Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

FACT CHECK : ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ” ಎಂದು ಆರೋಪಿಸಿ ವಿಡಿಯೋವೊಂದು ವೈರಲ್ ಆಗಿದೆ.

Vp Murugeshan(@MurugeshanVp) ಎಂಬ ಎಕ್ಸ್ ಖಾತೆಯಲ್ಲಿ ಜುಲೈ 23, 2024 ರಂದು ವಿಡಿಯೋ ಹಂಚಿಕೊಂಡು “ಇದು ಮಣಿಪುರ ಅಲ್ಲ, ಇದು ಪಶ್ಚಿಮ ಬಂಗಾಳ ಮತ್ತು ಮಮತಾ ಅವರ ಹಿಂದೂ ಹುಡುಗಿಯ ಮೇಲೆ ಮುಸ್ಲಿಮರು ಹೇಗೆ ಅಮಾನುಷವಾಗಿ ಹಲ್ಲೆ ಮಾಡಿದರು ಎಂಬುವುದನ್ನು ದಯವಿಟ್ಟು ನೋಡಿ” ಎಂದು ಬರೆದುಕೊಂಡಿದ್ದರು.

ಜುಲೈ 15ರಂದು ಇದೇ ವಿಡಿಯೋವನ್ನು ಜನ ಸಂವಾದ್ 24X7 ಎಂಬ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡು” “ಪೊಲೀಸರ ಮಂದೆಯೇ ಸ್ಥಳೀಯರು ಮಹಿಳೆಯೊಬ್ಬರಿಗೆ ಥಳಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲವೇ?” ಎಂದು ಬರೆದುಕೊಳ್ಳಲಾಗಿತ್ತು.

ಇವಿಷ್ಟೇ ಅಲ್ಲದೆ, ಇತರ ಅನೇಕರು ವಿವಿಧ ಪ್ರತಿಪಾದನೆಗಳೊಂದಿಗೆ ಈ ವಿಡಿಯೋ ಹಂಚಿಕೊಂಡಿದ್ದರು. ವಿಡಿಯೋಗೆ ಕೋಮು ಬಣ್ಣ ಬಳಿದಿರುವುದರಿಂದ ನಾವು ಅದರ ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ.

ಫ್ಯಾಕ್ಟ್‌ಚೆಕ್ : ವಿಡಿಯೋದಲ್ಲಿರುವ ಪೊಲೀಸ್ ವಾಹನದ ಮೇಲೆ ‘ಬರಾಸತ್ ಪೊಲೀಸ್’ ಎಂಬ ಹೆಸರು ಕಾಣಿಸಿದ್ದರಿಂದ ನಾವು ಆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ಮೇಲೆ ಗುಂಪು ಹಲ್ಲೆ ನಡೆದಿರುವ ಯಾವುದಾದರು ಘಟನೆ ನಡೆದಿದೆಯೇ? ಎಂದು ಸುದ್ದಿ ಹುಡುಕಿದ್ದೇವೆ. ಈ ವೇಳೆ ‘ಮಕ್ಕಳ ಕಳ್ಳಿ’ ಎಂಬ ಶಂಕೆಯಿಂದ ಮಹಿಳೆಯೊಬ್ಬರ ಮೇಲೆ ಜನರು ಹಲ್ಲೆ ನಡೆಸಿರುವ ಘಟನೆ ಕುರಿತು ಜೂನ್ 2024ರಲ್ಲಿ ಅನೇಕ ಬಂಗಾಳಿ ಮಾಧ್ಯಮಗಳು ಮಾಡಿರುವ ವರದಿಗಳು ದೊರೆತಿವೆ.

ಜೂನ್ 19, 2024ರಂದು ಕೊಲ್ಕತ್ತಾ ಟಿವಿ ಮಾಡಿರುವ ವರದಿಯ ವಿಡಿಯೋ ಕೆಳಗಿದೆ..

ನಾವು ಘಟನೆ ಕುರಿತು ಇನ್ನಷ್ಟು ಮಾಹಿತಿ ಹುಡುಕಿದಾಗ ಇಂಗ್ಲಿಷ್‌ನ ಬೂಮ್ ಸುದ್ದಿ ವೆಬ್‌ಸೈಟ್‌ ಈ ಕುರಿತು ಮಾಡಿರುವ ಫ್ಯಾಕ್ಟ್‌ಚೆಕ್ ಸುದ್ದಿ ದೊರೆತಿದೆ.

ಸುದ್ದಿಯಲ್ಲಿ “ನಾವು ಬರಾಸತ್ ಪೊಲೀಸ್ ಅಧೀಕ್ಷರಾದ ಪ್ರತೀಕ್ಷಾ ಜರ್ಖಾರಿಯಾ ಅವರಿಗೆ ಕರೆ ಮಾಡಿ ಮಹಿಳೆ ಮೇಲಿನ ಹಲ್ಲೆ ಕುರಿತು ವಿಚಾರಿಸಿದ್ದೇವೆ. ಈ ವೇಳೆ ಅವರು ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬ ಸುದ್ದಿಯನ್ನು ಅಲ್ಲಗಳೆದಿದ್ದು, ಮಕ್ಕಳ ಕಳ್ಳಿ ಎಂಬ ಶಂಕೆಯ ಮೇಲೆ ಮಹಿಳೆಗೆ ಸ್ಥಳೀಯರು ಥಳಿಸಿದ್ದಾರೆ. ಹಲ್ಲೆಗೊಳಗಾದವರು ಮುಸ್ಲಿಂ ಮಹಿಳೆ. ಈ ಘಟನೆಯಲ್ಲಿ ಯಾವುದೇ ಕೋಮು ಆಯಾಮ ಇಲ್ಲ” ಎಂದು ತಿಳಿಸಿದ್ದಾಗಿ ಬೂಮ್ ಹೇಳಿದೆ.

‘ಮಕ್ಕಳ ಕಳ್ಳರು’ ಎಂಬ ವದಂತಿ ಹಿನ್ನೆಲೆ ಸ್ಥಳೀಯರು ಥಳಿಸಿರುವ ಎರಡು ಗುಂಪು ಹಲ್ಲೆ ಪ್ರಕರಣಗಳು ಜೂನ್ 19ರಂದು ಬರಾಸತ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೊದಲ ಘಟನೆ ಬೆಳಿಗ್ಗೆ 10:30ರ ಸುಮಾರಿಗೆ 23ನೇ ವಾರ್ಡ್‌ನ ಅಶ್ವಿನಿಪಲ್ಲಿಯ ಮೊಲ್ಲಾಪರದಲ್ಲಿ ನಡೆದಿದೆ. ಇಲ್ಲಿ ವ್ಯಕ್ತಿಯೊಬ್ಬರಿಗೆ ಮಕ್ಕಳ ಕಳ್ಳ ಎಂಬ ಶಂಕೆಯ ಮೇರೆಗೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ. ಎರಡನೇ ಘಟನೆ ವಾರ್ಡ್‌ ಸಂಖ್ಯೆ 29 ಸೆಂಟ್ರಲ್ ಮೋಡರ್ನ್‌ ಶಾಲೆಯ ಎದುರುಗಡೆ ನಡೆದಿದೆ. ಪೋಷಕರು ತಮ್ಮ ಮಕ್ಕಳನ್ನು ಕರೆದೊಯ್ಯಲು ಶಾಲೆಯ ಬಳಿಗೆ ಬಂದಾಗ ಮಹಿಳೆ ಮತ್ತು ಪುರುಷನನ್ನು ಮಕ್ಕಳ ಕಳ್ಳರು ಎಂದು ಶಂಕಿಸಿ ಹಲ್ಲೆ ನಡೆಸಿದ್ದಾರೆ. ವೈರಲ್ ಆಗಿರುವ ಮಹಿಳೆಗೆ ಥಳಿಸಿರುವ ವಿಡಿಯೋ ಎರಡನೇ ಘಟನೆಯದ್ದು ಎಂದು ಎಸ್‌ಪಿ ಪ್ರತೀಕ್ಷಾ ಜರ್ಖಾರಿಯಾ ತಿಳಿಸಿದ್ದಾಗಿ ಬೂಮ್ ವಿವರಿಸಿದೆ.

ಮೆಹರಬಾನು ಬಿಬಿ ಅಲಿಯಾಸ್ ನೆಹ್ರಾ ಬಾನು ಎಂಬ ಅಮಾಯಕ ಮಹಿಳೆಗೆ ಸ್ಥಳೀಯರು ಗುಂಪು ಹಲ್ಲೆ ನಡೆಸಿದ್ದು, ಪೊಲೀಸರು ಆಕೆಯನ್ನು ರಕ್ಷಿಸಲು ಪ್ರಯ್ನಿಸಿದರೂ ಸಾಧ್ಯವಾಗಿಲ್ಲ. ಇವಿಷ್ಟು ಅಲ್ಲದೆ ಈ ಘಟನೆಯಲ್ಲಿ ಯಾವುದೇ ಕೋಮು ವಿಷಯಗಳು ಇಲ್ಲ ಎಂದು ಎಸ್ಪಿ ಹೇಳಿರುವುದಾಗಿ ಬೂಮ್ ತಿಳಿಸಿದೆ.

ಒಟ್ಟಿನಲ್ಲಿ ಮುಸ್ಲಿಮರು ಹಿಂದೂ ಹುಡುಗಿಗೆ ಥಳಿಸಿದ್ದಾರೆ ಎಂಬ ಸಾಮಾಜಿಕ ಜಾಲತಾಣದ ಸುದ್ದಿಯು ಸುಳ್ಳಾಗಿದ್ದು, ಕೋಮು ವೈಷಮ್ಯ ಹರಡುವ ಉದ್ದೇಶ ಹೊಂದಿದೆ ಎಂಬುವುದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ.

ಇದನ್ನೂ ಓದಿ : FACT CHECK : ಮುಸ್ಲಿಂ ಪ್ರೇಮಿಯಿಂದ ಹಿಂದೂ ಯುವತಿಯ ಅತ್ಯಾಚಾರ, ಕೊಲೆ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...