Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಹತ್ಯೆಗೈದಿದ್ದಾನೆ ಎಂಬುವುದು ಸುಳ್ಳು

FACT CHECK : ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಹತ್ಯೆಗೈದಿದ್ದಾನೆ ಎಂಬುವುದು ಸುಳ್ಳು

- Advertisement -
- Advertisement -

ಜನನಿಬಿಡ ರಸ್ತೆಯ ಮಧ್ಯದಲ್ಲಿ ಯುವತಿಯ ಶವದ ಬಳಿ ಯುವಕನೊಬ್ಬ ನಿಂತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಅನೇಕರು, ಸಲೀಂ ಎಂಬ ಮುಸ್ಲಿಂ ಯುವಕ ಆರತಿ ಎಂಬ ಹಿಂದೂ ಹುಡುಗಿಯನ್ನು ಕೊಲೆ ಮಾಡಿದ್ದಾನೆ ಎಂದು ಬರೆದುಕೊಂಡಿದ್ದಾರೆ.

ಒಟ್ಟು 24 ಸೆಕೆಂಡ್‌ನ ವಿಡಿಯೋದಲ್ಲಿ ಯುವಕ ತನ್ನ ಎಡೆಗೈಯಲ್ಲಿ ಸ್ಪ್ಯಾನರ್ ಹಿಡಿದು ನಿಂತಿದ್ದರೆ, ಯುವತಿಯ ಶವ ರಸ್ತೆ ಮಧ್ಯ ಇದೆ. ಸುತ್ತಲು ಹಲವಾರು ಜನರು ಸುಮ್ಮನೆ ನಿಂತು ನೋಡುವ ದೃಶ್ಯವಿದೆ.

ವಿಡಿಯೋ ಹಂಚಿಕೊಂಡಿರುವ ಅನೇಕರು ” ಸಲೀಂ ಆರತಿಗೆ ಪ್ರೇಮ ನಿವೇದನೆ (ಪ್ರಪೋಸ್) ಮಾಡಿದ್ದ. ಆದರೆ, ಆರತಿ ಅದನ್ನು ತಿರಸ್ಕರಿಸಿದ್ದಳು.ಈ ಕಾರಣಕ್ಕೆ ಸಲೀಂ ಆರತಿಯನ್ನು ನಡು ರಸ್ತೆಯಲ್ಲಿ ಹತ್ಯೆ ಮಾಡಿ ಶವದ ಪಕ್ಕದಲ್ಲೇ ನಿಂತಿದ್ದಾನೆ. ಆತನಿಗೆ ಏನೂ ಹೇಳಲು ಯಾರಿಗೂ ಧೈರ್ಯವಿಲ್ಲ” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದ ಪೋಸ್ಟ್‌ನ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಯುವತಿಯನ್ನು ಯುವಕನೋರ್ವ ಹತ್ಯೆ ಮಾಡಿರುವುದು ಹೌದು. ಆದರೆ, ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಹತ್ಯೆ ಮಾಡಿದ್ದಾನೆ ಎಂಬ ಪ್ರತಿಪಾದನೆ ಸುಳ್ಳು ಎಂದು ತಿಳಿದು ಬಂದಿದೆ.

ಜೂನ್ 18, 2024ರಂದು ಬೆಳಿಗ್ಗೆ 8:30ರ ಸುಮಾರಿಗೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಪೂರ್ವ ವಾಸಿ ಪ್ರದೇಶದ ಚಿಂಚ್‌ಪಾಡದಲ್ಲಿ ಯುವತಿಯ ಹತ್ಯೆ ಘಟನೆ ನಡೆದಿದೆ. ಆರೋಪಿ 29 ವರ್ಷದ ರೋಹಿತ್ ಯಾದವ್ ಮತ್ತು ಮೃತ ಯುವತಿ 22 ವರ್ಷದ ಆರತಿ ಯಾದವ್ ಎಂದು ತಿಳಿದು ಬಂದಿದೆ.

ದಿ ಇಂಡಿಯನ್ ಎಕ್ಸ್‌ ಪ್ರೆಸ್ ವರದಿಯ ಪ್ರಕಾರ, “ಮೃತ ಯುವತಿ ಆರತಿ ಆರೋಪಿ ರೋಹಿತ್‌ನ ಮಾಜಿ ಪ್ರೇಯಸಿಯಾಗಿದ್ದು, ಆಕೆ ಇತ್ತೀಚೆಗೆ ಇನ್ನೊಬ್ಬ ಯುವಕನ ಜೊತೆ ಸುತ್ತಾಡುತ್ತಿದ್ದಳು. ಅದನ್ನು ನೋಡಿ ಕುಪಿತಗೊಂಡ ರೋಹಿತ್ ಯಾದವ್ ಹಾಡಹಗಲೇ ರಸ್ತೆ ಮಧ್ಯೆ ಸ್ಫ್ಯಾನರ್‌ನಿಂದ ತಲೆಗೆ ಹೊಡೆದು ಆರತಿಯನ್ನು ಹತ್ಯೆ ಮಾಡಿದ್ದಾನೆ”.

ಹಿಂದುಸ್ತಾನ್ ಟೈಮ್ಸ್‌ ವರದಿಯ ಪ್ರಕಾರ, “ಆರತಿಯನ್ನು ಹಿಂಬಾಲಿಸಿಕೊಂಡು ಬಂದ ರೋಹಿತ್, ರಸ್ತೆ ಮಧ್ಯೆ ಹಿಂಬದಿಯಿಂದ ಆಕೆಯ ತಲೆಗೆ ಸ್ಪ್ಯಾನರ್ ಮೂಲಕ ಹೊಡೆದಿದ್ದಾನೆ. ಆಕೆ ನೆಲಕ್ಕೆ ಬಿದ್ದಾಗ ಆಕೆಯ ತಲೆಗೆ ಹೊಡೆಯುವುದನ್ನು ಮುಂದುವರೆಸಿದ್ದಾನೆ. ಸ್ವಲ್ಪ ಹೊತ್ತಿನಲ್ಲೇ ರಕ್ತದ ಮಡುವಿನಲ್ಲಿ ಆರತಿ ಪ್ರಾಣ ಬಿಟ್ಟಿದ್ದಾಳೆ. ಸುತ್ತಮುತ್ತಲಿದ್ದ ಜನ ಈ ಕೃತ್ಯವನ್ನು ಸುಮ್ಮನೆ ನಿಂತು ನೋಡಿದ್ದಾರೆ”.

“ಪೊಲೀಸರ ಪ್ರಕಾರ, ರೋಹಿತ್ ಮತ್ತು ಆರತಿ ಇಬ್ಬರೂ ನಲಸೊಪರ ಮೂಲದವರು. ಇಬ್ಬರು ಸುಮಾರು 6 ವರ್ಷಗಳ ಕಾಲ ಸಂಪರ್ಕದಲ್ಲಿದ್ದರು. ಪೂರ್ವ ವಾಸಿಯ ಫ್ಯಾಕ್ಟರಿಯೊಂದರಲ್ಲಿ ಆರತಿ ಕೆಲಸ ಮಾಡುತ್ತಿದ್ದಳು. ನಿರೋದ್ಯೋಗಿಯಾಗಿದ್ದ ರೋಹಿತ್, ಇತ್ತೀಚೆಗೆ ಆರತಿ ಪುರುಷ ಸಹೋದ್ಯೋಗಿಗಳ ಜೊತೆ ಸುತ್ತಾಡುವುದನ್ನು ನೋಡಿ ಕುಪಿತಗೊಂಡಿದ್ದ. ಇದು ಇಬ್ಬರ ನಡುವೆ ಗಲಾಟೆಗೆ ಕಾರಣವಾಗಿತ್ತು. ಇದೇ ಕೋಪದಲ್ಲಿ ಆತ ಆರತಿಯನ್ನು ಹತ್ಯೆ ಮಾಡಿದ್ದಾನೆ”.

ನಾವು ನಡೆಸಿದ ಪರಿಶೀಲನೆಯಲ್ಲಿ ಆರತಿ ಎಂಬ ಯುವತಿಯನ್ನು ಹತ್ಯೆ ಮಾಡಿದವನ ಹೆಸರು ರೋಹಿತ್ ಯಾದವ್, ಸಲೀಂ ಅಲ್ಲ ಎಂದು ತಿಳಿದು ಬಂದಿದೆ. ಆರೋಪಿ ಮುಸ್ಲಿಂ ಎಂದು ಬಿಂಬಿಸಿ ಘಟನೆಗೆ ಕೋಮು ಬಣ್ಣ ಹಚ್ಚುವ ಪ್ರಯತ್ನ ನಡೆದಿರುವ ಹಿನ್ನೆಲೆ ನಾವು ಸತ್ಯಾಸತ್ಯತೆ ತೆರೆದಿಟ್ಟಿದ್ದೇವೆ. ಅಲ್ಲದೆ, ಕೊಲೆ ಪ್ರಕರಣದಲ್ಲಿ ಕೋಮು ಹುಡುಕುವ ಪ್ರಯತ್ನ ಇದಲ್ಲ.

ಇದನ್ನೂ ಓದಿ : FACT CHECK : ನೀಟ್ ಅಕ್ರಮದ ಆರೋಪಿಗಳನ್ನು ಕಾಂಗ್ರೆಸ್ ಕಚೇರಿಯಿಂದ ಬಂಧಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...