HomeUncategorizedFACT CHECK : ಹಿಂದೂ ಮಹಿಳೆಯೊಬ್ಬರು ತನ್ನ ಮಗನನ್ನೇ ಮದುವೆಯಾಗಿದ್ದಾರೆ ಎಂಬುವುದು ಸುಳ್ಳು

FACT CHECK : ಹಿಂದೂ ಮಹಿಳೆಯೊಬ್ಬರು ತನ್ನ ಮಗನನ್ನೇ ಮದುವೆಯಾಗಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಮೂರು ವರ್ಷಗಳ ಹಿಂದೆ ಅಪಘಾತದಲ್ಲಿ ಪತಿ ಸಾವನ್ನಪ್ಪಿದ ನಂತರ ವಿಕಾಸ್ ಪಾಠಕ್ ಎಂಬ ವ್ಯಕ್ತಿ ತನ್ನ ತಾಯಿ ಜ್ಯೋತಿ ಪಾಠಕ್ ಅವರನ್ನು ವಿವಾಹವಾದರು ಎಂದು ಪ್ರತಿಪಾದಿಸಿ ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.

ವಿಡಿಯೋದ ಹಿನ್ನೆಲೆ ಧ್ವನಿಯಲ್ಲಿ ” ಪತಿ ನಿಧನರಾದ ಬಳಿಕ ಜ್ಯೋತಿ ಪಾಠಕ್ ಖಿನ್ನೆತೆಗೆ ಒಳಗಾಗಿದ್ದರು. ಅವರು ಯಾರೊಂದಿಗೂ ಮಾತನಾಡುತ್ತಿರಲಿಲ್ಲ. ಆಕೆ ತನಗೆ ಸಂಗಾತಿಯೊಬ್ಬರ ಅಗತ್ಯವಿದೆ ಎಂದಿದ್ದರು. ಕೊನೆಗೆ ತನ್ನ ಮಗನನ್ನೇ ಮದುವೆಯಾಗುವುದು ಉತ್ತಮ ಎಂದು ನಿರ್ಧರಿಸಿದರು” ಎಂದು ಹೇಳಲಾಗಿದೆ.

@AmjadAsR ಎಂಬ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು “ತಾಯಿ ಮಗನ ನಡುವಿನ ಆಪಾದಿತ ಅನೈತಿಕವಾದ ಮದುವೆ ಗಮನ ಸೆಳೆದಿದೆ. ಇದೇ ರೀತಿಯ ಆರೋಪದ ಆಧಾರದ ಮೇಲೆ ಮುಸ್ಲಿಮರನ್ನು ದೂಷಿಸುವ ಹಿಂದೂಗಳ ಬೂಟಾಟಿಕೆಯನ್ನು ಎತ್ತಿ ತೋರಿಸುತ್ತದೆ”.

@Voice_OfMuslim ಎಂಬ ಮತ್ತೊಂದು ಎಕ್ಸ್‌ ಖಾತೆಯಲ್ಲೂ ಅದೇ ಪ್ರತಿಪಾದನೆಯೊಂದಿಗೆ ವಿಡಿಯೋ ಪೋಸ್ಟ್ ಮಾಡಲಾಗಿದೆ. ಈ ಸುದ್ದಿ ಬರೆಯುವ ಹೊತ್ತಿಗೆ ವಿಡಿಯೋ 1.33 ಲಕ್ಷ ವೀಕ್ಷಣೆ ಪಡೆದಿತ್ತು ಮತ್ತು 2,000 ಕ್ಕೂ ಹೆಚ್ಚು ಬಾರಿ ರೀಟ್ವೀಟ್‌ ಮಾಡಲಾಗಿತ್ತು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ವಿಡಿಯೋದ ಸ್ಕ್ರೀನ್ ಶಾಟ್ ಬಳಸಿ ಸರ್ಚ್ ಮಾಡಿದಾಗ ಫೆಬ್ರವರಿ 2022ರಂದು ಔಟ್‌ಲುಕ್ ಇಂಡಿಯಾ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ವರದಿಯಲ್ಲಿ ಮಹಿಳೆಯ ಹೆಸರನ್ನು ವಿಜಯ ಕುಮಾರಿ ಮತ್ತು ಮಗನ ಹೆಸರನ್ನು ಕನ್ಹಯ್ಯ ಎಂದು ಉಲ್ಲೇಖಿಸಲಾಗಿದೆ.

ವರದಿಯ ಪ್ರಕಾರ, 1993ರಲ್ಲಿ ಕಾನ್ಪುರದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ವಿಜಯ್ ಕುಮಾರಿ, 20 ವರ್ಷಗಳ ಕಾಲ ಜೈಲಿನಲ್ಲಿದ್ದರು. ಅವರ ಮಗ ಕನ್ಹಯ್ಯಾ, 2013 ರಲ್ಲಿ ಜಾಮೀನು ಮೊತ್ತವನ್ನು ಪಾವತಿಸುವ ಮೂಲಕ ತನ್ನ ತಾಯಿಯ ಜೈಲಿನಿಂದ ಬಿಡುಗಡೆಗೊಳಿಸಿದ್ದ. ವಿಜಯ್ ಕುಮಾರಿ ಜೈಲು ಸೇರುವಾಗ ಗರ್ಭಿಣಿಯಾಗಿದ್ದರು. ಆಕೆ ಜೈಲಿನಲ್ಲೇ ಮಗುವಿಗೆ ಜನ್ಮ ನೀಡಿದ್ದರು.

ಈ ಸುದ್ದಿಯನ್ನು ದೃಢೀಕರಿಸಲು ನಾವು ಸಂಬಂಧಿತ ಕೀವರ್ಡ್ ಬಳಸಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ಬಿಬಿಸಿ ನ್ಯೂಸ್, ಟೈಮ್ಸ್ ಆಫ್ ಇಂಡಿಯಾ, ಸಿಎನ್‌ಎನ್‌, ದಿ ಡೈಲಿ ಸ್ಟಾರ್, ಇಂಟರ್ನ್ಯಾಷನಲ್ ಬ್ಯುಸಿನೆಸ್ ಟೈಮ್ಸ್, ನ್ಯೂಯಾರ್ಕ್ ಡೈಲಿ ನ್ಯೂಸ್ ಮುಂತಾದ ಪ್ರಮುಖ ಸುದ್ದಿ ಸಂಸ್ಥೆಗಳು ಪ್ರಕಟಿಸಿದ ಹಲವಾರು ವರದಿಗಳು ಲಭ್ಯವಾಗಿದೆ.

ವರದಿಗಳು ವಿಜಯ ಕುಮಾರಿ ಅವರ ಜೈಲು ಶಿಕ್ಷೆಯ ಬಗ್ಗೆ ವಿವರಿಸಿದೆ. ಶಿಕ್ಷೆಗೆ ಗುರಿಯಾದ ಒಂದು ವರ್ಷದ ಬಳಿಕ ವಿಜಯ ಕುಮಾರಿಗೆ ಜಾಮೀನು ಸಿಕ್ಕಿತ್ತು. ಆದರೆ, ಆಕೆಯ ಪತಿಯಾಗಲಿ ಇತರ ಕುಟುಂಬಸ್ಥರಾಗಲಿ ಜೈಲಿನಿಂದ ಹೊರಗೆ ತರುವ ಪ್ರಯತ್ನ ಮಾಡಿರಲಿಲ್ಲ. ಮಗ ಕನ್ಹಯ್ಯಾ 19 ನೇ ವಯಸ್ಸಿನಿಂದ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡಿ 5 ಸಾವಿರ ರೂ. ದಂಡ ಪಾವತಿಸಿ ತಾಯಿಯನ್ನು ಬಿಡುಗಡೆಗೊಳಿಸಿದ್ದಾನೆ ಎಂದು ತಿಳಿಸಿವೆ.

ನಾವು ನಡೆಸಿದ ಪರಿಶೀಲನೆಯಲ್ಲಿ ” ಸುಮಾರು 20 ವರ್ಷಗಳ ಕಾಲ ಜೈಲಿನಲ್ಲಿದ್ದ ತಾಯಿಯನ್ನು ಮಗ ದಂಡ ಕಟ್ಟಿ ಹೊರಗೆ ಕರೆದುಕೊಂಡು ಬಂದಿರುವ ಫೋಟೋ ವೈರಲ್ ಆಗಿದೆ. ಅದನ್ನು ತಾಯಿ ಮಗನನ್ನು ಮದುವೆಯಾಗಿದ್ದಾರೆ ಎಂದು ಸುಳ್ಳು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಗೊತ್ತಾಗಿದೆ.

ಇದನ್ನೂ ಓದಿ : FACT CHECK : ನ್ಯೂಯಾರ್ಕ್‌ನ ಟೈಮ್ಸ್‌ ಸ್ಕ್ವೇರ್‌ನಲ್ಲಿ ವಿರಾಟ್ ಕೊಹ್ಲಿಯ ಪ್ರತಿಮೆ ಸ್ಥಾಪಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...