Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದಲ್ಲಿ ಹಿಂದೂ ಕ್ರಿಕೆಟಿಗನ ಮನೆಗೆ ಬೆಂಕಿ ಹಚ್ಚಲಾಗಿದೆ ಎಂಬುವುದು ಸುಳ್ಳು

FACT CHECK : ಬಾಂಗ್ಲಾದಲ್ಲಿ ಹಿಂದೂ ಕ್ರಿಕೆಟಿಗನ ಮನೆಗೆ ಬೆಂಕಿ ಹಚ್ಚಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಬಾಂಗ್ಲಾದೇಶದಲ್ಲಿ ಸರ್ಕಾರದ ವಿರುದ್ದ ಪ್ರತಿಭಟನೆ ಭುಗಿಲೆದ್ದು, ಹಿಂಸಾಚಾರ ಉಂಟಾಗಿ ರಾಜಕೀಯ ಅರಾಜಕತೆ ಸೃಷ್ಟಿಯಾದ ಬಳಿಕ, ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ಬಹುಸಂಖ್ಯಾತ ಮುಸ್ಲಿಮರು ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಹರಿದಾಡುತ್ತಿದೆ.

ಬೆಂಗಳೂರಿನ ಮಹಿಳೆಯೊಬ್ಬರ ಮೇಲೆ ದೌರ್ಜನ್ಯವೆಸಗಿದ ವಿಡಿಯೋವೊಂದನ್ನು ಬಾಂಗ್ಲಾದೇಶದಲ್ಲಿ ಮುಸ್ಲಿಮರಿಂದ ಹಿಂದೂ ಮಹಿಳೆಯ ಅತ್ಯಾಚಾರ ಎಂದು ಹಂಚಿಕೊಳ್ಳಲಾಗಿತ್ತು. ಈ ನಡುವೆ ಬಾಂಗ್ಲಾದ ಕ್ರಿಕೆಟರ್ ಲಿಟನ್ ದಾಸ್ ಕುಮಾರ್ ಅವರ ಮನೆಗೆ ಮುಸ್ಲಿಮರು ಬೆಂಕಿ ಹಚ್ಚಿದ್ದಾರೆ ಎಂದು ಫೋಟೋವೊಂದು ವೈರಲ್ ಆಗಿದೆ.

ವೈರಲ್ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಸದಾ ಸುಳ್ಳು, ಕೋಮುವೈಷಮ್ಯದ ಸುದ್ದಿಗಳನ್ನು ಹರಡುವ ಬಲಪಂಥೀಯ ಎಕ್ಸ್ ಬಳಕೆದಾರರಾದ ಸುನಂದಾ ರಾಯ್ (saffronSunanda)”ಇವರು ಲಿಟನ್ ದಾಸ್ ಬಾಂಗ್ಲಾದೇಶದ ಕ್ರಿಕೆಟ್ ಆಟಗಾರ. ಇವರು ಬಾಂಗ್ಲಾದೇಶದ ನ್ಯಾಷನಲ್ ಹೀರೋ. ಇವರ ಮನೆಗೆ ಇಸ್ಲಾಮಿಸ್ಟ್‌ಗಳು ಬೆಂಕಿ ಹಚ್ಚಿದ್ದಾರೆ. ಇದು ಬಾಂಗ್ಲಾದೇಶದ ಒಬ್ಬ ಗಣ್ಯ ಹಿಂದೂವಿನ ಸ್ಥಿತಿ. ಸಾಮಾನ್ಯ ಹಿಂದೂಗಳ ಸ್ಥಿತಿಯನ್ನು ಊಹಿಸಿಕೊಳ್ಳಿ” ಎಂದು ಬರೆದುಕೊಂಡಿದ್ದಾರೆ.

ಹಿಂದುತ್ವ ನೈಟ್ (HPhobiaWatch) ಎಂಬ ಮತ್ತೊಂದು ಎಕ್ಸ್‌ ಖಾತೆಯನ್ನೂ ವೈರಲ್ ಫೋಟೋ ಹಂಚಿಕೊಂಡು “ಬಾಂಗ್ಲಾದೇಶದ ಹಿಂದೂ ಕ್ರಿಕೆಟರ್ ಲಿಟನ್ ದಾಸ್ ಅವರ ಮನೆಗೆ ಬೆಂಕಿ ಹಚ್ಚಲಾಗಿದೆ” ಎಂದು ಬರೆದುಕೊಂಡಿದ್ದಾರೆ.

ಇದೇ ರೀತಿಯ ಪ್ರತಿಪಾದನೆಗಳೊಂದಿಗೆ ಇನ್ನೂ ಅನೇಕರು ವೈರಲ್ ಫೋಟೋ ಹಂಚಿಕೊಂಡಿದ್ದಾರೆ. ಅವುಗಳನ್ನು ಇಲ್ಲಿ ಇಲ್ಲಿ ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್ : ಲಿಟನ್ ದಾಸ್ ಮನೆಗೆ ಬೆಂಕಿ ಹಚ್ಚಲಾಗಿದೆ ಎಂದು ಹಂಚಿಕೊಂಡಿರುವ ಫೋಟೋವನ್ನು ನಾವು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಆ ಮನೆ ಲಿಟನ್ ದಾಸ್ ಅವರದ್ದಲ್ಲ, ಮಾಜಿ ಕ್ರಿಕೆಟಿಗ ಮಶ್ರಫೆ ಮೊರ್ತಜಾ ಅವರದ್ದು ಎಂದು ಗೊತ್ತಾಗಿದೆ.

ಈ ಕುರಿತು ನಾವು ಮಾಹಿತಿ ಹುಡುಕಿದಾಗ ‘ದಿ ಬ್ಯುಸಿನೆಸ್ ಸ್ಟ್ಯಾಂಡರ್ಡ್‌‘ ಆಗಸ್ಟ್ 5, 2024ರಂದು ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ವರದಿಯಲ್ಲಿ “ನರೈಲ್ -2 ಕ್ಷೇತ್ರದ ಶಾಸಕ ಮಶ್ರಫೆ ಬಿನ್ ಮೊರ್ತಾಜಾ ಅವರ ಮನೆಗೆ ಬೆಂಕಿ ಹಚ್ಚಿ ಸುಟ್ಟು ಹಾಕಲಾಗಿದೆ. ಜಿಲ್ಲಾ ಪರಿಷತ್ ಚೇರ್ಮನ್ ಅಡ್ವೊಕೇಟ್ ಸುಭಾಷ್ ಚಂದ್ರ ಬೋಸ್, ಜಿಲ್ಲಾ ಅವಾಮಿ ಲೀಗ್ ಪ್ರಧಾನ ಕಾರ್ಯದರ್ಶಿ ನಿಜಾಮ್ ಉದ್ದೀನ್ ಖಾನ್ ನಿಲು ಮತ್ತು ಜಿಲ್ಲಾ ಅವಾಮಿ ಲೀಗ್ ಕಚೇರಿಗೂ ಬೆಂಕಿ ಹಚ್ಚಲಾಗಿದೆ ಎಂದು ಹೇಳಲಾಗಿದೆ.

ಬಾಂಗ್ಲಾದೇಶದ ಢಾಕಾ ಟ್ರಿಬ್ಯೂನ್ ಎಂಬ ಮತ್ತೊಂದು ಸುದ್ದಿ ವೆಬ್ ಸೈಟ್ ಆಗಸ್ಟ್ 4, 2024ರಂದು ಪ್ರಕಟಿಸಿದ ಸುದ್ದಿಯಲ್ಲಿ ಮಶ್ರಫೆ ಅವರ ನರೈಲ್‌ನ ಮನೆಗೆ ಬೆಂಕಿ ಹಚ್ಚಲಾಗಿದೆ ಎಂದು ಹೇಳಿದೆ. ಈ ಸುದ್ದಿಗೆ ಲಿಟನ್ ದಾಸ್ ಅವರದ್ದು ಎಂದು ವೈರಲ್ ಆಗಿರುವ ಫೋಟೋವನ್ನೇ ಬಳಸಿಕೊಂಡಿದೆ.

ಮಶ್ರಫೆ ಮೊರ್ತಜಾ ಅವರ ಮನೆಗೆ ಬೆಂಕಿ ಹಚ್ಚಲಾಗಿದೆ ಎಂದು ಭಾರತದ ಅನೇಕ ಮಾಧ್ಯಮಗಳೂ ವರದಿ ಮಾಡಿತ್ತು. ಅದರ ಲಿಂಕ್ ಇಲ್ಲಿದೆ.

ಮಾಜಿ ಕ್ರಿಕೆಟಿಗ ಮೊರ್ತಜಾ ಅವರು, ಬಾಂಗ್ಲಾದೇಶದ ರಾಷ್ಟ್ರೀಯ ಕ್ರಿಕೆಟ್ ತಂಡದ ನಾಯಕರೂ ಆಗಿದ್ದರು. ಅವರು 2018 ರಲ್ಲಿ ಅವಾಮಿ ಲೀಗ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಆಗಸ್ಟ್ 5, 2024ರವರೆಗೆ ಅವರು ನರೈಲ್ -2 ಜಿಲ್ಲೆಯಿಂದ ಸಂಸತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಅವಾಮಿ ಲೀಗ್ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ನೇತೃತ್ವದಲ್ಲಿ ಪ್ರಮುಖ ರಾಜಕೀಯ ಪಕ್ಷವಾಗಿದೆ. ಈ ಪಕ್ಷವನ್ನು ಅವರ ತಂದೆ ದಿವಂಗತ ಶೇಖ್ ಮುಜಿಬುರ್ ರೆಹಮಾನ್ ಸ್ಥಾಪಿಸಿದ್ದಾರೆ.

ಒಟ್ಟಿನಲ್ಲಿ, ಬಾಂಗ್ಲಾದ ಪ್ರತಿಭಟನಾಕಾರರು ಬೆಂಕಿ ಹಚ್ಚಿರು ಮನೆ ಲಿಟನ್ ದಾಸ್ ಅವರದ್ದಲ್ಲ. ಅದು ಮಾಜಿ ಕ್ರಿಕೆಟಿಗ, ಸಂಸದ ಮಶ್ರಫೆ ಅವರದ್ದಾಗಿದೆ. ಹಾಗಾಗಿ, ಸಾಮಾಜಿಕ ಜಾಲತಾಣಗಳ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಾಳಿ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...