Homeಫ್ಯಾಕ್ಟ್‌ಚೆಕ್FACT CHECK : ಕೇರಳದ ಚರ್ಚ್‌ನಲ್ಲಿ ₹ 7 ಸಾವಿರ ಕೋಟಿ ಕಪ್ಪು ಹಣ ಪತ್ತೆಯಾಗಿದೆ...

FACT CHECK : ಕೇರಳದ ಚರ್ಚ್‌ನಲ್ಲಿ ₹ 7 ಸಾವಿರ ಕೋಟಿ ಕಪ್ಪು ಹಣ ಪತ್ತೆಯಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಕೇರಳದ ಚರ್ಚ್ ಒಂದರ ಮೇಲೆ ಇತ್ತೀಚೆಗೆ ಇಡಿ ದಾಳಿ ನಡೆಸಿದ ವೇಳೆ 7,000 ಕೋಟಿ ರೂಪಾಯಿ ಮೌಲ್ಯದ ಕಪ್ಪುಹಣ ಪತ್ತೆಯಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹಬ್ಬಿದ್ದು, 500 ರೂಪಾಯಿ ನೋಟುಗಳ ದೊಡ್ಡ ರಾಶಿ ಮತ್ತು ಪಾದ್ರಿಯೊಬ್ಬರ ಫೋಟೋವನ್ನು ಹಂಚಿಕೊಳ್ಳಲಾಗ್ತಿದೆ.

“ಇಡಿ ಕೇರಳದ ಲಿನಿ ಬೆಲರೂಸಿಯನ್ ಎಂಬ ಚರ್ಚ್‌ನಿಂದ 7000 ಕೋಟಿ ರೂಪಾಯಿ ಮೌಲ್ಯದ ಕಪ್ಪು ಹಣವನ್ನು ವಶಪಡಿಸಿಕೊಂಡಿದೆ. ಇದನ್ನು ಯೋಹಾನನ್ ಎಂಬ ಬಿಷಪ್ ನಡೆಸುತ್ತಾರೆ. ಇದುವರೆ ಈ ವಿಷಯ ಎಲ್ಲಿಯೂ ಸುದ್ದಿಯಾಗಿಲ್ಲ. ಯಾವುದಾದರು ಹಿಂದೂ ಸ್ವಾಮಿ ಬಳಿ 700 ಕೋಟಿಯ ಬಿಡಿ, 7 ಕೋಟಿ ರೂ. ಸಿಕ್ಕಿದ್ದರೆ ಸುದ್ದಿ ವಾಹಿನಿಗಳು 48 ಗಂಟೆಗಳ ಕಾಲ ಬೆತ್ತಲೆಯಾಗಿ ಕುಣಿಯಲು ಪ್ರಾರಂಭಿಸುತ್ತಿದ್ದವು” ಎಂದು ಸಾಮಾಜಿಕ ಜಾಲತಾಣದ ಪೋಸ್ಟ್‌ಗಳಲ್ಲಿ ಬರೆದುಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಪೋಟೋ ಮತ್ತು ಬರಹದ ಸತ್ಯಾಸತ್ಯತೆಯನ್ನು ನಾವು ಪರಿಶೀಲನೆ ನಡೆಸಿದ್ದೇವೆ. ಗೂಗಲ್‌ನಲ್ಲಿ ಕೀ ವರ್ಡ್ಸ್ ಬಳಸಿ ಈ ಕುರಿತು ಮಾಹಿತಿ ಹುಡುಕಿದಾಗ ನವೆಂಬರ್ 7, 2020ರಂದು ಲೈವ್ ಹಿಂದುಸ್ತಾನ್ ಸುದ್ದಿ ವೆಬ್‌ಸೈಟ್‌ ಪ್ರಕಟಿಸಿದ ಸುದ್ದಿ ಲಭ್ಯವಾಗಿದೆ.

ಈ ಸುದ್ದಿಯಲ್ಲಿ ನವೆಂಬರ್ 5, 2020 ರಂದು ಆದಾಯ ತೆರಿಗೆ ಇಲಾಖೆ ಕೇರಳದ ತಿರುವಲ್ಲಾದಲ್ಲಿರುವ ಬಿಲೀವರ್ಸ್ ಈಸ್ಟರ್ನ್ ಚರ್ಚ್‌ಗೆ ಸಂಬಂಧಿಸಿದ ಕಚೇರಿಗಳ ಮೇಲೆ ದಾಳಿ ನಡೆಸಿದೆ. ಕೇರಳ ಈ ಚರ್ಚ್ ಮೆಟ್ರೋಪಾಲಿಟನ್ ಬಿಷಪ್ ಕೆ.ಪಿ ಯೋಹಾನನ್ ಅವರ ನೇತೃತ್ವದಲ್ಲಿ ನಡೆಯುತ್ತದೆ. ಐಟಿ ಇಲಾಖೆಯು ಚರ್ಚ್‌ನಿಂದ 5 ಕೋಟಿ ರೂಪಾಯಿ ಮೌಲ್ಯದ ಕರೆನ್ಸಿ ನೋಟುಗಳು ಮತ್ತು ಬೆಲೆ ಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದೆ” ಎಂದು ತಿಳಿಸಲಾಗಿತ್ತು.

ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ ನವೆಂಬರ್ 6, 2020ರಂದು ಹಣಕಾಸು ಇಲಾಖೆಯ ಪರವಾಗಿ ಪ್ರೆಸ್ ಇನ್ಫರ್‌ಮೇಶನ್ ಬ್ಯೂರೋ (ಪಿಐಬಿ) ಪ್ರಕಟಿಸಿದ್ದ ಮಾಹಿತಿ ಲಭ್ಯವಾಗಿದೆ.

ಪ್ರಕಟಣೆಯಲ್ಲಿ “ಆದಾಯ ತೆರಿಗೆ ಇಲಾಖೆಯು ನವೆಂಬರ್ 5, 2020ರಂದು ಕೇರಳದ ತಿರುವಲ್ಲಾದ ಪ್ರಸಿದ್ಧ ಸುವಾರ್ತಾಬೋಧಕ ಟ್ರಸ್ಟ್ ಮತ್ತು ಅದರ ಸಂಸ್ಥೆಗಳಲ್ಲಿ ಆದಾಯ ತೆರಿಗೆ ಕಾಯ್ದೆ, 1961ರ ಅಡಿ ಶೋಧ ನಡೆಸಿದೆ. ಇ ಧಾರ್ಮಿಕ ಟ್ರಸ್ಟ್ ಶಾಲಾ, ಕಾಲೇಜುಗಳು, ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ಮತ್ತು ಮತ್ತು ಕೇರಳದಲ್ಲಿ ಆಸ್ಪತ್ರೆಗಳನ್ನು ನಡೆಸುತ್ತಿವೆ. ಐಟಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ಕರ್ನಾಟಕ, ಚಂಡೀಗಢ, ಪಂಜಾಬ್ ಮತ್ತು ತೆಲಂಗಾಣದಲ್ಲಿರುವ ಸಂಸ್ಥೆಯ 66 ಸ್ಥಳಗಳಲ್ಲಿ ಪರಿಶೀಲನೆ ನಡೆಸಿದೆ. ಈ ವೇಳೆ ದೆಹಲಿಯ ಪ್ರಾರ್ಥನಾ ಸ್ಥಳದಲ್ಲಿ 3.85 ಕೋಟಿ ರೂ. ಸೇರಿದಂತೆ ಅಂದಾಜು 6 ಕೋಟಿಯಷ್ಟು ದಾಖಲೆಯಿಲ್ಲದ ಹಣ ಪತ್ತೆಯಾಗಿದೆ ಎಂದು ತಿಳಿಸಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ ಇತ್ತೀಚೆಗೆ ಕೇರಳದ ಚರ್ಚ್‌ ಮೇಲೆ ಇಡಿ ದಾಳಿ ನಡೆಸಿರುವುದು ಮತ್ತು ಬರೋಬ್ಬರಿ 7 ಸಾವಿರ ಕೋಟಿ ರೂಪಾಯಿ ಪತ್ತೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿಲ್ಲ. ಹಾಗಾಗಿ, ಸಾಮಾಜಿಕ ಜಾಲತಾಣದ ಪೋಸ್ಟ್‌ಗಳು ಸುಳ್ಳು ಎಂಬುವುದು ಖಚಿತವಾಗಿದೆ.

ಇದನ್ನೂ ಓದಿ : FACT CHECK : ಎರಡು ಸಿಮ್ ಕಾರ್ಡ್ ಹೊಂದಿರುವವರಿಗೆ ಸರ್ಕಾರ ದಂಡ ವಿಧಿಸಲಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...