Homeಫ್ಯಾಕ್ಟ್‌ಚೆಕ್Fact Check: ರಾಮ ಮಂದಿರ ಉದ್ಘಾಟನೆಯಂದು ಇಸ್ರೇಲ್ ರಾಷ್ಟ್ರೀಯ ರಜಾದಿನ ಘೋಷಿಸಿದೆಯಾ?

Fact Check: ರಾಮ ಮಂದಿರ ಉದ್ಘಾಟನೆಯಂದು ಇಸ್ರೇಲ್ ರಾಷ್ಟ್ರೀಯ ರಜಾದಿನ ಘೋಷಿಸಿದೆಯಾ?

- Advertisement -
- Advertisement -

ಜನವರಿ 22,2024ರಂದು ಅಯೋಧ್ಯೆ ರಾಮ ಮಂದಿರದಲ್ಲಿ ರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆ, ಇಸ್ರೇಲ್ ಸರ್ಕಾರ ಅಂದಿನ ದಿನವನ್ನು ರಾಷ್ಟ್ರೀಯ ರಜಾದಿನವನ್ನಾಗಿ ಘೋಷಣೆ ಮಾಡಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹಬ್ಬಿದೆ.

ಅನೇಕ ಫೇಸ್‌ಬುಕ್ ಬಳಕೆದಾರರು ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ಭಾರತದ ಮಿತ್ರ ರಾಷ್ಟ್ರ ಇಸ್ರೇಲ್ ರಾಷ್ಟ್ರೀಯ ರಜಾದಿನ ಘೋಷಣೆ ಮಾಡಿದ ಎಂದು ಪೋಸ್ಟ್ ಹಾಕಿದ್ದಾರೆ.

‘Manohar Manohar’ಎಂಬ ಫೇಸ್‌ಬುಕ್ ಬಳಕೆದಾರ ತಮ್ಮ ಖಾತೆಯಲ್ಲಿ “ಇಸ್ರೇಲ್ ಜನವರಿ 22 ಅನ್ನು ರಾಷ್ಟ್ರೀಯ ರಜಾದಿನವೆಂದು ಘೋಷಿಸಿದೆ. ಜೈ ಇಸ್ರೇಲ್, ಜೈ ಶ್ರೀರಾಮ್” ಎಂದು ಬರೆದುಕೊಂಡಿದ್ದಾರೆ.

‘Siddu Adin’ಎಂಬ ಮತ್ತೋರ್ವ ಫೇಸ್‌ಬುಕ್ ಬಳಕೆದಾರ ” ಇಸ್ರೇಲ್ ಜನವರಿ 22ನೇ ತಾರೀಖು ರಾಷ್ಟ್ರೀಯ ರಜಾ ದಿನವೆಂದು ಘೋಷಿಸಿದೆ. ಜೈಶ್ರೀರಾಮ್, ಜೈ ಇಸ್ರೇಲ್” ಎಂದು ತಮ್ಮ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್‌ ಲಿಂಕ್‌ಗೆ ಇಲ್ಲಿ ಕ್ಲಿಕ್ ಮಾಡಿ 

ಸತ್ಯ ಸನಾತನಿ‘ ಎಂಬ ಮತ್ತೊಂದು ಫೇಸ್‌ಬುಕ್ ಖಾತೆಯಲ್ಲೂ ” ಇಸ್ರೇಲ್ ಜನವರಿ 22ರಂದು ರಾಷ್ಟ್ರೀಯ ರಜಾದಿನವೆಂದು ಘೋಷಿಸಿದೆ. ಒಂದು ದೇಶ ತನ್ನ ಮಿತ್ರ ದೇಶಕ್ಕೆ ಇದಕ್ಕಿಂತಲೂ ಸ್ಪಷ್ಟವಾಗಿ ಇನ್ನು ಹೇಗೆ ತಾನೆ ಬೆಂಬಲ ಸೂಚಿಸಲು ಸಾಧ್ಯ? ಇಸ್ರೇಲ್‌ನ ಹೃದಯದಲ್ಲಿ ಭಾರತ ಇದೆ” ಎಂದು ಬರೆದುಕೊಳ್ಳಲಾಗಿದೆ.

ವಾಸ್ತವ : ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ಈ ಸುದ್ದಿಯ ಸತ್ಯಾಸತ್ಯತೆ ತಿಳಿಯುವ ಪ್ರಯತ್ನವನ್ನು ನಾನುಗೌರಿ.ಕಾಂ ಮಾಡಿದೆ.

ಗೂಗಲ್‌ ಸಹಾಯದಿಂದ ಇಸ್ರೇಲ್‌ನ ರಜಾದಿನಗಳ ಪಟ್ಟಿಯನ್ನು ಹುಡುಕಿದಾಗ ಅನೇಕ ಅಂತಾರಾಷ್ಟ್ರೀಯ ವೆಬ್‌ಸೈಟ್‌ಗಳಲ್ಲಿ ಪಟ್ಟಿ ದೊರೆತಿದೆ.

ಜಾಗತಿಕ ಮಾಹಿತಿಗಳನ್ನು ತಿಳಿಸುವ worlddata.info ಎಂಬ ವೆಬ್‌ಸೈಟ್‌ನಲ್ಲಿ ಇಸ್ರೇಲ್‌ನ 2024ರ ರಜಾದಿನಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರಲ್ಲಿ ಜನವರಿ 25, 2022ರಂದು New year festival of trees and bushes (ಮರಗಳು ಮತ್ತು ಪೊದೆಗಳ ಹೊಸ ವರ್ಷದ ಹಬ್ಬ) ಎಂಬ ಹೆಸರಿನಲ್ಲಿ ರಜಾದಿನ ಕಂಡು ಬಂದಿದೆ. ಜನವರಿ 22ರಂದು ಯಾವುದೇ ರಜೆ ಇರುವುದಾಗಿ ಉಲ್ಲೇಖಿಸಿಲ್ಲ.

ವಿವಿಧ ದೇಶಗಳ ಮಾಹಿತಿ ತಿಳಿಸುವ timeanddate.com ಎಂಬ ಮತ್ತೊಂದು ವೆಬ್‌ಸೈಟ್‌ನಲ್ಲಿಯೂ ಜನವರಿ 25, 2024ರಂದು ಇಸ್ರೇಲ್‌ನಲ್ಲಿ ರಜಾದಿನ ಇರುವುದಾಗಿ ಹೇಳಲಾಗಿದೆ. ಜನವರಿ 22ರ ರಜೆಯ ಕುರಿತು ಉಲ್ಲೇಖಿಸಿಲ್ಲ.

ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕೃತ ವೆಬ್‌ಸೈಟ್‌ನಲ್ಲಿ 2024 ಇಸ್ರೇಲ್‌ ಮತ್ತು ಭಾರತದ ರಜಾದಿನಗಳ ಮಾಹಿತಿ ನೀಡಲಾಗಿದೆ. ಅದರಲ್ಲಿ ಜನವರಿ 26 ಭಾರತ ಗಣರಾಜ್ಯೋತ್ಸವದಂದು ಇಸ್ರೇಲ್‌ನಲ್ಲಿರುವ ರಾಯಭಾರ ಕಚೇರಿಗೆ ರಜೆ ಇರುವುದಾಗಿ ಹೇಳಲಾಗಿದೆ. ಆದರೆ, ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ರಾಯಭಾರ ಕಚೇರಿಗಾಗಲಿ, ಇಸ್ರೇಲ್ ದೇಶದಲ್ಲಾಗಲಿ ಯಾವುದೇ ರಜೆ ಇರುವ ಬಗ್ಗೆ ಉಲ್ಲೇಖಿಸಿಲ್ಲ.

ಇಸ್ರೇಲ್‌ಗಿಂತ ಭಾರತದಲ್ಲೇ ಜನವರಿ 22ರಂದು ಯಾವುದೇ ರಾಷ್ಟ್ರೀಯ ರಜೆ ಇರುವುದಾಗಿ ಸರ್ಕಾರ ಘೋಷಣೆ ಮಾಡಿಲ್ಲ. ಉತ್ತರ ಪ್ರದೇಶ ಸರ್ಕಾರ ಅಂದು ಉತ್ತರ ಪ್ರದೇಶ ರಾಜ್ಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿಯಾಗಿದೆ.

ಭಾರತದ ಯಾವುದೇ ಮುಖ್ಯವಾಹಿನಿ ಮಾಧ್ಯಮಗಳು ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ಇಸ್ರೇಲ್ ರಾಷ್ಟ್ರೀಯ ರಜಾದಿನ ಘೋಷಣೆ ಮಾಡಿದೆ ಎಂದು ಎಲ್ಲೂ ಸುದ್ದಿ ಪ್ರಕಟಿಸಿಲ್ಲ.

ಭಾರತದಲ್ಲಿರುವ ಇಸ್ರೇಲ್ ರಾಯಭಾರ ಕಚೇರಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಜನವರಿ 22ರಂದು ಇಸ್ರೇಲ್‌ನಲ್ಲಿ ರಜೆ ಇರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ರಾಯಭಾರ ಕಚೇರಿಯ ವೆಬ್‌ಸೈಟ್‌ನಲ್ಲಿ 2024ರ ರಜಾದಿನಗಳ ಪಟ್ಟಿ ಇನ್ನೂ ಅಪ್ಡೇಟ್ ಆಗಿಲ್ಲ. ಹಳೆಯ 2023ರ ಪಟ್ಟಿಯೇ ಇದೆ.

ಇದನ್ನೂ ಓದಿ : Fact Check : ಮಣಿಪುರದಿಂದ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ದಕ್ಕೆ ಚೀನಾ ಅಧ್ಯಕ್ಷ ರಾಹುಲ್ ಗಾಂಧಿಗೆ ಧನ್ಯವಾದ ಹೇಳಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...