Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದಲ್ಲಿ ಹಿಂದೂ ಕ್ರಿಕೆಟಿಗನ ಮನೆಗೆ ಬೆಂಕಿ ಹಚ್ಚಲಾಗಿದೆ ಎಂಬುವುದು ಸುಳ್ಳು

FACT CHECK : ಬಾಂಗ್ಲಾದಲ್ಲಿ ಹಿಂದೂ ಕ್ರಿಕೆಟಿಗನ ಮನೆಗೆ ಬೆಂಕಿ ಹಚ್ಚಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಬಾಂಗ್ಲಾದೇಶದಲ್ಲಿ ಸರ್ಕಾರದ ವಿರುದ್ದ ಪ್ರತಿಭಟನೆ ಭುಗಿಲೆದ್ದು, ಹಿಂಸಾಚಾರ ಉಂಟಾಗಿ ರಾಜಕೀಯ ಅರಾಜಕತೆ ಸೃಷ್ಟಿಯಾದ ಬಳಿಕ, ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ಬಹುಸಂಖ್ಯಾತ ಮುಸ್ಲಿಮರು ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಹರಿದಾಡುತ್ತಿದೆ.

ಬೆಂಗಳೂರಿನ ಮಹಿಳೆಯೊಬ್ಬರ ಮೇಲೆ ದೌರ್ಜನ್ಯವೆಸಗಿದ ವಿಡಿಯೋವೊಂದನ್ನು ಬಾಂಗ್ಲಾದೇಶದಲ್ಲಿ ಮುಸ್ಲಿಮರಿಂದ ಹಿಂದೂ ಮಹಿಳೆಯ ಅತ್ಯಾಚಾರ ಎಂದು ಹಂಚಿಕೊಳ್ಳಲಾಗಿತ್ತು. ಈ ನಡುವೆ ಬಾಂಗ್ಲಾದ ಕ್ರಿಕೆಟರ್ ಲಿಟನ್ ದಾಸ್ ಕುಮಾರ್ ಅವರ ಮನೆಗೆ ಮುಸ್ಲಿಮರು ಬೆಂಕಿ ಹಚ್ಚಿದ್ದಾರೆ ಎಂದು ಫೋಟೋವೊಂದು ವೈರಲ್ ಆಗಿದೆ.

ವೈರಲ್ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಸದಾ ಸುಳ್ಳು, ಕೋಮುವೈಷಮ್ಯದ ಸುದ್ದಿಗಳನ್ನು ಹರಡುವ ಬಲಪಂಥೀಯ ಎಕ್ಸ್ ಬಳಕೆದಾರರಾದ ಸುನಂದಾ ರಾಯ್ (saffronSunanda)”ಇವರು ಲಿಟನ್ ದಾಸ್ ಬಾಂಗ್ಲಾದೇಶದ ಕ್ರಿಕೆಟ್ ಆಟಗಾರ. ಇವರು ಬಾಂಗ್ಲಾದೇಶದ ನ್ಯಾಷನಲ್ ಹೀರೋ. ಇವರ ಮನೆಗೆ ಇಸ್ಲಾಮಿಸ್ಟ್‌ಗಳು ಬೆಂಕಿ ಹಚ್ಚಿದ್ದಾರೆ. ಇದು ಬಾಂಗ್ಲಾದೇಶದ ಒಬ್ಬ ಗಣ್ಯ ಹಿಂದೂವಿನ ಸ್ಥಿತಿ. ಸಾಮಾನ್ಯ ಹಿಂದೂಗಳ ಸ್ಥಿತಿಯನ್ನು ಊಹಿಸಿಕೊಳ್ಳಿ” ಎಂದು ಬರೆದುಕೊಂಡಿದ್ದಾರೆ.

ಹಿಂದುತ್ವ ನೈಟ್ (HPhobiaWatch) ಎಂಬ ಮತ್ತೊಂದು ಎಕ್ಸ್‌ ಖಾತೆಯನ್ನೂ ವೈರಲ್ ಫೋಟೋ ಹಂಚಿಕೊಂಡು “ಬಾಂಗ್ಲಾದೇಶದ ಹಿಂದೂ ಕ್ರಿಕೆಟರ್ ಲಿಟನ್ ದಾಸ್ ಅವರ ಮನೆಗೆ ಬೆಂಕಿ ಹಚ್ಚಲಾಗಿದೆ” ಎಂದು ಬರೆದುಕೊಂಡಿದ್ದಾರೆ.

ಇದೇ ರೀತಿಯ ಪ್ರತಿಪಾದನೆಗಳೊಂದಿಗೆ ಇನ್ನೂ ಅನೇಕರು ವೈರಲ್ ಫೋಟೋ ಹಂಚಿಕೊಂಡಿದ್ದಾರೆ. ಅವುಗಳನ್ನು ಇಲ್ಲಿ ಇಲ್ಲಿ ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್ : ಲಿಟನ್ ದಾಸ್ ಮನೆಗೆ ಬೆಂಕಿ ಹಚ್ಚಲಾಗಿದೆ ಎಂದು ಹಂಚಿಕೊಂಡಿರುವ ಫೋಟೋವನ್ನು ನಾವು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಆ ಮನೆ ಲಿಟನ್ ದಾಸ್ ಅವರದ್ದಲ್ಲ, ಮಾಜಿ ಕ್ರಿಕೆಟಿಗ ಮಶ್ರಫೆ ಮೊರ್ತಜಾ ಅವರದ್ದು ಎಂದು ಗೊತ್ತಾಗಿದೆ.

ಈ ಕುರಿತು ನಾವು ಮಾಹಿತಿ ಹುಡುಕಿದಾಗ ‘ದಿ ಬ್ಯುಸಿನೆಸ್ ಸ್ಟ್ಯಾಂಡರ್ಡ್‌‘ ಆಗಸ್ಟ್ 5, 2024ರಂದು ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ವರದಿಯಲ್ಲಿ “ನರೈಲ್ -2 ಕ್ಷೇತ್ರದ ಶಾಸಕ ಮಶ್ರಫೆ ಬಿನ್ ಮೊರ್ತಾಜಾ ಅವರ ಮನೆಗೆ ಬೆಂಕಿ ಹಚ್ಚಿ ಸುಟ್ಟು ಹಾಕಲಾಗಿದೆ. ಜಿಲ್ಲಾ ಪರಿಷತ್ ಚೇರ್ಮನ್ ಅಡ್ವೊಕೇಟ್ ಸುಭಾಷ್ ಚಂದ್ರ ಬೋಸ್, ಜಿಲ್ಲಾ ಅವಾಮಿ ಲೀಗ್ ಪ್ರಧಾನ ಕಾರ್ಯದರ್ಶಿ ನಿಜಾಮ್ ಉದ್ದೀನ್ ಖಾನ್ ನಿಲು ಮತ್ತು ಜಿಲ್ಲಾ ಅವಾಮಿ ಲೀಗ್ ಕಚೇರಿಗೂ ಬೆಂಕಿ ಹಚ್ಚಲಾಗಿದೆ ಎಂದು ಹೇಳಲಾಗಿದೆ.

ಬಾಂಗ್ಲಾದೇಶದ ಢಾಕಾ ಟ್ರಿಬ್ಯೂನ್ ಎಂಬ ಮತ್ತೊಂದು ಸುದ್ದಿ ವೆಬ್ ಸೈಟ್ ಆಗಸ್ಟ್ 4, 2024ರಂದು ಪ್ರಕಟಿಸಿದ ಸುದ್ದಿಯಲ್ಲಿ ಮಶ್ರಫೆ ಅವರ ನರೈಲ್‌ನ ಮನೆಗೆ ಬೆಂಕಿ ಹಚ್ಚಲಾಗಿದೆ ಎಂದು ಹೇಳಿದೆ. ಈ ಸುದ್ದಿಗೆ ಲಿಟನ್ ದಾಸ್ ಅವರದ್ದು ಎಂದು ವೈರಲ್ ಆಗಿರುವ ಫೋಟೋವನ್ನೇ ಬಳಸಿಕೊಂಡಿದೆ.

ಮಶ್ರಫೆ ಮೊರ್ತಜಾ ಅವರ ಮನೆಗೆ ಬೆಂಕಿ ಹಚ್ಚಲಾಗಿದೆ ಎಂದು ಭಾರತದ ಅನೇಕ ಮಾಧ್ಯಮಗಳೂ ವರದಿ ಮಾಡಿತ್ತು. ಅದರ ಲಿಂಕ್ ಇಲ್ಲಿದೆ.

ಮಾಜಿ ಕ್ರಿಕೆಟಿಗ ಮೊರ್ತಜಾ ಅವರು, ಬಾಂಗ್ಲಾದೇಶದ ರಾಷ್ಟ್ರೀಯ ಕ್ರಿಕೆಟ್ ತಂಡದ ನಾಯಕರೂ ಆಗಿದ್ದರು. ಅವರು 2018 ರಲ್ಲಿ ಅವಾಮಿ ಲೀಗ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಆಗಸ್ಟ್ 5, 2024ರವರೆಗೆ ಅವರು ನರೈಲ್ -2 ಜಿಲ್ಲೆಯಿಂದ ಸಂಸತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಅವಾಮಿ ಲೀಗ್ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ನೇತೃತ್ವದಲ್ಲಿ ಪ್ರಮುಖ ರಾಜಕೀಯ ಪಕ್ಷವಾಗಿದೆ. ಈ ಪಕ್ಷವನ್ನು ಅವರ ತಂದೆ ದಿವಂಗತ ಶೇಖ್ ಮುಜಿಬುರ್ ರೆಹಮಾನ್ ಸ್ಥಾಪಿಸಿದ್ದಾರೆ.

ಒಟ್ಟಿನಲ್ಲಿ, ಬಾಂಗ್ಲಾದ ಪ್ರತಿಭಟನಾಕಾರರು ಬೆಂಕಿ ಹಚ್ಚಿರು ಮನೆ ಲಿಟನ್ ದಾಸ್ ಅವರದ್ದಲ್ಲ. ಅದು ಮಾಜಿ ಕ್ರಿಕೆಟಿಗ, ಸಂಸದ ಮಶ್ರಫೆ ಅವರದ್ದಾಗಿದೆ. ಹಾಗಾಗಿ, ಸಾಮಾಜಿಕ ಜಾಲತಾಣಗಳ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಾಳಿ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...