Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಹತ್ಯೆಗೈದಿದ್ದಾನೆ ಎಂಬುವುದು ಸುಳ್ಳು

FACT CHECK : ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಹತ್ಯೆಗೈದಿದ್ದಾನೆ ಎಂಬುವುದು ಸುಳ್ಳು

- Advertisement -
- Advertisement -

ಜನನಿಬಿಡ ರಸ್ತೆಯ ಮಧ್ಯದಲ್ಲಿ ಯುವತಿಯ ಶವದ ಬಳಿ ಯುವಕನೊಬ್ಬ ನಿಂತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಅನೇಕರು, ಸಲೀಂ ಎಂಬ ಮುಸ್ಲಿಂ ಯುವಕ ಆರತಿ ಎಂಬ ಹಿಂದೂ ಹುಡುಗಿಯನ್ನು ಕೊಲೆ ಮಾಡಿದ್ದಾನೆ ಎಂದು ಬರೆದುಕೊಂಡಿದ್ದಾರೆ.

ಒಟ್ಟು 24 ಸೆಕೆಂಡ್‌ನ ವಿಡಿಯೋದಲ್ಲಿ ಯುವಕ ತನ್ನ ಎಡೆಗೈಯಲ್ಲಿ ಸ್ಪ್ಯಾನರ್ ಹಿಡಿದು ನಿಂತಿದ್ದರೆ, ಯುವತಿಯ ಶವ ರಸ್ತೆ ಮಧ್ಯ ಇದೆ. ಸುತ್ತಲು ಹಲವಾರು ಜನರು ಸುಮ್ಮನೆ ನಿಂತು ನೋಡುವ ದೃಶ್ಯವಿದೆ.

ವಿಡಿಯೋ ಹಂಚಿಕೊಂಡಿರುವ ಅನೇಕರು ” ಸಲೀಂ ಆರತಿಗೆ ಪ್ರೇಮ ನಿವೇದನೆ (ಪ್ರಪೋಸ್) ಮಾಡಿದ್ದ. ಆದರೆ, ಆರತಿ ಅದನ್ನು ತಿರಸ್ಕರಿಸಿದ್ದಳು.ಈ ಕಾರಣಕ್ಕೆ ಸಲೀಂ ಆರತಿಯನ್ನು ನಡು ರಸ್ತೆಯಲ್ಲಿ ಹತ್ಯೆ ಮಾಡಿ ಶವದ ಪಕ್ಕದಲ್ಲೇ ನಿಂತಿದ್ದಾನೆ. ಆತನಿಗೆ ಏನೂ ಹೇಳಲು ಯಾರಿಗೂ ಧೈರ್ಯವಿಲ್ಲ” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದ ಪೋಸ್ಟ್‌ನ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಯುವತಿಯನ್ನು ಯುವಕನೋರ್ವ ಹತ್ಯೆ ಮಾಡಿರುವುದು ಹೌದು. ಆದರೆ, ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಹತ್ಯೆ ಮಾಡಿದ್ದಾನೆ ಎಂಬ ಪ್ರತಿಪಾದನೆ ಸುಳ್ಳು ಎಂದು ತಿಳಿದು ಬಂದಿದೆ.

ಜೂನ್ 18, 2024ರಂದು ಬೆಳಿಗ್ಗೆ 8:30ರ ಸುಮಾರಿಗೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಪೂರ್ವ ವಾಸಿ ಪ್ರದೇಶದ ಚಿಂಚ್‌ಪಾಡದಲ್ಲಿ ಯುವತಿಯ ಹತ್ಯೆ ಘಟನೆ ನಡೆದಿದೆ. ಆರೋಪಿ 29 ವರ್ಷದ ರೋಹಿತ್ ಯಾದವ್ ಮತ್ತು ಮೃತ ಯುವತಿ 22 ವರ್ಷದ ಆರತಿ ಯಾದವ್ ಎಂದು ತಿಳಿದು ಬಂದಿದೆ.

ದಿ ಇಂಡಿಯನ್ ಎಕ್ಸ್‌ ಪ್ರೆಸ್ ವರದಿಯ ಪ್ರಕಾರ, “ಮೃತ ಯುವತಿ ಆರತಿ ಆರೋಪಿ ರೋಹಿತ್‌ನ ಮಾಜಿ ಪ್ರೇಯಸಿಯಾಗಿದ್ದು, ಆಕೆ ಇತ್ತೀಚೆಗೆ ಇನ್ನೊಬ್ಬ ಯುವಕನ ಜೊತೆ ಸುತ್ತಾಡುತ್ತಿದ್ದಳು. ಅದನ್ನು ನೋಡಿ ಕುಪಿತಗೊಂಡ ರೋಹಿತ್ ಯಾದವ್ ಹಾಡಹಗಲೇ ರಸ್ತೆ ಮಧ್ಯೆ ಸ್ಫ್ಯಾನರ್‌ನಿಂದ ತಲೆಗೆ ಹೊಡೆದು ಆರತಿಯನ್ನು ಹತ್ಯೆ ಮಾಡಿದ್ದಾನೆ”.

ಹಿಂದುಸ್ತಾನ್ ಟೈಮ್ಸ್‌ ವರದಿಯ ಪ್ರಕಾರ, “ಆರತಿಯನ್ನು ಹಿಂಬಾಲಿಸಿಕೊಂಡು ಬಂದ ರೋಹಿತ್, ರಸ್ತೆ ಮಧ್ಯೆ ಹಿಂಬದಿಯಿಂದ ಆಕೆಯ ತಲೆಗೆ ಸ್ಪ್ಯಾನರ್ ಮೂಲಕ ಹೊಡೆದಿದ್ದಾನೆ. ಆಕೆ ನೆಲಕ್ಕೆ ಬಿದ್ದಾಗ ಆಕೆಯ ತಲೆಗೆ ಹೊಡೆಯುವುದನ್ನು ಮುಂದುವರೆಸಿದ್ದಾನೆ. ಸ್ವಲ್ಪ ಹೊತ್ತಿನಲ್ಲೇ ರಕ್ತದ ಮಡುವಿನಲ್ಲಿ ಆರತಿ ಪ್ರಾಣ ಬಿಟ್ಟಿದ್ದಾಳೆ. ಸುತ್ತಮುತ್ತಲಿದ್ದ ಜನ ಈ ಕೃತ್ಯವನ್ನು ಸುಮ್ಮನೆ ನಿಂತು ನೋಡಿದ್ದಾರೆ”.

“ಪೊಲೀಸರ ಪ್ರಕಾರ, ರೋಹಿತ್ ಮತ್ತು ಆರತಿ ಇಬ್ಬರೂ ನಲಸೊಪರ ಮೂಲದವರು. ಇಬ್ಬರು ಸುಮಾರು 6 ವರ್ಷಗಳ ಕಾಲ ಸಂಪರ್ಕದಲ್ಲಿದ್ದರು. ಪೂರ್ವ ವಾಸಿಯ ಫ್ಯಾಕ್ಟರಿಯೊಂದರಲ್ಲಿ ಆರತಿ ಕೆಲಸ ಮಾಡುತ್ತಿದ್ದಳು. ನಿರೋದ್ಯೋಗಿಯಾಗಿದ್ದ ರೋಹಿತ್, ಇತ್ತೀಚೆಗೆ ಆರತಿ ಪುರುಷ ಸಹೋದ್ಯೋಗಿಗಳ ಜೊತೆ ಸುತ್ತಾಡುವುದನ್ನು ನೋಡಿ ಕುಪಿತಗೊಂಡಿದ್ದ. ಇದು ಇಬ್ಬರ ನಡುವೆ ಗಲಾಟೆಗೆ ಕಾರಣವಾಗಿತ್ತು. ಇದೇ ಕೋಪದಲ್ಲಿ ಆತ ಆರತಿಯನ್ನು ಹತ್ಯೆ ಮಾಡಿದ್ದಾನೆ”.

ನಾವು ನಡೆಸಿದ ಪರಿಶೀಲನೆಯಲ್ಲಿ ಆರತಿ ಎಂಬ ಯುವತಿಯನ್ನು ಹತ್ಯೆ ಮಾಡಿದವನ ಹೆಸರು ರೋಹಿತ್ ಯಾದವ್, ಸಲೀಂ ಅಲ್ಲ ಎಂದು ತಿಳಿದು ಬಂದಿದೆ. ಆರೋಪಿ ಮುಸ್ಲಿಂ ಎಂದು ಬಿಂಬಿಸಿ ಘಟನೆಗೆ ಕೋಮು ಬಣ್ಣ ಹಚ್ಚುವ ಪ್ರಯತ್ನ ನಡೆದಿರುವ ಹಿನ್ನೆಲೆ ನಾವು ಸತ್ಯಾಸತ್ಯತೆ ತೆರೆದಿಟ್ಟಿದ್ದೇವೆ. ಅಲ್ಲದೆ, ಕೊಲೆ ಪ್ರಕರಣದಲ್ಲಿ ಕೋಮು ಹುಡುಕುವ ಪ್ರಯತ್ನ ಇದಲ್ಲ.

ಇದನ್ನೂ ಓದಿ : FACT CHECK : ನೀಟ್ ಅಕ್ರಮದ ಆರೋಪಿಗಳನ್ನು ಕಾಂಗ್ರೆಸ್ ಕಚೇರಿಯಿಂದ ಬಂಧಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...