Homeಫ್ಯಾಕ್ಟ್‌ಚೆಕ್FACT CHECK : ಭಾರತದ ರೋಹಿಂಗ್ಯಾ ಶಿಬಿರಗಳಲ್ಲಿ ಒಂದು ವರ್ಷದಲ್ಲಿ 60,000 ಶಿಶುಗಳು ಜನಿಸಿವೆ ಎಂಬುವುದು...

FACT CHECK : ಭಾರತದ ರೋಹಿಂಗ್ಯಾ ಶಿಬಿರಗಳಲ್ಲಿ ಒಂದು ವರ್ಷದಲ್ಲಿ 60,000 ಶಿಶುಗಳು ಜನಿಸಿವೆ ಎಂಬುವುದು ಸುಳ್ಳು

- Advertisement -
- Advertisement -

“ಭಾರತದ ರೋಹಿಂಗ್ಯಾ ಶಿಬಿರಗಳಲ್ಲಿ ಒಂದು ವರ್ಷಕ್ಕೆ ಸುಮಾರು 60,000 ಶಿಶುಗಳು ಜನಿಸಿವೆ. ದೇಶದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ” ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿವೆ.

ಫ್ಯಾಕ್ಟ್‌ಚೆಕ್ : ವೈರಲ್ ಪೋಸ್ಟ್ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಕೀವರ್ಡ್ ಬಳಸಿ ಗೂಗಲ್‌ನಲ್ಲಿ ಮಾಹಿತಿ ಹುಡುಕಿದಾಗ ಫೆಬ್ರವರಿ 28,2018ರಲ್ಲಿ ಇಂಡಿಯಾ ಟಿವಿ ವೆಬ್‌ ಸೈಟ್‌ನಲ್ಲಿ ಪ್ರಕಟಗೊಂಡ ವರದಿಯೊಂದು ಲಭ್ಯವಾಗಿದೆ.

ವರದಿಯಲ್ಲಿ “ಬಾಂಗ್ಲಾದೇಶದ ರೋಹಿಂಗ್ಯಾ ನಿರಾಶ್ರಿತರ ಶಿಬಿರಗಳಲ್ಲಿನ ಶೋಚನೀಯ ಪರಿಸ್ಥಿತಿಗಳನ್ನು ಚರ್ಚಿಸಿದ ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಹೆಚ್‌ಒ) ಆಗ್ನೇಯ ಏಷ್ಯಾದ ಪ್ರಾದೇಶಿಕ ನಿರ್ದೇಶಕಿ ಡಾ. ಪೂನಂ ಖೇತ್ರಪಾಲ್ ಅವರು, ಮ್ಯಾನ್ಮಾರ್‌ನಿಂದ ಪಲಾಯನ ಮಾಡಿರುವ ರೋಹಿಂಗ್ಯಾಗಳ ಪರಿಸ್ಥಿತಿಯನ್ನು ಭಯಾನಕ ಎಂದು ವಿವರಿಸಿದ್ದಾರೆ. ಮುಂದಿನ ವರ್ಷದಲ್ಲಿ ಈ ನಿರಾಶ್ರಿತರ ಶಿಬಿರಗಳಲ್ಲಿ 60,000 ಶಿಶುಗಳು ಜನಿಸಬಹುದು ಎಂದು ಅವರು ಅಂದಾಜಿಸಿದ್ದಾರೆ” ಎಂದು ಉಲ್ಲೇಖಿಸಲಾಗಿದೆ.

ಡಾ. ಖೇತ್ರಪಾಲ್ ಅವರು ಬಾಂಗ್ಲಾ ದೇಶದ ರೋಹಿಂಗ್ಯಾ ಶಿಬಿರಗಳನ್ನು ಉಲ್ಲೇಖಿಸಿ ಹೇಳಿಕೆ ನೀಡಿದ್ದಾರೆಯೇ ಹೊರತು ಭಾರತದ್ದಲ್ಲ ಎಂಬುವುದು ವರದಿಯಿಂದ ತಿಳಿದು ಬಂದಿದೆ. ಡಾ. ಖೇತ್ರಪಾಲ್ ಅವರ ಈ ಹೇಳಿಕೆಯನ್ನೇ ತಪ್ಪಾಗಿ ಅರ್ಥೈಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರಬಹುದು.

ಯುಎನ್‌ಹೆಚ್‌ಸಿಆರ್‌ನ ಅಧಿಕೃತ ಅಂಕಿ ಅಂಶಗಳು ರೋಹಿಂಗ್ಯಾ ಶಿಬಿರಗಳಲ್ಲಿನ ಪರಿಸ್ಥಿತಿಗಳು ಆತಂಕಕಾರಿಯಾಗಿದೆ ಎಂದಿತ್ತು. ಬಾಂಗ್ಲಾದೇಶದ ನಿರಾಶ್ರಿತರ ಶಿಬಿರಗಳಲ್ಲಿ ಪ್ರತಿದಿನ 60ಕ್ಕೂ ಹೆಚ್ಚು ರೋಹಿಂಗ್ಯಾ ಶಿಶುಗಳು ಜನಿಸುತ್ತಿವೆ ಎಂದು ಯುಎನ್‌ಹೆಚ್‌ಸಿಆರ್‌ 2018ರಲ್ಲಿ ವರದಿ ಮಾಡಿತ್ತು.

ಭಾರತದಲ್ಲಿ ರೋಹಿಂಗ್ಯಾಗಳ ಪರಿಸ್ಥಿತಿ ಹೇಗಿದೆ?

ಎನ್‌ಹೆಚ್‌ಸಿಆರ್‌ ಪ್ರಕಾರ, 31 ಜನವರಿ 2022ರಂತೆ, 46,000 ಕ್ಕೂ ಹೆಚ್ಚು ನಿರಾಶ್ರಿತರು ಮತ್ತು ಮುಖ್ಯವಾಗಿ ಮ್ಯಾನ್ಮಾರ್ ಮತ್ತು ಅಫ್ಘಾನಿಸ್ತಾನದಿಂದ ಆಶ್ರಯ ಹುಡುಕಿಕೊಂಡು ಬಂದವರು ಭಾರತದಲ್ಲಿ ನೋಂದಾಯಿಸಲ್ಪಟ್ಟಿದ್ದಾರೆ. ಆದರೆ, ಭಾರತದಲ್ಲಿನ ರೋಹಿಂಗ್ಯಾ ಶಿಬಿರಗಳಲ್ಲಿ ಎಷ್ಟು ಹೆರಿಗೆಗಳು ನಡೆಯುತ್ತಿವೆ ಎಂಬುವುದರ ಕುರಿತು ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ದೇಶದಲ್ಲಿ ವಾಸಿಸುತ್ತಿರುವ ರೋಹಿಂಗ್ಯಾಗಳ ಸಂಖ್ಯೆಯ ಬಗ್ಗೆ ನಿಖರವಾದ ಅಂಕಿ ಅಂಶಗಳಿಲ್ಲ ಎಂದು ಭಾರತ ಸರ್ಕಾರ ಹಲವಾರು ಸಂದರ್ಭಗಳಲ್ಲಿ ಸಂಸತ್ತಿನಲ್ಲಿ ಸ್ಪಷ್ಟಪಡಿಸಿದೆ. ಮ್ಯಾನ್ಮಾರ್‌ನಿಂದ ಸುಮಾರು 40,000 ರೋಹಿಂಗ್ಯಾಗಳು ಅಕ್ರಮವಾಗಿ ಭಾರತವನ್ನು ಪ್ರವೇಶಿಸಿದ್ದಾರೆ ಎಂದು ಅಂದಾಜಿಸಲಾಗಿದೆ.

ನಾವು ನಡೆಸಿದ ಪರಿಶೀಲನೆಯಲ್ಲಿ ತಿಳಿದು ಬಂದಂತೆ, ಒಂದು ವರ್ಷಕ್ಕೆ 60 ಸಾವಿರ ರೋಹಿಂಗ್ಯಾ ಶಿಶುಗಳ ಜನಿಸಿವೆ ಎಂಬ ವರದಿ ಭಾರತಕ್ಕೆ ಸಂಬಂಧಿಸಿದ್ದಲ್ಲ. ಬಾಂಗ್ಲಾದೇಶದ ರೋಹಿಂಗ್ಯಾ ಶಿಬಿರಗಳ ಕುರಿತಾಗಿದೆ. ಅಲ್ಲಿಯೂ ಮುಂದಿನ ವರ್ಷದಲ್ಲಿ ನಿರಾಶ್ರಿತರ ಶಿಬಿರಗಳಲ್ಲಿ 60,000 ಶಿಶುಗಳು ಜನಿಸಬಹುದು ಎಂದು ಡಾ. ಪೂನಂ ಖೇತ್ರಪಾಲ್ 2018ರಲ್ಲಿ ಅಂದಾಜಿಸಿದ್ದರು. ಅಷ್ಟು ಶಿಶುಗಳ ಜನಿಸಿವೆಯೇ? ಎಂಬುವುದು ಖಚಿತವಾಗಿಲ್ಲ.

FACT CHECK : ಕುರಾನ್ ಬೋಧಿಸುವ ಭಾರತದ ವಿವಿಗಳಲ್ಲಿ ಭಗವದ್ಗೀತೆ, ರಾಮಾಯಣ ಅಧ್ಯಯನಕ್ಕೆ ಕೋರ್ಸ್‌ಗಳಿಲ್ಲ ಎನ್ನುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....