Homeಫ್ಯಾಕ್ಟ್‌ಚೆಕ್Fact Check: ಕೇರಳದ ಮುಸ್ಲಿಂ ವ್ಯಕ್ತಿ ಹಿಂದೂಗಳಿಗೆ ವಿತರಿಸುವ ಹಾಲಿನಲ್ಲಿ ಸ್ನಾನ ಮಾಡಿದ್ದಾರೆ ಎಂಬುವುದು ಸುಳ್ಳು

Fact Check: ಕೇರಳದ ಮುಸ್ಲಿಂ ವ್ಯಕ್ತಿ ಹಿಂದೂಗಳಿಗೆ ವಿತರಿಸುವ ಹಾಲಿನಲ್ಲಿ ಸ್ನಾನ ಮಾಡಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

“ಹಾಲನ್ನು ಹಲಾಲ್ ಮಾಡಲು ಅವರು ಏನು ಮಾಡುತ್ತಾರೆ? ಹಾಲಿನಲ್ಲಿ ಸ್ನಾನ ಮಾಡಿ ಹಿಂದೂಗಳಿಗೆ ಹಂಚುತ್ತಾರೆ” ಎಂಬ ಬರಹದೊಂದಿಗೆ ವ್ಯಕ್ತಿಯೊಬ್ಬರು ಹಾಲಿನಲ್ಲಿ ಸ್ನಾನ ಮಾಡುವ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

Tathvam-asi(@ssaratht) ಎಂಬ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, “ಕೇರಳದ ಮುಸ್ಲಿಂ ವ್ಯಕ್ತಿ ಹಾಲನ್ನು ಹಲಾಲ್ ಮಾಡಲು ಅದರಲ್ಲಿ ಸ್ನಾನ ಮಾಡಿದ್ದಾರೆ” ಎಂದು ಹೇಳಲಾಗಿದೆ.

ಪೋಸ್ಟ್ ಲಿಂಕ್ 

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ನಾವು ವೈರಲ್ ವಿಡಿಯೋವನ್ನು ಗೂಗಲ್‌ನಲ್ಲಿ ಹುಡುಕಾಡಿದಾಗ ನವೆಂಬರ್ 9,2020ರಂದು ಎನ್‌ಡಿ ಟಿವಿ ವಿಡಿಯೋ ಕುರಿತು ಪ್ರಕಟಿಸಿದ ಸುದ್ದಿಯೊಂದು ದೊರೆತಿದೆ. ಸುದ್ದಿಯಲ್ಲಿ “ಕೆಲಸಗಾರನೊಬ್ಬ ಹಾಲಿನ ತೊಟ್ಟಿಯಲ್ಲಿ ಸ್ನಾನ ಮಾಡುತ್ತಿರುವ ದೃಶ್ಯಗಳು ಆನ್‌ಲೈನ್‌ನಲ್ಲಿ ವೈರಲ್ ಆದ ಬಳಿಕ ಟರ್ಕಿ(ತುರ್ಕಿ) ಯಲ್ಲಿ ಡೈರಿ ಪ್ಲಾಂಟ್ ಅನ್ನು ಮುಚ್ಚಲಾಗಿದೆ ಎಂದು ತಿಳಿಸಲಾಗಿದೆ.

ಟಿಕ್‌ಟಾಕ್‌ನಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ “ಒಬ್ಬ ವ್ಯಕ್ತಿ ಹಾಲು ತುಂಬಿದ ದೊಡ್ಡ ಕಡಾಯಿಯಲ್ಲಿ ಕುಳಿತು, ಮಗ್‌ನಲ್ಲಿ ಹಾಲನ್ನು ತನ್ನ ತಲೆಯ ಮೇಲೆ ಸುರಿಯುತ್ತಿರುವುದು ಕಾಣಬಹುದು ಎಂದು ಹೇಳಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

‘hurriyetdailynews.com’ಎಂಬ ವೆಬ್‌ಸೈಟ್‌ ನವೆಂಬರ್ 6, 2020ರಂದು ಪ್ರಕಟಿಸಿದ ಸುದ್ದಿಯಲ್ಲಿ “ಸೆಂಟ್ರಲ್ ಅನಾಟೋಲಿಯನ್ ಪ್ರಾಂತ್ಯದ ಕೊನ್ಯಾದಲ್ಲಿ ಡೈರಿ ಪ್ಲಾಂಟ್‌ನಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬ ಕಡಾಯಿಯಲ್ಲಿ ಮಾರಾಟಕ್ಕೆ ಸಿದ್ಧಪಡಿಸಿದ ಹಾಲಿನಲ್ಲಿ ಸ್ನಾನ ಮಾಡುವ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ ಎಂದು ಹೇಳಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಟರ್ಕಿಯ ಸುದ್ದಿ ವೆಬ್‌ಸೈಟ್‌ trthaber.com ಜೂನ್ 10,2022 ರ ಪ್ರಕಟಿಸಿದ ಸುದ್ದಿಯಲ್ಲೂ “ಟರ್ಕಿಯ ಕೊನ್ಯಾ ಎಂಬಲ್ಲಿನ ಹಾಲಿನ ಡೈರಿಯಲ್ಲಿ, ಅಲ್ಲಿನ ಉದ್ಯೋಗಿ ಎಮ್ರೆ ಸಯಾರ್ ಎಂಬಾತ ಹಾಲಿನ ಕಡಾಯಿಯಲ್ಲಿ ಸ್ನಾನ ಮಾಡಿದ್ದಾರೆ. ಅದನ್ನು ಆತನ ಸಹೊದ್ಯೋಗಿ ಉಗುರ್ ತುರ್ಗುಟ್ ವಿಡಿಯೋ ಮಾಡಿ ಟಿಕ್‌ ಟಾಕ್‌ನಲ್ಲಿ ಅಪ್ಲೋಡ್ ಮಾಡಿದ್ದಾರೆ. ವಿಡಿಯೋ ವೈರಲ್ ಆದ ನಂತರ ಇಬ್ಬರನ್ನೂ ಬಂಧಿಸಲಾಗಿದೆ” ಎಂದು ಹೇಳಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ನಾವು ನಡೆಸಿದ ಪರಿಶೀಲನೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹೇಳಿದಂತೆ ಕೇರಳದ ವ್ಯಕ್ತಿ ಹಾಲನ್ನು ಹಲಾಲ್ ಮಾಡಲು, ಅದರಲ್ಲಿ ಸ್ನಾನ ಮಾಡಿದ್ದಾರೆ. ಹಿಂದೂಗಳಿಗೆ ಹಂಚುವ ಹಾಲಿನಲ್ಲಿ ಮುಸ್ಲಿಂ ವ್ಯಕ್ತಿ ಸ್ನಾನ ಮಾಡಿದ್ದಾರೆ ಎಂಬುವುದು ಸುಳ್ಳು ಎಂದು ತಿಳಿದು ಬಂದಿದೆ.

ವೈರಲ್ ವಿಡಿಯೋ ಟರ್ಕಿಯ ಕೊನ್ಯಾ ಎಂಬಲ್ಲಿನ ಹಾಲಿನ ಡೈರಿಯಲ್ಲಿ ವ್ಯಕ್ತಿಯೊಬ್ಬ ಹಾಲಿನ ತೊಟ್ಟಿಯಲ್ಲಿ ಸ್ನಾನ ಮಾಡಿ, ಅದನ್ನು ವಿಡಿಯೋ ಮಾಡಿ ಹರಿಬಿಟ್ಟಿದ್ದು ಎಂದು ಖಚಿತವಾಗಿದೆ. 

ಇದನ್ನೂ ಓದಿ : Fact Check: ಮೋದಿ ಗೆಲ್ತಾರೆ ಎಂದಿದ್ದಕ್ಕೆ ತಮಿಳುನಾಡಿನಲ್ಲಿ ಗಿಣಿ ಶಾಸ್ತ್ರದವರನ್ನು ಬಂಧಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...