Homeನಿಜವೋ ಸುಳ್ಳೋFact check: ಭಾವುಕರಾಗಿ ಅಳುವ 93ರ ಈ ವೃದ್ದ ಕೊರೊನಾದಿಂದ ಚೇತರಿಸಿದ ವ್ಯಕ್ತಿಯೇ?

Fact check: ಭಾವುಕರಾಗಿ ಅಳುವ 93ರ ಈ ವೃದ್ದ ಕೊರೊನಾದಿಂದ ಚೇತರಿಸಿದ ವ್ಯಕ್ತಿಯೇ?

- Advertisement -
- Advertisement -

ತನ್ನ ಪ್ರೇಯಸಿಗೆ ಬರೆದ ಹಳೆಯ ಪ್ರೇಮ ಪತ್ರ ಓದುತ್ತಾ ದುಃಖಿಸುವ ವೃದ್ದರೊಬ್ಬರ ಫೋಟೋವೊಂದನ್ನು ಕೊರೊನಾ ಸೋಕಿನಿಂದ ಚೇತರಿಕೆ ಹೊಂದಿದ ಇಟಲಿಯ ವ್ಯಕ್ತಿ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣದಲ್ಲಿ ಹರಡಲಾಗಿದೆ.

ಈ ಚಿತ್ರ ಐದು ವರ್ಷದ ಹಿಂದಿನ ಚಿತ್ರವಾಗಿದ್ದು, ವಾಸ್ತವದಲ್ಲಿ ಆ ವ್ಯಕ್ತಿ ಇಟಲಿಯವರಲ್ಲ. ಚಿತ್ರದಲ್ಲಿ, ಕೊಲೊರಾಡೋ ಮೂಲದ ಬಿಲ್ ಮೂರ್‌ ಎಂಬ ಎರಡನೇ ಮಹಾಯುದ್ಧದಲ್ಲಿ ಭಾಗವಹಿಸಿದ ಮಾಜಿ ಸೈನಿಕ ತಾನು ಮದುವೆಯಾಗಲು ನಿಶ್ಚಿತ ಮಾಡಿಕೊಂಡಿದ್ದ ಪ್ರೇಯಸಿಗೆ ಬರೆದ ಪತ್ರವನ್ನು ಓದುತ್ತಾ ಭಾವುಕನಾಗುವುದು ಕಾಣಬಹುದಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲಾದ ಸಂದೇಶದಲ್ಲಿ, “93 ವರ್ಷದ ವ್ಯಕ್ತಿಯಲ್ಲಿ ವೆಂಟಿಲೇಟರ್ ಬಿಲ್ಲು ಕಟ್ಟುವಂತೆ ಹೇಳಿದಾಗ, ಇದುವರೆಗೆ ಯಾವುದೆ ಬಿಲ್ಲು ಪಡೆಯದೆ ಉಚಿತವಾಗಿ ಉಸಿರಾಡಿಸಿದ ದೇವರ ಅನುಗ್ರಹವನ್ನು ನೆನೆದು ಭಾವುಕನಾಗುತ್ತಾನೆ” ಎಂದು ಬಿತ್ತರಿಸಲಾಗಿದೆ.

ನಾನು ಬಿಲ್ಲು ಕಟ್ಟುತ್ತೇನೆ. ಹಣದ ಬಗ್ಗೆ ಚಿಂತೆಯಿಲ್ಲ. ಆದರೆ 93 ವರ್ಷಗಳ ಕಾಲ ಯಾವುದೇ ಹಣವಿಲ್ಲದೇ ನನಗೆ ಉಸಿರಾಡಲು ಅವಕಾಶ ಮಾಡಿಕೊಟ್ಟ ದೇವರ ಋಣವನ್ನು ಹೇಗೆ ತೀರಿಸಲಿ ಎಂದು ಭಾವುಕರಾಗಿದ್ದಾರೆ ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ.

? After the 93 year old man in Italy got better in the hospital, he was told to pay for the ventilator for one day, and…

Posted by Nermeen Mohamed Ezzat on Thursday, April 2, 2020

 

ಅಲ್ಲದೇ ಹಲವಾರು ಜನರು ಇದನ್ನು ಹೀಗೆಯೆ ಹಂಚಿಕೊಂಡಿದ್ದಾರೆ. ನೋಡಲು ಇಲ್ಲಿ ಕ್ಲಿಕ್ ಮಾಡಿ.

ಮೂರ್ ಅವರ ಚಿತ್ರ, ಇದೇ ರೀತಿಯ ನಿರೂಪಣೆಯೊಂದಿಗೆ ಇನ್‌ಸ್ಟಾಗ್ರಾಮ್ ಶೀರ್ಷಿಕೆಯಂತೆ ಕಾಣುವ ಸ್ಕ್ರೀನ್‌ಶಾಟ್ ಒಂದು ಬಿಜೆಪಿಯ ಮುಖಂಡ ಮತ್ತು ನಟ ಪರೇಶ್ ರಾವಲ್ ಅವರು ಟ್ವೀಟ್ ಮಾಡಿದ್ದಾರೆ. ತನ್ನ ಟ್ವೀಟ್‌ನಲ್ಲಿ ಅವರು, “ಮಾನವ ಜನಾಂಗವಾದ ನಾವು ಅರ್ಥಮಾಡಿಕೊಳ್ಳುತ್ತಿದ್ದೇವೆ ಎಂದು ಭಾವಿಸುತ್ತೇನೆ” ಎಂದು ಬರೆದಿದ್ದರು.

ಅಲ್ಲದೆ ಇನ್ನೂ ಕೆಲವರು ಇದನ್ನು ಟ್ವೀಟ್ ಮಾಡಿದ್ದರು.

 

ಇಟಲಿಯಲ್ಲಿ ಎರಡು ಕೊರೊನಾ ಪ್ರಕರಣಗಳು ವರದಿಯಾದ ನಂತರ, ಇಟಲಿಯೂ ಜನವರಿ 31 ರಿಂದ ಕೊರೊನಾ ತುರ್ತು ಪರಿಸ್ಥಿತಿಯನ್ನು ಘೋಷಿಸಿತು. ಇದುವರೆಗೆ ಇಟಲಿಯಲ್ಲಿ ಕೊರೊನಾ ಸೋಂಕಿನಿಂದ 19,468 ಸಾವುಗಳು ಮತ್ತು 32,534 ಚೇತರಿಕೆಯಾಗಿದ್ದಾರೆಂದು ವರದಿಯಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಚಿತ್ರವೂ ವೈರಲಾಗುತ್ತಿರುವುದರಿವಂದ “ಭೂಮ್ ಲೈವ್” ಚಿತ್ರದ ಬಗ್ಗೆ ಫ್ಯಾಕ್ಟ್ ಚೆಕ್ ನಡೆಸಿ, ಚಿತ್ರವು ಐದು ವರ್ಷ ಹಳೆಯದಾಗಿದೆ ಮತ್ತು ಇದು ಇಟಲಿಯಲ್ಲಿ ನಡೆದ ಘಟನೆಯಲ್ಲ ಎಂದು ಕಂಡುಕೊಂಡಿದೆ.

ಇದರ ಮೂಲ ಚಿತ್ರವನ್ನು ಮಾರ್ಚ್ 2015 ರಿಂದ ಎಬಿಸಿ ನ್ಯೂಸ್ ಎಂಬ ಸುದ್ದಿಜಾಲದ ವರದಿಯಲ್ಲಿ ಅಪ್‌ಲೋಡ್ ಮಾಡಲಾಗಿತ್ತು. ಚಿತ್ರದಲ್ಲಿರವುದು ನಾನ್‌ಜೆಜೆನೇರಿಯನ್ ಕೊಲೊರಾಡೋ ಮೂಲದ ಎರಡನೇ ಮಹಾಯುದ್ಧದ ಮಾಜಿಸೈನಿಕ ಬಿಲ್ ಮೂರ್. ಯುದ್ಧದ ಸಮಯದಲ್ಲಿ ತನ್ನ ಪ್ರೇಯಸಿಗೆ ಅವರು ಬರೆದ ಪತ್ರ ಕಂಡುಬಂದಿದೆ ಎಂದು ತಿಳಿಸಿದ ನಂತರ ಅವರು ಭಾವುಕರಾಗಿದ್ದರು.

“1944 ರಲ್ಲಿ 20 ವರ್ಷ ಬಿಲ್ ಮೂರ್ ಅವರು ಬರ್ನಾಡಿಯನ್ ಎಂಬ ಯುವತಿಗೆ ಬರೆದ ಪತ್ರವನ್ನು 70 ವರ್ಷಗಳ ನಂತರ ಕಂಡು ಹಿಡಿದು ಓದಿದಾಗ ಮೂರ್ ಭಾವುಕರಗಿದ್ದರು. ವರದಿಯ ವೀಡಿಯೊದಲ್ಲಿ 52 ಸೆಕೆಂಡುಗಳ ನಂತರ ಮೂರ್‌ ಅಂಚೆಚೀಟಿ ಒಡೆಯುವುದನ್ನು ಕಾಣಬಹುದು.

ಇವರಿಗೂ ಕೊರೊನಾದಿಂದ ಗುಣಮುಖರಾದ ರೋಗಿಗೂ ಯಾವುದೇ ಸಂಬಂಧವಿಲ್ಲ. ತಪ್ಪಾಗಿ ಇವರ ಚಿತ್ರವನ್ನು ಬಳಸಿಕೊಳ್ಳಲಾಗಿದೆ ಅಷ್ಟೆ.

ಅಧೀಕೃತ ವರದಿಯಂತೆ ಇಟಲಿಯ ಆರೋಗ್ಯ ರಕ್ಷಣಾ ವ್ಯವಸ್ಥೆಯು ವೆಚ್ಚಗಳನ್ನು ಒಳಗೊಂಡಿದೆ. ರಾಷ್ಟ್ರೀಯ ಆರೋಗ್ಯ ಸೇವೆ (ಎನ್‌ಎಚ್‌ಎಸ್) ಅಡಿಯಲ್ಲಿ ಇಟಲಿಯ ಸಾರ್ವಜನಿಕವಾಗಿ ಧನಸಹಾಯ ಪಡೆದ ಆರೋಗ್ಯ ನೀತಿ ಸಾರ್ವತ್ರಿಕತೆಯನ್ನು ಒಳಗೊಳ್ಳುತ್ತದೆ ಮತ್ತು ಸ್ವಯಂಚಾಲಿತವಾಗಿ ಎಲ್ಲಾ ನಾಗರಿಕರು ಮತ್ತು ಕಾನೂನುಬದ್ಧ ವಿದೇಶಿ ನಿವಾಸಿಗಳು ಈ ವರ್ಗಕ್ಕೆ ಸೇರುತ್ತಾರೆ.

ಮತ್ತೊಂದು ವರದಿಯ ಪ್ರಕಾರ, ಆರೋಗ್ಯ ವ್ಯವಸ್ಥೆಯಲ್ಲಿ ಖಾಸಗಿ ಆರೋಗ್ಯ ವಿಮೆ ಸೀಮಿತ ಪಾತ್ರ ವಹಿಸುತ್ತದೆ. ಇಟಲಿಯಲ್ಲಿ ಖಾಸಗಿ ಆರೋಗ್ಯ ವಿಮೆ ಎರಡು ವಿಧದ ಕಾರ್ಪೊರೇಟ್ ಆಗಿದೆ, ಇದಕ್ಕಾಗಿ ಕಂಪನಿಗಳು ಸ್ವಂತ ಉದ್ಯೋಗಿಗಳನ್ನು ಮತ್ತು ಕೆಲವೊಮ್ಮೆ ಅವರ ಕುಟುಂಬಗಳನ್ನು ಒಳಗೊಳ್ಳುತ್ತವೆ. ಕಾರ್ಪೊರೇಟ್ ಅಲ್ಲದ ವ್ಯಕ್ತಿಗಳು ತಮ್ಮ ಅಥವಾ ತಮ್ಮ ಕುಟುಂಬಗಳಿಗೆ ವಿಮೆಯನ್ನು ಖರೀದಿಸಬಹುದು. ಆದ್ದರಿಂದ ಇಟಲಿಯಲ್ಲಿ ಆರೋಗ್ಯ ಸೇವೆಗಳ ವಿಮೆಯನ್ನು ಪಡೆದ ನಂತರ ರೋಗಿಗಳು ವೈಯಕ್ತಿಕವಾಗಿ ಪಾವತಿಸುವ ಸಾಧ್ಯತೆ ಕಡಿಮೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...