Homeಫ್ಯಾಕ್ಟ್‌ಚೆಕ್Fact Check: ಉತ್ತರ ಪ್ರದೇಶದಲ್ಲಿ 21 ಬಿಲಿಯನ್ ವರ್ಷ ಹಳೆಯ ಸನಾತನ ಡ್ರೋಣ್ ಸಿಕ್ಕಿದೆ ಎಂಬುವುದು...

Fact Check: ಉತ್ತರ ಪ್ರದೇಶದಲ್ಲಿ 21 ಬಿಲಿಯನ್ ವರ್ಷ ಹಳೆಯ ಸನಾತನ ಡ್ರೋಣ್ ಸಿಕ್ಕಿದೆ ಎಂಬುವುದು ಸುಳ್ಳು

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ಉತ್ಖತನ ಮಾಡುವಾಗ 21 ಬಿಲಿಯನ್ ವರ್ಷದಷ್ಟು ಹಳೆಯ ಸನಾತನ ಡ್ರೋನ್ ಪತ್ತೆಯಾಗಿದೆ ಎಂದು ಪೋಟೋವೊಂದು ವೈರಲ್ ಆಗಿದೆ. ಹಲವು ಸಾಮಾಜಿಕ ಜಾಲತಾಣ ಬಳಕೆದಾರರು ಇದನ್ನು ಹಂಚಿಕೊಂಡಿದ್ದಾರೆ.

‘श्रमिकस्य पुत्री | ಶ್ರಮಜೀವಿಯ ಮಗಳು’ ಎಂಬ ಎಕ್ಸ್ ಖಾತೆಯೊಂದರಲ್ಲಿ”ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ಉತ್ಖತನ ಮಾಡುವಾಗ 21 ಬಿಲಿಯನ್ ವರ್ಷದಷ್ಟು ಹಳೆಯ ಸನಾತನ ಡ್ರೋನ್ ಪತ್ತೆಯಾಗಿದೆ. ಜಗತ್ತಿನ ಅತ್ಯಂತ ಹಳೆಯ ಮತ್ತು ಮೂಲ ನಾಗರಿಕತೆ ಸನಾತನ ಆರ್ಯ ನಾಗರಿಕತೆ, ಜೈ ಸನಾತನ” ಎಂದು ಬರೆದುಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

‘kesari samrat’ಫೇಸ್‌ಬುಕ್‌ ಖಾತೆಯಲ್ಲಿ ವೈರಲ್ ಫೋಟೋ ಹಂಚಿಕೊಂಡು “ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ಉತ್ಖತನ ಮಾಡುವಾಗ 21 ಬಿಲಿಯನ್ ವರ್ಷದಷ್ಟು ಹಳೆಯ ಸನಾತನ ಡ್ರೋನ್ ಪತ್ತೆಯಾಗಿದೆ. ಜಗತ್ತಿನ ಅತ್ಯಂತ ಹಳೆಯ ಮತ್ತು ಮೂಲ ನಾಗರಿಕತೆ ಸನಾತನ ಆರ್ಯ ನಾಗರಿಕತೆ, ಜೈ ಸನಾತನ” ಎಂದು ಬರೆದುಕೊಳ್ಳಲಾಗಿದೆ.

ಫೋಸ್ಟ್ ಲಿಂಕ್ ಇಲ್ಲಿದೆ 

ಕೆಲವರು “ಚೀನಾದ ಪ್ರಾಚೀನ ನಗರವಾದ Sanxingduiಯ ಪುರಾತತ್ವ ಪ್ರದೇಶದಲ್ಲಿ ಸಿಕ್ಕ 2000 ವರ್ಷಗಳ ಹಿಂದಿನ ಡ್ರೋನ್ ಎಂದು ಪ್ರತಿಪಾದಿಸಿದ್ದಾರೆ. ಇನ್ನೂ ಕೆಲವರು ಇದು ಪ್ರಾಚೀನ ಈಜಿಪ್ಟ್‌ನಲ್ಲಿ ದೊರಕಿದೆ. ಬಹು ಹಿಂದೆಯೇ ನಮ್ಮ ನಾಗರೀಕತೆಗಳು ಉನ್ನತಿಯನ್ನು ಸಾಧಿಸಿದ್ದವು” ಎಂದು ಹೇಳಿದ್ದಾರೆ.

ಫ್ಯಾಕ್ಟ್‌ಚೆಕ್‌ : ವೈರಲ್ ಫೋಟೊದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾವು ಗೂಗಲ್ ರಿವರ್ಸ್ ಇಮೇಜ್ ಬಳಸಿ ಹುಡುಕಾಡಿದ್ದೇವೆ. ಈ ವೇಳೆ ವಿವಿಧ ತಲೆ ಬರಹಗಳನ್ನು ಕೊಟ್ಟು ಈ ಫೋಟೋ ಹಂಚಿಕೊಂಡಿರುವುದು ಕಂಡು ಬಂದಿದೆ.

ಆದರೆ, ಚೀನಾದ ಇಕ್ಸಿಗುವಾ ವೀಡಿಯೋ ಚಾನೆಲ್‌ನಲ್ಲಿ ಮಾರ್ಚ್ 7,2024ರಂದು ಅಪ್ಲೋಡ್ ಆದ ವಿಡಿಯೋ ಒಂದರಲ್ಲಿ ನೀಡಿದ ಶೀರ್ಷಿಕೆ ಪ್ರಕಾರ, ‘ಈ ಕಂಚಿನ ಡ್ರೋಣ್ ಎಐ(AI)ಸೃಷ್ಟಿಯಾಗಿದ್ದು, ಸಂಪೂರ್ಣ ಕಾಲ್ಪನಿಕವಾಗಿದೆ. ದಯವಿಟ್ಟು ಇದನ್ನು ಗಂಭೀರವಾಗಿ ಪರಿಗಣಿಸಬೇಡಿ” ಎಂದಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

‘Convomf’ಎಂಬ ಎಕ್ಸ್ ಖಾತೆಯಲ್ಲಿ ಮಾರ್ಚ್ 7, 2024ರಂದು ವೈರಲ್ ಫೋಟೋ ಹಂಚಿಕೊಳ್ಳಲಾಗಿದ್ದು, “ಇದು ಎಐಯಿಂದ ರಚಿಸಲಾದ ಚಿತ್ರ” ಎಂದು ಇಂಡೋನ್ಯಾಷ್ಯಾ ಭಾಷೆಯಲ್ಲಿ ಬರೆದುಕೊಳ್ಳಲಾಗಿದೆ.

ಪೋಸ್ಟ್‌ ಲಿಂಕ್ 

ಫೋಟೋ ಕುರಿತು ಇನ್ನಷ್ಟು ಖಚಿತಪಡಿಸಿಕೊಳ್ಳಲು ನಾವು ಅದು ಆರ್ಟಿಫಿಶಿಯಲ್ ಇಂಟಲಿಜೆನ್ಸ್ (ಎಐ) ಫೋಟೋನಾ ಎಂದು ನಾವು ಗೂಗಲ್ ಟೂಲ್ ಬಳಸಿ ಪರಿಶೀಲಿಸಿದ್ದೇವೆ. ಈ ವೇಳೆ ಇದು ಎಐ ಎಂದೇ ತಿಳಿದು ಬಂದಿದೆ.

ಇದನ್ನೂ ಓದಿ: Fact Check: ರಂಝಾನ್‌ ಪ್ರಯುಕ್ತ ಸರ್ಕಾರಿ ಶಾಲೆಗಳ ಸಮಯ ಬದಲಾವಣೆ ಮಾಡಲಾಗಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...