HomeUncategorizedFACT CHECK : ಹಿಂದೂ ಮಹಿಳೆಯೊಬ್ಬರು ತನ್ನ ಮಗನನ್ನೇ ಮದುವೆಯಾಗಿದ್ದಾರೆ ಎಂಬುವುದು ಸುಳ್ಳು

FACT CHECK : ಹಿಂದೂ ಮಹಿಳೆಯೊಬ್ಬರು ತನ್ನ ಮಗನನ್ನೇ ಮದುವೆಯಾಗಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಮೂರು ವರ್ಷಗಳ ಹಿಂದೆ ಅಪಘಾತದಲ್ಲಿ ಪತಿ ಸಾವನ್ನಪ್ಪಿದ ನಂತರ ವಿಕಾಸ್ ಪಾಠಕ್ ಎಂಬ ವ್ಯಕ್ತಿ ತನ್ನ ತಾಯಿ ಜ್ಯೋತಿ ಪಾಠಕ್ ಅವರನ್ನು ವಿವಾಹವಾದರು ಎಂದು ಪ್ರತಿಪಾದಿಸಿ ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.

ವಿಡಿಯೋದ ಹಿನ್ನೆಲೆ ಧ್ವನಿಯಲ್ಲಿ ” ಪತಿ ನಿಧನರಾದ ಬಳಿಕ ಜ್ಯೋತಿ ಪಾಠಕ್ ಖಿನ್ನೆತೆಗೆ ಒಳಗಾಗಿದ್ದರು. ಅವರು ಯಾರೊಂದಿಗೂ ಮಾತನಾಡುತ್ತಿರಲಿಲ್ಲ. ಆಕೆ ತನಗೆ ಸಂಗಾತಿಯೊಬ್ಬರ ಅಗತ್ಯವಿದೆ ಎಂದಿದ್ದರು. ಕೊನೆಗೆ ತನ್ನ ಮಗನನ್ನೇ ಮದುವೆಯಾಗುವುದು ಉತ್ತಮ ಎಂದು ನಿರ್ಧರಿಸಿದರು” ಎಂದು ಹೇಳಲಾಗಿದೆ.

@AmjadAsR ಎಂಬ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು “ತಾಯಿ ಮಗನ ನಡುವಿನ ಆಪಾದಿತ ಅನೈತಿಕವಾದ ಮದುವೆ ಗಮನ ಸೆಳೆದಿದೆ. ಇದೇ ರೀತಿಯ ಆರೋಪದ ಆಧಾರದ ಮೇಲೆ ಮುಸ್ಲಿಮರನ್ನು ದೂಷಿಸುವ ಹಿಂದೂಗಳ ಬೂಟಾಟಿಕೆಯನ್ನು ಎತ್ತಿ ತೋರಿಸುತ್ತದೆ”.

@Voice_OfMuslim ಎಂಬ ಮತ್ತೊಂದು ಎಕ್ಸ್‌ ಖಾತೆಯಲ್ಲೂ ಅದೇ ಪ್ರತಿಪಾದನೆಯೊಂದಿಗೆ ವಿಡಿಯೋ ಪೋಸ್ಟ್ ಮಾಡಲಾಗಿದೆ. ಈ ಸುದ್ದಿ ಬರೆಯುವ ಹೊತ್ತಿಗೆ ವಿಡಿಯೋ 1.33 ಲಕ್ಷ ವೀಕ್ಷಣೆ ಪಡೆದಿತ್ತು ಮತ್ತು 2,000 ಕ್ಕೂ ಹೆಚ್ಚು ಬಾರಿ ರೀಟ್ವೀಟ್‌ ಮಾಡಲಾಗಿತ್ತು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ವಿಡಿಯೋದ ಸ್ಕ್ರೀನ್ ಶಾಟ್ ಬಳಸಿ ಸರ್ಚ್ ಮಾಡಿದಾಗ ಫೆಬ್ರವರಿ 2022ರಂದು ಔಟ್‌ಲುಕ್ ಇಂಡಿಯಾ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ವರದಿಯಲ್ಲಿ ಮಹಿಳೆಯ ಹೆಸರನ್ನು ವಿಜಯ ಕುಮಾರಿ ಮತ್ತು ಮಗನ ಹೆಸರನ್ನು ಕನ್ಹಯ್ಯ ಎಂದು ಉಲ್ಲೇಖಿಸಲಾಗಿದೆ.

ವರದಿಯ ಪ್ರಕಾರ, 1993ರಲ್ಲಿ ಕಾನ್ಪುರದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ವಿಜಯ್ ಕುಮಾರಿ, 20 ವರ್ಷಗಳ ಕಾಲ ಜೈಲಿನಲ್ಲಿದ್ದರು. ಅವರ ಮಗ ಕನ್ಹಯ್ಯಾ, 2013 ರಲ್ಲಿ ಜಾಮೀನು ಮೊತ್ತವನ್ನು ಪಾವತಿಸುವ ಮೂಲಕ ತನ್ನ ತಾಯಿಯ ಜೈಲಿನಿಂದ ಬಿಡುಗಡೆಗೊಳಿಸಿದ್ದ. ವಿಜಯ್ ಕುಮಾರಿ ಜೈಲು ಸೇರುವಾಗ ಗರ್ಭಿಣಿಯಾಗಿದ್ದರು. ಆಕೆ ಜೈಲಿನಲ್ಲೇ ಮಗುವಿಗೆ ಜನ್ಮ ನೀಡಿದ್ದರು.

ಈ ಸುದ್ದಿಯನ್ನು ದೃಢೀಕರಿಸಲು ನಾವು ಸಂಬಂಧಿತ ಕೀವರ್ಡ್ ಬಳಸಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ಬಿಬಿಸಿ ನ್ಯೂಸ್, ಟೈಮ್ಸ್ ಆಫ್ ಇಂಡಿಯಾ, ಸಿಎನ್‌ಎನ್‌, ದಿ ಡೈಲಿ ಸ್ಟಾರ್, ಇಂಟರ್ನ್ಯಾಷನಲ್ ಬ್ಯುಸಿನೆಸ್ ಟೈಮ್ಸ್, ನ್ಯೂಯಾರ್ಕ್ ಡೈಲಿ ನ್ಯೂಸ್ ಮುಂತಾದ ಪ್ರಮುಖ ಸುದ್ದಿ ಸಂಸ್ಥೆಗಳು ಪ್ರಕಟಿಸಿದ ಹಲವಾರು ವರದಿಗಳು ಲಭ್ಯವಾಗಿದೆ.

ವರದಿಗಳು ವಿಜಯ ಕುಮಾರಿ ಅವರ ಜೈಲು ಶಿಕ್ಷೆಯ ಬಗ್ಗೆ ವಿವರಿಸಿದೆ. ಶಿಕ್ಷೆಗೆ ಗುರಿಯಾದ ಒಂದು ವರ್ಷದ ಬಳಿಕ ವಿಜಯ ಕುಮಾರಿಗೆ ಜಾಮೀನು ಸಿಕ್ಕಿತ್ತು. ಆದರೆ, ಆಕೆಯ ಪತಿಯಾಗಲಿ ಇತರ ಕುಟುಂಬಸ್ಥರಾಗಲಿ ಜೈಲಿನಿಂದ ಹೊರಗೆ ತರುವ ಪ್ರಯತ್ನ ಮಾಡಿರಲಿಲ್ಲ. ಮಗ ಕನ್ಹಯ್ಯಾ 19 ನೇ ವಯಸ್ಸಿನಿಂದ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡಿ 5 ಸಾವಿರ ರೂ. ದಂಡ ಪಾವತಿಸಿ ತಾಯಿಯನ್ನು ಬಿಡುಗಡೆಗೊಳಿಸಿದ್ದಾನೆ ಎಂದು ತಿಳಿಸಿವೆ.

ನಾವು ನಡೆಸಿದ ಪರಿಶೀಲನೆಯಲ್ಲಿ ” ಸುಮಾರು 20 ವರ್ಷಗಳ ಕಾಲ ಜೈಲಿನಲ್ಲಿದ್ದ ತಾಯಿಯನ್ನು ಮಗ ದಂಡ ಕಟ್ಟಿ ಹೊರಗೆ ಕರೆದುಕೊಂಡು ಬಂದಿರುವ ಫೋಟೋ ವೈರಲ್ ಆಗಿದೆ. ಅದನ್ನು ತಾಯಿ ಮಗನನ್ನು ಮದುವೆಯಾಗಿದ್ದಾರೆ ಎಂದು ಸುಳ್ಳು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಗೊತ್ತಾಗಿದೆ.

ಇದನ್ನೂ ಓದಿ : FACT CHECK : ನ್ಯೂಯಾರ್ಕ್‌ನ ಟೈಮ್ಸ್‌ ಸ್ಕ್ವೇರ್‌ನಲ್ಲಿ ವಿರಾಟ್ ಕೊಹ್ಲಿಯ ಪ್ರತಿಮೆ ಸ್ಥಾಪಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...