Homeಫ್ಯಾಕ್ಟ್‌ಚೆಕ್Fact Check: ಕೇರಳದ ಮುಸ್ಲಿಂ ವ್ಯಕ್ತಿ ಹಿಂದೂಗಳಿಗೆ ವಿತರಿಸುವ ಹಾಲಿನಲ್ಲಿ ಸ್ನಾನ ಮಾಡಿದ್ದಾರೆ ಎಂಬುವುದು ಸುಳ್ಳು

Fact Check: ಕೇರಳದ ಮುಸ್ಲಿಂ ವ್ಯಕ್ತಿ ಹಿಂದೂಗಳಿಗೆ ವಿತರಿಸುವ ಹಾಲಿನಲ್ಲಿ ಸ್ನಾನ ಮಾಡಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

“ಹಾಲನ್ನು ಹಲಾಲ್ ಮಾಡಲು ಅವರು ಏನು ಮಾಡುತ್ತಾರೆ? ಹಾಲಿನಲ್ಲಿ ಸ್ನಾನ ಮಾಡಿ ಹಿಂದೂಗಳಿಗೆ ಹಂಚುತ್ತಾರೆ” ಎಂಬ ಬರಹದೊಂದಿಗೆ ವ್ಯಕ್ತಿಯೊಬ್ಬರು ಹಾಲಿನಲ್ಲಿ ಸ್ನಾನ ಮಾಡುವ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

Tathvam-asi(@ssaratht) ಎಂಬ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, “ಕೇರಳದ ಮುಸ್ಲಿಂ ವ್ಯಕ್ತಿ ಹಾಲನ್ನು ಹಲಾಲ್ ಮಾಡಲು ಅದರಲ್ಲಿ ಸ್ನಾನ ಮಾಡಿದ್ದಾರೆ” ಎಂದು ಹೇಳಲಾಗಿದೆ.

ಪೋಸ್ಟ್ ಲಿಂಕ್ 

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ನಾವು ವೈರಲ್ ವಿಡಿಯೋವನ್ನು ಗೂಗಲ್‌ನಲ್ಲಿ ಹುಡುಕಾಡಿದಾಗ ನವೆಂಬರ್ 9,2020ರಂದು ಎನ್‌ಡಿ ಟಿವಿ ವಿಡಿಯೋ ಕುರಿತು ಪ್ರಕಟಿಸಿದ ಸುದ್ದಿಯೊಂದು ದೊರೆತಿದೆ. ಸುದ್ದಿಯಲ್ಲಿ “ಕೆಲಸಗಾರನೊಬ್ಬ ಹಾಲಿನ ತೊಟ್ಟಿಯಲ್ಲಿ ಸ್ನಾನ ಮಾಡುತ್ತಿರುವ ದೃಶ್ಯಗಳು ಆನ್‌ಲೈನ್‌ನಲ್ಲಿ ವೈರಲ್ ಆದ ಬಳಿಕ ಟರ್ಕಿ(ತುರ್ಕಿ) ಯಲ್ಲಿ ಡೈರಿ ಪ್ಲಾಂಟ್ ಅನ್ನು ಮುಚ್ಚಲಾಗಿದೆ ಎಂದು ತಿಳಿಸಲಾಗಿದೆ.

ಟಿಕ್‌ಟಾಕ್‌ನಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ “ಒಬ್ಬ ವ್ಯಕ್ತಿ ಹಾಲು ತುಂಬಿದ ದೊಡ್ಡ ಕಡಾಯಿಯಲ್ಲಿ ಕುಳಿತು, ಮಗ್‌ನಲ್ಲಿ ಹಾಲನ್ನು ತನ್ನ ತಲೆಯ ಮೇಲೆ ಸುರಿಯುತ್ತಿರುವುದು ಕಾಣಬಹುದು ಎಂದು ಹೇಳಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

‘hurriyetdailynews.com’ಎಂಬ ವೆಬ್‌ಸೈಟ್‌ ನವೆಂಬರ್ 6, 2020ರಂದು ಪ್ರಕಟಿಸಿದ ಸುದ್ದಿಯಲ್ಲಿ “ಸೆಂಟ್ರಲ್ ಅನಾಟೋಲಿಯನ್ ಪ್ರಾಂತ್ಯದ ಕೊನ್ಯಾದಲ್ಲಿ ಡೈರಿ ಪ್ಲಾಂಟ್‌ನಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬ ಕಡಾಯಿಯಲ್ಲಿ ಮಾರಾಟಕ್ಕೆ ಸಿದ್ಧಪಡಿಸಿದ ಹಾಲಿನಲ್ಲಿ ಸ್ನಾನ ಮಾಡುವ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ ಎಂದು ಹೇಳಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಟರ್ಕಿಯ ಸುದ್ದಿ ವೆಬ್‌ಸೈಟ್‌ trthaber.com ಜೂನ್ 10,2022 ರ ಪ್ರಕಟಿಸಿದ ಸುದ್ದಿಯಲ್ಲೂ “ಟರ್ಕಿಯ ಕೊನ್ಯಾ ಎಂಬಲ್ಲಿನ ಹಾಲಿನ ಡೈರಿಯಲ್ಲಿ, ಅಲ್ಲಿನ ಉದ್ಯೋಗಿ ಎಮ್ರೆ ಸಯಾರ್ ಎಂಬಾತ ಹಾಲಿನ ಕಡಾಯಿಯಲ್ಲಿ ಸ್ನಾನ ಮಾಡಿದ್ದಾರೆ. ಅದನ್ನು ಆತನ ಸಹೊದ್ಯೋಗಿ ಉಗುರ್ ತುರ್ಗುಟ್ ವಿಡಿಯೋ ಮಾಡಿ ಟಿಕ್‌ ಟಾಕ್‌ನಲ್ಲಿ ಅಪ್ಲೋಡ್ ಮಾಡಿದ್ದಾರೆ. ವಿಡಿಯೋ ವೈರಲ್ ಆದ ನಂತರ ಇಬ್ಬರನ್ನೂ ಬಂಧಿಸಲಾಗಿದೆ” ಎಂದು ಹೇಳಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ನಾವು ನಡೆಸಿದ ಪರಿಶೀಲನೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹೇಳಿದಂತೆ ಕೇರಳದ ವ್ಯಕ್ತಿ ಹಾಲನ್ನು ಹಲಾಲ್ ಮಾಡಲು, ಅದರಲ್ಲಿ ಸ್ನಾನ ಮಾಡಿದ್ದಾರೆ. ಹಿಂದೂಗಳಿಗೆ ಹಂಚುವ ಹಾಲಿನಲ್ಲಿ ಮುಸ್ಲಿಂ ವ್ಯಕ್ತಿ ಸ್ನಾನ ಮಾಡಿದ್ದಾರೆ ಎಂಬುವುದು ಸುಳ್ಳು ಎಂದು ತಿಳಿದು ಬಂದಿದೆ.

ವೈರಲ್ ವಿಡಿಯೋ ಟರ್ಕಿಯ ಕೊನ್ಯಾ ಎಂಬಲ್ಲಿನ ಹಾಲಿನ ಡೈರಿಯಲ್ಲಿ ವ್ಯಕ್ತಿಯೊಬ್ಬ ಹಾಲಿನ ತೊಟ್ಟಿಯಲ್ಲಿ ಸ್ನಾನ ಮಾಡಿ, ಅದನ್ನು ವಿಡಿಯೋ ಮಾಡಿ ಹರಿಬಿಟ್ಟಿದ್ದು ಎಂದು ಖಚಿತವಾಗಿದೆ. 

ಇದನ್ನೂ ಓದಿ : Fact Check: ಮೋದಿ ಗೆಲ್ತಾರೆ ಎಂದಿದ್ದಕ್ಕೆ ತಮಿಳುನಾಡಿನಲ್ಲಿ ಗಿಣಿ ಶಾಸ್ತ್ರದವರನ್ನು ಬಂಧಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...