Homeಫ್ಯಾಕ್ಟ್‌ಚೆಕ್FACT CHECK : ಭಾರತದ ರೋಹಿಂಗ್ಯಾ ಶಿಬಿರಗಳಲ್ಲಿ ಒಂದು ವರ್ಷದಲ್ಲಿ 60,000 ಶಿಶುಗಳು ಜನಿಸಿವೆ ಎಂಬುವುದು...

FACT CHECK : ಭಾರತದ ರೋಹಿಂಗ್ಯಾ ಶಿಬಿರಗಳಲ್ಲಿ ಒಂದು ವರ್ಷದಲ್ಲಿ 60,000 ಶಿಶುಗಳು ಜನಿಸಿವೆ ಎಂಬುವುದು ಸುಳ್ಳು

- Advertisement -
- Advertisement -

“ಭಾರತದ ರೋಹಿಂಗ್ಯಾ ಶಿಬಿರಗಳಲ್ಲಿ ಒಂದು ವರ್ಷಕ್ಕೆ ಸುಮಾರು 60,000 ಶಿಶುಗಳು ಜನಿಸಿವೆ. ದೇಶದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ” ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿವೆ.

ಫ್ಯಾಕ್ಟ್‌ಚೆಕ್ : ವೈರಲ್ ಪೋಸ್ಟ್ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಕೀವರ್ಡ್ ಬಳಸಿ ಗೂಗಲ್‌ನಲ್ಲಿ ಮಾಹಿತಿ ಹುಡುಕಿದಾಗ ಫೆಬ್ರವರಿ 28,2018ರಲ್ಲಿ ಇಂಡಿಯಾ ಟಿವಿ ವೆಬ್‌ ಸೈಟ್‌ನಲ್ಲಿ ಪ್ರಕಟಗೊಂಡ ವರದಿಯೊಂದು ಲಭ್ಯವಾಗಿದೆ.

ವರದಿಯಲ್ಲಿ “ಬಾಂಗ್ಲಾದೇಶದ ರೋಹಿಂಗ್ಯಾ ನಿರಾಶ್ರಿತರ ಶಿಬಿರಗಳಲ್ಲಿನ ಶೋಚನೀಯ ಪರಿಸ್ಥಿತಿಗಳನ್ನು ಚರ್ಚಿಸಿದ ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಹೆಚ್‌ಒ) ಆಗ್ನೇಯ ಏಷ್ಯಾದ ಪ್ರಾದೇಶಿಕ ನಿರ್ದೇಶಕಿ ಡಾ. ಪೂನಂ ಖೇತ್ರಪಾಲ್ ಅವರು, ಮ್ಯಾನ್ಮಾರ್‌ನಿಂದ ಪಲಾಯನ ಮಾಡಿರುವ ರೋಹಿಂಗ್ಯಾಗಳ ಪರಿಸ್ಥಿತಿಯನ್ನು ಭಯಾನಕ ಎಂದು ವಿವರಿಸಿದ್ದಾರೆ. ಮುಂದಿನ ವರ್ಷದಲ್ಲಿ ಈ ನಿರಾಶ್ರಿತರ ಶಿಬಿರಗಳಲ್ಲಿ 60,000 ಶಿಶುಗಳು ಜನಿಸಬಹುದು ಎಂದು ಅವರು ಅಂದಾಜಿಸಿದ್ದಾರೆ” ಎಂದು ಉಲ್ಲೇಖಿಸಲಾಗಿದೆ.

ಡಾ. ಖೇತ್ರಪಾಲ್ ಅವರು ಬಾಂಗ್ಲಾ ದೇಶದ ರೋಹಿಂಗ್ಯಾ ಶಿಬಿರಗಳನ್ನು ಉಲ್ಲೇಖಿಸಿ ಹೇಳಿಕೆ ನೀಡಿದ್ದಾರೆಯೇ ಹೊರತು ಭಾರತದ್ದಲ್ಲ ಎಂಬುವುದು ವರದಿಯಿಂದ ತಿಳಿದು ಬಂದಿದೆ. ಡಾ. ಖೇತ್ರಪಾಲ್ ಅವರ ಈ ಹೇಳಿಕೆಯನ್ನೇ ತಪ್ಪಾಗಿ ಅರ್ಥೈಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರಬಹುದು.

ಯುಎನ್‌ಹೆಚ್‌ಸಿಆರ್‌ನ ಅಧಿಕೃತ ಅಂಕಿ ಅಂಶಗಳು ರೋಹಿಂಗ್ಯಾ ಶಿಬಿರಗಳಲ್ಲಿನ ಪರಿಸ್ಥಿತಿಗಳು ಆತಂಕಕಾರಿಯಾಗಿದೆ ಎಂದಿತ್ತು. ಬಾಂಗ್ಲಾದೇಶದ ನಿರಾಶ್ರಿತರ ಶಿಬಿರಗಳಲ್ಲಿ ಪ್ರತಿದಿನ 60ಕ್ಕೂ ಹೆಚ್ಚು ರೋಹಿಂಗ್ಯಾ ಶಿಶುಗಳು ಜನಿಸುತ್ತಿವೆ ಎಂದು ಯುಎನ್‌ಹೆಚ್‌ಸಿಆರ್‌ 2018ರಲ್ಲಿ ವರದಿ ಮಾಡಿತ್ತು.

ಭಾರತದಲ್ಲಿ ರೋಹಿಂಗ್ಯಾಗಳ ಪರಿಸ್ಥಿತಿ ಹೇಗಿದೆ?

ಎನ್‌ಹೆಚ್‌ಸಿಆರ್‌ ಪ್ರಕಾರ, 31 ಜನವರಿ 2022ರಂತೆ, 46,000 ಕ್ಕೂ ಹೆಚ್ಚು ನಿರಾಶ್ರಿತರು ಮತ್ತು ಮುಖ್ಯವಾಗಿ ಮ್ಯಾನ್ಮಾರ್ ಮತ್ತು ಅಫ್ಘಾನಿಸ್ತಾನದಿಂದ ಆಶ್ರಯ ಹುಡುಕಿಕೊಂಡು ಬಂದವರು ಭಾರತದಲ್ಲಿ ನೋಂದಾಯಿಸಲ್ಪಟ್ಟಿದ್ದಾರೆ. ಆದರೆ, ಭಾರತದಲ್ಲಿನ ರೋಹಿಂಗ್ಯಾ ಶಿಬಿರಗಳಲ್ಲಿ ಎಷ್ಟು ಹೆರಿಗೆಗಳು ನಡೆಯುತ್ತಿವೆ ಎಂಬುವುದರ ಕುರಿತು ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ದೇಶದಲ್ಲಿ ವಾಸಿಸುತ್ತಿರುವ ರೋಹಿಂಗ್ಯಾಗಳ ಸಂಖ್ಯೆಯ ಬಗ್ಗೆ ನಿಖರವಾದ ಅಂಕಿ ಅಂಶಗಳಿಲ್ಲ ಎಂದು ಭಾರತ ಸರ್ಕಾರ ಹಲವಾರು ಸಂದರ್ಭಗಳಲ್ಲಿ ಸಂಸತ್ತಿನಲ್ಲಿ ಸ್ಪಷ್ಟಪಡಿಸಿದೆ. ಮ್ಯಾನ್ಮಾರ್‌ನಿಂದ ಸುಮಾರು 40,000 ರೋಹಿಂಗ್ಯಾಗಳು ಅಕ್ರಮವಾಗಿ ಭಾರತವನ್ನು ಪ್ರವೇಶಿಸಿದ್ದಾರೆ ಎಂದು ಅಂದಾಜಿಸಲಾಗಿದೆ.

ನಾವು ನಡೆಸಿದ ಪರಿಶೀಲನೆಯಲ್ಲಿ ತಿಳಿದು ಬಂದಂತೆ, ಒಂದು ವರ್ಷಕ್ಕೆ 60 ಸಾವಿರ ರೋಹಿಂಗ್ಯಾ ಶಿಶುಗಳ ಜನಿಸಿವೆ ಎಂಬ ವರದಿ ಭಾರತಕ್ಕೆ ಸಂಬಂಧಿಸಿದ್ದಲ್ಲ. ಬಾಂಗ್ಲಾದೇಶದ ರೋಹಿಂಗ್ಯಾ ಶಿಬಿರಗಳ ಕುರಿತಾಗಿದೆ. ಅಲ್ಲಿಯೂ ಮುಂದಿನ ವರ್ಷದಲ್ಲಿ ನಿರಾಶ್ರಿತರ ಶಿಬಿರಗಳಲ್ಲಿ 60,000 ಶಿಶುಗಳು ಜನಿಸಬಹುದು ಎಂದು ಡಾ. ಪೂನಂ ಖೇತ್ರಪಾಲ್ 2018ರಲ್ಲಿ ಅಂದಾಜಿಸಿದ್ದರು. ಅಷ್ಟು ಶಿಶುಗಳ ಜನಿಸಿವೆಯೇ? ಎಂಬುವುದು ಖಚಿತವಾಗಿಲ್ಲ.

FACT CHECK : ಕುರಾನ್ ಬೋಧಿಸುವ ಭಾರತದ ವಿವಿಗಳಲ್ಲಿ ಭಗವದ್ಗೀತೆ, ರಾಮಾಯಣ ಅಧ್ಯಯನಕ್ಕೆ ಕೋರ್ಸ್‌ಗಳಿಲ್ಲ ಎನ್ನುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...