Homeಫ್ಯಾಕ್ಟ್‌ಚೆಕ್Fact Check: ರಾಮ ಮಂದಿರ ಉದ್ಘಾಟನೆಯಂದು ಇಸ್ರೇಲ್ ರಾಷ್ಟ್ರೀಯ ರಜಾದಿನ ಘೋಷಿಸಿದೆಯಾ?

Fact Check: ರಾಮ ಮಂದಿರ ಉದ್ಘಾಟನೆಯಂದು ಇಸ್ರೇಲ್ ರಾಷ್ಟ್ರೀಯ ರಜಾದಿನ ಘೋಷಿಸಿದೆಯಾ?

- Advertisement -
- Advertisement -

ಜನವರಿ 22,2024ರಂದು ಅಯೋಧ್ಯೆ ರಾಮ ಮಂದಿರದಲ್ಲಿ ರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆ, ಇಸ್ರೇಲ್ ಸರ್ಕಾರ ಅಂದಿನ ದಿನವನ್ನು ರಾಷ್ಟ್ರೀಯ ರಜಾದಿನವನ್ನಾಗಿ ಘೋಷಣೆ ಮಾಡಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹಬ್ಬಿದೆ.

ಅನೇಕ ಫೇಸ್‌ಬುಕ್ ಬಳಕೆದಾರರು ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ಭಾರತದ ಮಿತ್ರ ರಾಷ್ಟ್ರ ಇಸ್ರೇಲ್ ರಾಷ್ಟ್ರೀಯ ರಜಾದಿನ ಘೋಷಣೆ ಮಾಡಿದ ಎಂದು ಪೋಸ್ಟ್ ಹಾಕಿದ್ದಾರೆ.

‘Manohar Manohar’ಎಂಬ ಫೇಸ್‌ಬುಕ್ ಬಳಕೆದಾರ ತಮ್ಮ ಖಾತೆಯಲ್ಲಿ “ಇಸ್ರೇಲ್ ಜನವರಿ 22 ಅನ್ನು ರಾಷ್ಟ್ರೀಯ ರಜಾದಿನವೆಂದು ಘೋಷಿಸಿದೆ. ಜೈ ಇಸ್ರೇಲ್, ಜೈ ಶ್ರೀರಾಮ್” ಎಂದು ಬರೆದುಕೊಂಡಿದ್ದಾರೆ.

‘Siddu Adin’ಎಂಬ ಮತ್ತೋರ್ವ ಫೇಸ್‌ಬುಕ್ ಬಳಕೆದಾರ ” ಇಸ್ರೇಲ್ ಜನವರಿ 22ನೇ ತಾರೀಖು ರಾಷ್ಟ್ರೀಯ ರಜಾ ದಿನವೆಂದು ಘೋಷಿಸಿದೆ. ಜೈಶ್ರೀರಾಮ್, ಜೈ ಇಸ್ರೇಲ್” ಎಂದು ತಮ್ಮ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್‌ ಲಿಂಕ್‌ಗೆ ಇಲ್ಲಿ ಕ್ಲಿಕ್ ಮಾಡಿ 

ಸತ್ಯ ಸನಾತನಿ‘ ಎಂಬ ಮತ್ತೊಂದು ಫೇಸ್‌ಬುಕ್ ಖಾತೆಯಲ್ಲೂ ” ಇಸ್ರೇಲ್ ಜನವರಿ 22ರಂದು ರಾಷ್ಟ್ರೀಯ ರಜಾದಿನವೆಂದು ಘೋಷಿಸಿದೆ. ಒಂದು ದೇಶ ತನ್ನ ಮಿತ್ರ ದೇಶಕ್ಕೆ ಇದಕ್ಕಿಂತಲೂ ಸ್ಪಷ್ಟವಾಗಿ ಇನ್ನು ಹೇಗೆ ತಾನೆ ಬೆಂಬಲ ಸೂಚಿಸಲು ಸಾಧ್ಯ? ಇಸ್ರೇಲ್‌ನ ಹೃದಯದಲ್ಲಿ ಭಾರತ ಇದೆ” ಎಂದು ಬರೆದುಕೊಳ್ಳಲಾಗಿದೆ.

ವಾಸ್ತವ : ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ಈ ಸುದ್ದಿಯ ಸತ್ಯಾಸತ್ಯತೆ ತಿಳಿಯುವ ಪ್ರಯತ್ನವನ್ನು ನಾನುಗೌರಿ.ಕಾಂ ಮಾಡಿದೆ.

ಗೂಗಲ್‌ ಸಹಾಯದಿಂದ ಇಸ್ರೇಲ್‌ನ ರಜಾದಿನಗಳ ಪಟ್ಟಿಯನ್ನು ಹುಡುಕಿದಾಗ ಅನೇಕ ಅಂತಾರಾಷ್ಟ್ರೀಯ ವೆಬ್‌ಸೈಟ್‌ಗಳಲ್ಲಿ ಪಟ್ಟಿ ದೊರೆತಿದೆ.

ಜಾಗತಿಕ ಮಾಹಿತಿಗಳನ್ನು ತಿಳಿಸುವ worlddata.info ಎಂಬ ವೆಬ್‌ಸೈಟ್‌ನಲ್ಲಿ ಇಸ್ರೇಲ್‌ನ 2024ರ ರಜಾದಿನಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರಲ್ಲಿ ಜನವರಿ 25, 2022ರಂದು New year festival of trees and bushes (ಮರಗಳು ಮತ್ತು ಪೊದೆಗಳ ಹೊಸ ವರ್ಷದ ಹಬ್ಬ) ಎಂಬ ಹೆಸರಿನಲ್ಲಿ ರಜಾದಿನ ಕಂಡು ಬಂದಿದೆ. ಜನವರಿ 22ರಂದು ಯಾವುದೇ ರಜೆ ಇರುವುದಾಗಿ ಉಲ್ಲೇಖಿಸಿಲ್ಲ.

ವಿವಿಧ ದೇಶಗಳ ಮಾಹಿತಿ ತಿಳಿಸುವ timeanddate.com ಎಂಬ ಮತ್ತೊಂದು ವೆಬ್‌ಸೈಟ್‌ನಲ್ಲಿಯೂ ಜನವರಿ 25, 2024ರಂದು ಇಸ್ರೇಲ್‌ನಲ್ಲಿ ರಜಾದಿನ ಇರುವುದಾಗಿ ಹೇಳಲಾಗಿದೆ. ಜನವರಿ 22ರ ರಜೆಯ ಕುರಿತು ಉಲ್ಲೇಖಿಸಿಲ್ಲ.

ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕೃತ ವೆಬ್‌ಸೈಟ್‌ನಲ್ಲಿ 2024 ಇಸ್ರೇಲ್‌ ಮತ್ತು ಭಾರತದ ರಜಾದಿನಗಳ ಮಾಹಿತಿ ನೀಡಲಾಗಿದೆ. ಅದರಲ್ಲಿ ಜನವರಿ 26 ಭಾರತ ಗಣರಾಜ್ಯೋತ್ಸವದಂದು ಇಸ್ರೇಲ್‌ನಲ್ಲಿರುವ ರಾಯಭಾರ ಕಚೇರಿಗೆ ರಜೆ ಇರುವುದಾಗಿ ಹೇಳಲಾಗಿದೆ. ಆದರೆ, ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ರಾಯಭಾರ ಕಚೇರಿಗಾಗಲಿ, ಇಸ್ರೇಲ್ ದೇಶದಲ್ಲಾಗಲಿ ಯಾವುದೇ ರಜೆ ಇರುವ ಬಗ್ಗೆ ಉಲ್ಲೇಖಿಸಿಲ್ಲ.

ಇಸ್ರೇಲ್‌ಗಿಂತ ಭಾರತದಲ್ಲೇ ಜನವರಿ 22ರಂದು ಯಾವುದೇ ರಾಷ್ಟ್ರೀಯ ರಜೆ ಇರುವುದಾಗಿ ಸರ್ಕಾರ ಘೋಷಣೆ ಮಾಡಿಲ್ಲ. ಉತ್ತರ ಪ್ರದೇಶ ಸರ್ಕಾರ ಅಂದು ಉತ್ತರ ಪ್ರದೇಶ ರಾಜ್ಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿಯಾಗಿದೆ.

ಭಾರತದ ಯಾವುದೇ ಮುಖ್ಯವಾಹಿನಿ ಮಾಧ್ಯಮಗಳು ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ಇಸ್ರೇಲ್ ರಾಷ್ಟ್ರೀಯ ರಜಾದಿನ ಘೋಷಣೆ ಮಾಡಿದೆ ಎಂದು ಎಲ್ಲೂ ಸುದ್ದಿ ಪ್ರಕಟಿಸಿಲ್ಲ.

ಭಾರತದಲ್ಲಿರುವ ಇಸ್ರೇಲ್ ರಾಯಭಾರ ಕಚೇರಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಜನವರಿ 22ರಂದು ಇಸ್ರೇಲ್‌ನಲ್ಲಿ ರಜೆ ಇರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ರಾಯಭಾರ ಕಚೇರಿಯ ವೆಬ್‌ಸೈಟ್‌ನಲ್ಲಿ 2024ರ ರಜಾದಿನಗಳ ಪಟ್ಟಿ ಇನ್ನೂ ಅಪ್ಡೇಟ್ ಆಗಿಲ್ಲ. ಹಳೆಯ 2023ರ ಪಟ್ಟಿಯೇ ಇದೆ.

ಇದನ್ನೂ ಓದಿ : Fact Check : ಮಣಿಪುರದಿಂದ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ದಕ್ಕೆ ಚೀನಾ ಅಧ್ಯಕ್ಷ ರಾಹುಲ್ ಗಾಂಧಿಗೆ ಧನ್ಯವಾದ ಹೇಳಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...