Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಹತ್ಯೆಗೈದಿದ್ದಾನೆ ಎಂಬುವುದು ಸುಳ್ಳು

FACT CHECK : ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಹತ್ಯೆಗೈದಿದ್ದಾನೆ ಎಂಬುವುದು ಸುಳ್ಳು

- Advertisement -
- Advertisement -

ಜನನಿಬಿಡ ರಸ್ತೆಯ ಮಧ್ಯದಲ್ಲಿ ಯುವತಿಯ ಶವದ ಬಳಿ ಯುವಕನೊಬ್ಬ ನಿಂತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಅನೇಕರು, ಸಲೀಂ ಎಂಬ ಮುಸ್ಲಿಂ ಯುವಕ ಆರತಿ ಎಂಬ ಹಿಂದೂ ಹುಡುಗಿಯನ್ನು ಕೊಲೆ ಮಾಡಿದ್ದಾನೆ ಎಂದು ಬರೆದುಕೊಂಡಿದ್ದಾರೆ.

ಒಟ್ಟು 24 ಸೆಕೆಂಡ್‌ನ ವಿಡಿಯೋದಲ್ಲಿ ಯುವಕ ತನ್ನ ಎಡೆಗೈಯಲ್ಲಿ ಸ್ಪ್ಯಾನರ್ ಹಿಡಿದು ನಿಂತಿದ್ದರೆ, ಯುವತಿಯ ಶವ ರಸ್ತೆ ಮಧ್ಯ ಇದೆ. ಸುತ್ತಲು ಹಲವಾರು ಜನರು ಸುಮ್ಮನೆ ನಿಂತು ನೋಡುವ ದೃಶ್ಯವಿದೆ.

ವಿಡಿಯೋ ಹಂಚಿಕೊಂಡಿರುವ ಅನೇಕರು ” ಸಲೀಂ ಆರತಿಗೆ ಪ್ರೇಮ ನಿವೇದನೆ (ಪ್ರಪೋಸ್) ಮಾಡಿದ್ದ. ಆದರೆ, ಆರತಿ ಅದನ್ನು ತಿರಸ್ಕರಿಸಿದ್ದಳು.ಈ ಕಾರಣಕ್ಕೆ ಸಲೀಂ ಆರತಿಯನ್ನು ನಡು ರಸ್ತೆಯಲ್ಲಿ ಹತ್ಯೆ ಮಾಡಿ ಶವದ ಪಕ್ಕದಲ್ಲೇ ನಿಂತಿದ್ದಾನೆ. ಆತನಿಗೆ ಏನೂ ಹೇಳಲು ಯಾರಿಗೂ ಧೈರ್ಯವಿಲ್ಲ” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದ ಪೋಸ್ಟ್‌ನ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಯುವತಿಯನ್ನು ಯುವಕನೋರ್ವ ಹತ್ಯೆ ಮಾಡಿರುವುದು ಹೌದು. ಆದರೆ, ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಹತ್ಯೆ ಮಾಡಿದ್ದಾನೆ ಎಂಬ ಪ್ರತಿಪಾದನೆ ಸುಳ್ಳು ಎಂದು ತಿಳಿದು ಬಂದಿದೆ.

ಜೂನ್ 18, 2024ರಂದು ಬೆಳಿಗ್ಗೆ 8:30ರ ಸುಮಾರಿಗೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಪೂರ್ವ ವಾಸಿ ಪ್ರದೇಶದ ಚಿಂಚ್‌ಪಾಡದಲ್ಲಿ ಯುವತಿಯ ಹತ್ಯೆ ಘಟನೆ ನಡೆದಿದೆ. ಆರೋಪಿ 29 ವರ್ಷದ ರೋಹಿತ್ ಯಾದವ್ ಮತ್ತು ಮೃತ ಯುವತಿ 22 ವರ್ಷದ ಆರತಿ ಯಾದವ್ ಎಂದು ತಿಳಿದು ಬಂದಿದೆ.

ದಿ ಇಂಡಿಯನ್ ಎಕ್ಸ್‌ ಪ್ರೆಸ್ ವರದಿಯ ಪ್ರಕಾರ, “ಮೃತ ಯುವತಿ ಆರತಿ ಆರೋಪಿ ರೋಹಿತ್‌ನ ಮಾಜಿ ಪ್ರೇಯಸಿಯಾಗಿದ್ದು, ಆಕೆ ಇತ್ತೀಚೆಗೆ ಇನ್ನೊಬ್ಬ ಯುವಕನ ಜೊತೆ ಸುತ್ತಾಡುತ್ತಿದ್ದಳು. ಅದನ್ನು ನೋಡಿ ಕುಪಿತಗೊಂಡ ರೋಹಿತ್ ಯಾದವ್ ಹಾಡಹಗಲೇ ರಸ್ತೆ ಮಧ್ಯೆ ಸ್ಫ್ಯಾನರ್‌ನಿಂದ ತಲೆಗೆ ಹೊಡೆದು ಆರತಿಯನ್ನು ಹತ್ಯೆ ಮಾಡಿದ್ದಾನೆ”.

ಹಿಂದುಸ್ತಾನ್ ಟೈಮ್ಸ್‌ ವರದಿಯ ಪ್ರಕಾರ, “ಆರತಿಯನ್ನು ಹಿಂಬಾಲಿಸಿಕೊಂಡು ಬಂದ ರೋಹಿತ್, ರಸ್ತೆ ಮಧ್ಯೆ ಹಿಂಬದಿಯಿಂದ ಆಕೆಯ ತಲೆಗೆ ಸ್ಪ್ಯಾನರ್ ಮೂಲಕ ಹೊಡೆದಿದ್ದಾನೆ. ಆಕೆ ನೆಲಕ್ಕೆ ಬಿದ್ದಾಗ ಆಕೆಯ ತಲೆಗೆ ಹೊಡೆಯುವುದನ್ನು ಮುಂದುವರೆಸಿದ್ದಾನೆ. ಸ್ವಲ್ಪ ಹೊತ್ತಿನಲ್ಲೇ ರಕ್ತದ ಮಡುವಿನಲ್ಲಿ ಆರತಿ ಪ್ರಾಣ ಬಿಟ್ಟಿದ್ದಾಳೆ. ಸುತ್ತಮುತ್ತಲಿದ್ದ ಜನ ಈ ಕೃತ್ಯವನ್ನು ಸುಮ್ಮನೆ ನಿಂತು ನೋಡಿದ್ದಾರೆ”.

“ಪೊಲೀಸರ ಪ್ರಕಾರ, ರೋಹಿತ್ ಮತ್ತು ಆರತಿ ಇಬ್ಬರೂ ನಲಸೊಪರ ಮೂಲದವರು. ಇಬ್ಬರು ಸುಮಾರು 6 ವರ್ಷಗಳ ಕಾಲ ಸಂಪರ್ಕದಲ್ಲಿದ್ದರು. ಪೂರ್ವ ವಾಸಿಯ ಫ್ಯಾಕ್ಟರಿಯೊಂದರಲ್ಲಿ ಆರತಿ ಕೆಲಸ ಮಾಡುತ್ತಿದ್ದಳು. ನಿರೋದ್ಯೋಗಿಯಾಗಿದ್ದ ರೋಹಿತ್, ಇತ್ತೀಚೆಗೆ ಆರತಿ ಪುರುಷ ಸಹೋದ್ಯೋಗಿಗಳ ಜೊತೆ ಸುತ್ತಾಡುವುದನ್ನು ನೋಡಿ ಕುಪಿತಗೊಂಡಿದ್ದ. ಇದು ಇಬ್ಬರ ನಡುವೆ ಗಲಾಟೆಗೆ ಕಾರಣವಾಗಿತ್ತು. ಇದೇ ಕೋಪದಲ್ಲಿ ಆತ ಆರತಿಯನ್ನು ಹತ್ಯೆ ಮಾಡಿದ್ದಾನೆ”.

ನಾವು ನಡೆಸಿದ ಪರಿಶೀಲನೆಯಲ್ಲಿ ಆರತಿ ಎಂಬ ಯುವತಿಯನ್ನು ಹತ್ಯೆ ಮಾಡಿದವನ ಹೆಸರು ರೋಹಿತ್ ಯಾದವ್, ಸಲೀಂ ಅಲ್ಲ ಎಂದು ತಿಳಿದು ಬಂದಿದೆ. ಆರೋಪಿ ಮುಸ್ಲಿಂ ಎಂದು ಬಿಂಬಿಸಿ ಘಟನೆಗೆ ಕೋಮು ಬಣ್ಣ ಹಚ್ಚುವ ಪ್ರಯತ್ನ ನಡೆದಿರುವ ಹಿನ್ನೆಲೆ ನಾವು ಸತ್ಯಾಸತ್ಯತೆ ತೆರೆದಿಟ್ಟಿದ್ದೇವೆ. ಅಲ್ಲದೆ, ಕೊಲೆ ಪ್ರಕರಣದಲ್ಲಿ ಕೋಮು ಹುಡುಕುವ ಪ್ರಯತ್ನ ಇದಲ್ಲ.

ಇದನ್ನೂ ಓದಿ : FACT CHECK : ನೀಟ್ ಅಕ್ರಮದ ಆರೋಪಿಗಳನ್ನು ಕಾಂಗ್ರೆಸ್ ಕಚೇರಿಯಿಂದ ಬಂಧಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...