Homeಫ್ಯಾಕ್ಟ್‌ಚೆಕ್Fact Check: ರಾಮ ಮಂದಿರ ಉದ್ಘಾಟನೆಯಂದು ಇಸ್ರೇಲ್ ರಾಷ್ಟ್ರೀಯ ರಜಾದಿನ ಘೋಷಿಸಿದೆಯಾ?

Fact Check: ರಾಮ ಮಂದಿರ ಉದ್ಘಾಟನೆಯಂದು ಇಸ್ರೇಲ್ ರಾಷ್ಟ್ರೀಯ ರಜಾದಿನ ಘೋಷಿಸಿದೆಯಾ?

- Advertisement -
- Advertisement -

ಜನವರಿ 22,2024ರಂದು ಅಯೋಧ್ಯೆ ರಾಮ ಮಂದಿರದಲ್ಲಿ ರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆ, ಇಸ್ರೇಲ್ ಸರ್ಕಾರ ಅಂದಿನ ದಿನವನ್ನು ರಾಷ್ಟ್ರೀಯ ರಜಾದಿನವನ್ನಾಗಿ ಘೋಷಣೆ ಮಾಡಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹಬ್ಬಿದೆ.

ಅನೇಕ ಫೇಸ್‌ಬುಕ್ ಬಳಕೆದಾರರು ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ಭಾರತದ ಮಿತ್ರ ರಾಷ್ಟ್ರ ಇಸ್ರೇಲ್ ರಾಷ್ಟ್ರೀಯ ರಜಾದಿನ ಘೋಷಣೆ ಮಾಡಿದ ಎಂದು ಪೋಸ್ಟ್ ಹಾಕಿದ್ದಾರೆ.

‘Manohar Manohar’ಎಂಬ ಫೇಸ್‌ಬುಕ್ ಬಳಕೆದಾರ ತಮ್ಮ ಖಾತೆಯಲ್ಲಿ “ಇಸ್ರೇಲ್ ಜನವರಿ 22 ಅನ್ನು ರಾಷ್ಟ್ರೀಯ ರಜಾದಿನವೆಂದು ಘೋಷಿಸಿದೆ. ಜೈ ಇಸ್ರೇಲ್, ಜೈ ಶ್ರೀರಾಮ್” ಎಂದು ಬರೆದುಕೊಂಡಿದ್ದಾರೆ.

‘Siddu Adin’ಎಂಬ ಮತ್ತೋರ್ವ ಫೇಸ್‌ಬುಕ್ ಬಳಕೆದಾರ ” ಇಸ್ರೇಲ್ ಜನವರಿ 22ನೇ ತಾರೀಖು ರಾಷ್ಟ್ರೀಯ ರಜಾ ದಿನವೆಂದು ಘೋಷಿಸಿದೆ. ಜೈಶ್ರೀರಾಮ್, ಜೈ ಇಸ್ರೇಲ್” ಎಂದು ತಮ್ಮ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್‌ ಲಿಂಕ್‌ಗೆ ಇಲ್ಲಿ ಕ್ಲಿಕ್ ಮಾಡಿ 

ಸತ್ಯ ಸನಾತನಿ‘ ಎಂಬ ಮತ್ತೊಂದು ಫೇಸ್‌ಬುಕ್ ಖಾತೆಯಲ್ಲೂ ” ಇಸ್ರೇಲ್ ಜನವರಿ 22ರಂದು ರಾಷ್ಟ್ರೀಯ ರಜಾದಿನವೆಂದು ಘೋಷಿಸಿದೆ. ಒಂದು ದೇಶ ತನ್ನ ಮಿತ್ರ ದೇಶಕ್ಕೆ ಇದಕ್ಕಿಂತಲೂ ಸ್ಪಷ್ಟವಾಗಿ ಇನ್ನು ಹೇಗೆ ತಾನೆ ಬೆಂಬಲ ಸೂಚಿಸಲು ಸಾಧ್ಯ? ಇಸ್ರೇಲ್‌ನ ಹೃದಯದಲ್ಲಿ ಭಾರತ ಇದೆ” ಎಂದು ಬರೆದುಕೊಳ್ಳಲಾಗಿದೆ.

ವಾಸ್ತವ : ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ಈ ಸುದ್ದಿಯ ಸತ್ಯಾಸತ್ಯತೆ ತಿಳಿಯುವ ಪ್ರಯತ್ನವನ್ನು ನಾನುಗೌರಿ.ಕಾಂ ಮಾಡಿದೆ.

ಗೂಗಲ್‌ ಸಹಾಯದಿಂದ ಇಸ್ರೇಲ್‌ನ ರಜಾದಿನಗಳ ಪಟ್ಟಿಯನ್ನು ಹುಡುಕಿದಾಗ ಅನೇಕ ಅಂತಾರಾಷ್ಟ್ರೀಯ ವೆಬ್‌ಸೈಟ್‌ಗಳಲ್ಲಿ ಪಟ್ಟಿ ದೊರೆತಿದೆ.

ಜಾಗತಿಕ ಮಾಹಿತಿಗಳನ್ನು ತಿಳಿಸುವ worlddata.info ಎಂಬ ವೆಬ್‌ಸೈಟ್‌ನಲ್ಲಿ ಇಸ್ರೇಲ್‌ನ 2024ರ ರಜಾದಿನಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರಲ್ಲಿ ಜನವರಿ 25, 2022ರಂದು New year festival of trees and bushes (ಮರಗಳು ಮತ್ತು ಪೊದೆಗಳ ಹೊಸ ವರ್ಷದ ಹಬ್ಬ) ಎಂಬ ಹೆಸರಿನಲ್ಲಿ ರಜಾದಿನ ಕಂಡು ಬಂದಿದೆ. ಜನವರಿ 22ರಂದು ಯಾವುದೇ ರಜೆ ಇರುವುದಾಗಿ ಉಲ್ಲೇಖಿಸಿಲ್ಲ.

ವಿವಿಧ ದೇಶಗಳ ಮಾಹಿತಿ ತಿಳಿಸುವ timeanddate.com ಎಂಬ ಮತ್ತೊಂದು ವೆಬ್‌ಸೈಟ್‌ನಲ್ಲಿಯೂ ಜನವರಿ 25, 2024ರಂದು ಇಸ್ರೇಲ್‌ನಲ್ಲಿ ರಜಾದಿನ ಇರುವುದಾಗಿ ಹೇಳಲಾಗಿದೆ. ಜನವರಿ 22ರ ರಜೆಯ ಕುರಿತು ಉಲ್ಲೇಖಿಸಿಲ್ಲ.

ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕೃತ ವೆಬ್‌ಸೈಟ್‌ನಲ್ಲಿ 2024 ಇಸ್ರೇಲ್‌ ಮತ್ತು ಭಾರತದ ರಜಾದಿನಗಳ ಮಾಹಿತಿ ನೀಡಲಾಗಿದೆ. ಅದರಲ್ಲಿ ಜನವರಿ 26 ಭಾರತ ಗಣರಾಜ್ಯೋತ್ಸವದಂದು ಇಸ್ರೇಲ್‌ನಲ್ಲಿರುವ ರಾಯಭಾರ ಕಚೇರಿಗೆ ರಜೆ ಇರುವುದಾಗಿ ಹೇಳಲಾಗಿದೆ. ಆದರೆ, ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ರಾಯಭಾರ ಕಚೇರಿಗಾಗಲಿ, ಇಸ್ರೇಲ್ ದೇಶದಲ್ಲಾಗಲಿ ಯಾವುದೇ ರಜೆ ಇರುವ ಬಗ್ಗೆ ಉಲ್ಲೇಖಿಸಿಲ್ಲ.

ಇಸ್ರೇಲ್‌ಗಿಂತ ಭಾರತದಲ್ಲೇ ಜನವರಿ 22ರಂದು ಯಾವುದೇ ರಾಷ್ಟ್ರೀಯ ರಜೆ ಇರುವುದಾಗಿ ಸರ್ಕಾರ ಘೋಷಣೆ ಮಾಡಿಲ್ಲ. ಉತ್ತರ ಪ್ರದೇಶ ಸರ್ಕಾರ ಅಂದು ಉತ್ತರ ಪ್ರದೇಶ ರಾಜ್ಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿಯಾಗಿದೆ.

ಭಾರತದ ಯಾವುದೇ ಮುಖ್ಯವಾಹಿನಿ ಮಾಧ್ಯಮಗಳು ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ಇಸ್ರೇಲ್ ರಾಷ್ಟ್ರೀಯ ರಜಾದಿನ ಘೋಷಣೆ ಮಾಡಿದೆ ಎಂದು ಎಲ್ಲೂ ಸುದ್ದಿ ಪ್ರಕಟಿಸಿಲ್ಲ.

ಭಾರತದಲ್ಲಿರುವ ಇಸ್ರೇಲ್ ರಾಯಭಾರ ಕಚೇರಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಜನವರಿ 22ರಂದು ಇಸ್ರೇಲ್‌ನಲ್ಲಿ ರಜೆ ಇರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ರಾಯಭಾರ ಕಚೇರಿಯ ವೆಬ್‌ಸೈಟ್‌ನಲ್ಲಿ 2024ರ ರಜಾದಿನಗಳ ಪಟ್ಟಿ ಇನ್ನೂ ಅಪ್ಡೇಟ್ ಆಗಿಲ್ಲ. ಹಳೆಯ 2023ರ ಪಟ್ಟಿಯೇ ಇದೆ.

ಇದನ್ನೂ ಓದಿ : Fact Check : ಮಣಿಪುರದಿಂದ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ದಕ್ಕೆ ಚೀನಾ ಅಧ್ಯಕ್ಷ ರಾಹುಲ್ ಗಾಂಧಿಗೆ ಧನ್ಯವಾದ ಹೇಳಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...