Homeಫ್ಯಾಕ್ಟ್‌ಚೆಕ್Fact Check: ರಾಮ ಮಂದಿರ ಉದ್ಘಾಟನೆಯಂದು ಇಸ್ರೇಲ್ ರಾಷ್ಟ್ರೀಯ ರಜಾದಿನ ಘೋಷಿಸಿದೆಯಾ?

Fact Check: ರಾಮ ಮಂದಿರ ಉದ್ಘಾಟನೆಯಂದು ಇಸ್ರೇಲ್ ರಾಷ್ಟ್ರೀಯ ರಜಾದಿನ ಘೋಷಿಸಿದೆಯಾ?

- Advertisement -
- Advertisement -

ಜನವರಿ 22,2024ರಂದು ಅಯೋಧ್ಯೆ ರಾಮ ಮಂದಿರದಲ್ಲಿ ರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆ, ಇಸ್ರೇಲ್ ಸರ್ಕಾರ ಅಂದಿನ ದಿನವನ್ನು ರಾಷ್ಟ್ರೀಯ ರಜಾದಿನವನ್ನಾಗಿ ಘೋಷಣೆ ಮಾಡಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹಬ್ಬಿದೆ.

ಅನೇಕ ಫೇಸ್‌ಬುಕ್ ಬಳಕೆದಾರರು ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ಭಾರತದ ಮಿತ್ರ ರಾಷ್ಟ್ರ ಇಸ್ರೇಲ್ ರಾಷ್ಟ್ರೀಯ ರಜಾದಿನ ಘೋಷಣೆ ಮಾಡಿದ ಎಂದು ಪೋಸ್ಟ್ ಹಾಕಿದ್ದಾರೆ.

‘Manohar Manohar’ಎಂಬ ಫೇಸ್‌ಬುಕ್ ಬಳಕೆದಾರ ತಮ್ಮ ಖಾತೆಯಲ್ಲಿ “ಇಸ್ರೇಲ್ ಜನವರಿ 22 ಅನ್ನು ರಾಷ್ಟ್ರೀಯ ರಜಾದಿನವೆಂದು ಘೋಷಿಸಿದೆ. ಜೈ ಇಸ್ರೇಲ್, ಜೈ ಶ್ರೀರಾಮ್” ಎಂದು ಬರೆದುಕೊಂಡಿದ್ದಾರೆ.

‘Siddu Adin’ಎಂಬ ಮತ್ತೋರ್ವ ಫೇಸ್‌ಬುಕ್ ಬಳಕೆದಾರ ” ಇಸ್ರೇಲ್ ಜನವರಿ 22ನೇ ತಾರೀಖು ರಾಷ್ಟ್ರೀಯ ರಜಾ ದಿನವೆಂದು ಘೋಷಿಸಿದೆ. ಜೈಶ್ರೀರಾಮ್, ಜೈ ಇಸ್ರೇಲ್” ಎಂದು ತಮ್ಮ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್‌ ಲಿಂಕ್‌ಗೆ ಇಲ್ಲಿ ಕ್ಲಿಕ್ ಮಾಡಿ 

ಸತ್ಯ ಸನಾತನಿ‘ ಎಂಬ ಮತ್ತೊಂದು ಫೇಸ್‌ಬುಕ್ ಖಾತೆಯಲ್ಲೂ ” ಇಸ್ರೇಲ್ ಜನವರಿ 22ರಂದು ರಾಷ್ಟ್ರೀಯ ರಜಾದಿನವೆಂದು ಘೋಷಿಸಿದೆ. ಒಂದು ದೇಶ ತನ್ನ ಮಿತ್ರ ದೇಶಕ್ಕೆ ಇದಕ್ಕಿಂತಲೂ ಸ್ಪಷ್ಟವಾಗಿ ಇನ್ನು ಹೇಗೆ ತಾನೆ ಬೆಂಬಲ ಸೂಚಿಸಲು ಸಾಧ್ಯ? ಇಸ್ರೇಲ್‌ನ ಹೃದಯದಲ್ಲಿ ಭಾರತ ಇದೆ” ಎಂದು ಬರೆದುಕೊಳ್ಳಲಾಗಿದೆ.

ವಾಸ್ತವ : ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ಈ ಸುದ್ದಿಯ ಸತ್ಯಾಸತ್ಯತೆ ತಿಳಿಯುವ ಪ್ರಯತ್ನವನ್ನು ನಾನುಗೌರಿ.ಕಾಂ ಮಾಡಿದೆ.

ಗೂಗಲ್‌ ಸಹಾಯದಿಂದ ಇಸ್ರೇಲ್‌ನ ರಜಾದಿನಗಳ ಪಟ್ಟಿಯನ್ನು ಹುಡುಕಿದಾಗ ಅನೇಕ ಅಂತಾರಾಷ್ಟ್ರೀಯ ವೆಬ್‌ಸೈಟ್‌ಗಳಲ್ಲಿ ಪಟ್ಟಿ ದೊರೆತಿದೆ.

ಜಾಗತಿಕ ಮಾಹಿತಿಗಳನ್ನು ತಿಳಿಸುವ worlddata.info ಎಂಬ ವೆಬ್‌ಸೈಟ್‌ನಲ್ಲಿ ಇಸ್ರೇಲ್‌ನ 2024ರ ರಜಾದಿನಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರಲ್ಲಿ ಜನವರಿ 25, 2022ರಂದು New year festival of trees and bushes (ಮರಗಳು ಮತ್ತು ಪೊದೆಗಳ ಹೊಸ ವರ್ಷದ ಹಬ್ಬ) ಎಂಬ ಹೆಸರಿನಲ್ಲಿ ರಜಾದಿನ ಕಂಡು ಬಂದಿದೆ. ಜನವರಿ 22ರಂದು ಯಾವುದೇ ರಜೆ ಇರುವುದಾಗಿ ಉಲ್ಲೇಖಿಸಿಲ್ಲ.

ವಿವಿಧ ದೇಶಗಳ ಮಾಹಿತಿ ತಿಳಿಸುವ timeanddate.com ಎಂಬ ಮತ್ತೊಂದು ವೆಬ್‌ಸೈಟ್‌ನಲ್ಲಿಯೂ ಜನವರಿ 25, 2024ರಂದು ಇಸ್ರೇಲ್‌ನಲ್ಲಿ ರಜಾದಿನ ಇರುವುದಾಗಿ ಹೇಳಲಾಗಿದೆ. ಜನವರಿ 22ರ ರಜೆಯ ಕುರಿತು ಉಲ್ಲೇಖಿಸಿಲ್ಲ.

ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕೃತ ವೆಬ್‌ಸೈಟ್‌ನಲ್ಲಿ 2024 ಇಸ್ರೇಲ್‌ ಮತ್ತು ಭಾರತದ ರಜಾದಿನಗಳ ಮಾಹಿತಿ ನೀಡಲಾಗಿದೆ. ಅದರಲ್ಲಿ ಜನವರಿ 26 ಭಾರತ ಗಣರಾಜ್ಯೋತ್ಸವದಂದು ಇಸ್ರೇಲ್‌ನಲ್ಲಿರುವ ರಾಯಭಾರ ಕಚೇರಿಗೆ ರಜೆ ಇರುವುದಾಗಿ ಹೇಳಲಾಗಿದೆ. ಆದರೆ, ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ರಾಯಭಾರ ಕಚೇರಿಗಾಗಲಿ, ಇಸ್ರೇಲ್ ದೇಶದಲ್ಲಾಗಲಿ ಯಾವುದೇ ರಜೆ ಇರುವ ಬಗ್ಗೆ ಉಲ್ಲೇಖಿಸಿಲ್ಲ.

ಇಸ್ರೇಲ್‌ಗಿಂತ ಭಾರತದಲ್ಲೇ ಜನವರಿ 22ರಂದು ಯಾವುದೇ ರಾಷ್ಟ್ರೀಯ ರಜೆ ಇರುವುದಾಗಿ ಸರ್ಕಾರ ಘೋಷಣೆ ಮಾಡಿಲ್ಲ. ಉತ್ತರ ಪ್ರದೇಶ ಸರ್ಕಾರ ಅಂದು ಉತ್ತರ ಪ್ರದೇಶ ರಾಜ್ಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿಯಾಗಿದೆ.

ಭಾರತದ ಯಾವುದೇ ಮುಖ್ಯವಾಹಿನಿ ಮಾಧ್ಯಮಗಳು ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ಇಸ್ರೇಲ್ ರಾಷ್ಟ್ರೀಯ ರಜಾದಿನ ಘೋಷಣೆ ಮಾಡಿದೆ ಎಂದು ಎಲ್ಲೂ ಸುದ್ದಿ ಪ್ರಕಟಿಸಿಲ್ಲ.

ಭಾರತದಲ್ಲಿರುವ ಇಸ್ರೇಲ್ ರಾಯಭಾರ ಕಚೇರಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಜನವರಿ 22ರಂದು ಇಸ್ರೇಲ್‌ನಲ್ಲಿ ರಜೆ ಇರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ರಾಯಭಾರ ಕಚೇರಿಯ ವೆಬ್‌ಸೈಟ್‌ನಲ್ಲಿ 2024ರ ರಜಾದಿನಗಳ ಪಟ್ಟಿ ಇನ್ನೂ ಅಪ್ಡೇಟ್ ಆಗಿಲ್ಲ. ಹಳೆಯ 2023ರ ಪಟ್ಟಿಯೇ ಇದೆ.

ಇದನ್ನೂ ಓದಿ : Fact Check : ಮಣಿಪುರದಿಂದ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ದಕ್ಕೆ ಚೀನಾ ಅಧ್ಯಕ್ಷ ರಾಹುಲ್ ಗಾಂಧಿಗೆ ಧನ್ಯವಾದ ಹೇಳಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...