Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಹತ್ಯೆಗೈದಿದ್ದಾನೆ ಎಂಬುವುದು ಸುಳ್ಳು

FACT CHECK : ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಹತ್ಯೆಗೈದಿದ್ದಾನೆ ಎಂಬುವುದು ಸುಳ್ಳು

- Advertisement -
- Advertisement -

ಜನನಿಬಿಡ ರಸ್ತೆಯ ಮಧ್ಯದಲ್ಲಿ ಯುವತಿಯ ಶವದ ಬಳಿ ಯುವಕನೊಬ್ಬ ನಿಂತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಅನೇಕರು, ಸಲೀಂ ಎಂಬ ಮುಸ್ಲಿಂ ಯುವಕ ಆರತಿ ಎಂಬ ಹಿಂದೂ ಹುಡುಗಿಯನ್ನು ಕೊಲೆ ಮಾಡಿದ್ದಾನೆ ಎಂದು ಬರೆದುಕೊಂಡಿದ್ದಾರೆ.

ಒಟ್ಟು 24 ಸೆಕೆಂಡ್‌ನ ವಿಡಿಯೋದಲ್ಲಿ ಯುವಕ ತನ್ನ ಎಡೆಗೈಯಲ್ಲಿ ಸ್ಪ್ಯಾನರ್ ಹಿಡಿದು ನಿಂತಿದ್ದರೆ, ಯುವತಿಯ ಶವ ರಸ್ತೆ ಮಧ್ಯ ಇದೆ. ಸುತ್ತಲು ಹಲವಾರು ಜನರು ಸುಮ್ಮನೆ ನಿಂತು ನೋಡುವ ದೃಶ್ಯವಿದೆ.

ವಿಡಿಯೋ ಹಂಚಿಕೊಂಡಿರುವ ಅನೇಕರು ” ಸಲೀಂ ಆರತಿಗೆ ಪ್ರೇಮ ನಿವೇದನೆ (ಪ್ರಪೋಸ್) ಮಾಡಿದ್ದ. ಆದರೆ, ಆರತಿ ಅದನ್ನು ತಿರಸ್ಕರಿಸಿದ್ದಳು.ಈ ಕಾರಣಕ್ಕೆ ಸಲೀಂ ಆರತಿಯನ್ನು ನಡು ರಸ್ತೆಯಲ್ಲಿ ಹತ್ಯೆ ಮಾಡಿ ಶವದ ಪಕ್ಕದಲ್ಲೇ ನಿಂತಿದ್ದಾನೆ. ಆತನಿಗೆ ಏನೂ ಹೇಳಲು ಯಾರಿಗೂ ಧೈರ್ಯವಿಲ್ಲ” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದ ಪೋಸ್ಟ್‌ನ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಯುವತಿಯನ್ನು ಯುವಕನೋರ್ವ ಹತ್ಯೆ ಮಾಡಿರುವುದು ಹೌದು. ಆದರೆ, ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಹತ್ಯೆ ಮಾಡಿದ್ದಾನೆ ಎಂಬ ಪ್ರತಿಪಾದನೆ ಸುಳ್ಳು ಎಂದು ತಿಳಿದು ಬಂದಿದೆ.

ಜೂನ್ 18, 2024ರಂದು ಬೆಳಿಗ್ಗೆ 8:30ರ ಸುಮಾರಿಗೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಪೂರ್ವ ವಾಸಿ ಪ್ರದೇಶದ ಚಿಂಚ್‌ಪಾಡದಲ್ಲಿ ಯುವತಿಯ ಹತ್ಯೆ ಘಟನೆ ನಡೆದಿದೆ. ಆರೋಪಿ 29 ವರ್ಷದ ರೋಹಿತ್ ಯಾದವ್ ಮತ್ತು ಮೃತ ಯುವತಿ 22 ವರ್ಷದ ಆರತಿ ಯಾದವ್ ಎಂದು ತಿಳಿದು ಬಂದಿದೆ.

ದಿ ಇಂಡಿಯನ್ ಎಕ್ಸ್‌ ಪ್ರೆಸ್ ವರದಿಯ ಪ್ರಕಾರ, “ಮೃತ ಯುವತಿ ಆರತಿ ಆರೋಪಿ ರೋಹಿತ್‌ನ ಮಾಜಿ ಪ್ರೇಯಸಿಯಾಗಿದ್ದು, ಆಕೆ ಇತ್ತೀಚೆಗೆ ಇನ್ನೊಬ್ಬ ಯುವಕನ ಜೊತೆ ಸುತ್ತಾಡುತ್ತಿದ್ದಳು. ಅದನ್ನು ನೋಡಿ ಕುಪಿತಗೊಂಡ ರೋಹಿತ್ ಯಾದವ್ ಹಾಡಹಗಲೇ ರಸ್ತೆ ಮಧ್ಯೆ ಸ್ಫ್ಯಾನರ್‌ನಿಂದ ತಲೆಗೆ ಹೊಡೆದು ಆರತಿಯನ್ನು ಹತ್ಯೆ ಮಾಡಿದ್ದಾನೆ”.

ಹಿಂದುಸ್ತಾನ್ ಟೈಮ್ಸ್‌ ವರದಿಯ ಪ್ರಕಾರ, “ಆರತಿಯನ್ನು ಹಿಂಬಾಲಿಸಿಕೊಂಡು ಬಂದ ರೋಹಿತ್, ರಸ್ತೆ ಮಧ್ಯೆ ಹಿಂಬದಿಯಿಂದ ಆಕೆಯ ತಲೆಗೆ ಸ್ಪ್ಯಾನರ್ ಮೂಲಕ ಹೊಡೆದಿದ್ದಾನೆ. ಆಕೆ ನೆಲಕ್ಕೆ ಬಿದ್ದಾಗ ಆಕೆಯ ತಲೆಗೆ ಹೊಡೆಯುವುದನ್ನು ಮುಂದುವರೆಸಿದ್ದಾನೆ. ಸ್ವಲ್ಪ ಹೊತ್ತಿನಲ್ಲೇ ರಕ್ತದ ಮಡುವಿನಲ್ಲಿ ಆರತಿ ಪ್ರಾಣ ಬಿಟ್ಟಿದ್ದಾಳೆ. ಸುತ್ತಮುತ್ತಲಿದ್ದ ಜನ ಈ ಕೃತ್ಯವನ್ನು ಸುಮ್ಮನೆ ನಿಂತು ನೋಡಿದ್ದಾರೆ”.

“ಪೊಲೀಸರ ಪ್ರಕಾರ, ರೋಹಿತ್ ಮತ್ತು ಆರತಿ ಇಬ್ಬರೂ ನಲಸೊಪರ ಮೂಲದವರು. ಇಬ್ಬರು ಸುಮಾರು 6 ವರ್ಷಗಳ ಕಾಲ ಸಂಪರ್ಕದಲ್ಲಿದ್ದರು. ಪೂರ್ವ ವಾಸಿಯ ಫ್ಯಾಕ್ಟರಿಯೊಂದರಲ್ಲಿ ಆರತಿ ಕೆಲಸ ಮಾಡುತ್ತಿದ್ದಳು. ನಿರೋದ್ಯೋಗಿಯಾಗಿದ್ದ ರೋಹಿತ್, ಇತ್ತೀಚೆಗೆ ಆರತಿ ಪುರುಷ ಸಹೋದ್ಯೋಗಿಗಳ ಜೊತೆ ಸುತ್ತಾಡುವುದನ್ನು ನೋಡಿ ಕುಪಿತಗೊಂಡಿದ್ದ. ಇದು ಇಬ್ಬರ ನಡುವೆ ಗಲಾಟೆಗೆ ಕಾರಣವಾಗಿತ್ತು. ಇದೇ ಕೋಪದಲ್ಲಿ ಆತ ಆರತಿಯನ್ನು ಹತ್ಯೆ ಮಾಡಿದ್ದಾನೆ”.

ನಾವು ನಡೆಸಿದ ಪರಿಶೀಲನೆಯಲ್ಲಿ ಆರತಿ ಎಂಬ ಯುವತಿಯನ್ನು ಹತ್ಯೆ ಮಾಡಿದವನ ಹೆಸರು ರೋಹಿತ್ ಯಾದವ್, ಸಲೀಂ ಅಲ್ಲ ಎಂದು ತಿಳಿದು ಬಂದಿದೆ. ಆರೋಪಿ ಮುಸ್ಲಿಂ ಎಂದು ಬಿಂಬಿಸಿ ಘಟನೆಗೆ ಕೋಮು ಬಣ್ಣ ಹಚ್ಚುವ ಪ್ರಯತ್ನ ನಡೆದಿರುವ ಹಿನ್ನೆಲೆ ನಾವು ಸತ್ಯಾಸತ್ಯತೆ ತೆರೆದಿಟ್ಟಿದ್ದೇವೆ. ಅಲ್ಲದೆ, ಕೊಲೆ ಪ್ರಕರಣದಲ್ಲಿ ಕೋಮು ಹುಡುಕುವ ಪ್ರಯತ್ನ ಇದಲ್ಲ.

ಇದನ್ನೂ ಓದಿ : FACT CHECK : ನೀಟ್ ಅಕ್ರಮದ ಆರೋಪಿಗಳನ್ನು ಕಾಂಗ್ರೆಸ್ ಕಚೇರಿಯಿಂದ ಬಂಧಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...