Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದೇಶದಲ್ಲಿ ರಸ್ತೆಯಲ್ಲಿ ನಮಾಝ್ ಮಾಡಿದ ಕಾರಣಕ್ಕೆ ಮುಸ್ಲಿಂ ಧರ್ಮಗುರುವನ್ನು ಬಂಧಿಸಲಾಗಿದೆ ಎಂಬುವುದು...

FACT CHECK : ಬಾಂಗ್ಲಾದೇಶದಲ್ಲಿ ರಸ್ತೆಯಲ್ಲಿ ನಮಾಝ್ ಮಾಡಿದ ಕಾರಣಕ್ಕೆ ಮುಸ್ಲಿಂ ಧರ್ಮಗುರುವನ್ನು ಬಂಧಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಇಸ್ಲಾಮಿಕ್ ರಾಷ್ಟ್ರ ಬಾಂಗ್ಲಾದೇಶದಲ್ಲಿ ರಸ್ತೆಯಲ್ಲಿ ನಮಾಝ್ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

“ರಸ್ತೆಯಲ್ಲಿ ನಮಾಝ್ ಮಾಡುತ್ತಿದ್ದ ಮೌಲಾನಾ ಮತ್ತು ಇತರರನ್ನು ಬಾಂಗ್ಲಾದೇಶ ಹೇಗೆ ಓಡಿಸಿದ್ದಾರೆ ನೋಡಿ. ಯಾವುದೇ ಇಸ್ಲಾಮಿಕ್ ರಾಷ್ಟ್ರಗಳು ರಸ್ತೆಯಲ್ಲಿ ನಮಾಝ್ ಮಾಡಲು ಅನುವದಿಸುವುದಿಲ್ಲ. ಸೌದಿಯಲ್ಲಿ ರಸ್ತೆಯಲ್ಲಿ ನಮಾಝ್ ಮಾಡುವ ನಾಟಕ ಆಡುವವರನ್ನು ಬಂಧಿಸಿ ದಂಡ ವಿಧಿಸಲಾಗುತ್ತದೆ. ಭಾರತದಲ್ಲಿ, ರಸ್ತೆ, ಬಸ್ಸುಗಳು, ರೈಲುಗಳು, ನಿಲ್ದಾಣಗಳು, ಉದ್ಯಾನವನಗಳು ಇತ್ಯಾದಿಗಳಲ್ಲಿ ನಮಾಝ್ ಮಾಡಲು ಅನುಮತಿಸದಿದ್ದರೆ, ಅವರು ಮತ್ತು ಅವರ ಮಾಧ್ಯಮ, ವಿರೋಧ ಪಕ್ಷಗಳ ನಿಷ್ಠಾವಂತರು ‘ಸರ್ವಾಧಿಕಾರ’ ಎಂದು ಕರೆಯಲು ಪ್ರಾರಂಭಿಸುತ್ತಾರೆ” ಎಂದು ಪೋಸ್ಟ್‌ಗಳಲ್ಲಿ ಬರೆದುಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಅದರ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಹಿತಿ ಹುಡುಕಿದ್ದೇವೆ. ಈ ವೇಳೆ 19 ಜುಲೈ 2024 ರಂದು ಟಿಆರ್‌ಟಿ ವರ್ಲ್ಡ್ ತನ್ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಿದ ಅದೇ ವಿಡಿಯೋ ಲಭ್ಯವಾಗಿದೆ. “ಅಂತ್ಯಸಂಸ್ಕಾರದ ನೇತೃತ್ವ ವಹಿಸಿದ್ದ ಇಮಾಮ್ ನನ್ನು ಬಾಂಗ್ಲಾದೇಶ ಪೊಲೀಸರು ಬಂಧಿಸಿದ್ದಾರೆ” ಎಂಬ ಶೀರ್ಷಿಕೆಯೊಂದಿಗೆ ಅದನ್ನು ಅಪ್ಲೋಡ್ ಮಾಡಲಾಗಿದೆ.

ಟಿಆರ್‌ಟಿ ವರದಿ ಪ್ರಕಾರ, ವೈರಲ್ ವಿಡಿಯೋ ಬಾಂಗ್ಲಾದೇಶದ ಮುನ್ಶಿಗಂಜ್‌ನಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ಇತ್ತೀಚೆಗೆ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಅಂತ್ಯಕ್ರಿಯೆಯ ಪ್ರಾರ್ಥನೆಯ ನೇತೃತ್ವ ವಹಿಸಿದ್ದ ಇಮಾಮ್ (ಮೌಲಾನಾ) ಅನ್ನು ಪೊಲೀಸರು ಬಂಧಿಸಿದ ಸಂದರ್ಭದ್ದು ಎಂದು ಗೊತ್ತಾಗಿದೆ.

ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ಜುಲೈ 18 ರ ಅಲ್ ಜಝೀರಾ ಸುದ್ದಿ ಸಂಸ್ಥೆಯ ವರದಿಯೂ ನಮಗೆ ಲಭ್ಯವಾಗಿದೆ. ಅದರಲ್ಲೂ ಪ್ರತಿಭಟನೆಯ ಸಂದರ್ಭದಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಅಂತ್ಯಕ್ರಿಯೆಯ ಪ್ರಾರ್ಥನೆಯ ನೇತೃತ್ವ ವಹಿಸಿದ್ದ ಇಮಾಮ್ (ಮೌಲಾನಾ) ಅನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿಸಲಾಗಿದೆ.

ಬಾಂಗ್ಲಾದೇಶದ ಮಾಧ್ಯಮಗಳು ಕೂಡ ಈ ಘಟನೆಯ ಬಗ್ಗೆ ವರದಿ ಮಾಡಿವೆ. ಬಂಧಿತರನ್ನು ಇಮಾಮ್ ಅಬ್ದುರಹ್ಮಾನ್ ಹಿರಾನ್ ಮತ್ತು ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಕ್ಷದ ಸದಸ್ಯ ಕಾರ್ಯದರ್ಶಿ ವಕೀಲ ಮೆಹಬೂಬ್-ಉಲ್-ಆಲಂ ಸ್ವಪನ್ ಎಂದು ತಿಳಿಸಿವೆ. ಅವರು ರಸ್ತೆಯಲ್ಲಿ ನಮಾಝ್ ಮಾಡುತ್ತಿದ್ದರಿಂದ ಗೊಂದಲ ಉಂಟಾಗಿತ್ತು ಎಂದು ಪೊಲೀಸರು ತಿಳಿಸಿದ್ದಾಗಿ ಹೇಳಿವೆ.

ಒಟ್ಟಿನಲ್ಲಿ ವೈರಲ್ ವಿಡಿಯೋ ಪ್ರತಿಭಟನೆ ವೇಳೆ ಮೃತಪಟ್ಟ ವಿದ್ಯಾರ್ಥಿಗಳ ಅಂತಿಮ ಪ್ರಾರ್ಥನೆ ವೇಳೆ ಇಮಾಮ್ ಅನ್ನು ಪೊಲೀಸರು ಬಂಧಿಸಿದ್ದ ಸಂದರ್ಭದ್ದೇ ಹೊರತು, ರಸ್ತೆಯಲ್ಲಿ ನಮಾಝ್ ಮಾಡಿದ ಕಾರಣಕ್ಕೆ ಇಮಾಮ್ ಅನ್ನು ಬಂಧಿಸಿರುವುದು ಅಲ್ಲ. ಅಂತಿಮ ಪ್ರಾರ್ಥನೆ ವೇಳೆ ಇಮಾಮ್ ಅನ್ನು ಪೊಲೀಸರು ಬಂಧಿಸಿರುವುದು ಶಾಂತಿ ಸುವ್ಯವಸ್ಥೆ ಕಾಪಾಡುವ ಕಾರಣಕ್ಕಾಗಿದೆ, ಹೊರತು ರಸ್ತೆಯಲ್ಲಿ ನಮಾಝ್ ಮಾಡಿದ್ದಕ್ಕಲ್ಲ.

ಇದನ್ನೂ ಓದಿ : FACT CHECK : ನ್ಯಾಯಾಲಯದ ಮುಸ್ಲಿಂ ಸಿಬ್ಬಂದಿ ಕುಡಿಯುವ ನೀರಿಗೆ ಉಗುಳಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...