Homeನಿಜವೋ ಸುಳ್ಳೋFact check: ಭಾವುಕರಾಗಿ ಅಳುವ 93ರ ಈ ವೃದ್ದ ಕೊರೊನಾದಿಂದ ಚೇತರಿಸಿದ ವ್ಯಕ್ತಿಯೇ?

Fact check: ಭಾವುಕರಾಗಿ ಅಳುವ 93ರ ಈ ವೃದ್ದ ಕೊರೊನಾದಿಂದ ಚೇತರಿಸಿದ ವ್ಯಕ್ತಿಯೇ?

- Advertisement -
- Advertisement -

ತನ್ನ ಪ್ರೇಯಸಿಗೆ ಬರೆದ ಹಳೆಯ ಪ್ರೇಮ ಪತ್ರ ಓದುತ್ತಾ ದುಃಖಿಸುವ ವೃದ್ದರೊಬ್ಬರ ಫೋಟೋವೊಂದನ್ನು ಕೊರೊನಾ ಸೋಕಿನಿಂದ ಚೇತರಿಕೆ ಹೊಂದಿದ ಇಟಲಿಯ ವ್ಯಕ್ತಿ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣದಲ್ಲಿ ಹರಡಲಾಗಿದೆ.

ಈ ಚಿತ್ರ ಐದು ವರ್ಷದ ಹಿಂದಿನ ಚಿತ್ರವಾಗಿದ್ದು, ವಾಸ್ತವದಲ್ಲಿ ಆ ವ್ಯಕ್ತಿ ಇಟಲಿಯವರಲ್ಲ. ಚಿತ್ರದಲ್ಲಿ, ಕೊಲೊರಾಡೋ ಮೂಲದ ಬಿಲ್ ಮೂರ್‌ ಎಂಬ ಎರಡನೇ ಮಹಾಯುದ್ಧದಲ್ಲಿ ಭಾಗವಹಿಸಿದ ಮಾಜಿ ಸೈನಿಕ ತಾನು ಮದುವೆಯಾಗಲು ನಿಶ್ಚಿತ ಮಾಡಿಕೊಂಡಿದ್ದ ಪ್ರೇಯಸಿಗೆ ಬರೆದ ಪತ್ರವನ್ನು ಓದುತ್ತಾ ಭಾವುಕನಾಗುವುದು ಕಾಣಬಹುದಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲಾದ ಸಂದೇಶದಲ್ಲಿ, “93 ವರ್ಷದ ವ್ಯಕ್ತಿಯಲ್ಲಿ ವೆಂಟಿಲೇಟರ್ ಬಿಲ್ಲು ಕಟ್ಟುವಂತೆ ಹೇಳಿದಾಗ, ಇದುವರೆಗೆ ಯಾವುದೆ ಬಿಲ್ಲು ಪಡೆಯದೆ ಉಚಿತವಾಗಿ ಉಸಿರಾಡಿಸಿದ ದೇವರ ಅನುಗ್ರಹವನ್ನು ನೆನೆದು ಭಾವುಕನಾಗುತ್ತಾನೆ” ಎಂದು ಬಿತ್ತರಿಸಲಾಗಿದೆ.

ನಾನು ಬಿಲ್ಲು ಕಟ್ಟುತ್ತೇನೆ. ಹಣದ ಬಗ್ಗೆ ಚಿಂತೆಯಿಲ್ಲ. ಆದರೆ 93 ವರ್ಷಗಳ ಕಾಲ ಯಾವುದೇ ಹಣವಿಲ್ಲದೇ ನನಗೆ ಉಸಿರಾಡಲು ಅವಕಾಶ ಮಾಡಿಕೊಟ್ಟ ದೇವರ ಋಣವನ್ನು ಹೇಗೆ ತೀರಿಸಲಿ ಎಂದು ಭಾವುಕರಾಗಿದ್ದಾರೆ ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ.

? After the 93 year old man in Italy got better in the hospital, he was told to pay for the ventilator for one day, and…

Posted by Nermeen Mohamed Ezzat on Thursday, April 2, 2020

 

ಅಲ್ಲದೇ ಹಲವಾರು ಜನರು ಇದನ್ನು ಹೀಗೆಯೆ ಹಂಚಿಕೊಂಡಿದ್ದಾರೆ. ನೋಡಲು ಇಲ್ಲಿ ಕ್ಲಿಕ್ ಮಾಡಿ.

ಮೂರ್ ಅವರ ಚಿತ್ರ, ಇದೇ ರೀತಿಯ ನಿರೂಪಣೆಯೊಂದಿಗೆ ಇನ್‌ಸ್ಟಾಗ್ರಾಮ್ ಶೀರ್ಷಿಕೆಯಂತೆ ಕಾಣುವ ಸ್ಕ್ರೀನ್‌ಶಾಟ್ ಒಂದು ಬಿಜೆಪಿಯ ಮುಖಂಡ ಮತ್ತು ನಟ ಪರೇಶ್ ರಾವಲ್ ಅವರು ಟ್ವೀಟ್ ಮಾಡಿದ್ದಾರೆ. ತನ್ನ ಟ್ವೀಟ್‌ನಲ್ಲಿ ಅವರು, “ಮಾನವ ಜನಾಂಗವಾದ ನಾವು ಅರ್ಥಮಾಡಿಕೊಳ್ಳುತ್ತಿದ್ದೇವೆ ಎಂದು ಭಾವಿಸುತ್ತೇನೆ” ಎಂದು ಬರೆದಿದ್ದರು.

ಅಲ್ಲದೆ ಇನ್ನೂ ಕೆಲವರು ಇದನ್ನು ಟ್ವೀಟ್ ಮಾಡಿದ್ದರು.

 

ಇಟಲಿಯಲ್ಲಿ ಎರಡು ಕೊರೊನಾ ಪ್ರಕರಣಗಳು ವರದಿಯಾದ ನಂತರ, ಇಟಲಿಯೂ ಜನವರಿ 31 ರಿಂದ ಕೊರೊನಾ ತುರ್ತು ಪರಿಸ್ಥಿತಿಯನ್ನು ಘೋಷಿಸಿತು. ಇದುವರೆಗೆ ಇಟಲಿಯಲ್ಲಿ ಕೊರೊನಾ ಸೋಂಕಿನಿಂದ 19,468 ಸಾವುಗಳು ಮತ್ತು 32,534 ಚೇತರಿಕೆಯಾಗಿದ್ದಾರೆಂದು ವರದಿಯಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಚಿತ್ರವೂ ವೈರಲಾಗುತ್ತಿರುವುದರಿವಂದ “ಭೂಮ್ ಲೈವ್” ಚಿತ್ರದ ಬಗ್ಗೆ ಫ್ಯಾಕ್ಟ್ ಚೆಕ್ ನಡೆಸಿ, ಚಿತ್ರವು ಐದು ವರ್ಷ ಹಳೆಯದಾಗಿದೆ ಮತ್ತು ಇದು ಇಟಲಿಯಲ್ಲಿ ನಡೆದ ಘಟನೆಯಲ್ಲ ಎಂದು ಕಂಡುಕೊಂಡಿದೆ.

ಇದರ ಮೂಲ ಚಿತ್ರವನ್ನು ಮಾರ್ಚ್ 2015 ರಿಂದ ಎಬಿಸಿ ನ್ಯೂಸ್ ಎಂಬ ಸುದ್ದಿಜಾಲದ ವರದಿಯಲ್ಲಿ ಅಪ್‌ಲೋಡ್ ಮಾಡಲಾಗಿತ್ತು. ಚಿತ್ರದಲ್ಲಿರವುದು ನಾನ್‌ಜೆಜೆನೇರಿಯನ್ ಕೊಲೊರಾಡೋ ಮೂಲದ ಎರಡನೇ ಮಹಾಯುದ್ಧದ ಮಾಜಿಸೈನಿಕ ಬಿಲ್ ಮೂರ್. ಯುದ್ಧದ ಸಮಯದಲ್ಲಿ ತನ್ನ ಪ್ರೇಯಸಿಗೆ ಅವರು ಬರೆದ ಪತ್ರ ಕಂಡುಬಂದಿದೆ ಎಂದು ತಿಳಿಸಿದ ನಂತರ ಅವರು ಭಾವುಕರಾಗಿದ್ದರು.

“1944 ರಲ್ಲಿ 20 ವರ್ಷ ಬಿಲ್ ಮೂರ್ ಅವರು ಬರ್ನಾಡಿಯನ್ ಎಂಬ ಯುವತಿಗೆ ಬರೆದ ಪತ್ರವನ್ನು 70 ವರ್ಷಗಳ ನಂತರ ಕಂಡು ಹಿಡಿದು ಓದಿದಾಗ ಮೂರ್ ಭಾವುಕರಗಿದ್ದರು. ವರದಿಯ ವೀಡಿಯೊದಲ್ಲಿ 52 ಸೆಕೆಂಡುಗಳ ನಂತರ ಮೂರ್‌ ಅಂಚೆಚೀಟಿ ಒಡೆಯುವುದನ್ನು ಕಾಣಬಹುದು.

ಇವರಿಗೂ ಕೊರೊನಾದಿಂದ ಗುಣಮುಖರಾದ ರೋಗಿಗೂ ಯಾವುದೇ ಸಂಬಂಧವಿಲ್ಲ. ತಪ್ಪಾಗಿ ಇವರ ಚಿತ್ರವನ್ನು ಬಳಸಿಕೊಳ್ಳಲಾಗಿದೆ ಅಷ್ಟೆ.

ಅಧೀಕೃತ ವರದಿಯಂತೆ ಇಟಲಿಯ ಆರೋಗ್ಯ ರಕ್ಷಣಾ ವ್ಯವಸ್ಥೆಯು ವೆಚ್ಚಗಳನ್ನು ಒಳಗೊಂಡಿದೆ. ರಾಷ್ಟ್ರೀಯ ಆರೋಗ್ಯ ಸೇವೆ (ಎನ್‌ಎಚ್‌ಎಸ್) ಅಡಿಯಲ್ಲಿ ಇಟಲಿಯ ಸಾರ್ವಜನಿಕವಾಗಿ ಧನಸಹಾಯ ಪಡೆದ ಆರೋಗ್ಯ ನೀತಿ ಸಾರ್ವತ್ರಿಕತೆಯನ್ನು ಒಳಗೊಳ್ಳುತ್ತದೆ ಮತ್ತು ಸ್ವಯಂಚಾಲಿತವಾಗಿ ಎಲ್ಲಾ ನಾಗರಿಕರು ಮತ್ತು ಕಾನೂನುಬದ್ಧ ವಿದೇಶಿ ನಿವಾಸಿಗಳು ಈ ವರ್ಗಕ್ಕೆ ಸೇರುತ್ತಾರೆ.

ಮತ್ತೊಂದು ವರದಿಯ ಪ್ರಕಾರ, ಆರೋಗ್ಯ ವ್ಯವಸ್ಥೆಯಲ್ಲಿ ಖಾಸಗಿ ಆರೋಗ್ಯ ವಿಮೆ ಸೀಮಿತ ಪಾತ್ರ ವಹಿಸುತ್ತದೆ. ಇಟಲಿಯಲ್ಲಿ ಖಾಸಗಿ ಆರೋಗ್ಯ ವಿಮೆ ಎರಡು ವಿಧದ ಕಾರ್ಪೊರೇಟ್ ಆಗಿದೆ, ಇದಕ್ಕಾಗಿ ಕಂಪನಿಗಳು ಸ್ವಂತ ಉದ್ಯೋಗಿಗಳನ್ನು ಮತ್ತು ಕೆಲವೊಮ್ಮೆ ಅವರ ಕುಟುಂಬಗಳನ್ನು ಒಳಗೊಳ್ಳುತ್ತವೆ. ಕಾರ್ಪೊರೇಟ್ ಅಲ್ಲದ ವ್ಯಕ್ತಿಗಳು ತಮ್ಮ ಅಥವಾ ತಮ್ಮ ಕುಟುಂಬಗಳಿಗೆ ವಿಮೆಯನ್ನು ಖರೀದಿಸಬಹುದು. ಆದ್ದರಿಂದ ಇಟಲಿಯಲ್ಲಿ ಆರೋಗ್ಯ ಸೇವೆಗಳ ವಿಮೆಯನ್ನು ಪಡೆದ ನಂತರ ರೋಗಿಗಳು ವೈಯಕ್ತಿಕವಾಗಿ ಪಾವತಿಸುವ ಸಾಧ್ಯತೆ ಕಡಿಮೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...