Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

FACT CHECK : ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ” ಎಂದು ಆರೋಪಿಸಿ ವಿಡಿಯೋವೊಂದು ವೈರಲ್ ಆಗಿದೆ.

Vp Murugeshan(@MurugeshanVp) ಎಂಬ ಎಕ್ಸ್ ಖಾತೆಯಲ್ಲಿ ಜುಲೈ 23, 2024 ರಂದು ವಿಡಿಯೋ ಹಂಚಿಕೊಂಡು “ಇದು ಮಣಿಪುರ ಅಲ್ಲ, ಇದು ಪಶ್ಚಿಮ ಬಂಗಾಳ ಮತ್ತು ಮಮತಾ ಅವರ ಹಿಂದೂ ಹುಡುಗಿಯ ಮೇಲೆ ಮುಸ್ಲಿಮರು ಹೇಗೆ ಅಮಾನುಷವಾಗಿ ಹಲ್ಲೆ ಮಾಡಿದರು ಎಂಬುವುದನ್ನು ದಯವಿಟ್ಟು ನೋಡಿ” ಎಂದು ಬರೆದುಕೊಂಡಿದ್ದರು.

ಜುಲೈ 15ರಂದು ಇದೇ ವಿಡಿಯೋವನ್ನು ಜನ ಸಂವಾದ್ 24X7 ಎಂಬ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡು” “ಪೊಲೀಸರ ಮಂದೆಯೇ ಸ್ಥಳೀಯರು ಮಹಿಳೆಯೊಬ್ಬರಿಗೆ ಥಳಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲವೇ?” ಎಂದು ಬರೆದುಕೊಳ್ಳಲಾಗಿತ್ತು.

ಇವಿಷ್ಟೇ ಅಲ್ಲದೆ, ಇತರ ಅನೇಕರು ವಿವಿಧ ಪ್ರತಿಪಾದನೆಗಳೊಂದಿಗೆ ಈ ವಿಡಿಯೋ ಹಂಚಿಕೊಂಡಿದ್ದರು. ವಿಡಿಯೋಗೆ ಕೋಮು ಬಣ್ಣ ಬಳಿದಿರುವುದರಿಂದ ನಾವು ಅದರ ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ.

ಫ್ಯಾಕ್ಟ್‌ಚೆಕ್ : ವಿಡಿಯೋದಲ್ಲಿರುವ ಪೊಲೀಸ್ ವಾಹನದ ಮೇಲೆ ‘ಬರಾಸತ್ ಪೊಲೀಸ್’ ಎಂಬ ಹೆಸರು ಕಾಣಿಸಿದ್ದರಿಂದ ನಾವು ಆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ಮೇಲೆ ಗುಂಪು ಹಲ್ಲೆ ನಡೆದಿರುವ ಯಾವುದಾದರು ಘಟನೆ ನಡೆದಿದೆಯೇ? ಎಂದು ಸುದ್ದಿ ಹುಡುಕಿದ್ದೇವೆ. ಈ ವೇಳೆ ‘ಮಕ್ಕಳ ಕಳ್ಳಿ’ ಎಂಬ ಶಂಕೆಯಿಂದ ಮಹಿಳೆಯೊಬ್ಬರ ಮೇಲೆ ಜನರು ಹಲ್ಲೆ ನಡೆಸಿರುವ ಘಟನೆ ಕುರಿತು ಜೂನ್ 2024ರಲ್ಲಿ ಅನೇಕ ಬಂಗಾಳಿ ಮಾಧ್ಯಮಗಳು ಮಾಡಿರುವ ವರದಿಗಳು ದೊರೆತಿವೆ.

ಜೂನ್ 19, 2024ರಂದು ಕೊಲ್ಕತ್ತಾ ಟಿವಿ ಮಾಡಿರುವ ವರದಿಯ ವಿಡಿಯೋ ಕೆಳಗಿದೆ..

ನಾವು ಘಟನೆ ಕುರಿತು ಇನ್ನಷ್ಟು ಮಾಹಿತಿ ಹುಡುಕಿದಾಗ ಇಂಗ್ಲಿಷ್‌ನ ಬೂಮ್ ಸುದ್ದಿ ವೆಬ್‌ಸೈಟ್‌ ಈ ಕುರಿತು ಮಾಡಿರುವ ಫ್ಯಾಕ್ಟ್‌ಚೆಕ್ ಸುದ್ದಿ ದೊರೆತಿದೆ.

ಸುದ್ದಿಯಲ್ಲಿ “ನಾವು ಬರಾಸತ್ ಪೊಲೀಸ್ ಅಧೀಕ್ಷರಾದ ಪ್ರತೀಕ್ಷಾ ಜರ್ಖಾರಿಯಾ ಅವರಿಗೆ ಕರೆ ಮಾಡಿ ಮಹಿಳೆ ಮೇಲಿನ ಹಲ್ಲೆ ಕುರಿತು ವಿಚಾರಿಸಿದ್ದೇವೆ. ಈ ವೇಳೆ ಅವರು ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬ ಸುದ್ದಿಯನ್ನು ಅಲ್ಲಗಳೆದಿದ್ದು, ಮಕ್ಕಳ ಕಳ್ಳಿ ಎಂಬ ಶಂಕೆಯ ಮೇಲೆ ಮಹಿಳೆಗೆ ಸ್ಥಳೀಯರು ಥಳಿಸಿದ್ದಾರೆ. ಹಲ್ಲೆಗೊಳಗಾದವರು ಮುಸ್ಲಿಂ ಮಹಿಳೆ. ಈ ಘಟನೆಯಲ್ಲಿ ಯಾವುದೇ ಕೋಮು ಆಯಾಮ ಇಲ್ಲ” ಎಂದು ತಿಳಿಸಿದ್ದಾಗಿ ಬೂಮ್ ಹೇಳಿದೆ.

‘ಮಕ್ಕಳ ಕಳ್ಳರು’ ಎಂಬ ವದಂತಿ ಹಿನ್ನೆಲೆ ಸ್ಥಳೀಯರು ಥಳಿಸಿರುವ ಎರಡು ಗುಂಪು ಹಲ್ಲೆ ಪ್ರಕರಣಗಳು ಜೂನ್ 19ರಂದು ಬರಾಸತ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೊದಲ ಘಟನೆ ಬೆಳಿಗ್ಗೆ 10:30ರ ಸುಮಾರಿಗೆ 23ನೇ ವಾರ್ಡ್‌ನ ಅಶ್ವಿನಿಪಲ್ಲಿಯ ಮೊಲ್ಲಾಪರದಲ್ಲಿ ನಡೆದಿದೆ. ಇಲ್ಲಿ ವ್ಯಕ್ತಿಯೊಬ್ಬರಿಗೆ ಮಕ್ಕಳ ಕಳ್ಳ ಎಂಬ ಶಂಕೆಯ ಮೇರೆಗೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ. ಎರಡನೇ ಘಟನೆ ವಾರ್ಡ್‌ ಸಂಖ್ಯೆ 29 ಸೆಂಟ್ರಲ್ ಮೋಡರ್ನ್‌ ಶಾಲೆಯ ಎದುರುಗಡೆ ನಡೆದಿದೆ. ಪೋಷಕರು ತಮ್ಮ ಮಕ್ಕಳನ್ನು ಕರೆದೊಯ್ಯಲು ಶಾಲೆಯ ಬಳಿಗೆ ಬಂದಾಗ ಮಹಿಳೆ ಮತ್ತು ಪುರುಷನನ್ನು ಮಕ್ಕಳ ಕಳ್ಳರು ಎಂದು ಶಂಕಿಸಿ ಹಲ್ಲೆ ನಡೆಸಿದ್ದಾರೆ. ವೈರಲ್ ಆಗಿರುವ ಮಹಿಳೆಗೆ ಥಳಿಸಿರುವ ವಿಡಿಯೋ ಎರಡನೇ ಘಟನೆಯದ್ದು ಎಂದು ಎಸ್‌ಪಿ ಪ್ರತೀಕ್ಷಾ ಜರ್ಖಾರಿಯಾ ತಿಳಿಸಿದ್ದಾಗಿ ಬೂಮ್ ವಿವರಿಸಿದೆ.

ಮೆಹರಬಾನು ಬಿಬಿ ಅಲಿಯಾಸ್ ನೆಹ್ರಾ ಬಾನು ಎಂಬ ಅಮಾಯಕ ಮಹಿಳೆಗೆ ಸ್ಥಳೀಯರು ಗುಂಪು ಹಲ್ಲೆ ನಡೆಸಿದ್ದು, ಪೊಲೀಸರು ಆಕೆಯನ್ನು ರಕ್ಷಿಸಲು ಪ್ರಯ್ನಿಸಿದರೂ ಸಾಧ್ಯವಾಗಿಲ್ಲ. ಇವಿಷ್ಟು ಅಲ್ಲದೆ ಈ ಘಟನೆಯಲ್ಲಿ ಯಾವುದೇ ಕೋಮು ವಿಷಯಗಳು ಇಲ್ಲ ಎಂದು ಎಸ್ಪಿ ಹೇಳಿರುವುದಾಗಿ ಬೂಮ್ ತಿಳಿಸಿದೆ.

ಒಟ್ಟಿನಲ್ಲಿ ಮುಸ್ಲಿಮರು ಹಿಂದೂ ಹುಡುಗಿಗೆ ಥಳಿಸಿದ್ದಾರೆ ಎಂಬ ಸಾಮಾಜಿಕ ಜಾಲತಾಣದ ಸುದ್ದಿಯು ಸುಳ್ಳಾಗಿದ್ದು, ಕೋಮು ವೈಷಮ್ಯ ಹರಡುವ ಉದ್ದೇಶ ಹೊಂದಿದೆ ಎಂಬುವುದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ.

ಇದನ್ನೂ ಓದಿ : FACT CHECK : ಮುಸ್ಲಿಂ ಪ್ರೇಮಿಯಿಂದ ಹಿಂದೂ ಯುವತಿಯ ಅತ್ಯಾಚಾರ, ಕೊಲೆ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...