Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದಲ್ಲಿ ಹಿಂದೂ ಕ್ರಿಕೆಟಿಗನ ಮನೆಗೆ ಬೆಂಕಿ ಹಚ್ಚಲಾಗಿದೆ ಎಂಬುವುದು ಸುಳ್ಳು

FACT CHECK : ಬಾಂಗ್ಲಾದಲ್ಲಿ ಹಿಂದೂ ಕ್ರಿಕೆಟಿಗನ ಮನೆಗೆ ಬೆಂಕಿ ಹಚ್ಚಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಬಾಂಗ್ಲಾದೇಶದಲ್ಲಿ ಸರ್ಕಾರದ ವಿರುದ್ದ ಪ್ರತಿಭಟನೆ ಭುಗಿಲೆದ್ದು, ಹಿಂಸಾಚಾರ ಉಂಟಾಗಿ ರಾಜಕೀಯ ಅರಾಜಕತೆ ಸೃಷ್ಟಿಯಾದ ಬಳಿಕ, ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ಬಹುಸಂಖ್ಯಾತ ಮುಸ್ಲಿಮರು ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಹರಿದಾಡುತ್ತಿದೆ.

ಬೆಂಗಳೂರಿನ ಮಹಿಳೆಯೊಬ್ಬರ ಮೇಲೆ ದೌರ್ಜನ್ಯವೆಸಗಿದ ವಿಡಿಯೋವೊಂದನ್ನು ಬಾಂಗ್ಲಾದೇಶದಲ್ಲಿ ಮುಸ್ಲಿಮರಿಂದ ಹಿಂದೂ ಮಹಿಳೆಯ ಅತ್ಯಾಚಾರ ಎಂದು ಹಂಚಿಕೊಳ್ಳಲಾಗಿತ್ತು. ಈ ನಡುವೆ ಬಾಂಗ್ಲಾದ ಕ್ರಿಕೆಟರ್ ಲಿಟನ್ ದಾಸ್ ಕುಮಾರ್ ಅವರ ಮನೆಗೆ ಮುಸ್ಲಿಮರು ಬೆಂಕಿ ಹಚ್ಚಿದ್ದಾರೆ ಎಂದು ಫೋಟೋವೊಂದು ವೈರಲ್ ಆಗಿದೆ.

ವೈರಲ್ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಸದಾ ಸುಳ್ಳು, ಕೋಮುವೈಷಮ್ಯದ ಸುದ್ದಿಗಳನ್ನು ಹರಡುವ ಬಲಪಂಥೀಯ ಎಕ್ಸ್ ಬಳಕೆದಾರರಾದ ಸುನಂದಾ ರಾಯ್ (saffronSunanda)”ಇವರು ಲಿಟನ್ ದಾಸ್ ಬಾಂಗ್ಲಾದೇಶದ ಕ್ರಿಕೆಟ್ ಆಟಗಾರ. ಇವರು ಬಾಂಗ್ಲಾದೇಶದ ನ್ಯಾಷನಲ್ ಹೀರೋ. ಇವರ ಮನೆಗೆ ಇಸ್ಲಾಮಿಸ್ಟ್‌ಗಳು ಬೆಂಕಿ ಹಚ್ಚಿದ್ದಾರೆ. ಇದು ಬಾಂಗ್ಲಾದೇಶದ ಒಬ್ಬ ಗಣ್ಯ ಹಿಂದೂವಿನ ಸ್ಥಿತಿ. ಸಾಮಾನ್ಯ ಹಿಂದೂಗಳ ಸ್ಥಿತಿಯನ್ನು ಊಹಿಸಿಕೊಳ್ಳಿ” ಎಂದು ಬರೆದುಕೊಂಡಿದ್ದಾರೆ.

ಹಿಂದುತ್ವ ನೈಟ್ (HPhobiaWatch) ಎಂಬ ಮತ್ತೊಂದು ಎಕ್ಸ್‌ ಖಾತೆಯನ್ನೂ ವೈರಲ್ ಫೋಟೋ ಹಂಚಿಕೊಂಡು “ಬಾಂಗ್ಲಾದೇಶದ ಹಿಂದೂ ಕ್ರಿಕೆಟರ್ ಲಿಟನ್ ದಾಸ್ ಅವರ ಮನೆಗೆ ಬೆಂಕಿ ಹಚ್ಚಲಾಗಿದೆ” ಎಂದು ಬರೆದುಕೊಂಡಿದ್ದಾರೆ.

ಇದೇ ರೀತಿಯ ಪ್ರತಿಪಾದನೆಗಳೊಂದಿಗೆ ಇನ್ನೂ ಅನೇಕರು ವೈರಲ್ ಫೋಟೋ ಹಂಚಿಕೊಂಡಿದ್ದಾರೆ. ಅವುಗಳನ್ನು ಇಲ್ಲಿ ಇಲ್ಲಿ ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್ : ಲಿಟನ್ ದಾಸ್ ಮನೆಗೆ ಬೆಂಕಿ ಹಚ್ಚಲಾಗಿದೆ ಎಂದು ಹಂಚಿಕೊಂಡಿರುವ ಫೋಟೋವನ್ನು ನಾವು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಆ ಮನೆ ಲಿಟನ್ ದಾಸ್ ಅವರದ್ದಲ್ಲ, ಮಾಜಿ ಕ್ರಿಕೆಟಿಗ ಮಶ್ರಫೆ ಮೊರ್ತಜಾ ಅವರದ್ದು ಎಂದು ಗೊತ್ತಾಗಿದೆ.

ಈ ಕುರಿತು ನಾವು ಮಾಹಿತಿ ಹುಡುಕಿದಾಗ ‘ದಿ ಬ್ಯುಸಿನೆಸ್ ಸ್ಟ್ಯಾಂಡರ್ಡ್‌‘ ಆಗಸ್ಟ್ 5, 2024ರಂದು ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ವರದಿಯಲ್ಲಿ “ನರೈಲ್ -2 ಕ್ಷೇತ್ರದ ಶಾಸಕ ಮಶ್ರಫೆ ಬಿನ್ ಮೊರ್ತಾಜಾ ಅವರ ಮನೆಗೆ ಬೆಂಕಿ ಹಚ್ಚಿ ಸುಟ್ಟು ಹಾಕಲಾಗಿದೆ. ಜಿಲ್ಲಾ ಪರಿಷತ್ ಚೇರ್ಮನ್ ಅಡ್ವೊಕೇಟ್ ಸುಭಾಷ್ ಚಂದ್ರ ಬೋಸ್, ಜಿಲ್ಲಾ ಅವಾಮಿ ಲೀಗ್ ಪ್ರಧಾನ ಕಾರ್ಯದರ್ಶಿ ನಿಜಾಮ್ ಉದ್ದೀನ್ ಖಾನ್ ನಿಲು ಮತ್ತು ಜಿಲ್ಲಾ ಅವಾಮಿ ಲೀಗ್ ಕಚೇರಿಗೂ ಬೆಂಕಿ ಹಚ್ಚಲಾಗಿದೆ ಎಂದು ಹೇಳಲಾಗಿದೆ.

ಬಾಂಗ್ಲಾದೇಶದ ಢಾಕಾ ಟ್ರಿಬ್ಯೂನ್ ಎಂಬ ಮತ್ತೊಂದು ಸುದ್ದಿ ವೆಬ್ ಸೈಟ್ ಆಗಸ್ಟ್ 4, 2024ರಂದು ಪ್ರಕಟಿಸಿದ ಸುದ್ದಿಯಲ್ಲಿ ಮಶ್ರಫೆ ಅವರ ನರೈಲ್‌ನ ಮನೆಗೆ ಬೆಂಕಿ ಹಚ್ಚಲಾಗಿದೆ ಎಂದು ಹೇಳಿದೆ. ಈ ಸುದ್ದಿಗೆ ಲಿಟನ್ ದಾಸ್ ಅವರದ್ದು ಎಂದು ವೈರಲ್ ಆಗಿರುವ ಫೋಟೋವನ್ನೇ ಬಳಸಿಕೊಂಡಿದೆ.

ಮಶ್ರಫೆ ಮೊರ್ತಜಾ ಅವರ ಮನೆಗೆ ಬೆಂಕಿ ಹಚ್ಚಲಾಗಿದೆ ಎಂದು ಭಾರತದ ಅನೇಕ ಮಾಧ್ಯಮಗಳೂ ವರದಿ ಮಾಡಿತ್ತು. ಅದರ ಲಿಂಕ್ ಇಲ್ಲಿದೆ.

ಮಾಜಿ ಕ್ರಿಕೆಟಿಗ ಮೊರ್ತಜಾ ಅವರು, ಬಾಂಗ್ಲಾದೇಶದ ರಾಷ್ಟ್ರೀಯ ಕ್ರಿಕೆಟ್ ತಂಡದ ನಾಯಕರೂ ಆಗಿದ್ದರು. ಅವರು 2018 ರಲ್ಲಿ ಅವಾಮಿ ಲೀಗ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಆಗಸ್ಟ್ 5, 2024ರವರೆಗೆ ಅವರು ನರೈಲ್ -2 ಜಿಲ್ಲೆಯಿಂದ ಸಂಸತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಅವಾಮಿ ಲೀಗ್ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ನೇತೃತ್ವದಲ್ಲಿ ಪ್ರಮುಖ ರಾಜಕೀಯ ಪಕ್ಷವಾಗಿದೆ. ಈ ಪಕ್ಷವನ್ನು ಅವರ ತಂದೆ ದಿವಂಗತ ಶೇಖ್ ಮುಜಿಬುರ್ ರೆಹಮಾನ್ ಸ್ಥಾಪಿಸಿದ್ದಾರೆ.

ಒಟ್ಟಿನಲ್ಲಿ, ಬಾಂಗ್ಲಾದ ಪ್ರತಿಭಟನಾಕಾರರು ಬೆಂಕಿ ಹಚ್ಚಿರು ಮನೆ ಲಿಟನ್ ದಾಸ್ ಅವರದ್ದಲ್ಲ. ಅದು ಮಾಜಿ ಕ್ರಿಕೆಟಿಗ, ಸಂಸದ ಮಶ್ರಫೆ ಅವರದ್ದಾಗಿದೆ. ಹಾಗಾಗಿ, ಸಾಮಾಜಿಕ ಜಾಲತಾಣಗಳ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಾಳಿ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...