Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಹತ್ಯೆಗೈದಿದ್ದಾನೆ ಎಂಬುವುದು ಸುಳ್ಳು

FACT CHECK : ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಹತ್ಯೆಗೈದಿದ್ದಾನೆ ಎಂಬುವುದು ಸುಳ್ಳು

- Advertisement -
- Advertisement -

ಜನನಿಬಿಡ ರಸ್ತೆಯ ಮಧ್ಯದಲ್ಲಿ ಯುವತಿಯ ಶವದ ಬಳಿ ಯುವಕನೊಬ್ಬ ನಿಂತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಅನೇಕರು, ಸಲೀಂ ಎಂಬ ಮುಸ್ಲಿಂ ಯುವಕ ಆರತಿ ಎಂಬ ಹಿಂದೂ ಹುಡುಗಿಯನ್ನು ಕೊಲೆ ಮಾಡಿದ್ದಾನೆ ಎಂದು ಬರೆದುಕೊಂಡಿದ್ದಾರೆ.

ಒಟ್ಟು 24 ಸೆಕೆಂಡ್‌ನ ವಿಡಿಯೋದಲ್ಲಿ ಯುವಕ ತನ್ನ ಎಡೆಗೈಯಲ್ಲಿ ಸ್ಪ್ಯಾನರ್ ಹಿಡಿದು ನಿಂತಿದ್ದರೆ, ಯುವತಿಯ ಶವ ರಸ್ತೆ ಮಧ್ಯ ಇದೆ. ಸುತ್ತಲು ಹಲವಾರು ಜನರು ಸುಮ್ಮನೆ ನಿಂತು ನೋಡುವ ದೃಶ್ಯವಿದೆ.

ವಿಡಿಯೋ ಹಂಚಿಕೊಂಡಿರುವ ಅನೇಕರು ” ಸಲೀಂ ಆರತಿಗೆ ಪ್ರೇಮ ನಿವೇದನೆ (ಪ್ರಪೋಸ್) ಮಾಡಿದ್ದ. ಆದರೆ, ಆರತಿ ಅದನ್ನು ತಿರಸ್ಕರಿಸಿದ್ದಳು.ಈ ಕಾರಣಕ್ಕೆ ಸಲೀಂ ಆರತಿಯನ್ನು ನಡು ರಸ್ತೆಯಲ್ಲಿ ಹತ್ಯೆ ಮಾಡಿ ಶವದ ಪಕ್ಕದಲ್ಲೇ ನಿಂತಿದ್ದಾನೆ. ಆತನಿಗೆ ಏನೂ ಹೇಳಲು ಯಾರಿಗೂ ಧೈರ್ಯವಿಲ್ಲ” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದ ಪೋಸ್ಟ್‌ನ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಯುವತಿಯನ್ನು ಯುವಕನೋರ್ವ ಹತ್ಯೆ ಮಾಡಿರುವುದು ಹೌದು. ಆದರೆ, ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಹತ್ಯೆ ಮಾಡಿದ್ದಾನೆ ಎಂಬ ಪ್ರತಿಪಾದನೆ ಸುಳ್ಳು ಎಂದು ತಿಳಿದು ಬಂದಿದೆ.

ಜೂನ್ 18, 2024ರಂದು ಬೆಳಿಗ್ಗೆ 8:30ರ ಸುಮಾರಿಗೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಪೂರ್ವ ವಾಸಿ ಪ್ರದೇಶದ ಚಿಂಚ್‌ಪಾಡದಲ್ಲಿ ಯುವತಿಯ ಹತ್ಯೆ ಘಟನೆ ನಡೆದಿದೆ. ಆರೋಪಿ 29 ವರ್ಷದ ರೋಹಿತ್ ಯಾದವ್ ಮತ್ತು ಮೃತ ಯುವತಿ 22 ವರ್ಷದ ಆರತಿ ಯಾದವ್ ಎಂದು ತಿಳಿದು ಬಂದಿದೆ.

ದಿ ಇಂಡಿಯನ್ ಎಕ್ಸ್‌ ಪ್ರೆಸ್ ವರದಿಯ ಪ್ರಕಾರ, “ಮೃತ ಯುವತಿ ಆರತಿ ಆರೋಪಿ ರೋಹಿತ್‌ನ ಮಾಜಿ ಪ್ರೇಯಸಿಯಾಗಿದ್ದು, ಆಕೆ ಇತ್ತೀಚೆಗೆ ಇನ್ನೊಬ್ಬ ಯುವಕನ ಜೊತೆ ಸುತ್ತಾಡುತ್ತಿದ್ದಳು. ಅದನ್ನು ನೋಡಿ ಕುಪಿತಗೊಂಡ ರೋಹಿತ್ ಯಾದವ್ ಹಾಡಹಗಲೇ ರಸ್ತೆ ಮಧ್ಯೆ ಸ್ಫ್ಯಾನರ್‌ನಿಂದ ತಲೆಗೆ ಹೊಡೆದು ಆರತಿಯನ್ನು ಹತ್ಯೆ ಮಾಡಿದ್ದಾನೆ”.

ಹಿಂದುಸ್ತಾನ್ ಟೈಮ್ಸ್‌ ವರದಿಯ ಪ್ರಕಾರ, “ಆರತಿಯನ್ನು ಹಿಂಬಾಲಿಸಿಕೊಂಡು ಬಂದ ರೋಹಿತ್, ರಸ್ತೆ ಮಧ್ಯೆ ಹಿಂಬದಿಯಿಂದ ಆಕೆಯ ತಲೆಗೆ ಸ್ಪ್ಯಾನರ್ ಮೂಲಕ ಹೊಡೆದಿದ್ದಾನೆ. ಆಕೆ ನೆಲಕ್ಕೆ ಬಿದ್ದಾಗ ಆಕೆಯ ತಲೆಗೆ ಹೊಡೆಯುವುದನ್ನು ಮುಂದುವರೆಸಿದ್ದಾನೆ. ಸ್ವಲ್ಪ ಹೊತ್ತಿನಲ್ಲೇ ರಕ್ತದ ಮಡುವಿನಲ್ಲಿ ಆರತಿ ಪ್ರಾಣ ಬಿಟ್ಟಿದ್ದಾಳೆ. ಸುತ್ತಮುತ್ತಲಿದ್ದ ಜನ ಈ ಕೃತ್ಯವನ್ನು ಸುಮ್ಮನೆ ನಿಂತು ನೋಡಿದ್ದಾರೆ”.

“ಪೊಲೀಸರ ಪ್ರಕಾರ, ರೋಹಿತ್ ಮತ್ತು ಆರತಿ ಇಬ್ಬರೂ ನಲಸೊಪರ ಮೂಲದವರು. ಇಬ್ಬರು ಸುಮಾರು 6 ವರ್ಷಗಳ ಕಾಲ ಸಂಪರ್ಕದಲ್ಲಿದ್ದರು. ಪೂರ್ವ ವಾಸಿಯ ಫ್ಯಾಕ್ಟರಿಯೊಂದರಲ್ಲಿ ಆರತಿ ಕೆಲಸ ಮಾಡುತ್ತಿದ್ದಳು. ನಿರೋದ್ಯೋಗಿಯಾಗಿದ್ದ ರೋಹಿತ್, ಇತ್ತೀಚೆಗೆ ಆರತಿ ಪುರುಷ ಸಹೋದ್ಯೋಗಿಗಳ ಜೊತೆ ಸುತ್ತಾಡುವುದನ್ನು ನೋಡಿ ಕುಪಿತಗೊಂಡಿದ್ದ. ಇದು ಇಬ್ಬರ ನಡುವೆ ಗಲಾಟೆಗೆ ಕಾರಣವಾಗಿತ್ತು. ಇದೇ ಕೋಪದಲ್ಲಿ ಆತ ಆರತಿಯನ್ನು ಹತ್ಯೆ ಮಾಡಿದ್ದಾನೆ”.

ನಾವು ನಡೆಸಿದ ಪರಿಶೀಲನೆಯಲ್ಲಿ ಆರತಿ ಎಂಬ ಯುವತಿಯನ್ನು ಹತ್ಯೆ ಮಾಡಿದವನ ಹೆಸರು ರೋಹಿತ್ ಯಾದವ್, ಸಲೀಂ ಅಲ್ಲ ಎಂದು ತಿಳಿದು ಬಂದಿದೆ. ಆರೋಪಿ ಮುಸ್ಲಿಂ ಎಂದು ಬಿಂಬಿಸಿ ಘಟನೆಗೆ ಕೋಮು ಬಣ್ಣ ಹಚ್ಚುವ ಪ್ರಯತ್ನ ನಡೆದಿರುವ ಹಿನ್ನೆಲೆ ನಾವು ಸತ್ಯಾಸತ್ಯತೆ ತೆರೆದಿಟ್ಟಿದ್ದೇವೆ. ಅಲ್ಲದೆ, ಕೊಲೆ ಪ್ರಕರಣದಲ್ಲಿ ಕೋಮು ಹುಡುಕುವ ಪ್ರಯತ್ನ ಇದಲ್ಲ.

ಇದನ್ನೂ ಓದಿ : FACT CHECK : ನೀಟ್ ಅಕ್ರಮದ ಆರೋಪಿಗಳನ್ನು ಕಾಂಗ್ರೆಸ್ ಕಚೇರಿಯಿಂದ ಬಂಧಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...