Homeಫ್ಯಾಕ್ಟ್‌ಚೆಕ್Fact Check: ಕೇರಳದ ಮುಸ್ಲಿಂ ವ್ಯಕ್ತಿ ಹಿಂದೂಗಳಿಗೆ ವಿತರಿಸುವ ಹಾಲಿನಲ್ಲಿ ಸ್ನಾನ ಮಾಡಿದ್ದಾರೆ ಎಂಬುವುದು ಸುಳ್ಳು

Fact Check: ಕೇರಳದ ಮುಸ್ಲಿಂ ವ್ಯಕ್ತಿ ಹಿಂದೂಗಳಿಗೆ ವಿತರಿಸುವ ಹಾಲಿನಲ್ಲಿ ಸ್ನಾನ ಮಾಡಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

“ಹಾಲನ್ನು ಹಲಾಲ್ ಮಾಡಲು ಅವರು ಏನು ಮಾಡುತ್ತಾರೆ? ಹಾಲಿನಲ್ಲಿ ಸ್ನಾನ ಮಾಡಿ ಹಿಂದೂಗಳಿಗೆ ಹಂಚುತ್ತಾರೆ” ಎಂಬ ಬರಹದೊಂದಿಗೆ ವ್ಯಕ್ತಿಯೊಬ್ಬರು ಹಾಲಿನಲ್ಲಿ ಸ್ನಾನ ಮಾಡುವ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

Tathvam-asi(@ssaratht) ಎಂಬ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, “ಕೇರಳದ ಮುಸ್ಲಿಂ ವ್ಯಕ್ತಿ ಹಾಲನ್ನು ಹಲಾಲ್ ಮಾಡಲು ಅದರಲ್ಲಿ ಸ್ನಾನ ಮಾಡಿದ್ದಾರೆ” ಎಂದು ಹೇಳಲಾಗಿದೆ.

ಪೋಸ್ಟ್ ಲಿಂಕ್ 

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ನಾವು ವೈರಲ್ ವಿಡಿಯೋವನ್ನು ಗೂಗಲ್‌ನಲ್ಲಿ ಹುಡುಕಾಡಿದಾಗ ನವೆಂಬರ್ 9,2020ರಂದು ಎನ್‌ಡಿ ಟಿವಿ ವಿಡಿಯೋ ಕುರಿತು ಪ್ರಕಟಿಸಿದ ಸುದ್ದಿಯೊಂದು ದೊರೆತಿದೆ. ಸುದ್ದಿಯಲ್ಲಿ “ಕೆಲಸಗಾರನೊಬ್ಬ ಹಾಲಿನ ತೊಟ್ಟಿಯಲ್ಲಿ ಸ್ನಾನ ಮಾಡುತ್ತಿರುವ ದೃಶ್ಯಗಳು ಆನ್‌ಲೈನ್‌ನಲ್ಲಿ ವೈರಲ್ ಆದ ಬಳಿಕ ಟರ್ಕಿ(ತುರ್ಕಿ) ಯಲ್ಲಿ ಡೈರಿ ಪ್ಲಾಂಟ್ ಅನ್ನು ಮುಚ್ಚಲಾಗಿದೆ ಎಂದು ತಿಳಿಸಲಾಗಿದೆ.

ಟಿಕ್‌ಟಾಕ್‌ನಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ “ಒಬ್ಬ ವ್ಯಕ್ತಿ ಹಾಲು ತುಂಬಿದ ದೊಡ್ಡ ಕಡಾಯಿಯಲ್ಲಿ ಕುಳಿತು, ಮಗ್‌ನಲ್ಲಿ ಹಾಲನ್ನು ತನ್ನ ತಲೆಯ ಮೇಲೆ ಸುರಿಯುತ್ತಿರುವುದು ಕಾಣಬಹುದು ಎಂದು ಹೇಳಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

‘hurriyetdailynews.com’ಎಂಬ ವೆಬ್‌ಸೈಟ್‌ ನವೆಂಬರ್ 6, 2020ರಂದು ಪ್ರಕಟಿಸಿದ ಸುದ್ದಿಯಲ್ಲಿ “ಸೆಂಟ್ರಲ್ ಅನಾಟೋಲಿಯನ್ ಪ್ರಾಂತ್ಯದ ಕೊನ್ಯಾದಲ್ಲಿ ಡೈರಿ ಪ್ಲಾಂಟ್‌ನಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬ ಕಡಾಯಿಯಲ್ಲಿ ಮಾರಾಟಕ್ಕೆ ಸಿದ್ಧಪಡಿಸಿದ ಹಾಲಿನಲ್ಲಿ ಸ್ನಾನ ಮಾಡುವ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ ಎಂದು ಹೇಳಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಟರ್ಕಿಯ ಸುದ್ದಿ ವೆಬ್‌ಸೈಟ್‌ trthaber.com ಜೂನ್ 10,2022 ರ ಪ್ರಕಟಿಸಿದ ಸುದ್ದಿಯಲ್ಲೂ “ಟರ್ಕಿಯ ಕೊನ್ಯಾ ಎಂಬಲ್ಲಿನ ಹಾಲಿನ ಡೈರಿಯಲ್ಲಿ, ಅಲ್ಲಿನ ಉದ್ಯೋಗಿ ಎಮ್ರೆ ಸಯಾರ್ ಎಂಬಾತ ಹಾಲಿನ ಕಡಾಯಿಯಲ್ಲಿ ಸ್ನಾನ ಮಾಡಿದ್ದಾರೆ. ಅದನ್ನು ಆತನ ಸಹೊದ್ಯೋಗಿ ಉಗುರ್ ತುರ್ಗುಟ್ ವಿಡಿಯೋ ಮಾಡಿ ಟಿಕ್‌ ಟಾಕ್‌ನಲ್ಲಿ ಅಪ್ಲೋಡ್ ಮಾಡಿದ್ದಾರೆ. ವಿಡಿಯೋ ವೈರಲ್ ಆದ ನಂತರ ಇಬ್ಬರನ್ನೂ ಬಂಧಿಸಲಾಗಿದೆ” ಎಂದು ಹೇಳಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ನಾವು ನಡೆಸಿದ ಪರಿಶೀಲನೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹೇಳಿದಂತೆ ಕೇರಳದ ವ್ಯಕ್ತಿ ಹಾಲನ್ನು ಹಲಾಲ್ ಮಾಡಲು, ಅದರಲ್ಲಿ ಸ್ನಾನ ಮಾಡಿದ್ದಾರೆ. ಹಿಂದೂಗಳಿಗೆ ಹಂಚುವ ಹಾಲಿನಲ್ಲಿ ಮುಸ್ಲಿಂ ವ್ಯಕ್ತಿ ಸ್ನಾನ ಮಾಡಿದ್ದಾರೆ ಎಂಬುವುದು ಸುಳ್ಳು ಎಂದು ತಿಳಿದು ಬಂದಿದೆ.

ವೈರಲ್ ವಿಡಿಯೋ ಟರ್ಕಿಯ ಕೊನ್ಯಾ ಎಂಬಲ್ಲಿನ ಹಾಲಿನ ಡೈರಿಯಲ್ಲಿ ವ್ಯಕ್ತಿಯೊಬ್ಬ ಹಾಲಿನ ತೊಟ್ಟಿಯಲ್ಲಿ ಸ್ನಾನ ಮಾಡಿ, ಅದನ್ನು ವಿಡಿಯೋ ಮಾಡಿ ಹರಿಬಿಟ್ಟಿದ್ದು ಎಂದು ಖಚಿತವಾಗಿದೆ. 

ಇದನ್ನೂ ಓದಿ : Fact Check: ಮೋದಿ ಗೆಲ್ತಾರೆ ಎಂದಿದ್ದಕ್ಕೆ ತಮಿಳುನಾಡಿನಲ್ಲಿ ಗಿಣಿ ಶಾಸ್ತ್ರದವರನ್ನು ಬಂಧಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...