Homeಫ್ಯಾಕ್ಟ್‌ಚೆಕ್Fact Check: ಕರ್ನಾಟಕದಲ್ಲಿ ಮಂದಿರವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎಂಬುವುದು ಸುಳ್ಳು

Fact Check: ಕರ್ನಾಟಕದಲ್ಲಿ ಮಂದಿರವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

“ಏಷ್ಯಾದ ಮೊದಲ ಮಸೀದಿ ಮುಂಚೆ ದೇವಾಲಯವಾಗಿತ್ತು. ಕರ್ನಾಟಕದಲ್ಲಿ ಹಿಂದೂ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ” ಇತ್ಯಾದಿ ಬರಹಗಳೊಂದಿಗೆ ಪ್ರಾಚೀನ ಮಸೀದಿಯೊಂದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

‘ಕೇಶವ ಬೀಜಾಡಿ’ ಎಂಬ ಫೇಸ್‌ಬುಕ್ ಬಳಕೆದಾರ “ಏಷ್ಯಾದ ಮೊದಲ ಮಸೀದಿ ಮುಂಚೆ ದೇವಾಲಯವಾಗಿತ್ತು. ಪಣವಿಡುವೆವು ಭಗವಂತನ ಪಾದದ ಮೆಲಾಣೆ.. ಮಂದಿರವಲ್ಲೇ ಕಟ್ಟುವೆವು” ಎಂದು ಪುರಾತನ ಮಸೀದಿಯ ವಿಡಿಯೋ ಹಂಚಿಕೊಂಡಿದ್ದಾರೆ.

ಇನ್ನಿಬ್ಬರು ಎಕ್ಸ್ ಬಳಕೆದಾರರು “ಕರ್ನಾಟಕದಲ್ಲಿ ಹಿಂದೂ ಮಂದಿರವನ್ನು ಜಿಹಾದಿಗಳು ವಶಪಡಿಸಿಕೊಂಡು ಮಸೀದಿಯಾಗಿ ಪರಿವರ್ತಿಸಿದ್ದಾರೆ” ಎಂದು ಹಿಂದಿಯಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಪೋಸ್ಟ್ ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ. ಇದಕ್ಕಾಗಿ ನಾವು ವೈರಲ್‌ ವಿಡಿಯೋದಲ್ಲಿರುವ ಮಸೀದಿಯ ಸ್ಕ್ರೀನ್ ಶಾಟ್ ತೆಗೆದು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ವಿಡಿಯೋದಲ್ಲಿರುವ ಮಸೀದಿಯು ಹಲವಾರು ಯೂಟ್ಯೂಬ್ ಚಾನೆಲ್‌ಗಳಲ್ಲಿ ಕಂಡು ಬಂದಿದೆ.

‘M Shameer’ಎಂಬ ಹೆಸರಿನ ಯೂಟ್ಯೂಬ್ ಚಾನೆಲ್‌ನಲ್ಲಿ ಮಸೀದಿಯ ಸಂಪೂರ್ಣ ವಿಡಿಯೋ ಅಪ್ಲೋಡ್ ಮಾಡಲಾಗಿದ್ದು, ಇದು ಭಾರತದ ಮೂರನೇ ಅತ್ಯಂತ ಪುರಾತನ ಮಸೀದಿಯಾಗಿರುವ ಮಂಗಳೂರಿನ ಝೀನತ್ ಬಕ್ಷ್ ಮಸೀದಿ ಎಂದು ತಿಳಿಸಿದ್ದಾರೆ.

ಯೂಟ್ಯೂಬ್ ಲಿಂಕ್ 

ನಾವು ಗೂಗಲ್‌ನಲ್ಲಿ ‘ಝೀನತ್ ಬಕ್ಷ್’ ಎಂದು ಸರ್ಚ್‌ ಮಾಡಿದಾಗ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಝೀನತ್ ಬಕ್ಸ್‌ ಮಸೀದಿಯ ಕುರಿತು ಮಾಹಿತಿ ದೊರೆತಿದೆ.

ಸರ್ಕಾರದ ವೆಬ್‌ಸೈಟ್‌ನಲ್ಲಿ ಹೇಳಿರುವಂತೆ “ಮಸ್ಜಿದ್ ಝೀನತ್ ಬಕ್ಷ್ ಮಂಗಳೂರಿನ ಬಂದರ್ ಪ್ರದೇಶದಲ್ಲಿದೆ. ಈ ಮಸೀದಿಯು ಪ್ರವಾದಿ ಮೊಹಮ್ಮದ್ ಅವರ ಜೀವನ ಕಥೆಗಳನ್ನು ಚಿತ್ರಿಸುತ್ತದೆ. ಕ್ರಿಸ್ತಶಕ 644 ರಲ್ಲಿ ಅರಬ್ ಮುಸ್ಲಿಂ ವ್ಯಾಪಾರಿಗಳಿಂದ ಇದು ಸ್ಥಾಪಿಸಲ್ಪಟ್ಟಿದೆ ಎಂದು ನಂಬಲಾಗಿದೆ. ಈ ಮಸೀದಿಯು ತನ್ನ ಶುದ್ಧ ಭಾರತೀಯ ವಾಸ್ತುಶಿಲ್ಪದ ಶೈಲಿಯಿಂದಾಗಿ ಎಲ್ಲಾ ಮಸೀದಿಗಳನ್ನು ಮೀರಿಸುತ್ತದೆ. ಇದು ಬಹುಶಃ ಸಂಪೂರ್ಣವಾಗಿ ಮರದಿಂದ ಮಾಡಿದ ಕರ್ನಾಟಕದ ಏಕೈಕ ಮಸೀದಿಯಾಗಿದೆ. ಮಸೀದಿಯ ಮುಖ್ಯ ಮುಖ್ಯಾಂಶವೆಂದರೆ ತೇಗದಿಂದ ಮಾಡಿದ 16 ಕಂಬಗಳನ್ನು ಇದು ಒಳಗೊಂಡಿದೆ.

ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ವೆಬ್‌ಸೈಟ್ ಲಿಂಕ್

ಸರ್ಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಹೇಳಿರುವಂತೆ ಝೀನತ್ ಬಕ್ಷ್ ಮಸೀದಿಯು ಯಾವುದೇ ದೇವಸ್ಥಾನವನ್ನು ಪರಿವರ್ತಿಸಿ ಮಾಡಿರುವಂತದಲ್ಲ.

“ಝೀನತ್ ಬಕ್ಷ್ ಜುಮಾ ಮಸೀದಿ (ಸೌಂದರ್ಯವನ್ನು ಪ್ರತಿಬಿಂಬಿಸುವ ಮಸೀದಿ) ಸಾಮಾನ್ಯವಾಗಿ ಮಸ್ಜಿದ್ ಜೀನತ್ ಬಕ್ಷ್ ಎಂದು ಇದನ್ನು ಕರೆಯಲ್ಪಡುತ್ತದೆ. ಇದು ಭಾರತದ 3 ನೇ ಅತ್ಯಂತ ಹಳೆಯ ಮಸೀದಿಯಾಗಿದೆ ಮತ್ತು 644 ಎಡಿ ಯಲ್ಲಿ ನಿರ್ಮಿಸಲಾದ ಕರ್ನಾಟಕ ರಾಜ್ಯದ ಅತ್ಯಂತ ಹಳೆಯ ಮಸೀದಿಯಾಗಿದೆ. ‘ಬೆಳ್ಳಿಯೆ ಪಲ್ಲಿ’ (ಬ್ಯಾರಿ ಭಾಷೆಯಲ್ಲಿ ದೊಡ್ಡ ಮಸೀದಿ) ಎಂದೂ ಕರೆಯಲ್ಪಡುವ ಈ ಮಸೀದಿಯು ಮಂಗಳೂರು ನಗರದ ಬಂದರ್ ಪ್ರದೇಶದಲ್ಲಿದೆ. ಇದು ಶುದ್ಧ ಭಾರತೀಯ ವಾಸ್ತುಶಿಲ್ಪ ಶೈಲಿಗೆ ಹೆಸರುವಾಸಿಯಾಗಿದೆ” ಎಂದು ವಿಕಿಪೀಡಿಯದಲ್ಲಿ ಮಾಹಿತಿಯಿದೆ.

18ನೇ ಶತಮಾನದಲ್ಲಿ, ಅಂದಿನ ಮೈಸೂರು ಸಂಸ್ಥಾನದ ರಾಜನಾಗಿದ್ದ ಟಿಪ್ಪು ಸುಲ್ತಾನ್ ಅವರು ಮಸೀದಿಯ ನವೀಕರಣ ಕಾರ್ಯ ನಡೆಸಿದ್ದರು. ಮಾತ್ರವಲ್ಲದೆ ಸೊಗಸಾದ ಮರದ ಕೆತ್ತನೆಯಿಂದ ಮಸೀದಿಯನ್ನು ಸುಂದರಗೊಳಿಸಿದ್ದರು. ಅಲ್ಲದೆ, ‘ಮಾಲಿಕ್ ದೀನಾರ್ ವೆಳಿಯ ಜುಮಅತ್ ಮಸ್ಜಿದ್’ ಎಂದಿದ್ದ ಮಸೀದಿಯ ಹೆಸರನ್ನು ‘ಝೀನತ್ ಬಕ್ಷ್’ ಎಂದು ಬದಲಾಯಿಸಿದರು ಎಂದು ಹೇಳಲಾಗಿದೆ.

ವಿಕಿಪೀಡಿಯ ಲಿಂಕ್ 

ಇವಿಷ್ಟೆ ಅಲ್ಲದೆ ಝೀನತ್ ಬಕ್ಷ್ ಮಸೀದಿಯ ಕುರಿತು ಹಲವಾರು ಲೇಖನಗಳು ಆನ್‌ಲೈನ್‌ನಲ್ಲಿ ಲಭ್ಯವಿದೆ. ಇವೆಲ್ಲದರ ಆಧಾರದಲ್ಲಿ ಹೇಳುವುದಾದರೆ, ವೈರಲ್ ವಿಡಿಯೋದಲ್ಲಿರುವುದು ಮಂಗಳೂರಿನ ಝೀನತ್ ಬಕ್ಷ್ ಮಸೀದಿ. ಅದು ಮುಂಚೆ ದೇವಸ್ಥಾನವಾಗಿತ್ತು ಎಂಬುವುದು ಸುಳ್ಳು.

ಮಸೀದಿಯ ಇತಿಹಾಸದ ಕುರಿತ ಇನ್ನಷ್ಟು ಲೇಖನಗಳುಇಲ್ಲಿ ಇಲ್ಲಿ ಇಲ್ಲಿ

ಸುಳ್ಳು : ಏಷ್ಯಾದ ಮೊದಲ ಮಸೀದಿ ಮುಂಚೆ ದೇವಾಲಯವಾಗಿತ್ತು. ಕರ್ನಾಟಕದಲ್ಲಿ ಹಿಂದೂ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ.

ಸತ್ಯ :
ವೈರಲ್ ವಿಡಿಯೋದಲ್ಲಿರುವುದು ಮಂಗಳೂರಿನ ಝೀನತ್ ಬಕ್ಷ್ ಮಸೀದಿ. ಅದು ಮಂದಿರವನ್ನು ಮಸೀದಿಯಾಗಿ ಪರಿವರ್ತಿಸಿದಲ್ಲ. 

ಇದನ್ನೂ ಓದಿ : Fact Check: ಮಸೀದಿ ಮುಂದೆ ಮಹಿಳೆಯರಿಂದ ಅಶ್ಲೀಲ ಕೃತ್ಯವೆಂದು ಸುಳ್ಳು ಸುದ್ದಿ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...