Homeನಿಜವೋ ಸುಳ್ಳೋFact check: ಭಾವುಕರಾಗಿ ಅಳುವ 93ರ ಈ ವೃದ್ದ ಕೊರೊನಾದಿಂದ ಚೇತರಿಸಿದ ವ್ಯಕ್ತಿಯೇ?

Fact check: ಭಾವುಕರಾಗಿ ಅಳುವ 93ರ ಈ ವೃದ್ದ ಕೊರೊನಾದಿಂದ ಚೇತರಿಸಿದ ವ್ಯಕ್ತಿಯೇ?

- Advertisement -
- Advertisement -

ತನ್ನ ಪ್ರೇಯಸಿಗೆ ಬರೆದ ಹಳೆಯ ಪ್ರೇಮ ಪತ್ರ ಓದುತ್ತಾ ದುಃಖಿಸುವ ವೃದ್ದರೊಬ್ಬರ ಫೋಟೋವೊಂದನ್ನು ಕೊರೊನಾ ಸೋಕಿನಿಂದ ಚೇತರಿಕೆ ಹೊಂದಿದ ಇಟಲಿಯ ವ್ಯಕ್ತಿ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣದಲ್ಲಿ ಹರಡಲಾಗಿದೆ.

ಈ ಚಿತ್ರ ಐದು ವರ್ಷದ ಹಿಂದಿನ ಚಿತ್ರವಾಗಿದ್ದು, ವಾಸ್ತವದಲ್ಲಿ ಆ ವ್ಯಕ್ತಿ ಇಟಲಿಯವರಲ್ಲ. ಚಿತ್ರದಲ್ಲಿ, ಕೊಲೊರಾಡೋ ಮೂಲದ ಬಿಲ್ ಮೂರ್‌ ಎಂಬ ಎರಡನೇ ಮಹಾಯುದ್ಧದಲ್ಲಿ ಭಾಗವಹಿಸಿದ ಮಾಜಿ ಸೈನಿಕ ತಾನು ಮದುವೆಯಾಗಲು ನಿಶ್ಚಿತ ಮಾಡಿಕೊಂಡಿದ್ದ ಪ್ರೇಯಸಿಗೆ ಬರೆದ ಪತ್ರವನ್ನು ಓದುತ್ತಾ ಭಾವುಕನಾಗುವುದು ಕಾಣಬಹುದಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲಾದ ಸಂದೇಶದಲ್ಲಿ, “93 ವರ್ಷದ ವ್ಯಕ್ತಿಯಲ್ಲಿ ವೆಂಟಿಲೇಟರ್ ಬಿಲ್ಲು ಕಟ್ಟುವಂತೆ ಹೇಳಿದಾಗ, ಇದುವರೆಗೆ ಯಾವುದೆ ಬಿಲ್ಲು ಪಡೆಯದೆ ಉಚಿತವಾಗಿ ಉಸಿರಾಡಿಸಿದ ದೇವರ ಅನುಗ್ರಹವನ್ನು ನೆನೆದು ಭಾವುಕನಾಗುತ್ತಾನೆ” ಎಂದು ಬಿತ್ತರಿಸಲಾಗಿದೆ.

ನಾನು ಬಿಲ್ಲು ಕಟ್ಟುತ್ತೇನೆ. ಹಣದ ಬಗ್ಗೆ ಚಿಂತೆಯಿಲ್ಲ. ಆದರೆ 93 ವರ್ಷಗಳ ಕಾಲ ಯಾವುದೇ ಹಣವಿಲ್ಲದೇ ನನಗೆ ಉಸಿರಾಡಲು ಅವಕಾಶ ಮಾಡಿಕೊಟ್ಟ ದೇವರ ಋಣವನ್ನು ಹೇಗೆ ತೀರಿಸಲಿ ಎಂದು ಭಾವುಕರಾಗಿದ್ದಾರೆ ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ.

? After the 93 year old man in Italy got better in the hospital, he was told to pay for the ventilator for one day, and…

Posted by Nermeen Mohamed Ezzat on Thursday, April 2, 2020

 

ಅಲ್ಲದೇ ಹಲವಾರು ಜನರು ಇದನ್ನು ಹೀಗೆಯೆ ಹಂಚಿಕೊಂಡಿದ್ದಾರೆ. ನೋಡಲು ಇಲ್ಲಿ ಕ್ಲಿಕ್ ಮಾಡಿ.

ಮೂರ್ ಅವರ ಚಿತ್ರ, ಇದೇ ರೀತಿಯ ನಿರೂಪಣೆಯೊಂದಿಗೆ ಇನ್‌ಸ್ಟಾಗ್ರಾಮ್ ಶೀರ್ಷಿಕೆಯಂತೆ ಕಾಣುವ ಸ್ಕ್ರೀನ್‌ಶಾಟ್ ಒಂದು ಬಿಜೆಪಿಯ ಮುಖಂಡ ಮತ್ತು ನಟ ಪರೇಶ್ ರಾವಲ್ ಅವರು ಟ್ವೀಟ್ ಮಾಡಿದ್ದಾರೆ. ತನ್ನ ಟ್ವೀಟ್‌ನಲ್ಲಿ ಅವರು, “ಮಾನವ ಜನಾಂಗವಾದ ನಾವು ಅರ್ಥಮಾಡಿಕೊಳ್ಳುತ್ತಿದ್ದೇವೆ ಎಂದು ಭಾವಿಸುತ್ತೇನೆ” ಎಂದು ಬರೆದಿದ್ದರು.

ಅಲ್ಲದೆ ಇನ್ನೂ ಕೆಲವರು ಇದನ್ನು ಟ್ವೀಟ್ ಮಾಡಿದ್ದರು.

 

ಇಟಲಿಯಲ್ಲಿ ಎರಡು ಕೊರೊನಾ ಪ್ರಕರಣಗಳು ವರದಿಯಾದ ನಂತರ, ಇಟಲಿಯೂ ಜನವರಿ 31 ರಿಂದ ಕೊರೊನಾ ತುರ್ತು ಪರಿಸ್ಥಿತಿಯನ್ನು ಘೋಷಿಸಿತು. ಇದುವರೆಗೆ ಇಟಲಿಯಲ್ಲಿ ಕೊರೊನಾ ಸೋಂಕಿನಿಂದ 19,468 ಸಾವುಗಳು ಮತ್ತು 32,534 ಚೇತರಿಕೆಯಾಗಿದ್ದಾರೆಂದು ವರದಿಯಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಚಿತ್ರವೂ ವೈರಲಾಗುತ್ತಿರುವುದರಿವಂದ “ಭೂಮ್ ಲೈವ್” ಚಿತ್ರದ ಬಗ್ಗೆ ಫ್ಯಾಕ್ಟ್ ಚೆಕ್ ನಡೆಸಿ, ಚಿತ್ರವು ಐದು ವರ್ಷ ಹಳೆಯದಾಗಿದೆ ಮತ್ತು ಇದು ಇಟಲಿಯಲ್ಲಿ ನಡೆದ ಘಟನೆಯಲ್ಲ ಎಂದು ಕಂಡುಕೊಂಡಿದೆ.

ಇದರ ಮೂಲ ಚಿತ್ರವನ್ನು ಮಾರ್ಚ್ 2015 ರಿಂದ ಎಬಿಸಿ ನ್ಯೂಸ್ ಎಂಬ ಸುದ್ದಿಜಾಲದ ವರದಿಯಲ್ಲಿ ಅಪ್‌ಲೋಡ್ ಮಾಡಲಾಗಿತ್ತು. ಚಿತ್ರದಲ್ಲಿರವುದು ನಾನ್‌ಜೆಜೆನೇರಿಯನ್ ಕೊಲೊರಾಡೋ ಮೂಲದ ಎರಡನೇ ಮಹಾಯುದ್ಧದ ಮಾಜಿಸೈನಿಕ ಬಿಲ್ ಮೂರ್. ಯುದ್ಧದ ಸಮಯದಲ್ಲಿ ತನ್ನ ಪ್ರೇಯಸಿಗೆ ಅವರು ಬರೆದ ಪತ್ರ ಕಂಡುಬಂದಿದೆ ಎಂದು ತಿಳಿಸಿದ ನಂತರ ಅವರು ಭಾವುಕರಾಗಿದ್ದರು.

“1944 ರಲ್ಲಿ 20 ವರ್ಷ ಬಿಲ್ ಮೂರ್ ಅವರು ಬರ್ನಾಡಿಯನ್ ಎಂಬ ಯುವತಿಗೆ ಬರೆದ ಪತ್ರವನ್ನು 70 ವರ್ಷಗಳ ನಂತರ ಕಂಡು ಹಿಡಿದು ಓದಿದಾಗ ಮೂರ್ ಭಾವುಕರಗಿದ್ದರು. ವರದಿಯ ವೀಡಿಯೊದಲ್ಲಿ 52 ಸೆಕೆಂಡುಗಳ ನಂತರ ಮೂರ್‌ ಅಂಚೆಚೀಟಿ ಒಡೆಯುವುದನ್ನು ಕಾಣಬಹುದು.

ಇವರಿಗೂ ಕೊರೊನಾದಿಂದ ಗುಣಮುಖರಾದ ರೋಗಿಗೂ ಯಾವುದೇ ಸಂಬಂಧವಿಲ್ಲ. ತಪ್ಪಾಗಿ ಇವರ ಚಿತ್ರವನ್ನು ಬಳಸಿಕೊಳ್ಳಲಾಗಿದೆ ಅಷ್ಟೆ.

ಅಧೀಕೃತ ವರದಿಯಂತೆ ಇಟಲಿಯ ಆರೋಗ್ಯ ರಕ್ಷಣಾ ವ್ಯವಸ್ಥೆಯು ವೆಚ್ಚಗಳನ್ನು ಒಳಗೊಂಡಿದೆ. ರಾಷ್ಟ್ರೀಯ ಆರೋಗ್ಯ ಸೇವೆ (ಎನ್‌ಎಚ್‌ಎಸ್) ಅಡಿಯಲ್ಲಿ ಇಟಲಿಯ ಸಾರ್ವಜನಿಕವಾಗಿ ಧನಸಹಾಯ ಪಡೆದ ಆರೋಗ್ಯ ನೀತಿ ಸಾರ್ವತ್ರಿಕತೆಯನ್ನು ಒಳಗೊಳ್ಳುತ್ತದೆ ಮತ್ತು ಸ್ವಯಂಚಾಲಿತವಾಗಿ ಎಲ್ಲಾ ನಾಗರಿಕರು ಮತ್ತು ಕಾನೂನುಬದ್ಧ ವಿದೇಶಿ ನಿವಾಸಿಗಳು ಈ ವರ್ಗಕ್ಕೆ ಸೇರುತ್ತಾರೆ.

ಮತ್ತೊಂದು ವರದಿಯ ಪ್ರಕಾರ, ಆರೋಗ್ಯ ವ್ಯವಸ್ಥೆಯಲ್ಲಿ ಖಾಸಗಿ ಆರೋಗ್ಯ ವಿಮೆ ಸೀಮಿತ ಪಾತ್ರ ವಹಿಸುತ್ತದೆ. ಇಟಲಿಯಲ್ಲಿ ಖಾಸಗಿ ಆರೋಗ್ಯ ವಿಮೆ ಎರಡು ವಿಧದ ಕಾರ್ಪೊರೇಟ್ ಆಗಿದೆ, ಇದಕ್ಕಾಗಿ ಕಂಪನಿಗಳು ಸ್ವಂತ ಉದ್ಯೋಗಿಗಳನ್ನು ಮತ್ತು ಕೆಲವೊಮ್ಮೆ ಅವರ ಕುಟುಂಬಗಳನ್ನು ಒಳಗೊಳ್ಳುತ್ತವೆ. ಕಾರ್ಪೊರೇಟ್ ಅಲ್ಲದ ವ್ಯಕ್ತಿಗಳು ತಮ್ಮ ಅಥವಾ ತಮ್ಮ ಕುಟುಂಬಗಳಿಗೆ ವಿಮೆಯನ್ನು ಖರೀದಿಸಬಹುದು. ಆದ್ದರಿಂದ ಇಟಲಿಯಲ್ಲಿ ಆರೋಗ್ಯ ಸೇವೆಗಳ ವಿಮೆಯನ್ನು ಪಡೆದ ನಂತರ ರೋಗಿಗಳು ವೈಯಕ್ತಿಕವಾಗಿ ಪಾವತಿಸುವ ಸಾಧ್ಯತೆ ಕಡಿಮೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...