Homeಫ್ಯಾಕ್ಟ್‌ಚೆಕ್FACT CHECK : ಪ. ಬಂಗಾಳದಲ್ಲಿ ಮುಸ್ಲಿಂ ಯುವಕ ಹಿಂದೂ ಬಾಲಕಿಗೆ ಇರಿದಿದ್ದಾನೆ ಎಂಬುವುದು ಸುಳ್ಳು

FACT CHECK : ಪ. ಬಂಗಾಳದಲ್ಲಿ ಮುಸ್ಲಿಂ ಯುವಕ ಹಿಂದೂ ಬಾಲಕಿಗೆ ಇರಿದಿದ್ದಾನೆ ಎಂಬುವುದು ಸುಳ್ಳು

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಹಾಡಹಗಲೇ ಮುಸ್ಲಿಂ ಯುವಕನೋರ್ವ ಹಿಂದೂ ಬಾಲಕಿಗೆ ಇರಿದಿದ್ದಾನೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ನಾಝಿಯಾ ಇಲಾಹಿ ಖಾನ್ (@naziaelahikhan) ಎಂಬ ಇನ್‌ಸ್ಟಾಗ್ರಾಂ ಬಳಕೆದಾರರೊಬ್ಬರು ವಿಡಿಯೋ ಹಂಚಿಕೊಂಡು “ಮುಸ್ಲಿಂ ಯುವಕ ಹಿಂದೂ ಯುವತಿಗೆ ಹಾಡಹಗಲೇ ಹೇಗೆ ಇರಿದಿದ್ದಾನೆ ಒಮ್ಮೆ ನೋಡಿ. ಮಮತಾ ರಾಜ್‌ನಲ್ಲಿ ಹಿಂದೂಗಳು ಸುರಕ್ಷಿತರಲ್ಲ. ಪಶ್ಚಿಮ ಬಂಗಾಳದ ಈ ಆಘಾತಕಾರಿ ಪರಿಸ್ಥಿತಿ ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ರಾಜ್ಯಗಳಿಗೆ ಹರಡಲಿದೆ. ಟಿಎಂಸಿ ಮತ ಪಡೆಯುವ ಸಲುವಾಗಿ ಬಾಂಗ್ಲಾದೇಶ, ಮ್ಯಾನ್ಮಾರ್‌ನಿಂದ ಬರುವ ಮುಸ್ಲಿಮರಿಗೆ ಹಣ ಪಡೆದು ಆಧಾರ್ ಕಾರ್ಡ್, ವೋಟರ್ ಐಡಿ, ರೇಷನ್ ಕಾರ್ಡ್‌ ಸೇರಿದಂತೆ ಅಗತ್ಯ ದಾಖಲೆಗಳನ್ನು ಕೊಡುತ್ತಿದೆ. ಇದು ಯಾವ ಸಂದರ್ಭದಲ್ಲಾದರೂ ನನಗೂ ಸಂಭವಿಸಬಹುದು. ಮಮತಾ ಬ್ಯಾನರ್ಜಿಯವರೇ, ಕೋಲ್ಕತ್ತಾ ಪೊಲೀಸರೇ ದಯವಿಟ್ಟು ಸರಿಯಾದ ಕ್ರಮ ಕೈಗೊಳ್ಳಿ. ಪಶ್ಚಿಮ ಬಂಗಾಳ ಇಸ್ಲಾಮಿಕ್ ರಾಜ್ಯವಲ್ಲ. ಕೋಲ್ಕತ್ತಾ ಪೊಲೀಸರೇ ದಯವಿಟ್ಟು ಅರ್ಥ ಮಾಡಿಕೊಳ್ಳಿ” ಎಂದು ಬರೆದುಕೊಂಡಿದ್ದರು.

ಇನ್ನೂ ಕೆಲ ಇನ್‌ಸ್ಟಾಗ್ರಾಂ ಮತ್ತು ಎಕ್ಸ್‌ ಖಾತೆಗಳಲ್ಲೂ ವಿಡಿಯೋ ಹಂಚಿಕೊಂಡು ಇದೇ ರೀತಿಯ ಪ್ರತಿಪಾದನೆ ಮಾಡಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ಪರಿಶೀಲಿಸಲು ನಾವು ಅದರ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಪರಿಶೀಲಿಸಿದ್ದೇವೆ. ಈ ವೇಳೆ ಸೆಪ್ಟೆಂಬರ್ 5, 2024ರಂದು ಟೈಮ್ಸ್ ಆಫ್ ಇಂಡಿಯಾ ವಿಡಿಯೋ ಕುರಿತು ವರದಿ ಪ್ರಕಟಿಸಿರುವುದು ಕಂಡು ಬಂದಿದೆ.

ವರದಿಯಲ್ಲಿ “ಪಶ್ಚಿಮ ಬಂಗಾಳದ ಬೆಲ್ಘರಿಯಾದ ಪ್ರಫುಲ್ಲಾ ನಗರದ ಅಭಿಜಿತ್ ದತ್ತಾ ಎಂಬ ಯುವಕ 14 ವರ್ಷದ ಶಾಲಾ ಬಾಲಕಿಗೆ ರಸ್ತೆ ಮಧ್ಯೆ ಸುಮಾರು ಮೂರು ಬಾರಿ ಹರಿತವಾದ ಆಯುಧದಿಂದ ಇರಿದಿದ್ದಾನೆ ಎಂದು ಹೇಳಲಾಗಿದೆ.

ಅಭಿಜಿತ್ ದತ್ತಾ ಬಾಲಕಿಗೆ ಪ್ರೇಮ ನಿವೇದನೆ ಮಾಡಿದ್ದ. ಆಕೆ ತಿರಸ್ಕರಿಸಿದ್ದಳು. ಸೆಪ್ಟೆಂಬರ್ 4,2024ರಂದು ಬಾಲಕಿ ಶಾಲೆಯಿಂದ ಮನೆಗೆ ಹಿಂದಿರುಗುವಾಗ ಅಭಿಜಿತ್ ಮತ್ತೊಮ್ಮೆ ಪ್ರೇಮ ನಿವೇದನೆ ಮಾಡಿದ್ದಾನೆ. ಆಗಲೂ ಬಾಲಕಿ ತಿರಸ್ಕರಿಸಿದ್ದಾಳೆ. ಆಗ ಆತ ಬಾಲಕಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ. ಈ ವೇಳೆ ಬಾಲಕಿ ಆತನಿಗೆ ಕಪಾಳಮೋಕ್ಷ ಮಾಡಿದ್ದಾಳೆ. ಇದರಿಂದ ಕುಪಿತಗೊಂಡ ಅಭಿಜಿತ್ ದತ್ತಾ ಬಾಲಕಿಗೆ ಇರಿದಿದ್ದಾನೆ ಎಂದು ವರದಿ ವಿವರಿಸಿದೆ.

ಬಾಲಕಿಗೆ ಇರಿಯುತ್ತಿದ್ದಂತೆ ಸ್ಥಳೀಯರು ಆತನನ್ನು ಹಿಡಿದು ಥಳಿಸಿದ್ದಾರೆ. ಇದರಿಂದ ಆತ ಪ್ರಜ್ಞಾಹೀನನಾಗಿ ಬಿದ್ದಿದ್ದ. ಸ್ಥಳಕ್ಕೆ ಆಗಮಿಸಿದ ಬೆಲ್ಘರಿಯಾ ಠಾಣೆಯ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕಿಯ ಮನೆಯವರ ದೂರಿನ ಅನ್ವಯ ಆತನ ವಿರುದ್ದ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

ಬೆಲ್ಘರಿಯಾ ಪೊಲೀಸ್‌ ಅಧಿಕಾರಿ ಸುಭ್ರಜಿತ್ ಮಜುಂದರ್ ಅವರಲ್ಲಿ ಈ ಕುರಿತು ಮಾತನಾಡಿದಾಗ “ಘಟನೆಯ ಹಿಂದೆ ಯಾವುದೇ ಕೋಮು ಆಯಾಮಗಳಿಲ್ಲ. ಆರೋಪಿ ಮತ್ತು ಸಂತ್ರಸ್ತೆ ಇಬ್ಬರೂ ಒಂದೇ ಸಮುದಾಯದವರು ಎಂಬುದಾಗಿ ಹೇಳಿದ್ದಾರೆ ಎಂದು ಕನ್ನಡ ಫ್ಯಾಕ್ಟ್‌ ಚೆಕ್‌.ಕಾಂ ವರದಿ ಮಾಡಿದೆ.

ಇದನ್ನೂ ಓದಿ : FACT CHECK : ಆಂಧ್ರ ಪ್ರದೇಶದ ಹಳೆಯ ವಿಡಿಯೋವನ್ನು ಮಣಿಪುರದ್ದು ಎಂದು ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...