Homeಫ್ಯಾಕ್ಟ್‌ಚೆಕ್FACT CHECK : ಭಾರತದ ರೋಹಿಂಗ್ಯಾ ಶಿಬಿರಗಳಲ್ಲಿ ಒಂದು ವರ್ಷದಲ್ಲಿ 60,000 ಶಿಶುಗಳು ಜನಿಸಿವೆ ಎಂಬುವುದು...

FACT CHECK : ಭಾರತದ ರೋಹಿಂಗ್ಯಾ ಶಿಬಿರಗಳಲ್ಲಿ ಒಂದು ವರ್ಷದಲ್ಲಿ 60,000 ಶಿಶುಗಳು ಜನಿಸಿವೆ ಎಂಬುವುದು ಸುಳ್ಳು

- Advertisement -
- Advertisement -

“ಭಾರತದ ರೋಹಿಂಗ್ಯಾ ಶಿಬಿರಗಳಲ್ಲಿ ಒಂದು ವರ್ಷಕ್ಕೆ ಸುಮಾರು 60,000 ಶಿಶುಗಳು ಜನಿಸಿವೆ. ದೇಶದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ” ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿವೆ.

ಫ್ಯಾಕ್ಟ್‌ಚೆಕ್ : ವೈರಲ್ ಪೋಸ್ಟ್ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಕೀವರ್ಡ್ ಬಳಸಿ ಗೂಗಲ್‌ನಲ್ಲಿ ಮಾಹಿತಿ ಹುಡುಕಿದಾಗ ಫೆಬ್ರವರಿ 28,2018ರಲ್ಲಿ ಇಂಡಿಯಾ ಟಿವಿ ವೆಬ್‌ ಸೈಟ್‌ನಲ್ಲಿ ಪ್ರಕಟಗೊಂಡ ವರದಿಯೊಂದು ಲಭ್ಯವಾಗಿದೆ.

ವರದಿಯಲ್ಲಿ “ಬಾಂಗ್ಲಾದೇಶದ ರೋಹಿಂಗ್ಯಾ ನಿರಾಶ್ರಿತರ ಶಿಬಿರಗಳಲ್ಲಿನ ಶೋಚನೀಯ ಪರಿಸ್ಥಿತಿಗಳನ್ನು ಚರ್ಚಿಸಿದ ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಹೆಚ್‌ಒ) ಆಗ್ನೇಯ ಏಷ್ಯಾದ ಪ್ರಾದೇಶಿಕ ನಿರ್ದೇಶಕಿ ಡಾ. ಪೂನಂ ಖೇತ್ರಪಾಲ್ ಅವರು, ಮ್ಯಾನ್ಮಾರ್‌ನಿಂದ ಪಲಾಯನ ಮಾಡಿರುವ ರೋಹಿಂಗ್ಯಾಗಳ ಪರಿಸ್ಥಿತಿಯನ್ನು ಭಯಾನಕ ಎಂದು ವಿವರಿಸಿದ್ದಾರೆ. ಮುಂದಿನ ವರ್ಷದಲ್ಲಿ ಈ ನಿರಾಶ್ರಿತರ ಶಿಬಿರಗಳಲ್ಲಿ 60,000 ಶಿಶುಗಳು ಜನಿಸಬಹುದು ಎಂದು ಅವರು ಅಂದಾಜಿಸಿದ್ದಾರೆ” ಎಂದು ಉಲ್ಲೇಖಿಸಲಾಗಿದೆ.

ಡಾ. ಖೇತ್ರಪಾಲ್ ಅವರು ಬಾಂಗ್ಲಾ ದೇಶದ ರೋಹಿಂಗ್ಯಾ ಶಿಬಿರಗಳನ್ನು ಉಲ್ಲೇಖಿಸಿ ಹೇಳಿಕೆ ನೀಡಿದ್ದಾರೆಯೇ ಹೊರತು ಭಾರತದ್ದಲ್ಲ ಎಂಬುವುದು ವರದಿಯಿಂದ ತಿಳಿದು ಬಂದಿದೆ. ಡಾ. ಖೇತ್ರಪಾಲ್ ಅವರ ಈ ಹೇಳಿಕೆಯನ್ನೇ ತಪ್ಪಾಗಿ ಅರ್ಥೈಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರಬಹುದು.

ಯುಎನ್‌ಹೆಚ್‌ಸಿಆರ್‌ನ ಅಧಿಕೃತ ಅಂಕಿ ಅಂಶಗಳು ರೋಹಿಂಗ್ಯಾ ಶಿಬಿರಗಳಲ್ಲಿನ ಪರಿಸ್ಥಿತಿಗಳು ಆತಂಕಕಾರಿಯಾಗಿದೆ ಎಂದಿತ್ತು. ಬಾಂಗ್ಲಾದೇಶದ ನಿರಾಶ್ರಿತರ ಶಿಬಿರಗಳಲ್ಲಿ ಪ್ರತಿದಿನ 60ಕ್ಕೂ ಹೆಚ್ಚು ರೋಹಿಂಗ್ಯಾ ಶಿಶುಗಳು ಜನಿಸುತ್ತಿವೆ ಎಂದು ಯುಎನ್‌ಹೆಚ್‌ಸಿಆರ್‌ 2018ರಲ್ಲಿ ವರದಿ ಮಾಡಿತ್ತು.

ಭಾರತದಲ್ಲಿ ರೋಹಿಂಗ್ಯಾಗಳ ಪರಿಸ್ಥಿತಿ ಹೇಗಿದೆ?

ಎನ್‌ಹೆಚ್‌ಸಿಆರ್‌ ಪ್ರಕಾರ, 31 ಜನವರಿ 2022ರಂತೆ, 46,000 ಕ್ಕೂ ಹೆಚ್ಚು ನಿರಾಶ್ರಿತರು ಮತ್ತು ಮುಖ್ಯವಾಗಿ ಮ್ಯಾನ್ಮಾರ್ ಮತ್ತು ಅಫ್ಘಾನಿಸ್ತಾನದಿಂದ ಆಶ್ರಯ ಹುಡುಕಿಕೊಂಡು ಬಂದವರು ಭಾರತದಲ್ಲಿ ನೋಂದಾಯಿಸಲ್ಪಟ್ಟಿದ್ದಾರೆ. ಆದರೆ, ಭಾರತದಲ್ಲಿನ ರೋಹಿಂಗ್ಯಾ ಶಿಬಿರಗಳಲ್ಲಿ ಎಷ್ಟು ಹೆರಿಗೆಗಳು ನಡೆಯುತ್ತಿವೆ ಎಂಬುವುದರ ಕುರಿತು ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ದೇಶದಲ್ಲಿ ವಾಸಿಸುತ್ತಿರುವ ರೋಹಿಂಗ್ಯಾಗಳ ಸಂಖ್ಯೆಯ ಬಗ್ಗೆ ನಿಖರವಾದ ಅಂಕಿ ಅಂಶಗಳಿಲ್ಲ ಎಂದು ಭಾರತ ಸರ್ಕಾರ ಹಲವಾರು ಸಂದರ್ಭಗಳಲ್ಲಿ ಸಂಸತ್ತಿನಲ್ಲಿ ಸ್ಪಷ್ಟಪಡಿಸಿದೆ. ಮ್ಯಾನ್ಮಾರ್‌ನಿಂದ ಸುಮಾರು 40,000 ರೋಹಿಂಗ್ಯಾಗಳು ಅಕ್ರಮವಾಗಿ ಭಾರತವನ್ನು ಪ್ರವೇಶಿಸಿದ್ದಾರೆ ಎಂದು ಅಂದಾಜಿಸಲಾಗಿದೆ.

ನಾವು ನಡೆಸಿದ ಪರಿಶೀಲನೆಯಲ್ಲಿ ತಿಳಿದು ಬಂದಂತೆ, ಒಂದು ವರ್ಷಕ್ಕೆ 60 ಸಾವಿರ ರೋಹಿಂಗ್ಯಾ ಶಿಶುಗಳ ಜನಿಸಿವೆ ಎಂಬ ವರದಿ ಭಾರತಕ್ಕೆ ಸಂಬಂಧಿಸಿದ್ದಲ್ಲ. ಬಾಂಗ್ಲಾದೇಶದ ರೋಹಿಂಗ್ಯಾ ಶಿಬಿರಗಳ ಕುರಿತಾಗಿದೆ. ಅಲ್ಲಿಯೂ ಮುಂದಿನ ವರ್ಷದಲ್ಲಿ ನಿರಾಶ್ರಿತರ ಶಿಬಿರಗಳಲ್ಲಿ 60,000 ಶಿಶುಗಳು ಜನಿಸಬಹುದು ಎಂದು ಡಾ. ಪೂನಂ ಖೇತ್ರಪಾಲ್ 2018ರಲ್ಲಿ ಅಂದಾಜಿಸಿದ್ದರು. ಅಷ್ಟು ಶಿಶುಗಳ ಜನಿಸಿವೆಯೇ? ಎಂಬುವುದು ಖಚಿತವಾಗಿಲ್ಲ.

FACT CHECK : ಕುರಾನ್ ಬೋಧಿಸುವ ಭಾರತದ ವಿವಿಗಳಲ್ಲಿ ಭಗವದ್ಗೀತೆ, ರಾಮಾಯಣ ಅಧ್ಯಯನಕ್ಕೆ ಕೋರ್ಸ್‌ಗಳಿಲ್ಲ ಎನ್ನುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...