಷಗಳ ಕಾಲ ಯಾವುದೇ ಹಣವಿಲ್ಲದೇ ನನಗೆ ಉಸಿರಾಡಲು ಅವಕಾಶ ಮಾಡಿಕೊಟ್ಟ ದೇವರ ಋಣವನ್ನು ಹೇಗೆ ತೀರಿಸಲಿ ಎಂದು ಭಾವುಕರಾಗಿದ್ದಾರೆ ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ.

? After the 93 year old man in Italy got better in the hospital, he was told to pay for the ventilator for one day, and…

Posted by Nermeen Mohamed Ezzat on Thursday, April 2, 2020

 

ಅಲ್ಲದೇ ಹಲವಾರು ಜನರು ಇದನ್ನು ಹೀಗೆಯೆ ಹಂಚಿಕೊಂಡಿದ್ದಾರೆ. ನೋಡಲು ಇಲ್ಲಿ ಕ್ಲಿಕ್ ಮಾಡಿ.

ಮೂರ್ ಅವರ ಚಿತ್ರ, ಇದೇ ರೀತಿಯ ನಿರೂಪಣೆಯೊಂದಿಗೆ ಇನ್‌ಸ್ಟಾಗ್ರಾಮ್ ಶೀರ್ಷಿಕೆಯಂತೆ ಕಾಣುವ ಸ್ಕ್ರೀನ್‌ಶಾಟ್ ಒಂದು ಬಿಜೆಪಿಯ ಮುಖಂಡ ಮತ್ತು ನಟ ಪರೇಶ್ ರಾವಲ್ ಅವರು ಟ್ವೀಟ್ ಮಾಡಿದ್ದಾರೆ. ತನ್ನ ಟ್ವೀಟ್‌ನಲ್ಲಿ ಅವರು, “ಮಾನವ ಜನಾಂಗವಾದ ನಾವು ಅರ್ಥಮಾಡಿಕೊಳ್ಳುತ್ತಿದ್ದೇವೆ ಎಂದು ಭಾವಿಸುತ್ತೇನೆ” ಎಂದು ಬರೆದಿದ್ದರು.

ಅಲ್ಲದೆ ಇನ್ನೂ ಕೆಲವರು ಇದನ್ನು ಟ್ವೀಟ್ ಮಾಡಿದ್ದರು.

 

ಇಟಲಿಯಲ್ಲಿ ಎರಡು ಕೊರೊನಾ ಪ್ರಕರಣಗಳು ವರದಿಯಾದ ನಂತರ, ಇಟಲಿಯೂ ಜನವರಿ 31 ರಿಂದ ಕೊರೊನಾ ತುರ್ತು ಪರಿಸ್ಥಿತಿಯನ್ನು ಘೋಷಿಸಿತು. ಇದುವರೆಗೆ ಇಟಲಿಯಲ್ಲಿ ಕೊರೊನಾ ಸೋಂಕಿನಿಂದ 19,468 ಸಾವುಗಳು ಮತ್ತು 32,534 ಚೇತರಿಕೆಯಾಗಿದ್ದಾರೆಂದು ವರದಿಯಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಚಿತ್ರವೂ ವೈರಲಾಗುತ್ತಿರುವುದರಿವಂದ “ಭೂಮ್ ಲೈವ್” ಚಿತ್ರದ ಬಗ್ಗೆ ಫ್ಯಾಕ್ಟ್ ಚೆಕ್ ನಡೆಸಿ, ಚಿತ್ರವು ಐದು ವರ್ಷ ಹಳೆಯದಾಗಿದೆ ಮತ್ತು ಇದು ಇಟಲಿಯಲ್ಲಿ ನಡೆದ ಘಟನೆಯಲ್ಲ ಎಂದು ಕಂಡುಕೊಂಡಿದೆ.

ಇದರ ಮೂಲ ಚಿತ್ರವನ್ನು ಮಾರ್ಚ್ 2015 ರಿಂದ ಎಬಿಸಿ ನ್ಯೂಸ್ ಎಂಬ ಸುದ್ದಿಜಾಲದ ವರದಿಯಲ್ಲಿ ಅಪ್‌ಲೋಡ್ ಮಾಡಲಾಗಿತ್ತು. ಚಿತ್ರದಲ್ಲಿರವುದು ನಾನ್‌ಜೆಜೆನೇರಿಯನ್ ಕೊಲೊರಾಡೋ ಮೂಲದ ಎರಡನೇ ಮಹಾಯುದ್ಧದ ಮಾಜಿಸೈನಿಕ ಬಿಲ್ ಮೂರ್. ಯುದ್ಧದ ಸಮಯದಲ್ಲಿ ತನ್ನ ಪ್ರೇಯಸಿಗೆ ಅವರು ಬರೆದ ಪತ್ರ ಕಂಡುಬಂದಿದೆ ಎಂದು ತಿಳಿಸಿದ ನಂತರ ಅವರು ಭಾವುಕರಾಗಿದ್ದರು.

“1944 ರಲ್ಲಿ 20 ವರ್ಷ ಬಿಲ್ ಮೂರ್ ಅವರು ಬರ್ನಾಡಿಯನ್ ಎಂಬ ಯುವತಿಗೆ ಬರೆದ ಪತ್ರವನ್ನು 70 ವರ್ಷಗಳ ನಂತರ ಕಂಡು ಹಿಡಿದು ಓದಿದಾಗ ಮೂರ್ ಭಾವುಕರಗಿದ್ದರು. ವರದಿಯ ವೀಡಿಯೊದಲ್ಲಿ 52 ಸೆಕೆಂಡುಗಳ ನಂತರ ಮೂರ್‌ ಅಂಚೆಚೀಟಿ ಒಡೆಯುವುದನ್ನು ಕಾಣಬಹುದು.

ಇವರಿಗೂ ಕೊರೊನಾದಿಂದ ಗುಣಮುಖರಾದ ರೋಗಿಗೂ ಯಾವುದೇ ಸಂಬಂಧವಿಲ್ಲ. ತಪ್ಪಾಗಿ ಇವರ ಚಿತ್ರವನ್ನು ಬಳಸಿಕೊಳ್ಳಲಾಗಿದೆ ಅಷ್ಟೆ.

ಅಧೀಕೃತ ವರದಿಯಂತೆ ಇಟಲಿಯ ಆರೋಗ್ಯ ರಕ್ಷಣಾ ವ್ಯವಸ್ಥೆಯು ವೆಚ್ಚಗಳನ್ನು ಒಳಗೊಂಡಿದೆ. ರಾಷ್ಟ್ರೀಯ ಆರೋಗ್ಯ ಸೇವೆ (ಎನ್‌ಎಚ್‌ಎಸ್) ಅಡಿಯಲ್ಲಿ ಇಟಲಿಯ ಸಾರ್ವಜನಿಕವಾಗಿ ಧನಸಹಾಯ ಪಡೆದ ಆರೋಗ್ಯ ನೀತಿ ಸಾರ್ವತ್ರಿಕತೆಯನ್ನು ಒಳಗೊಳ್ಳುತ್ತದೆ ಮತ್ತು ಸ್ವಯಂಚಾಲಿತವಾಗಿ ಎಲ್ಲಾ ನಾಗರಿಕರು ಮತ್ತು ಕಾನೂನುಬದ್ಧ ವಿದೇಶಿ ನಿವಾಸಿಗಳು ಈ ವರ್ಗಕ್ಕೆ ಸೇರುತ್ತಾರೆ.

ಮತ್ತೊಂದು ವರದಿಯ ಪ್ರಕಾರ, ಆರೋಗ್ಯ ವ್ಯವಸ್ಥೆಯಲ್ಲಿ ಖಾಸಗಿ ಆರೋಗ್ಯ ವಿಮೆ ಸೀಮಿತ ಪಾತ್ರ ವಹಿಸುತ್ತದೆ. ಇಟಲಿಯಲ್ಲಿ ಖಾಸಗಿ ಆರೋಗ್ಯ ವಿಮೆ ಎರಡು ವಿಧದ ಕಾರ್ಪೊರೇಟ್ ಆಗಿದೆ, ಇದಕ್ಕಾಗಿ ಕಂಪನಿಗಳು ಸ್ವಂತ ಉದ್ಯೋಗಿಗಳನ್ನು ಮತ್ತು ಕೆಲವೊಮ್ಮೆ ಅವರ ಕುಟುಂಬಗಳನ್ನು ಒಳಗೊಳ್ಳುತ್ತವೆ. ಕಾರ್ಪೊರೇಟ್ ಅಲ್ಲದ ವ್ಯಕ್ತಿಗಳು ತಮ್ಮ ಅಥವಾ ತಮ್ಮ ಕುಟುಂಬಗಳಿಗೆ ವಿಮೆಯನ್ನು ಖರೀದಿಸಬಹುದು. ಆದ್ದರಿಂದ ಇಟಲಿಯಲ್ಲಿ ಆರೋಗ್ಯ ಸೇವೆಗಳ ವಿಮೆಯನ್ನು ಪಡೆದ ನಂತರ ರೋಗಿಗಳು ವೈಯಕ್ತಿಕವಾಗಿ ಪಾವತಿಸುವ ಸಾಧ್ಯತೆ ಕಡಿಮೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...

ದಲಿತ ಮಹಿಳೆ ಕಾರಣಕ್ಕೆ ಪೋಷಕರಿಂದ ಅಂಗನವಾಡಿ ಬಹಿಷ್ಕಾರ: ಅಧಿಕಾರಿಗಳ ಮನವೊಲಿಕೆ ಬಳಿಕ ಮರಳಿದ ಮಕ್ಕಳು

ದಲಿತ ಸಮುದಾಯದ ಅಡುಗೆ ಸಹಾಯಕಿ ನೇಮಕದ ನಂತರ ಗ್ರಾಮಸ್ಥರು ಅಂಗನವಾಡಿ ಕೇಂದ್ರವನ್ನು ಬಹಿಷ್ಕರಿಸಿದ್ದ ವಿಚಾರ ರಾಷ್ಟ್ರದಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿತ್ತು. ಒಡಿಶಾದ ಕೇಂದ್ರಪಾರ ಜಿಲ್ಲಾಡಳಿತದ ಅಧಿಕಾರಿಗಳ ಮನವೊಲಿಕೆ ಬಳಿಕ ಪೋಷಕರು ಅಂಗನವಾಡಿಗೆ ಮಕ್ಕಳನ್ನು...

FEMA ಉಲ್ಲಂಘನೆ ಆರೋಪ : ನ್ಯೂಸ್‌ಕ್ಲಿಕ್‌ ಪೋರ್ಟಲ್‌, ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥಗೆ 184 ಕೋಟಿ ರೂ.ದಂಡ ವಿಧಿಸಿದ ಇಡಿ

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಎಫ್‌ಇಎಂಎ-ಫೆಮಾ) ಉಲ್ಲಂಘನೆಗೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಜಾಲತಾಣ ಮತ್ತು ಅದರ ಪ್ರಧಾನ ಸಂಪಾದಕ ಪ್ರಬೀರ್ ಪುರಕಾಯಸ್ಥ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) 184 ಕೋಟಿ ರೂಪಾಯಿ ದಂಡ...

ಸಿಬಿಎಸ್‌ಇ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊದಲ ಬೋರ್ಡ್ ಪರೀಕ್ಷೆ ಕಡ್ಡಾಯ, ಪರಿಣಾಮಗಳ ಬಗ್ಗೆ ಎಚ್ಚರಿಕೆ

ನವದೆಹಲಿ: 10ನೇ ತರಗತಿಯ ವಿದ್ಯಾರ್ಥಿಗಳು ಮೊದಲ ಬೋರ್ಡ್ ಪರೀಕ್ಷೆ ಬರೆಯುವುದು ಕಡ್ಡಾಯ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಸ್ಪಷ್ಟಪಡಿಸಿದ್ದು, ಮೊದಲ ಆವೃತ್ತಿಯಲ್ಲಿ ಕನಿಷ್ಠ ಮೂರು ವಿಷಯಗಳನ್ನು ಪ್ರಯತ್ನಿಸದ ವಿದ್ಯಾರ್ಥಿಗಳು "ಅಗತ್ಯ...

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

ವಿಧಾನಸಭೆಯ 2023ರ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ (ಭಾಗ್ಯನಗರ) ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎನ್‌.ಸುಬ್ಬಾರೆಡ್ಡಿ ಆಯ್ಕೆಯಾಗಿರುವುದನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ &ಬೆಂಚ್ ಸೋಮವಾರ (ಫೆ.16) ವರದಿ ಮಾಡಿದೆ. ಸುಬ್ಬಾರೆಡ್ಡಿ...