HomeUncategorizedFACT CHECK : ಹಿಂದೂ ಮಹಿಳೆಯೊಬ್ಬರು ತನ್ನ ಮಗನನ್ನೇ ಮದುವೆಯಾಗಿದ್ದಾರೆ ಎಂಬುವುದು ಸುಳ್ಳು

FACT CHECK : ಹಿಂದೂ ಮಹಿಳೆಯೊಬ್ಬರು ತನ್ನ ಮಗನನ್ನೇ ಮದುವೆಯಾಗಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಮೂರು ವರ್ಷಗಳ ಹಿಂದೆ ಅಪಘಾತದಲ್ಲಿ ಪತಿ ಸಾವನ್ನಪ್ಪಿದ ನಂತರ ವಿಕಾಸ್ ಪಾಠಕ್ ಎಂಬ ವ್ಯಕ್ತಿ ತನ್ನ ತಾಯಿ ಜ್ಯೋತಿ ಪಾಠಕ್ ಅವರನ್ನು ವಿವಾಹವಾದರು ಎಂದು ಪ್ರತಿಪಾದಿಸಿ ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.

ವಿಡಿಯೋದ ಹಿನ್ನೆಲೆ ಧ್ವನಿಯಲ್ಲಿ ” ಪತಿ ನಿಧನರಾದ ಬಳಿಕ ಜ್ಯೋತಿ ಪಾಠಕ್ ಖಿನ್ನೆತೆಗೆ ಒಳಗಾಗಿದ್ದರು. ಅವರು ಯಾರೊಂದಿಗೂ ಮಾತನಾಡುತ್ತಿರಲಿಲ್ಲ. ಆಕೆ ತನಗೆ ಸಂಗಾತಿಯೊಬ್ಬರ ಅಗತ್ಯವಿದೆ ಎಂದಿದ್ದರು. ಕೊನೆಗೆ ತನ್ನ ಮಗನನ್ನೇ ಮದುವೆಯಾಗುವುದು ಉತ್ತಮ ಎಂದು ನಿರ್ಧರಿಸಿದರು” ಎಂದು ಹೇಳಲಾಗಿದೆ.

@AmjadAsR ಎಂಬ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು “ತಾಯಿ ಮಗನ ನಡುವಿನ ಆಪಾದಿತ ಅನೈತಿಕವಾದ ಮದುವೆ ಗಮನ ಸೆಳೆದಿದೆ. ಇದೇ ರೀತಿಯ ಆರೋಪದ ಆಧಾರದ ಮೇಲೆ ಮುಸ್ಲಿಮರನ್ನು ದೂಷಿಸುವ ಹಿಂದೂಗಳ ಬೂಟಾಟಿಕೆಯನ್ನು ಎತ್ತಿ ತೋರಿಸುತ್ತದೆ”.

@Voice_OfMuslim ಎಂಬ ಮತ್ತೊಂದು ಎಕ್ಸ್‌ ಖಾತೆಯಲ್ಲೂ ಅದೇ ಪ್ರತಿಪಾದನೆಯೊಂದಿಗೆ ವಿಡಿಯೋ ಪೋಸ್ಟ್ ಮಾಡಲಾಗಿದೆ. ಈ ಸುದ್ದಿ ಬರೆಯುವ ಹೊತ್ತಿಗೆ ವಿಡಿಯೋ 1.33 ಲಕ್ಷ ವೀಕ್ಷಣೆ ಪಡೆದಿತ್ತು ಮತ್ತು 2,000 ಕ್ಕೂ ಹೆಚ್ಚು ಬಾರಿ ರೀಟ್ವೀಟ್‌ ಮಾಡಲಾಗಿತ್ತು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ವಿಡಿಯೋದ ಸ್ಕ್ರೀನ್ ಶಾಟ್ ಬಳಸಿ ಸರ್ಚ್ ಮಾಡಿದಾಗ ಫೆಬ್ರವರಿ 2022ರಂದು ಔಟ್‌ಲುಕ್ ಇಂಡಿಯಾ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ವರದಿಯಲ್ಲಿ ಮಹಿಳೆಯ ಹೆಸರನ್ನು ವಿಜಯ ಕುಮಾರಿ ಮತ್ತು ಮಗನ ಹೆಸರನ್ನು ಕನ್ಹಯ್ಯ ಎಂದು ಉಲ್ಲೇಖಿಸಲಾಗಿದೆ.

ವರದಿಯ ಪ್ರಕಾರ, 1993ರಲ್ಲಿ ಕಾನ್ಪುರದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ವಿಜಯ್ ಕುಮಾರಿ, 20 ವರ್ಷಗಳ ಕಾಲ ಜೈಲಿನಲ್ಲಿದ್ದರು. ಅವರ ಮಗ ಕನ್ಹಯ್ಯಾ, 2013 ರಲ್ಲಿ ಜಾಮೀನು ಮೊತ್ತವನ್ನು ಪಾವತಿಸುವ ಮೂಲಕ ತನ್ನ ತಾಯಿಯ ಜೈಲಿನಿಂದ ಬಿಡುಗಡೆಗೊಳಿಸಿದ್ದ. ವಿಜಯ್ ಕುಮಾರಿ ಜೈಲು ಸೇರುವಾಗ ಗರ್ಭಿಣಿಯಾಗಿದ್ದರು. ಆಕೆ ಜೈಲಿನಲ್ಲೇ ಮಗುವಿಗೆ ಜನ್ಮ ನೀಡಿದ್ದರು.

ಈ ಸುದ್ದಿಯನ್ನು ದೃಢೀಕರಿಸಲು ನಾವು ಸಂಬಂಧಿತ ಕೀವರ್ಡ್ ಬಳಸಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ಬಿಬಿಸಿ ನ್ಯೂಸ್, ಟೈಮ್ಸ್ ಆಫ್ ಇಂಡಿಯಾ, ಸಿಎನ್‌ಎನ್‌, ದಿ ಡೈಲಿ ಸ್ಟಾರ್, ಇಂಟರ್ನ್ಯಾಷನಲ್ ಬ್ಯುಸಿನೆಸ್ ಟೈಮ್ಸ್, ನ್ಯೂಯಾರ್ಕ್ ಡೈಲಿ ನ್ಯೂಸ್ ಮುಂತಾದ ಪ್ರಮುಖ ಸುದ್ದಿ ಸಂಸ್ಥೆಗಳು ಪ್ರಕಟಿಸಿದ ಹಲವಾರು ವರದಿಗಳು ಲಭ್ಯವಾಗಿದೆ.

ವರದಿಗಳು ವಿಜಯ ಕುಮಾರಿ ಅವರ ಜೈಲು ಶಿಕ್ಷೆಯ ಬಗ್ಗೆ ವಿವರಿಸಿದೆ. ಶಿಕ್ಷೆಗೆ ಗುರಿಯಾದ ಒಂದು ವರ್ಷದ ಬಳಿಕ ವಿಜಯ ಕುಮಾರಿಗೆ ಜಾಮೀನು ಸಿಕ್ಕಿತ್ತು. ಆದರೆ, ಆಕೆಯ ಪತಿಯಾಗಲಿ ಇತರ ಕುಟುಂಬಸ್ಥರಾಗಲಿ ಜೈಲಿನಿಂದ ಹೊರಗೆ ತರುವ ಪ್ರಯತ್ನ ಮಾಡಿರಲಿಲ್ಲ. ಮಗ ಕನ್ಹಯ್ಯಾ 19 ನೇ ವಯಸ್ಸಿನಿಂದ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡಿ 5 ಸಾವಿರ ರೂ. ದಂಡ ಪಾವತಿಸಿ ತಾಯಿಯನ್ನು ಬಿಡುಗಡೆಗೊಳಿಸಿದ್ದಾನೆ ಎಂದು ತಿಳಿಸಿವೆ.

ನಾವು ನಡೆಸಿದ ಪರಿಶೀಲನೆಯಲ್ಲಿ ” ಸುಮಾರು 20 ವರ್ಷಗಳ ಕಾಲ ಜೈಲಿನಲ್ಲಿದ್ದ ತಾಯಿಯನ್ನು ಮಗ ದಂಡ ಕಟ್ಟಿ ಹೊರಗೆ ಕರೆದುಕೊಂಡು ಬಂದಿರುವ ಫೋಟೋ ವೈರಲ್ ಆಗಿದೆ. ಅದನ್ನು ತಾಯಿ ಮಗನನ್ನು ಮದುವೆಯಾಗಿದ್ದಾರೆ ಎಂದು ಸುಳ್ಳು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಗೊತ್ತಾಗಿದೆ.

ಇದನ್ನೂ ಓದಿ : FACT CHECK : ನ್ಯೂಯಾರ್ಕ್‌ನ ಟೈಮ್ಸ್‌ ಸ್ಕ್ವೇರ್‌ನಲ್ಲಿ ವಿರಾಟ್ ಕೊಹ್ಲಿಯ ಪ್ರತಿಮೆ ಸ್ಥಾಪಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...