Homeಫ್ಯಾಕ್ಟ್‌ಚೆಕ್Fact Check: ಕೇರಳದ ಮುಸ್ಲಿಂ ವ್ಯಕ್ತಿ ಹಿಂದೂಗಳಿಗೆ ವಿತರಿಸುವ ಹಾಲಿನಲ್ಲಿ ಸ್ನಾನ ಮಾಡಿದ್ದಾರೆ ಎಂಬುವುದು ಸುಳ್ಳು

Fact Check: ಕೇರಳದ ಮುಸ್ಲಿಂ ವ್ಯಕ್ತಿ ಹಿಂದೂಗಳಿಗೆ ವಿತರಿಸುವ ಹಾಲಿನಲ್ಲಿ ಸ್ನಾನ ಮಾಡಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

“ಹಾಲನ್ನು ಹಲಾಲ್ ಮಾಡಲು ಅವರು ಏನು ಮಾಡುತ್ತಾರೆ? ಹಾಲಿನಲ್ಲಿ ಸ್ನಾನ ಮಾಡಿ ಹಿಂದೂಗಳಿಗೆ ಹಂಚುತ್ತಾರೆ” ಎಂಬ ಬರಹದೊಂದಿಗೆ ವ್ಯಕ್ತಿಯೊಬ್ಬರು ಹಾಲಿನಲ್ಲಿ ಸ್ನಾನ ಮಾಡುವ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

Tathvam-asi(@ssaratht) ಎಂಬ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, “ಕೇರಳದ ಮುಸ್ಲಿಂ ವ್ಯಕ್ತಿ ಹಾಲನ್ನು ಹಲಾಲ್ ಮಾಡಲು ಅದರಲ್ಲಿ ಸ್ನಾನ ಮಾಡಿದ್ದಾರೆ” ಎಂದು ಹೇಳಲಾಗಿದೆ.

ಪೋಸ್ಟ್ ಲಿಂಕ್ 

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ನಾವು ವೈರಲ್ ವಿಡಿಯೋವನ್ನು ಗೂಗಲ್‌ನಲ್ಲಿ ಹುಡುಕಾಡಿದಾಗ ನವೆಂಬರ್ 9,2020ರಂದು ಎನ್‌ಡಿ ಟಿವಿ ವಿಡಿಯೋ ಕುರಿತು ಪ್ರಕಟಿಸಿದ ಸುದ್ದಿಯೊಂದು ದೊರೆತಿದೆ. ಸುದ್ದಿಯಲ್ಲಿ “ಕೆಲಸಗಾರನೊಬ್ಬ ಹಾಲಿನ ತೊಟ್ಟಿಯಲ್ಲಿ ಸ್ನಾನ ಮಾಡುತ್ತಿರುವ ದೃಶ್ಯಗಳು ಆನ್‌ಲೈನ್‌ನಲ್ಲಿ ವೈರಲ್ ಆದ ಬಳಿಕ ಟರ್ಕಿ(ತುರ್ಕಿ) ಯಲ್ಲಿ ಡೈರಿ ಪ್ಲಾಂಟ್ ಅನ್ನು ಮುಚ್ಚಲಾಗಿದೆ ಎಂದು ತಿಳಿಸಲಾಗಿದೆ.

ಟಿಕ್‌ಟಾಕ್‌ನಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ “ಒಬ್ಬ ವ್ಯಕ್ತಿ ಹಾಲು ತುಂಬಿದ ದೊಡ್ಡ ಕಡಾಯಿಯಲ್ಲಿ ಕುಳಿತು, ಮಗ್‌ನಲ್ಲಿ ಹಾಲನ್ನು ತನ್ನ ತಲೆಯ ಮೇಲೆ ಸುರಿಯುತ್ತಿರುವುದು ಕಾಣಬಹುದು ಎಂದು ಹೇಳಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

‘hurriyetdailynews.com’ಎಂಬ ವೆಬ್‌ಸೈಟ್‌ ನವೆಂಬರ್ 6, 2020ರಂದು ಪ್ರಕಟಿಸಿದ ಸುದ್ದಿಯಲ್ಲಿ “ಸೆಂಟ್ರಲ್ ಅನಾಟೋಲಿಯನ್ ಪ್ರಾಂತ್ಯದ ಕೊನ್ಯಾದಲ್ಲಿ ಡೈರಿ ಪ್ಲಾಂಟ್‌ನಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬ ಕಡಾಯಿಯಲ್ಲಿ ಮಾರಾಟಕ್ಕೆ ಸಿದ್ಧಪಡಿಸಿದ ಹಾಲಿನಲ್ಲಿ ಸ್ನಾನ ಮಾಡುವ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ ಎಂದು ಹೇಳಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಟರ್ಕಿಯ ಸುದ್ದಿ ವೆಬ್‌ಸೈಟ್‌ trthaber.com ಜೂನ್ 10,2022 ರ ಪ್ರಕಟಿಸಿದ ಸುದ್ದಿಯಲ್ಲೂ “ಟರ್ಕಿಯ ಕೊನ್ಯಾ ಎಂಬಲ್ಲಿನ ಹಾಲಿನ ಡೈರಿಯಲ್ಲಿ, ಅಲ್ಲಿನ ಉದ್ಯೋಗಿ ಎಮ್ರೆ ಸಯಾರ್ ಎಂಬಾತ ಹಾಲಿನ ಕಡಾಯಿಯಲ್ಲಿ ಸ್ನಾನ ಮಾಡಿದ್ದಾರೆ. ಅದನ್ನು ಆತನ ಸಹೊದ್ಯೋಗಿ ಉಗುರ್ ತುರ್ಗುಟ್ ವಿಡಿಯೋ ಮಾಡಿ ಟಿಕ್‌ ಟಾಕ್‌ನಲ್ಲಿ ಅಪ್ಲೋಡ್ ಮಾಡಿದ್ದಾರೆ. ವಿಡಿಯೋ ವೈರಲ್ ಆದ ನಂತರ ಇಬ್ಬರನ್ನೂ ಬಂಧಿಸಲಾಗಿದೆ” ಎಂದು ಹೇಳಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ನಾವು ನಡೆಸಿದ ಪರಿಶೀಲನೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹೇಳಿದಂತೆ ಕೇರಳದ ವ್ಯಕ್ತಿ ಹಾಲನ್ನು ಹಲಾಲ್ ಮಾಡಲು, ಅದರಲ್ಲಿ ಸ್ನಾನ ಮಾಡಿದ್ದಾರೆ. ಹಿಂದೂಗಳಿಗೆ ಹಂಚುವ ಹಾಲಿನಲ್ಲಿ ಮುಸ್ಲಿಂ ವ್ಯಕ್ತಿ ಸ್ನಾನ ಮಾಡಿದ್ದಾರೆ ಎಂಬುವುದು ಸುಳ್ಳು ಎಂದು ತಿಳಿದು ಬಂದಿದೆ.

ವೈರಲ್ ವಿಡಿಯೋ ಟರ್ಕಿಯ ಕೊನ್ಯಾ ಎಂಬಲ್ಲಿನ ಹಾಲಿನ ಡೈರಿಯಲ್ಲಿ ವ್ಯಕ್ತಿಯೊಬ್ಬ ಹಾಲಿನ ತೊಟ್ಟಿಯಲ್ಲಿ ಸ್ನಾನ ಮಾಡಿ, ಅದನ್ನು ವಿಡಿಯೋ ಮಾಡಿ ಹರಿಬಿಟ್ಟಿದ್ದು ಎಂದು ಖಚಿತವಾಗಿದೆ. 

ಇದನ್ನೂ ಓದಿ : Fact Check: ಮೋದಿ ಗೆಲ್ತಾರೆ ಎಂದಿದ್ದಕ್ಕೆ ತಮಿಳುನಾಡಿನಲ್ಲಿ ಗಿಣಿ ಶಾಸ್ತ್ರದವರನ್ನು ಬಂಧಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...