Homeಫ್ಯಾಕ್ಟ್‌ಚೆಕ್FACT CHECK : ಭಾರತದ ರೋಹಿಂಗ್ಯಾ ಶಿಬಿರಗಳಲ್ಲಿ ಒಂದು ವರ್ಷದಲ್ಲಿ 60,000 ಶಿಶುಗಳು ಜನಿಸಿವೆ ಎಂಬುವುದು...

FACT CHECK : ಭಾರತದ ರೋಹಿಂಗ್ಯಾ ಶಿಬಿರಗಳಲ್ಲಿ ಒಂದು ವರ್ಷದಲ್ಲಿ 60,000 ಶಿಶುಗಳು ಜನಿಸಿವೆ ಎಂಬುವುದು ಸುಳ್ಳು

- Advertisement -
- Advertisement -

“ಭಾರತದ ರೋಹಿಂಗ್ಯಾ ಶಿಬಿರಗಳಲ್ಲಿ ಒಂದು ವರ್ಷಕ್ಕೆ ಸುಮಾರು 60,000 ಶಿಶುಗಳು ಜನಿಸಿವೆ. ದೇಶದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ” ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿವೆ.

ಫ್ಯಾಕ್ಟ್‌ಚೆಕ್ : ವೈರಲ್ ಪೋಸ್ಟ್ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಕೀವರ್ಡ್ ಬಳಸಿ ಗೂಗಲ್‌ನಲ್ಲಿ ಮಾಹಿತಿ ಹುಡುಕಿದಾಗ ಫೆಬ್ರವರಿ 28,2018ರಲ್ಲಿ ಇಂಡಿಯಾ ಟಿವಿ ವೆಬ್‌ ಸೈಟ್‌ನಲ್ಲಿ ಪ್ರಕಟಗೊಂಡ ವರದಿಯೊಂದು ಲಭ್ಯವಾಗಿದೆ.

ವರದಿಯಲ್ಲಿ “ಬಾಂಗ್ಲಾದೇಶದ ರೋಹಿಂಗ್ಯಾ ನಿರಾಶ್ರಿತರ ಶಿಬಿರಗಳಲ್ಲಿನ ಶೋಚನೀಯ ಪರಿಸ್ಥಿತಿಗಳನ್ನು ಚರ್ಚಿಸಿದ ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಹೆಚ್‌ಒ) ಆಗ್ನೇಯ ಏಷ್ಯಾದ ಪ್ರಾದೇಶಿಕ ನಿರ್ದೇಶಕಿ ಡಾ. ಪೂನಂ ಖೇತ್ರಪಾಲ್ ಅವರು, ಮ್ಯಾನ್ಮಾರ್‌ನಿಂದ ಪಲಾಯನ ಮಾಡಿರುವ ರೋಹಿಂಗ್ಯಾಗಳ ಪರಿಸ್ಥಿತಿಯನ್ನು ಭಯಾನಕ ಎಂದು ವಿವರಿಸಿದ್ದಾರೆ. ಮುಂದಿನ ವರ್ಷದಲ್ಲಿ ಈ ನಿರಾಶ್ರಿತರ ಶಿಬಿರಗಳಲ್ಲಿ 60,000 ಶಿಶುಗಳು ಜನಿಸಬಹುದು ಎಂದು ಅವರು ಅಂದಾಜಿಸಿದ್ದಾರೆ” ಎಂದು ಉಲ್ಲೇಖಿಸಲಾಗಿದೆ.

ಡಾ. ಖೇತ್ರಪಾಲ್ ಅವರು ಬಾಂಗ್ಲಾ ದೇಶದ ರೋಹಿಂಗ್ಯಾ ಶಿಬಿರಗಳನ್ನು ಉಲ್ಲೇಖಿಸಿ ಹೇಳಿಕೆ ನೀಡಿದ್ದಾರೆಯೇ ಹೊರತು ಭಾರತದ್ದಲ್ಲ ಎಂಬುವುದು ವರದಿಯಿಂದ ತಿಳಿದು ಬಂದಿದೆ. ಡಾ. ಖೇತ್ರಪಾಲ್ ಅವರ ಈ ಹೇಳಿಕೆಯನ್ನೇ ತಪ್ಪಾಗಿ ಅರ್ಥೈಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರಬಹುದು.

ಯುಎನ್‌ಹೆಚ್‌ಸಿಆರ್‌ನ ಅಧಿಕೃತ ಅಂಕಿ ಅಂಶಗಳು ರೋಹಿಂಗ್ಯಾ ಶಿಬಿರಗಳಲ್ಲಿನ ಪರಿಸ್ಥಿತಿಗಳು ಆತಂಕಕಾರಿಯಾಗಿದೆ ಎಂದಿತ್ತು. ಬಾಂಗ್ಲಾದೇಶದ ನಿರಾಶ್ರಿತರ ಶಿಬಿರಗಳಲ್ಲಿ ಪ್ರತಿದಿನ 60ಕ್ಕೂ ಹೆಚ್ಚು ರೋಹಿಂಗ್ಯಾ ಶಿಶುಗಳು ಜನಿಸುತ್ತಿವೆ ಎಂದು ಯುಎನ್‌ಹೆಚ್‌ಸಿಆರ್‌ 2018ರಲ್ಲಿ ವರದಿ ಮಾಡಿತ್ತು.

ಭಾರತದಲ್ಲಿ ರೋಹಿಂಗ್ಯಾಗಳ ಪರಿಸ್ಥಿತಿ ಹೇಗಿದೆ?

ಎನ್‌ಹೆಚ್‌ಸಿಆರ್‌ ಪ್ರಕಾರ, 31 ಜನವರಿ 2022ರಂತೆ, 46,000 ಕ್ಕೂ ಹೆಚ್ಚು ನಿರಾಶ್ರಿತರು ಮತ್ತು ಮುಖ್ಯವಾಗಿ ಮ್ಯಾನ್ಮಾರ್ ಮತ್ತು ಅಫ್ಘಾನಿಸ್ತಾನದಿಂದ ಆಶ್ರಯ ಹುಡುಕಿಕೊಂಡು ಬಂದವರು ಭಾರತದಲ್ಲಿ ನೋಂದಾಯಿಸಲ್ಪಟ್ಟಿದ್ದಾರೆ. ಆದರೆ, ಭಾರತದಲ್ಲಿನ ರೋಹಿಂಗ್ಯಾ ಶಿಬಿರಗಳಲ್ಲಿ ಎಷ್ಟು ಹೆರಿಗೆಗಳು ನಡೆಯುತ್ತಿವೆ ಎಂಬುವುದರ ಕುರಿತು ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ದೇಶದಲ್ಲಿ ವಾಸಿಸುತ್ತಿರುವ ರೋಹಿಂಗ್ಯಾಗಳ ಸಂಖ್ಯೆಯ ಬಗ್ಗೆ ನಿಖರವಾದ ಅಂಕಿ ಅಂಶಗಳಿಲ್ಲ ಎಂದು ಭಾರತ ಸರ್ಕಾರ ಹಲವಾರು ಸಂದರ್ಭಗಳಲ್ಲಿ ಸಂಸತ್ತಿನಲ್ಲಿ ಸ್ಪಷ್ಟಪಡಿಸಿದೆ. ಮ್ಯಾನ್ಮಾರ್‌ನಿಂದ ಸುಮಾರು 40,000 ರೋಹಿಂಗ್ಯಾಗಳು ಅಕ್ರಮವಾಗಿ ಭಾರತವನ್ನು ಪ್ರವೇಶಿಸಿದ್ದಾರೆ ಎಂದು ಅಂದಾಜಿಸಲಾಗಿದೆ.

ನಾವು ನಡೆಸಿದ ಪರಿಶೀಲನೆಯಲ್ಲಿ ತಿಳಿದು ಬಂದಂತೆ, ಒಂದು ವರ್ಷಕ್ಕೆ 60 ಸಾವಿರ ರೋಹಿಂಗ್ಯಾ ಶಿಶುಗಳ ಜನಿಸಿವೆ ಎಂಬ ವರದಿ ಭಾರತಕ್ಕೆ ಸಂಬಂಧಿಸಿದ್ದಲ್ಲ. ಬಾಂಗ್ಲಾದೇಶದ ರೋಹಿಂಗ್ಯಾ ಶಿಬಿರಗಳ ಕುರಿತಾಗಿದೆ. ಅಲ್ಲಿಯೂ ಮುಂದಿನ ವರ್ಷದಲ್ಲಿ ನಿರಾಶ್ರಿತರ ಶಿಬಿರಗಳಲ್ಲಿ 60,000 ಶಿಶುಗಳು ಜನಿಸಬಹುದು ಎಂದು ಡಾ. ಪೂನಂ ಖೇತ್ರಪಾಲ್ 2018ರಲ್ಲಿ ಅಂದಾಜಿಸಿದ್ದರು. ಅಷ್ಟು ಶಿಶುಗಳ ಜನಿಸಿವೆಯೇ? ಎಂಬುವುದು ಖಚಿತವಾಗಿಲ್ಲ.

FACT CHECK : ಕುರಾನ್ ಬೋಧಿಸುವ ಭಾರತದ ವಿವಿಗಳಲ್ಲಿ ಭಗವದ್ಗೀತೆ, ರಾಮಾಯಣ ಅಧ್ಯಯನಕ್ಕೆ ಕೋರ್ಸ್‌ಗಳಿಲ್ಲ ಎನ್ನುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...