Homeಫ್ಯಾಕ್ಟ್‌ಚೆಕ್Fact Check: ಕೇರಳದ ಮುಸ್ಲಿಂ ವ್ಯಕ್ತಿ ಹಿಂದೂಗಳಿಗೆ ವಿತರಿಸುವ ಹಾಲಿನಲ್ಲಿ ಸ್ನಾನ ಮಾಡಿದ್ದಾರೆ ಎಂಬುವುದು ಸುಳ್ಳು

Fact Check: ಕೇರಳದ ಮುಸ್ಲಿಂ ವ್ಯಕ್ತಿ ಹಿಂದೂಗಳಿಗೆ ವಿತರಿಸುವ ಹಾಲಿನಲ್ಲಿ ಸ್ನಾನ ಮಾಡಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

“ಹಾಲನ್ನು ಹಲಾಲ್ ಮಾಡಲು ಅವರು ಏನು ಮಾಡುತ್ತಾರೆ? ಹಾಲಿನಲ್ಲಿ ಸ್ನಾನ ಮಾಡಿ ಹಿಂದೂಗಳಿಗೆ ಹಂಚುತ್ತಾರೆ” ಎಂಬ ಬರಹದೊಂದಿಗೆ ವ್ಯಕ್ತಿಯೊಬ್ಬರು ಹಾಲಿನಲ್ಲಿ ಸ್ನಾನ ಮಾಡುವ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

Tathvam-asi(@ssaratht) ಎಂಬ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, “ಕೇರಳದ ಮುಸ್ಲಿಂ ವ್ಯಕ್ತಿ ಹಾಲನ್ನು ಹಲಾಲ್ ಮಾಡಲು ಅದರಲ್ಲಿ ಸ್ನಾನ ಮಾಡಿದ್ದಾರೆ” ಎಂದು ಹೇಳಲಾಗಿದೆ.

ಪೋಸ್ಟ್ ಲಿಂಕ್ 

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ನಾವು ವೈರಲ್ ವಿಡಿಯೋವನ್ನು ಗೂಗಲ್‌ನಲ್ಲಿ ಹುಡುಕಾಡಿದಾಗ ನವೆಂಬರ್ 9,2020ರಂದು ಎನ್‌ಡಿ ಟಿವಿ ವಿಡಿಯೋ ಕುರಿತು ಪ್ರಕಟಿಸಿದ ಸುದ್ದಿಯೊಂದು ದೊರೆತಿದೆ. ಸುದ್ದಿಯಲ್ಲಿ “ಕೆಲಸಗಾರನೊಬ್ಬ ಹಾಲಿನ ತೊಟ್ಟಿಯಲ್ಲಿ ಸ್ನಾನ ಮಾಡುತ್ತಿರುವ ದೃಶ್ಯಗಳು ಆನ್‌ಲೈನ್‌ನಲ್ಲಿ ವೈರಲ್ ಆದ ಬಳಿಕ ಟರ್ಕಿ(ತುರ್ಕಿ) ಯಲ್ಲಿ ಡೈರಿ ಪ್ಲಾಂಟ್ ಅನ್ನು ಮುಚ್ಚಲಾಗಿದೆ ಎಂದು ತಿಳಿಸಲಾಗಿದೆ.

ಟಿಕ್‌ಟಾಕ್‌ನಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ “ಒಬ್ಬ ವ್ಯಕ್ತಿ ಹಾಲು ತುಂಬಿದ ದೊಡ್ಡ ಕಡಾಯಿಯಲ್ಲಿ ಕುಳಿತು, ಮಗ್‌ನಲ್ಲಿ ಹಾಲನ್ನು ತನ್ನ ತಲೆಯ ಮೇಲೆ ಸುರಿಯುತ್ತಿರುವುದು ಕಾಣಬಹುದು ಎಂದು ಹೇಳಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

‘hurriyetdailynews.com’ಎಂಬ ವೆಬ್‌ಸೈಟ್‌ ನವೆಂಬರ್ 6, 2020ರಂದು ಪ್ರಕಟಿಸಿದ ಸುದ್ದಿಯಲ್ಲಿ “ಸೆಂಟ್ರಲ್ ಅನಾಟೋಲಿಯನ್ ಪ್ರಾಂತ್ಯದ ಕೊನ್ಯಾದಲ್ಲಿ ಡೈರಿ ಪ್ಲಾಂಟ್‌ನಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬ ಕಡಾಯಿಯಲ್ಲಿ ಮಾರಾಟಕ್ಕೆ ಸಿದ್ಧಪಡಿಸಿದ ಹಾಲಿನಲ್ಲಿ ಸ್ನಾನ ಮಾಡುವ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ ಎಂದು ಹೇಳಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಟರ್ಕಿಯ ಸುದ್ದಿ ವೆಬ್‌ಸೈಟ್‌ trthaber.com ಜೂನ್ 10,2022 ರ ಪ್ರಕಟಿಸಿದ ಸುದ್ದಿಯಲ್ಲೂ “ಟರ್ಕಿಯ ಕೊನ್ಯಾ ಎಂಬಲ್ಲಿನ ಹಾಲಿನ ಡೈರಿಯಲ್ಲಿ, ಅಲ್ಲಿನ ಉದ್ಯೋಗಿ ಎಮ್ರೆ ಸಯಾರ್ ಎಂಬಾತ ಹಾಲಿನ ಕಡಾಯಿಯಲ್ಲಿ ಸ್ನಾನ ಮಾಡಿದ್ದಾರೆ. ಅದನ್ನು ಆತನ ಸಹೊದ್ಯೋಗಿ ಉಗುರ್ ತುರ್ಗುಟ್ ವಿಡಿಯೋ ಮಾಡಿ ಟಿಕ್‌ ಟಾಕ್‌ನಲ್ಲಿ ಅಪ್ಲೋಡ್ ಮಾಡಿದ್ದಾರೆ. ವಿಡಿಯೋ ವೈರಲ್ ಆದ ನಂತರ ಇಬ್ಬರನ್ನೂ ಬಂಧಿಸಲಾಗಿದೆ” ಎಂದು ಹೇಳಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ನಾವು ನಡೆಸಿದ ಪರಿಶೀಲನೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹೇಳಿದಂತೆ ಕೇರಳದ ವ್ಯಕ್ತಿ ಹಾಲನ್ನು ಹಲಾಲ್ ಮಾಡಲು, ಅದರಲ್ಲಿ ಸ್ನಾನ ಮಾಡಿದ್ದಾರೆ. ಹಿಂದೂಗಳಿಗೆ ಹಂಚುವ ಹಾಲಿನಲ್ಲಿ ಮುಸ್ಲಿಂ ವ್ಯಕ್ತಿ ಸ್ನಾನ ಮಾಡಿದ್ದಾರೆ ಎಂಬುವುದು ಸುಳ್ಳು ಎಂದು ತಿಳಿದು ಬಂದಿದೆ.

ವೈರಲ್ ವಿಡಿಯೋ ಟರ್ಕಿಯ ಕೊನ್ಯಾ ಎಂಬಲ್ಲಿನ ಹಾಲಿನ ಡೈರಿಯಲ್ಲಿ ವ್ಯಕ್ತಿಯೊಬ್ಬ ಹಾಲಿನ ತೊಟ್ಟಿಯಲ್ಲಿ ಸ್ನಾನ ಮಾಡಿ, ಅದನ್ನು ವಿಡಿಯೋ ಮಾಡಿ ಹರಿಬಿಟ್ಟಿದ್ದು ಎಂದು ಖಚಿತವಾಗಿದೆ. 

ಇದನ್ನೂ ಓದಿ : Fact Check: ಮೋದಿ ಗೆಲ್ತಾರೆ ಎಂದಿದ್ದಕ್ಕೆ ತಮಿಳುನಾಡಿನಲ್ಲಿ ಗಿಣಿ ಶಾಸ್ತ್ರದವರನ್ನು ಬಂಧಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...