Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

FACT CHECK : ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ” ಎಂದು ಆರೋಪಿಸಿ ವಿಡಿಯೋವೊಂದು ವೈರಲ್ ಆಗಿದೆ.

Vp Murugeshan(@MurugeshanVp) ಎಂಬ ಎಕ್ಸ್ ಖಾತೆಯಲ್ಲಿ ಜುಲೈ 23, 2024 ರಂದು ವಿಡಿಯೋ ಹಂಚಿಕೊಂಡು “ಇದು ಮಣಿಪುರ ಅಲ್ಲ, ಇದು ಪಶ್ಚಿಮ ಬಂಗಾಳ ಮತ್ತು ಮಮತಾ ಅವರ ಹಿಂದೂ ಹುಡುಗಿಯ ಮೇಲೆ ಮುಸ್ಲಿಮರು ಹೇಗೆ ಅಮಾನುಷವಾಗಿ ಹಲ್ಲೆ ಮಾಡಿದರು ಎಂಬುವುದನ್ನು ದಯವಿಟ್ಟು ನೋಡಿ” ಎಂದು ಬರೆದುಕೊಂಡಿದ್ದರು.

ಜುಲೈ 15ರಂದು ಇದೇ ವಿಡಿಯೋವನ್ನು ಜನ ಸಂವಾದ್ 24X7 ಎಂಬ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡು” “ಪೊಲೀಸರ ಮಂದೆಯೇ ಸ್ಥಳೀಯರು ಮಹಿಳೆಯೊಬ್ಬರಿಗೆ ಥಳಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲವೇ?” ಎಂದು ಬರೆದುಕೊಳ್ಳಲಾಗಿತ್ತು.

ಇವಿಷ್ಟೇ ಅಲ್ಲದೆ, ಇತರ ಅನೇಕರು ವಿವಿಧ ಪ್ರತಿಪಾದನೆಗಳೊಂದಿಗೆ ಈ ವಿಡಿಯೋ ಹಂಚಿಕೊಂಡಿದ್ದರು. ವಿಡಿಯೋಗೆ ಕೋಮು ಬಣ್ಣ ಬಳಿದಿರುವುದರಿಂದ ನಾವು ಅದರ ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ.

ಫ್ಯಾಕ್ಟ್‌ಚೆಕ್ : ವಿಡಿಯೋದಲ್ಲಿರುವ ಪೊಲೀಸ್ ವಾಹನದ ಮೇಲೆ ‘ಬರಾಸತ್ ಪೊಲೀಸ್’ ಎಂಬ ಹೆಸರು ಕಾಣಿಸಿದ್ದರಿಂದ ನಾವು ಆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ಮೇಲೆ ಗುಂಪು ಹಲ್ಲೆ ನಡೆದಿರುವ ಯಾವುದಾದರು ಘಟನೆ ನಡೆದಿದೆಯೇ? ಎಂದು ಸುದ್ದಿ ಹುಡುಕಿದ್ದೇವೆ. ಈ ವೇಳೆ ‘ಮಕ್ಕಳ ಕಳ್ಳಿ’ ಎಂಬ ಶಂಕೆಯಿಂದ ಮಹಿಳೆಯೊಬ್ಬರ ಮೇಲೆ ಜನರು ಹಲ್ಲೆ ನಡೆಸಿರುವ ಘಟನೆ ಕುರಿತು ಜೂನ್ 2024ರಲ್ಲಿ ಅನೇಕ ಬಂಗಾಳಿ ಮಾಧ್ಯಮಗಳು ಮಾಡಿರುವ ವರದಿಗಳು ದೊರೆತಿವೆ.

ಜೂನ್ 19, 2024ರಂದು ಕೊಲ್ಕತ್ತಾ ಟಿವಿ ಮಾಡಿರುವ ವರದಿಯ ವಿಡಿಯೋ ಕೆಳಗಿದೆ..

ನಾವು ಘಟನೆ ಕುರಿತು ಇನ್ನಷ್ಟು ಮಾಹಿತಿ ಹುಡುಕಿದಾಗ ಇಂಗ್ಲಿಷ್‌ನ ಬೂಮ್ ಸುದ್ದಿ ವೆಬ್‌ಸೈಟ್‌ ಈ ಕುರಿತು ಮಾಡಿರುವ ಫ್ಯಾಕ್ಟ್‌ಚೆಕ್ ಸುದ್ದಿ ದೊರೆತಿದೆ.

ಸುದ್ದಿಯಲ್ಲಿ “ನಾವು ಬರಾಸತ್ ಪೊಲೀಸ್ ಅಧೀಕ್ಷರಾದ ಪ್ರತೀಕ್ಷಾ ಜರ್ಖಾರಿಯಾ ಅವರಿಗೆ ಕರೆ ಮಾಡಿ ಮಹಿಳೆ ಮೇಲಿನ ಹಲ್ಲೆ ಕುರಿತು ವಿಚಾರಿಸಿದ್ದೇವೆ. ಈ ವೇಳೆ ಅವರು ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬ ಸುದ್ದಿಯನ್ನು ಅಲ್ಲಗಳೆದಿದ್ದು, ಮಕ್ಕಳ ಕಳ್ಳಿ ಎಂಬ ಶಂಕೆಯ ಮೇಲೆ ಮಹಿಳೆಗೆ ಸ್ಥಳೀಯರು ಥಳಿಸಿದ್ದಾರೆ. ಹಲ್ಲೆಗೊಳಗಾದವರು ಮುಸ್ಲಿಂ ಮಹಿಳೆ. ಈ ಘಟನೆಯಲ್ಲಿ ಯಾವುದೇ ಕೋಮು ಆಯಾಮ ಇಲ್ಲ” ಎಂದು ತಿಳಿಸಿದ್ದಾಗಿ ಬೂಮ್ ಹೇಳಿದೆ.

‘ಮಕ್ಕಳ ಕಳ್ಳರು’ ಎಂಬ ವದಂತಿ ಹಿನ್ನೆಲೆ ಸ್ಥಳೀಯರು ಥಳಿಸಿರುವ ಎರಡು ಗುಂಪು ಹಲ್ಲೆ ಪ್ರಕರಣಗಳು ಜೂನ್ 19ರಂದು ಬರಾಸತ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೊದಲ ಘಟನೆ ಬೆಳಿಗ್ಗೆ 10:30ರ ಸುಮಾರಿಗೆ 23ನೇ ವಾರ್ಡ್‌ನ ಅಶ್ವಿನಿಪಲ್ಲಿಯ ಮೊಲ್ಲಾಪರದಲ್ಲಿ ನಡೆದಿದೆ. ಇಲ್ಲಿ ವ್ಯಕ್ತಿಯೊಬ್ಬರಿಗೆ ಮಕ್ಕಳ ಕಳ್ಳ ಎಂಬ ಶಂಕೆಯ ಮೇರೆಗೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ. ಎರಡನೇ ಘಟನೆ ವಾರ್ಡ್‌ ಸಂಖ್ಯೆ 29 ಸೆಂಟ್ರಲ್ ಮೋಡರ್ನ್‌ ಶಾಲೆಯ ಎದುರುಗಡೆ ನಡೆದಿದೆ. ಪೋಷಕರು ತಮ್ಮ ಮಕ್ಕಳನ್ನು ಕರೆದೊಯ್ಯಲು ಶಾಲೆಯ ಬಳಿಗೆ ಬಂದಾಗ ಮಹಿಳೆ ಮತ್ತು ಪುರುಷನನ್ನು ಮಕ್ಕಳ ಕಳ್ಳರು ಎಂದು ಶಂಕಿಸಿ ಹಲ್ಲೆ ನಡೆಸಿದ್ದಾರೆ. ವೈರಲ್ ಆಗಿರುವ ಮಹಿಳೆಗೆ ಥಳಿಸಿರುವ ವಿಡಿಯೋ ಎರಡನೇ ಘಟನೆಯದ್ದು ಎಂದು ಎಸ್‌ಪಿ ಪ್ರತೀಕ್ಷಾ ಜರ್ಖಾರಿಯಾ ತಿಳಿಸಿದ್ದಾಗಿ ಬೂಮ್ ವಿವರಿಸಿದೆ.

ಮೆಹರಬಾನು ಬಿಬಿ ಅಲಿಯಾಸ್ ನೆಹ್ರಾ ಬಾನು ಎಂಬ ಅಮಾಯಕ ಮಹಿಳೆಗೆ ಸ್ಥಳೀಯರು ಗುಂಪು ಹಲ್ಲೆ ನಡೆಸಿದ್ದು, ಪೊಲೀಸರು ಆಕೆಯನ್ನು ರಕ್ಷಿಸಲು ಪ್ರಯ್ನಿಸಿದರೂ ಸಾಧ್ಯವಾಗಿಲ್ಲ. ಇವಿಷ್ಟು ಅಲ್ಲದೆ ಈ ಘಟನೆಯಲ್ಲಿ ಯಾವುದೇ ಕೋಮು ವಿಷಯಗಳು ಇಲ್ಲ ಎಂದು ಎಸ್ಪಿ ಹೇಳಿರುವುದಾಗಿ ಬೂಮ್ ತಿಳಿಸಿದೆ.

ಒಟ್ಟಿನಲ್ಲಿ ಮುಸ್ಲಿಮರು ಹಿಂದೂ ಹುಡುಗಿಗೆ ಥಳಿಸಿದ್ದಾರೆ ಎಂಬ ಸಾಮಾಜಿಕ ಜಾಲತಾಣದ ಸುದ್ದಿಯು ಸುಳ್ಳಾಗಿದ್ದು, ಕೋಮು ವೈಷಮ್ಯ ಹರಡುವ ಉದ್ದೇಶ ಹೊಂದಿದೆ ಎಂಬುವುದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ.

ಇದನ್ನೂ ಓದಿ : FACT CHECK : ಮುಸ್ಲಿಂ ಪ್ರೇಮಿಯಿಂದ ಹಿಂದೂ ಯುವತಿಯ ಅತ್ಯಾಚಾರ, ಕೊಲೆ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...