Homeಫ್ಯಾಕ್ಟ್‌ಚೆಕ್Fact Check: ಕರ್ನಾಟಕದಲ್ಲಿ ಮಂದಿರವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎಂಬುವುದು ಸುಳ್ಳು

Fact Check: ಕರ್ನಾಟಕದಲ್ಲಿ ಮಂದಿರವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

“ಏಷ್ಯಾದ ಮೊದಲ ಮಸೀದಿ ಮುಂಚೆ ದೇವಾಲಯವಾಗಿತ್ತು. ಕರ್ನಾಟಕದಲ್ಲಿ ಹಿಂದೂ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ” ಇತ್ಯಾದಿ ಬರಹಗಳೊಂದಿಗೆ ಪ್ರಾಚೀನ ಮಸೀದಿಯೊಂದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

‘ಕೇಶವ ಬೀಜಾಡಿ’ ಎಂಬ ಫೇಸ್‌ಬುಕ್ ಬಳಕೆದಾರ “ಏಷ್ಯಾದ ಮೊದಲ ಮಸೀದಿ ಮುಂಚೆ ದೇವಾಲಯವಾಗಿತ್ತು. ಪಣವಿಡುವೆವು ಭಗವಂತನ ಪಾದದ ಮೆಲಾಣೆ.. ಮಂದಿರವಲ್ಲೇ ಕಟ್ಟುವೆವು” ಎಂದು ಪುರಾತನ ಮಸೀದಿಯ ವಿಡಿಯೋ ಹಂಚಿಕೊಂಡಿದ್ದಾರೆ.

ಇನ್ನಿಬ್ಬರು ಎಕ್ಸ್ ಬಳಕೆದಾರರು “ಕರ್ನಾಟಕದಲ್ಲಿ ಹಿಂದೂ ಮಂದಿರವನ್ನು ಜಿಹಾದಿಗಳು ವಶಪಡಿಸಿಕೊಂಡು ಮಸೀದಿಯಾಗಿ ಪರಿವರ್ತಿಸಿದ್ದಾರೆ” ಎಂದು ಹಿಂದಿಯಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಪೋಸ್ಟ್ ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ. ಇದಕ್ಕಾಗಿ ನಾವು ವೈರಲ್‌ ವಿಡಿಯೋದಲ್ಲಿರುವ ಮಸೀದಿಯ ಸ್ಕ್ರೀನ್ ಶಾಟ್ ತೆಗೆದು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ವಿಡಿಯೋದಲ್ಲಿರುವ ಮಸೀದಿಯು ಹಲವಾರು ಯೂಟ್ಯೂಬ್ ಚಾನೆಲ್‌ಗಳಲ್ಲಿ ಕಂಡು ಬಂದಿದೆ.

‘M Shameer’ಎಂಬ ಹೆಸರಿನ ಯೂಟ್ಯೂಬ್ ಚಾನೆಲ್‌ನಲ್ಲಿ ಮಸೀದಿಯ ಸಂಪೂರ್ಣ ವಿಡಿಯೋ ಅಪ್ಲೋಡ್ ಮಾಡಲಾಗಿದ್ದು, ಇದು ಭಾರತದ ಮೂರನೇ ಅತ್ಯಂತ ಪುರಾತನ ಮಸೀದಿಯಾಗಿರುವ ಮಂಗಳೂರಿನ ಝೀನತ್ ಬಕ್ಷ್ ಮಸೀದಿ ಎಂದು ತಿಳಿಸಿದ್ದಾರೆ.

ಯೂಟ್ಯೂಬ್ ಲಿಂಕ್ 

ನಾವು ಗೂಗಲ್‌ನಲ್ಲಿ ‘ಝೀನತ್ ಬಕ್ಷ್’ ಎಂದು ಸರ್ಚ್‌ ಮಾಡಿದಾಗ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಝೀನತ್ ಬಕ್ಸ್‌ ಮಸೀದಿಯ ಕುರಿತು ಮಾಹಿತಿ ದೊರೆತಿದೆ.

ಸರ್ಕಾರದ ವೆಬ್‌ಸೈಟ್‌ನಲ್ಲಿ ಹೇಳಿರುವಂತೆ “ಮಸ್ಜಿದ್ ಝೀನತ್ ಬಕ್ಷ್ ಮಂಗಳೂರಿನ ಬಂದರ್ ಪ್ರದೇಶದಲ್ಲಿದೆ. ಈ ಮಸೀದಿಯು ಪ್ರವಾದಿ ಮೊಹಮ್ಮದ್ ಅವರ ಜೀವನ ಕಥೆಗಳನ್ನು ಚಿತ್ರಿಸುತ್ತದೆ. ಕ್ರಿಸ್ತಶಕ 644 ರಲ್ಲಿ ಅರಬ್ ಮುಸ್ಲಿಂ ವ್ಯಾಪಾರಿಗಳಿಂದ ಇದು ಸ್ಥಾಪಿಸಲ್ಪಟ್ಟಿದೆ ಎಂದು ನಂಬಲಾಗಿದೆ. ಈ ಮಸೀದಿಯು ತನ್ನ ಶುದ್ಧ ಭಾರತೀಯ ವಾಸ್ತುಶಿಲ್ಪದ ಶೈಲಿಯಿಂದಾಗಿ ಎಲ್ಲಾ ಮಸೀದಿಗಳನ್ನು ಮೀರಿಸುತ್ತದೆ. ಇದು ಬಹುಶಃ ಸಂಪೂರ್ಣವಾಗಿ ಮರದಿಂದ ಮಾಡಿದ ಕರ್ನಾಟಕದ ಏಕೈಕ ಮಸೀದಿಯಾಗಿದೆ. ಮಸೀದಿಯ ಮುಖ್ಯ ಮುಖ್ಯಾಂಶವೆಂದರೆ ತೇಗದಿಂದ ಮಾಡಿದ 16 ಕಂಬಗಳನ್ನು ಇದು ಒಳಗೊಂಡಿದೆ.

ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ವೆಬ್‌ಸೈಟ್ ಲಿಂಕ್

ಸರ್ಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಹೇಳಿರುವಂತೆ ಝೀನತ್ ಬಕ್ಷ್ ಮಸೀದಿಯು ಯಾವುದೇ ದೇವಸ್ಥಾನವನ್ನು ಪರಿವರ್ತಿಸಿ ಮಾಡಿರುವಂತದಲ್ಲ.

“ಝೀನತ್ ಬಕ್ಷ್ ಜುಮಾ ಮಸೀದಿ (ಸೌಂದರ್ಯವನ್ನು ಪ್ರತಿಬಿಂಬಿಸುವ ಮಸೀದಿ) ಸಾಮಾನ್ಯವಾಗಿ ಮಸ್ಜಿದ್ ಜೀನತ್ ಬಕ್ಷ್ ಎಂದು ಇದನ್ನು ಕರೆಯಲ್ಪಡುತ್ತದೆ. ಇದು ಭಾರತದ 3 ನೇ ಅತ್ಯಂತ ಹಳೆಯ ಮಸೀದಿಯಾಗಿದೆ ಮತ್ತು 644 ಎಡಿ ಯಲ್ಲಿ ನಿರ್ಮಿಸಲಾದ ಕರ್ನಾಟಕ ರಾಜ್ಯದ ಅತ್ಯಂತ ಹಳೆಯ ಮಸೀದಿಯಾಗಿದೆ. ‘ಬೆಳ್ಳಿಯೆ ಪಲ್ಲಿ’ (ಬ್ಯಾರಿ ಭಾಷೆಯಲ್ಲಿ ದೊಡ್ಡ ಮಸೀದಿ) ಎಂದೂ ಕರೆಯಲ್ಪಡುವ ಈ ಮಸೀದಿಯು ಮಂಗಳೂರು ನಗರದ ಬಂದರ್ ಪ್ರದೇಶದಲ್ಲಿದೆ. ಇದು ಶುದ್ಧ ಭಾರತೀಯ ವಾಸ್ತುಶಿಲ್ಪ ಶೈಲಿಗೆ ಹೆಸರುವಾಸಿಯಾಗಿದೆ” ಎಂದು ವಿಕಿಪೀಡಿಯದಲ್ಲಿ ಮಾಹಿತಿಯಿದೆ.

18ನೇ ಶತಮಾನದಲ್ಲಿ, ಅಂದಿನ ಮೈಸೂರು ಸಂಸ್ಥಾನದ ರಾಜನಾಗಿದ್ದ ಟಿಪ್ಪು ಸುಲ್ತಾನ್ ಅವರು ಮಸೀದಿಯ ನವೀಕರಣ ಕಾರ್ಯ ನಡೆಸಿದ್ದರು. ಮಾತ್ರವಲ್ಲದೆ ಸೊಗಸಾದ ಮರದ ಕೆತ್ತನೆಯಿಂದ ಮಸೀದಿಯನ್ನು ಸುಂದರಗೊಳಿಸಿದ್ದರು. ಅಲ್ಲದೆ, ‘ಮಾಲಿಕ್ ದೀನಾರ್ ವೆಳಿಯ ಜುಮಅತ್ ಮಸ್ಜಿದ್’ ಎಂದಿದ್ದ ಮಸೀದಿಯ ಹೆಸರನ್ನು ‘ಝೀನತ್ ಬಕ್ಷ್’ ಎಂದು ಬದಲಾಯಿಸಿದರು ಎಂದು ಹೇಳಲಾಗಿದೆ.

ವಿಕಿಪೀಡಿಯ ಲಿಂಕ್ 

ಇವಿಷ್ಟೆ ಅಲ್ಲದೆ ಝೀನತ್ ಬಕ್ಷ್ ಮಸೀದಿಯ ಕುರಿತು ಹಲವಾರು ಲೇಖನಗಳು ಆನ್‌ಲೈನ್‌ನಲ್ಲಿ ಲಭ್ಯವಿದೆ. ಇವೆಲ್ಲದರ ಆಧಾರದಲ್ಲಿ ಹೇಳುವುದಾದರೆ, ವೈರಲ್ ವಿಡಿಯೋದಲ್ಲಿರುವುದು ಮಂಗಳೂರಿನ ಝೀನತ್ ಬಕ್ಷ್ ಮಸೀದಿ. ಅದು ಮುಂಚೆ ದೇವಸ್ಥಾನವಾಗಿತ್ತು ಎಂಬುವುದು ಸುಳ್ಳು.

ಮಸೀದಿಯ ಇತಿಹಾಸದ ಕುರಿತ ಇನ್ನಷ್ಟು ಲೇಖನಗಳುಇಲ್ಲಿ ಇಲ್ಲಿ ಇಲ್ಲಿ

ಸುಳ್ಳು : ಏಷ್ಯಾದ ಮೊದಲ ಮಸೀದಿ ಮುಂಚೆ ದೇವಾಲಯವಾಗಿತ್ತು. ಕರ್ನಾಟಕದಲ್ಲಿ ಹಿಂದೂ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ.

ಸತ್ಯ :
ವೈರಲ್ ವಿಡಿಯೋದಲ್ಲಿರುವುದು ಮಂಗಳೂರಿನ ಝೀನತ್ ಬಕ್ಷ್ ಮಸೀದಿ. ಅದು ಮಂದಿರವನ್ನು ಮಸೀದಿಯಾಗಿ ಪರಿವರ್ತಿಸಿದಲ್ಲ. 

ಇದನ್ನೂ ಓದಿ : Fact Check: ಮಸೀದಿ ಮುಂದೆ ಮಹಿಳೆಯರಿಂದ ಅಶ್ಲೀಲ ಕೃತ್ಯವೆಂದು ಸುಳ್ಳು ಸುದ್ದಿ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...