HomeUncategorizedFACT CHECK : ಹಿಂದೂ ಮಹಿಳೆಯೊಬ್ಬರು ತನ್ನ ಮಗನನ್ನೇ ಮದುವೆಯಾಗಿದ್ದಾರೆ ಎಂಬುವುದು ಸುಳ್ಳು

FACT CHECK : ಹಿಂದೂ ಮಹಿಳೆಯೊಬ್ಬರು ತನ್ನ ಮಗನನ್ನೇ ಮದುವೆಯಾಗಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಮೂರು ವರ್ಷಗಳ ಹಿಂದೆ ಅಪಘಾತದಲ್ಲಿ ಪತಿ ಸಾವನ್ನಪ್ಪಿದ ನಂತರ ವಿಕಾಸ್ ಪಾಠಕ್ ಎಂಬ ವ್ಯಕ್ತಿ ತನ್ನ ತಾಯಿ ಜ್ಯೋತಿ ಪಾಠಕ್ ಅವರನ್ನು ವಿವಾಹವಾದರು ಎಂದು ಪ್ರತಿಪಾದಿಸಿ ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.

ವಿಡಿಯೋದ ಹಿನ್ನೆಲೆ ಧ್ವನಿಯಲ್ಲಿ ” ಪತಿ ನಿಧನರಾದ ಬಳಿಕ ಜ್ಯೋತಿ ಪಾಠಕ್ ಖಿನ್ನೆತೆಗೆ ಒಳಗಾಗಿದ್ದರು. ಅವರು ಯಾರೊಂದಿಗೂ ಮಾತನಾಡುತ್ತಿರಲಿಲ್ಲ. ಆಕೆ ತನಗೆ ಸಂಗಾತಿಯೊಬ್ಬರ ಅಗತ್ಯವಿದೆ ಎಂದಿದ್ದರು. ಕೊನೆಗೆ ತನ್ನ ಮಗನನ್ನೇ ಮದುವೆಯಾಗುವುದು ಉತ್ತಮ ಎಂದು ನಿರ್ಧರಿಸಿದರು” ಎಂದು ಹೇಳಲಾಗಿದೆ.

@AmjadAsR ಎಂಬ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು “ತಾಯಿ ಮಗನ ನಡುವಿನ ಆಪಾದಿತ ಅನೈತಿಕವಾದ ಮದುವೆ ಗಮನ ಸೆಳೆದಿದೆ. ಇದೇ ರೀತಿಯ ಆರೋಪದ ಆಧಾರದ ಮೇಲೆ ಮುಸ್ಲಿಮರನ್ನು ದೂಷಿಸುವ ಹಿಂದೂಗಳ ಬೂಟಾಟಿಕೆಯನ್ನು ಎತ್ತಿ ತೋರಿಸುತ್ತದೆ”.

@Voice_OfMuslim ಎಂಬ ಮತ್ತೊಂದು ಎಕ್ಸ್‌ ಖಾತೆಯಲ್ಲೂ ಅದೇ ಪ್ರತಿಪಾದನೆಯೊಂದಿಗೆ ವಿಡಿಯೋ ಪೋಸ್ಟ್ ಮಾಡಲಾಗಿದೆ. ಈ ಸುದ್ದಿ ಬರೆಯುವ ಹೊತ್ತಿಗೆ ವಿಡಿಯೋ 1.33 ಲಕ್ಷ ವೀಕ್ಷಣೆ ಪಡೆದಿತ್ತು ಮತ್ತು 2,000 ಕ್ಕೂ ಹೆಚ್ಚು ಬಾರಿ ರೀಟ್ವೀಟ್‌ ಮಾಡಲಾಗಿತ್ತು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ವಿಡಿಯೋದ ಸ್ಕ್ರೀನ್ ಶಾಟ್ ಬಳಸಿ ಸರ್ಚ್ ಮಾಡಿದಾಗ ಫೆಬ್ರವರಿ 2022ರಂದು ಔಟ್‌ಲುಕ್ ಇಂಡಿಯಾ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ವರದಿಯಲ್ಲಿ ಮಹಿಳೆಯ ಹೆಸರನ್ನು ವಿಜಯ ಕುಮಾರಿ ಮತ್ತು ಮಗನ ಹೆಸರನ್ನು ಕನ್ಹಯ್ಯ ಎಂದು ಉಲ್ಲೇಖಿಸಲಾಗಿದೆ.

ವರದಿಯ ಪ್ರಕಾರ, 1993ರಲ್ಲಿ ಕಾನ್ಪುರದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ವಿಜಯ್ ಕುಮಾರಿ, 20 ವರ್ಷಗಳ ಕಾಲ ಜೈಲಿನಲ್ಲಿದ್ದರು. ಅವರ ಮಗ ಕನ್ಹಯ್ಯಾ, 2013 ರಲ್ಲಿ ಜಾಮೀನು ಮೊತ್ತವನ್ನು ಪಾವತಿಸುವ ಮೂಲಕ ತನ್ನ ತಾಯಿಯ ಜೈಲಿನಿಂದ ಬಿಡುಗಡೆಗೊಳಿಸಿದ್ದ. ವಿಜಯ್ ಕುಮಾರಿ ಜೈಲು ಸೇರುವಾಗ ಗರ್ಭಿಣಿಯಾಗಿದ್ದರು. ಆಕೆ ಜೈಲಿನಲ್ಲೇ ಮಗುವಿಗೆ ಜನ್ಮ ನೀಡಿದ್ದರು.

ಈ ಸುದ್ದಿಯನ್ನು ದೃಢೀಕರಿಸಲು ನಾವು ಸಂಬಂಧಿತ ಕೀವರ್ಡ್ ಬಳಸಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ಬಿಬಿಸಿ ನ್ಯೂಸ್, ಟೈಮ್ಸ್ ಆಫ್ ಇಂಡಿಯಾ, ಸಿಎನ್‌ಎನ್‌, ದಿ ಡೈಲಿ ಸ್ಟಾರ್, ಇಂಟರ್ನ್ಯಾಷನಲ್ ಬ್ಯುಸಿನೆಸ್ ಟೈಮ್ಸ್, ನ್ಯೂಯಾರ್ಕ್ ಡೈಲಿ ನ್ಯೂಸ್ ಮುಂತಾದ ಪ್ರಮುಖ ಸುದ್ದಿ ಸಂಸ್ಥೆಗಳು ಪ್ರಕಟಿಸಿದ ಹಲವಾರು ವರದಿಗಳು ಲಭ್ಯವಾಗಿದೆ.

ವರದಿಗಳು ವಿಜಯ ಕುಮಾರಿ ಅವರ ಜೈಲು ಶಿಕ್ಷೆಯ ಬಗ್ಗೆ ವಿವರಿಸಿದೆ. ಶಿಕ್ಷೆಗೆ ಗುರಿಯಾದ ಒಂದು ವರ್ಷದ ಬಳಿಕ ವಿಜಯ ಕುಮಾರಿಗೆ ಜಾಮೀನು ಸಿಕ್ಕಿತ್ತು. ಆದರೆ, ಆಕೆಯ ಪತಿಯಾಗಲಿ ಇತರ ಕುಟುಂಬಸ್ಥರಾಗಲಿ ಜೈಲಿನಿಂದ ಹೊರಗೆ ತರುವ ಪ್ರಯತ್ನ ಮಾಡಿರಲಿಲ್ಲ. ಮಗ ಕನ್ಹಯ್ಯಾ 19 ನೇ ವಯಸ್ಸಿನಿಂದ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡಿ 5 ಸಾವಿರ ರೂ. ದಂಡ ಪಾವತಿಸಿ ತಾಯಿಯನ್ನು ಬಿಡುಗಡೆಗೊಳಿಸಿದ್ದಾನೆ ಎಂದು ತಿಳಿಸಿವೆ.

ನಾವು ನಡೆಸಿದ ಪರಿಶೀಲನೆಯಲ್ಲಿ ” ಸುಮಾರು 20 ವರ್ಷಗಳ ಕಾಲ ಜೈಲಿನಲ್ಲಿದ್ದ ತಾಯಿಯನ್ನು ಮಗ ದಂಡ ಕಟ್ಟಿ ಹೊರಗೆ ಕರೆದುಕೊಂಡು ಬಂದಿರುವ ಫೋಟೋ ವೈರಲ್ ಆಗಿದೆ. ಅದನ್ನು ತಾಯಿ ಮಗನನ್ನು ಮದುವೆಯಾಗಿದ್ದಾರೆ ಎಂದು ಸುಳ್ಳು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಗೊತ್ತಾಗಿದೆ.

ಇದನ್ನೂ ಓದಿ : FACT CHECK : ನ್ಯೂಯಾರ್ಕ್‌ನ ಟೈಮ್ಸ್‌ ಸ್ಕ್ವೇರ್‌ನಲ್ಲಿ ವಿರಾಟ್ ಕೊಹ್ಲಿಯ ಪ್ರತಿಮೆ ಸ್ಥಾಪಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...