Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

FACT CHECK : ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ” ಎಂದು ಆರೋಪಿಸಿ ವಿಡಿಯೋವೊಂದು ವೈರಲ್ ಆಗಿದೆ.

Vp Murugeshan(@MurugeshanVp) ಎಂಬ ಎಕ್ಸ್ ಖಾತೆಯಲ್ಲಿ ಜುಲೈ 23, 2024 ರಂದು ವಿಡಿಯೋ ಹಂಚಿಕೊಂಡು “ಇದು ಮಣಿಪುರ ಅಲ್ಲ, ಇದು ಪಶ್ಚಿಮ ಬಂಗಾಳ ಮತ್ತು ಮಮತಾ ಅವರ ಹಿಂದೂ ಹುಡುಗಿಯ ಮೇಲೆ ಮುಸ್ಲಿಮರು ಹೇಗೆ ಅಮಾನುಷವಾಗಿ ಹಲ್ಲೆ ಮಾಡಿದರು ಎಂಬುವುದನ್ನು ದಯವಿಟ್ಟು ನೋಡಿ” ಎಂದು ಬರೆದುಕೊಂಡಿದ್ದರು.

ಜುಲೈ 15ರಂದು ಇದೇ ವಿಡಿಯೋವನ್ನು ಜನ ಸಂವಾದ್ 24X7 ಎಂಬ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡು” “ಪೊಲೀಸರ ಮಂದೆಯೇ ಸ್ಥಳೀಯರು ಮಹಿಳೆಯೊಬ್ಬರಿಗೆ ಥಳಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲವೇ?” ಎಂದು ಬರೆದುಕೊಳ್ಳಲಾಗಿತ್ತು.

ಇವಿಷ್ಟೇ ಅಲ್ಲದೆ, ಇತರ ಅನೇಕರು ವಿವಿಧ ಪ್ರತಿಪಾದನೆಗಳೊಂದಿಗೆ ಈ ವಿಡಿಯೋ ಹಂಚಿಕೊಂಡಿದ್ದರು. ವಿಡಿಯೋಗೆ ಕೋಮು ಬಣ್ಣ ಬಳಿದಿರುವುದರಿಂದ ನಾವು ಅದರ ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ.

ಫ್ಯಾಕ್ಟ್‌ಚೆಕ್ : ವಿಡಿಯೋದಲ್ಲಿರುವ ಪೊಲೀಸ್ ವಾಹನದ ಮೇಲೆ ‘ಬರಾಸತ್ ಪೊಲೀಸ್’ ಎಂಬ ಹೆಸರು ಕಾಣಿಸಿದ್ದರಿಂದ ನಾವು ಆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ಮೇಲೆ ಗುಂಪು ಹಲ್ಲೆ ನಡೆದಿರುವ ಯಾವುದಾದರು ಘಟನೆ ನಡೆದಿದೆಯೇ? ಎಂದು ಸುದ್ದಿ ಹುಡುಕಿದ್ದೇವೆ. ಈ ವೇಳೆ ‘ಮಕ್ಕಳ ಕಳ್ಳಿ’ ಎಂಬ ಶಂಕೆಯಿಂದ ಮಹಿಳೆಯೊಬ್ಬರ ಮೇಲೆ ಜನರು ಹಲ್ಲೆ ನಡೆಸಿರುವ ಘಟನೆ ಕುರಿತು ಜೂನ್ 2024ರಲ್ಲಿ ಅನೇಕ ಬಂಗಾಳಿ ಮಾಧ್ಯಮಗಳು ಮಾಡಿರುವ ವರದಿಗಳು ದೊರೆತಿವೆ.

ಜೂನ್ 19, 2024ರಂದು ಕೊಲ್ಕತ್ತಾ ಟಿವಿ ಮಾಡಿರುವ ವರದಿಯ ವಿಡಿಯೋ ಕೆಳಗಿದೆ..

ನಾವು ಘಟನೆ ಕುರಿತು ಇನ್ನಷ್ಟು ಮಾಹಿತಿ ಹುಡುಕಿದಾಗ ಇಂಗ್ಲಿಷ್‌ನ ಬೂಮ್ ಸುದ್ದಿ ವೆಬ್‌ಸೈಟ್‌ ಈ ಕುರಿತು ಮಾಡಿರುವ ಫ್ಯಾಕ್ಟ್‌ಚೆಕ್ ಸುದ್ದಿ ದೊರೆತಿದೆ.

ಸುದ್ದಿಯಲ್ಲಿ “ನಾವು ಬರಾಸತ್ ಪೊಲೀಸ್ ಅಧೀಕ್ಷರಾದ ಪ್ರತೀಕ್ಷಾ ಜರ್ಖಾರಿಯಾ ಅವರಿಗೆ ಕರೆ ಮಾಡಿ ಮಹಿಳೆ ಮೇಲಿನ ಹಲ್ಲೆ ಕುರಿತು ವಿಚಾರಿಸಿದ್ದೇವೆ. ಈ ವೇಳೆ ಅವರು ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬ ಸುದ್ದಿಯನ್ನು ಅಲ್ಲಗಳೆದಿದ್ದು, ಮಕ್ಕಳ ಕಳ್ಳಿ ಎಂಬ ಶಂಕೆಯ ಮೇಲೆ ಮಹಿಳೆಗೆ ಸ್ಥಳೀಯರು ಥಳಿಸಿದ್ದಾರೆ. ಹಲ್ಲೆಗೊಳಗಾದವರು ಮುಸ್ಲಿಂ ಮಹಿಳೆ. ಈ ಘಟನೆಯಲ್ಲಿ ಯಾವುದೇ ಕೋಮು ಆಯಾಮ ಇಲ್ಲ” ಎಂದು ತಿಳಿಸಿದ್ದಾಗಿ ಬೂಮ್ ಹೇಳಿದೆ.

‘ಮಕ್ಕಳ ಕಳ್ಳರು’ ಎಂಬ ವದಂತಿ ಹಿನ್ನೆಲೆ ಸ್ಥಳೀಯರು ಥಳಿಸಿರುವ ಎರಡು ಗುಂಪು ಹಲ್ಲೆ ಪ್ರಕರಣಗಳು ಜೂನ್ 19ರಂದು ಬರಾಸತ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೊದಲ ಘಟನೆ ಬೆಳಿಗ್ಗೆ 10:30ರ ಸುಮಾರಿಗೆ 23ನೇ ವಾರ್ಡ್‌ನ ಅಶ್ವಿನಿಪಲ್ಲಿಯ ಮೊಲ್ಲಾಪರದಲ್ಲಿ ನಡೆದಿದೆ. ಇಲ್ಲಿ ವ್ಯಕ್ತಿಯೊಬ್ಬರಿಗೆ ಮಕ್ಕಳ ಕಳ್ಳ ಎಂಬ ಶಂಕೆಯ ಮೇರೆಗೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ. ಎರಡನೇ ಘಟನೆ ವಾರ್ಡ್‌ ಸಂಖ್ಯೆ 29 ಸೆಂಟ್ರಲ್ ಮೋಡರ್ನ್‌ ಶಾಲೆಯ ಎದುರುಗಡೆ ನಡೆದಿದೆ. ಪೋಷಕರು ತಮ್ಮ ಮಕ್ಕಳನ್ನು ಕರೆದೊಯ್ಯಲು ಶಾಲೆಯ ಬಳಿಗೆ ಬಂದಾಗ ಮಹಿಳೆ ಮತ್ತು ಪುರುಷನನ್ನು ಮಕ್ಕಳ ಕಳ್ಳರು ಎಂದು ಶಂಕಿಸಿ ಹಲ್ಲೆ ನಡೆಸಿದ್ದಾರೆ. ವೈರಲ್ ಆಗಿರುವ ಮಹಿಳೆಗೆ ಥಳಿಸಿರುವ ವಿಡಿಯೋ ಎರಡನೇ ಘಟನೆಯದ್ದು ಎಂದು ಎಸ್‌ಪಿ ಪ್ರತೀಕ್ಷಾ ಜರ್ಖಾರಿಯಾ ತಿಳಿಸಿದ್ದಾಗಿ ಬೂಮ್ ವಿವರಿಸಿದೆ.

ಮೆಹರಬಾನು ಬಿಬಿ ಅಲಿಯಾಸ್ ನೆಹ್ರಾ ಬಾನು ಎಂಬ ಅಮಾಯಕ ಮಹಿಳೆಗೆ ಸ್ಥಳೀಯರು ಗುಂಪು ಹಲ್ಲೆ ನಡೆಸಿದ್ದು, ಪೊಲೀಸರು ಆಕೆಯನ್ನು ರಕ್ಷಿಸಲು ಪ್ರಯ್ನಿಸಿದರೂ ಸಾಧ್ಯವಾಗಿಲ್ಲ. ಇವಿಷ್ಟು ಅಲ್ಲದೆ ಈ ಘಟನೆಯಲ್ಲಿ ಯಾವುದೇ ಕೋಮು ವಿಷಯಗಳು ಇಲ್ಲ ಎಂದು ಎಸ್ಪಿ ಹೇಳಿರುವುದಾಗಿ ಬೂಮ್ ತಿಳಿಸಿದೆ.

ಒಟ್ಟಿನಲ್ಲಿ ಮುಸ್ಲಿಮರು ಹಿಂದೂ ಹುಡುಗಿಗೆ ಥಳಿಸಿದ್ದಾರೆ ಎಂಬ ಸಾಮಾಜಿಕ ಜಾಲತಾಣದ ಸುದ್ದಿಯು ಸುಳ್ಳಾಗಿದ್ದು, ಕೋಮು ವೈಷಮ್ಯ ಹರಡುವ ಉದ್ದೇಶ ಹೊಂದಿದೆ ಎಂಬುವುದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ.

ಇದನ್ನೂ ಓದಿ : FACT CHECK : ಮುಸ್ಲಿಂ ಪ್ರೇಮಿಯಿಂದ ಹಿಂದೂ ಯುವತಿಯ ಅತ್ಯಾಚಾರ, ಕೊಲೆ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...