Homeಫ್ಯಾಕ್ಟ್‌ಚೆಕ್Fact Check: ಉತ್ತರ ಪ್ರದೇಶದಲ್ಲಿ 21 ಬಿಲಿಯನ್ ವರ್ಷ ಹಳೆಯ ಸನಾತನ ಡ್ರೋಣ್ ಸಿಕ್ಕಿದೆ ಎಂಬುವುದು...

Fact Check: ಉತ್ತರ ಪ್ರದೇಶದಲ್ಲಿ 21 ಬಿಲಿಯನ್ ವರ್ಷ ಹಳೆಯ ಸನಾತನ ಡ್ರೋಣ್ ಸಿಕ್ಕಿದೆ ಎಂಬುವುದು ಸುಳ್ಳು

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ಉತ್ಖತನ ಮಾಡುವಾಗ 21 ಬಿಲಿಯನ್ ವರ್ಷದಷ್ಟು ಹಳೆಯ ಸನಾತನ ಡ್ರೋನ್ ಪತ್ತೆಯಾಗಿದೆ ಎಂದು ಪೋಟೋವೊಂದು ವೈರಲ್ ಆಗಿದೆ. ಹಲವು ಸಾಮಾಜಿಕ ಜಾಲತಾಣ ಬಳಕೆದಾರರು ಇದನ್ನು ಹಂಚಿಕೊಂಡಿದ್ದಾರೆ.

‘श्रमिकस्य पुत्री | ಶ್ರಮಜೀವಿಯ ಮಗಳು’ ಎಂಬ ಎಕ್ಸ್ ಖಾತೆಯೊಂದರಲ್ಲಿ”ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ಉತ್ಖತನ ಮಾಡುವಾಗ 21 ಬಿಲಿಯನ್ ವರ್ಷದಷ್ಟು ಹಳೆಯ ಸನಾತನ ಡ್ರೋನ್ ಪತ್ತೆಯಾಗಿದೆ. ಜಗತ್ತಿನ ಅತ್ಯಂತ ಹಳೆಯ ಮತ್ತು ಮೂಲ ನಾಗರಿಕತೆ ಸನಾತನ ಆರ್ಯ ನಾಗರಿಕತೆ, ಜೈ ಸನಾತನ” ಎಂದು ಬರೆದುಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

‘kesari samrat’ಫೇಸ್‌ಬುಕ್‌ ಖಾತೆಯಲ್ಲಿ ವೈರಲ್ ಫೋಟೋ ಹಂಚಿಕೊಂಡು “ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ಉತ್ಖತನ ಮಾಡುವಾಗ 21 ಬಿಲಿಯನ್ ವರ್ಷದಷ್ಟು ಹಳೆಯ ಸನಾತನ ಡ್ರೋನ್ ಪತ್ತೆಯಾಗಿದೆ. ಜಗತ್ತಿನ ಅತ್ಯಂತ ಹಳೆಯ ಮತ್ತು ಮೂಲ ನಾಗರಿಕತೆ ಸನಾತನ ಆರ್ಯ ನಾಗರಿಕತೆ, ಜೈ ಸನಾತನ” ಎಂದು ಬರೆದುಕೊಳ್ಳಲಾಗಿದೆ.

ಫೋಸ್ಟ್ ಲಿಂಕ್ ಇಲ್ಲಿದೆ 

ಕೆಲವರು “ಚೀನಾದ ಪ್ರಾಚೀನ ನಗರವಾದ Sanxingduiಯ ಪುರಾತತ್ವ ಪ್ರದೇಶದಲ್ಲಿ ಸಿಕ್ಕ 2000 ವರ್ಷಗಳ ಹಿಂದಿನ ಡ್ರೋನ್ ಎಂದು ಪ್ರತಿಪಾದಿಸಿದ್ದಾರೆ. ಇನ್ನೂ ಕೆಲವರು ಇದು ಪ್ರಾಚೀನ ಈಜಿಪ್ಟ್‌ನಲ್ಲಿ ದೊರಕಿದೆ. ಬಹು ಹಿಂದೆಯೇ ನಮ್ಮ ನಾಗರೀಕತೆಗಳು ಉನ್ನತಿಯನ್ನು ಸಾಧಿಸಿದ್ದವು” ಎಂದು ಹೇಳಿದ್ದಾರೆ.

ಫ್ಯಾಕ್ಟ್‌ಚೆಕ್‌ : ವೈರಲ್ ಫೋಟೊದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾವು ಗೂಗಲ್ ರಿವರ್ಸ್ ಇಮೇಜ್ ಬಳಸಿ ಹುಡುಕಾಡಿದ್ದೇವೆ. ಈ ವೇಳೆ ವಿವಿಧ ತಲೆ ಬರಹಗಳನ್ನು ಕೊಟ್ಟು ಈ ಫೋಟೋ ಹಂಚಿಕೊಂಡಿರುವುದು ಕಂಡು ಬಂದಿದೆ.

ಆದರೆ, ಚೀನಾದ ಇಕ್ಸಿಗುವಾ ವೀಡಿಯೋ ಚಾನೆಲ್‌ನಲ್ಲಿ ಮಾರ್ಚ್ 7,2024ರಂದು ಅಪ್ಲೋಡ್ ಆದ ವಿಡಿಯೋ ಒಂದರಲ್ಲಿ ನೀಡಿದ ಶೀರ್ಷಿಕೆ ಪ್ರಕಾರ, ‘ಈ ಕಂಚಿನ ಡ್ರೋಣ್ ಎಐ(AI)ಸೃಷ್ಟಿಯಾಗಿದ್ದು, ಸಂಪೂರ್ಣ ಕಾಲ್ಪನಿಕವಾಗಿದೆ. ದಯವಿಟ್ಟು ಇದನ್ನು ಗಂಭೀರವಾಗಿ ಪರಿಗಣಿಸಬೇಡಿ” ಎಂದಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

‘Convomf’ಎಂಬ ಎಕ್ಸ್ ಖಾತೆಯಲ್ಲಿ ಮಾರ್ಚ್ 7, 2024ರಂದು ವೈರಲ್ ಫೋಟೋ ಹಂಚಿಕೊಳ್ಳಲಾಗಿದ್ದು, “ಇದು ಎಐಯಿಂದ ರಚಿಸಲಾದ ಚಿತ್ರ” ಎಂದು ಇಂಡೋನ್ಯಾಷ್ಯಾ ಭಾಷೆಯಲ್ಲಿ ಬರೆದುಕೊಳ್ಳಲಾಗಿದೆ.

ಪೋಸ್ಟ್‌ ಲಿಂಕ್ 

ಫೋಟೋ ಕುರಿತು ಇನ್ನಷ್ಟು ಖಚಿತಪಡಿಸಿಕೊಳ್ಳಲು ನಾವು ಅದು ಆರ್ಟಿಫಿಶಿಯಲ್ ಇಂಟಲಿಜೆನ್ಸ್ (ಎಐ) ಫೋಟೋನಾ ಎಂದು ನಾವು ಗೂಗಲ್ ಟೂಲ್ ಬಳಸಿ ಪರಿಶೀಲಿಸಿದ್ದೇವೆ. ಈ ವೇಳೆ ಇದು ಎಐ ಎಂದೇ ತಿಳಿದು ಬಂದಿದೆ.

ಇದನ್ನೂ ಓದಿ: Fact Check: ರಂಝಾನ್‌ ಪ್ರಯುಕ್ತ ಸರ್ಕಾರಿ ಶಾಲೆಗಳ ಸಮಯ ಬದಲಾವಣೆ ಮಾಡಲಾಗಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....