Homeಫ್ಯಾಕ್ಟ್‌ಚೆಕ್Fact Check: ಕರ್ನಾಟಕದಲ್ಲಿ ಮಂದಿರವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎಂಬುವುದು ಸುಳ್ಳು

Fact Check: ಕರ್ನಾಟಕದಲ್ಲಿ ಮಂದಿರವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

“ಏಷ್ಯಾದ ಮೊದಲ ಮಸೀದಿ ಮುಂಚೆ ದೇವಾಲಯವಾಗಿತ್ತು. ಕರ್ನಾಟಕದಲ್ಲಿ ಹಿಂದೂ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ” ಇತ್ಯಾದಿ ಬರಹಗಳೊಂದಿಗೆ ಪ್ರಾಚೀನ ಮಸೀದಿಯೊಂದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

‘ಕೇಶವ ಬೀಜಾಡಿ’ ಎಂಬ ಫೇಸ್‌ಬುಕ್ ಬಳಕೆದಾರ “ಏಷ್ಯಾದ ಮೊದಲ ಮಸೀದಿ ಮುಂಚೆ ದೇವಾಲಯವಾಗಿತ್ತು. ಪಣವಿಡುವೆವು ಭಗವಂತನ ಪಾದದ ಮೆಲಾಣೆ.. ಮಂದಿರವಲ್ಲೇ ಕಟ್ಟುವೆವು” ಎಂದು ಪುರಾತನ ಮಸೀದಿಯ ವಿಡಿಯೋ ಹಂಚಿಕೊಂಡಿದ್ದಾರೆ.

ಇನ್ನಿಬ್ಬರು ಎಕ್ಸ್ ಬಳಕೆದಾರರು “ಕರ್ನಾಟಕದಲ್ಲಿ ಹಿಂದೂ ಮಂದಿರವನ್ನು ಜಿಹಾದಿಗಳು ವಶಪಡಿಸಿಕೊಂಡು ಮಸೀದಿಯಾಗಿ ಪರಿವರ್ತಿಸಿದ್ದಾರೆ” ಎಂದು ಹಿಂದಿಯಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಪೋಸ್ಟ್ ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ. ಇದಕ್ಕಾಗಿ ನಾವು ವೈರಲ್‌ ವಿಡಿಯೋದಲ್ಲಿರುವ ಮಸೀದಿಯ ಸ್ಕ್ರೀನ್ ಶಾಟ್ ತೆಗೆದು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ವಿಡಿಯೋದಲ್ಲಿರುವ ಮಸೀದಿಯು ಹಲವಾರು ಯೂಟ್ಯೂಬ್ ಚಾನೆಲ್‌ಗಳಲ್ಲಿ ಕಂಡು ಬಂದಿದೆ.

‘M Shameer’ಎಂಬ ಹೆಸರಿನ ಯೂಟ್ಯೂಬ್ ಚಾನೆಲ್‌ನಲ್ಲಿ ಮಸೀದಿಯ ಸಂಪೂರ್ಣ ವಿಡಿಯೋ ಅಪ್ಲೋಡ್ ಮಾಡಲಾಗಿದ್ದು, ಇದು ಭಾರತದ ಮೂರನೇ ಅತ್ಯಂತ ಪುರಾತನ ಮಸೀದಿಯಾಗಿರುವ ಮಂಗಳೂರಿನ ಝೀನತ್ ಬಕ್ಷ್ ಮಸೀದಿ ಎಂದು ತಿಳಿಸಿದ್ದಾರೆ.

ಯೂಟ್ಯೂಬ್ ಲಿಂಕ್ 

ನಾವು ಗೂಗಲ್‌ನಲ್ಲಿ ‘ಝೀನತ್ ಬಕ್ಷ್’ ಎಂದು ಸರ್ಚ್‌ ಮಾಡಿದಾಗ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಝೀನತ್ ಬಕ್ಸ್‌ ಮಸೀದಿಯ ಕುರಿತು ಮಾಹಿತಿ ದೊರೆತಿದೆ.

ಸರ್ಕಾರದ ವೆಬ್‌ಸೈಟ್‌ನಲ್ಲಿ ಹೇಳಿರುವಂತೆ “ಮಸ್ಜಿದ್ ಝೀನತ್ ಬಕ್ಷ್ ಮಂಗಳೂರಿನ ಬಂದರ್ ಪ್ರದೇಶದಲ್ಲಿದೆ. ಈ ಮಸೀದಿಯು ಪ್ರವಾದಿ ಮೊಹಮ್ಮದ್ ಅವರ ಜೀವನ ಕಥೆಗಳನ್ನು ಚಿತ್ರಿಸುತ್ತದೆ. ಕ್ರಿಸ್ತಶಕ 644 ರಲ್ಲಿ ಅರಬ್ ಮುಸ್ಲಿಂ ವ್ಯಾಪಾರಿಗಳಿಂದ ಇದು ಸ್ಥಾಪಿಸಲ್ಪಟ್ಟಿದೆ ಎಂದು ನಂಬಲಾಗಿದೆ. ಈ ಮಸೀದಿಯು ತನ್ನ ಶುದ್ಧ ಭಾರತೀಯ ವಾಸ್ತುಶಿಲ್ಪದ ಶೈಲಿಯಿಂದಾಗಿ ಎಲ್ಲಾ ಮಸೀದಿಗಳನ್ನು ಮೀರಿಸುತ್ತದೆ. ಇದು ಬಹುಶಃ ಸಂಪೂರ್ಣವಾಗಿ ಮರದಿಂದ ಮಾಡಿದ ಕರ್ನಾಟಕದ ಏಕೈಕ ಮಸೀದಿಯಾಗಿದೆ. ಮಸೀದಿಯ ಮುಖ್ಯ ಮುಖ್ಯಾಂಶವೆಂದರೆ ತೇಗದಿಂದ ಮಾಡಿದ 16 ಕಂಬಗಳನ್ನು ಇದು ಒಳಗೊಂಡಿದೆ.

ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ವೆಬ್‌ಸೈಟ್ ಲಿಂಕ್

ಸರ್ಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಹೇಳಿರುವಂತೆ ಝೀನತ್ ಬಕ್ಷ್ ಮಸೀದಿಯು ಯಾವುದೇ ದೇವಸ್ಥಾನವನ್ನು ಪರಿವರ್ತಿಸಿ ಮಾಡಿರುವಂತದಲ್ಲ.

“ಝೀನತ್ ಬಕ್ಷ್ ಜುಮಾ ಮಸೀದಿ (ಸೌಂದರ್ಯವನ್ನು ಪ್ರತಿಬಿಂಬಿಸುವ ಮಸೀದಿ) ಸಾಮಾನ್ಯವಾಗಿ ಮಸ್ಜಿದ್ ಜೀನತ್ ಬಕ್ಷ್ ಎಂದು ಇದನ್ನು ಕರೆಯಲ್ಪಡುತ್ತದೆ. ಇದು ಭಾರತದ 3 ನೇ ಅತ್ಯಂತ ಹಳೆಯ ಮಸೀದಿಯಾಗಿದೆ ಮತ್ತು 644 ಎಡಿ ಯಲ್ಲಿ ನಿರ್ಮಿಸಲಾದ ಕರ್ನಾಟಕ ರಾಜ್ಯದ ಅತ್ಯಂತ ಹಳೆಯ ಮಸೀದಿಯಾಗಿದೆ. ‘ಬೆಳ್ಳಿಯೆ ಪಲ್ಲಿ’ (ಬ್ಯಾರಿ ಭಾಷೆಯಲ್ಲಿ ದೊಡ್ಡ ಮಸೀದಿ) ಎಂದೂ ಕರೆಯಲ್ಪಡುವ ಈ ಮಸೀದಿಯು ಮಂಗಳೂರು ನಗರದ ಬಂದರ್ ಪ್ರದೇಶದಲ್ಲಿದೆ. ಇದು ಶುದ್ಧ ಭಾರತೀಯ ವಾಸ್ತುಶಿಲ್ಪ ಶೈಲಿಗೆ ಹೆಸರುವಾಸಿಯಾಗಿದೆ” ಎಂದು ವಿಕಿಪೀಡಿಯದಲ್ಲಿ ಮಾಹಿತಿಯಿದೆ.

18ನೇ ಶತಮಾನದಲ್ಲಿ, ಅಂದಿನ ಮೈಸೂರು ಸಂಸ್ಥಾನದ ರಾಜನಾಗಿದ್ದ ಟಿಪ್ಪು ಸುಲ್ತಾನ್ ಅವರು ಮಸೀದಿಯ ನವೀಕರಣ ಕಾರ್ಯ ನಡೆಸಿದ್ದರು. ಮಾತ್ರವಲ್ಲದೆ ಸೊಗಸಾದ ಮರದ ಕೆತ್ತನೆಯಿಂದ ಮಸೀದಿಯನ್ನು ಸುಂದರಗೊಳಿಸಿದ್ದರು. ಅಲ್ಲದೆ, ‘ಮಾಲಿಕ್ ದೀನಾರ್ ವೆಳಿಯ ಜುಮಅತ್ ಮಸ್ಜಿದ್’ ಎಂದಿದ್ದ ಮಸೀದಿಯ ಹೆಸರನ್ನು ‘ಝೀನತ್ ಬಕ್ಷ್’ ಎಂದು ಬದಲಾಯಿಸಿದರು ಎಂದು ಹೇಳಲಾಗಿದೆ.

ವಿಕಿಪೀಡಿಯ ಲಿಂಕ್ 

ಇವಿಷ್ಟೆ ಅಲ್ಲದೆ ಝೀನತ್ ಬಕ್ಷ್ ಮಸೀದಿಯ ಕುರಿತು ಹಲವಾರು ಲೇಖನಗಳು ಆನ್‌ಲೈನ್‌ನಲ್ಲಿ ಲಭ್ಯವಿದೆ. ಇವೆಲ್ಲದರ ಆಧಾರದಲ್ಲಿ ಹೇಳುವುದಾದರೆ, ವೈರಲ್ ವಿಡಿಯೋದಲ್ಲಿರುವುದು ಮಂಗಳೂರಿನ ಝೀನತ್ ಬಕ್ಷ್ ಮಸೀದಿ. ಅದು ಮುಂಚೆ ದೇವಸ್ಥಾನವಾಗಿತ್ತು ಎಂಬುವುದು ಸುಳ್ಳು.

ಮಸೀದಿಯ ಇತಿಹಾಸದ ಕುರಿತ ಇನ್ನಷ್ಟು ಲೇಖನಗಳುಇಲ್ಲಿ ಇಲ್ಲಿ ಇಲ್ಲಿ

ಸುಳ್ಳು : ಏಷ್ಯಾದ ಮೊದಲ ಮಸೀದಿ ಮುಂಚೆ ದೇವಾಲಯವಾಗಿತ್ತು. ಕರ್ನಾಟಕದಲ್ಲಿ ಹಿಂದೂ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ.

ಸತ್ಯ :
ವೈರಲ್ ವಿಡಿಯೋದಲ್ಲಿರುವುದು ಮಂಗಳೂರಿನ ಝೀನತ್ ಬಕ್ಷ್ ಮಸೀದಿ. ಅದು ಮಂದಿರವನ್ನು ಮಸೀದಿಯಾಗಿ ಪರಿವರ್ತಿಸಿದಲ್ಲ. 

ಇದನ್ನೂ ಓದಿ : Fact Check: ಮಸೀದಿ ಮುಂದೆ ಮಹಿಳೆಯರಿಂದ ಅಶ್ಲೀಲ ಕೃತ್ಯವೆಂದು ಸುಳ್ಳು ಸುದ್ದಿ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...