Homeಫ್ಯಾಕ್ಟ್‌ಚೆಕ್Fact Check: ಕರ್ನಾಟಕದಲ್ಲಿ ಮಂದಿರವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎಂಬುವುದು ಸುಳ್ಳು

Fact Check: ಕರ್ನಾಟಕದಲ್ಲಿ ಮಂದಿರವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

“ಏಷ್ಯಾದ ಮೊದಲ ಮಸೀದಿ ಮುಂಚೆ ದೇವಾಲಯವಾಗಿತ್ತು. ಕರ್ನಾಟಕದಲ್ಲಿ ಹಿಂದೂ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ” ಇತ್ಯಾದಿ ಬರಹಗಳೊಂದಿಗೆ ಪ್ರಾಚೀನ ಮಸೀದಿಯೊಂದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

‘ಕೇಶವ ಬೀಜಾಡಿ’ ಎಂಬ ಫೇಸ್‌ಬುಕ್ ಬಳಕೆದಾರ “ಏಷ್ಯಾದ ಮೊದಲ ಮಸೀದಿ ಮುಂಚೆ ದೇವಾಲಯವಾಗಿತ್ತು. ಪಣವಿಡುವೆವು ಭಗವಂತನ ಪಾದದ ಮೆಲಾಣೆ.. ಮಂದಿರವಲ್ಲೇ ಕಟ್ಟುವೆವು” ಎಂದು ಪುರಾತನ ಮಸೀದಿಯ ವಿಡಿಯೋ ಹಂಚಿಕೊಂಡಿದ್ದಾರೆ.

ಇನ್ನಿಬ್ಬರು ಎಕ್ಸ್ ಬಳಕೆದಾರರು “ಕರ್ನಾಟಕದಲ್ಲಿ ಹಿಂದೂ ಮಂದಿರವನ್ನು ಜಿಹಾದಿಗಳು ವಶಪಡಿಸಿಕೊಂಡು ಮಸೀದಿಯಾಗಿ ಪರಿವರ್ತಿಸಿದ್ದಾರೆ” ಎಂದು ಹಿಂದಿಯಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಪೋಸ್ಟ್ ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ. ಇದಕ್ಕಾಗಿ ನಾವು ವೈರಲ್‌ ವಿಡಿಯೋದಲ್ಲಿರುವ ಮಸೀದಿಯ ಸ್ಕ್ರೀನ್ ಶಾಟ್ ತೆಗೆದು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ವಿಡಿಯೋದಲ್ಲಿರುವ ಮಸೀದಿಯು ಹಲವಾರು ಯೂಟ್ಯೂಬ್ ಚಾನೆಲ್‌ಗಳಲ್ಲಿ ಕಂಡು ಬಂದಿದೆ.

‘M Shameer’ಎಂಬ ಹೆಸರಿನ ಯೂಟ್ಯೂಬ್ ಚಾನೆಲ್‌ನಲ್ಲಿ ಮಸೀದಿಯ ಸಂಪೂರ್ಣ ವಿಡಿಯೋ ಅಪ್ಲೋಡ್ ಮಾಡಲಾಗಿದ್ದು, ಇದು ಭಾರತದ ಮೂರನೇ ಅತ್ಯಂತ ಪುರಾತನ ಮಸೀದಿಯಾಗಿರುವ ಮಂಗಳೂರಿನ ಝೀನತ್ ಬಕ್ಷ್ ಮಸೀದಿ ಎಂದು ತಿಳಿಸಿದ್ದಾರೆ.

ಯೂಟ್ಯೂಬ್ ಲಿಂಕ್ 

ನಾವು ಗೂಗಲ್‌ನಲ್ಲಿ ‘ಝೀನತ್ ಬಕ್ಷ್’ ಎಂದು ಸರ್ಚ್‌ ಮಾಡಿದಾಗ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಝೀನತ್ ಬಕ್ಸ್‌ ಮಸೀದಿಯ ಕುರಿತು ಮಾಹಿತಿ ದೊರೆತಿದೆ.

ಸರ್ಕಾರದ ವೆಬ್‌ಸೈಟ್‌ನಲ್ಲಿ ಹೇಳಿರುವಂತೆ “ಮಸ್ಜಿದ್ ಝೀನತ್ ಬಕ್ಷ್ ಮಂಗಳೂರಿನ ಬಂದರ್ ಪ್ರದೇಶದಲ್ಲಿದೆ. ಈ ಮಸೀದಿಯು ಪ್ರವಾದಿ ಮೊಹಮ್ಮದ್ ಅವರ ಜೀವನ ಕಥೆಗಳನ್ನು ಚಿತ್ರಿಸುತ್ತದೆ. ಕ್ರಿಸ್ತಶಕ 644 ರಲ್ಲಿ ಅರಬ್ ಮುಸ್ಲಿಂ ವ್ಯಾಪಾರಿಗಳಿಂದ ಇದು ಸ್ಥಾಪಿಸಲ್ಪಟ್ಟಿದೆ ಎಂದು ನಂಬಲಾಗಿದೆ. ಈ ಮಸೀದಿಯು ತನ್ನ ಶುದ್ಧ ಭಾರತೀಯ ವಾಸ್ತುಶಿಲ್ಪದ ಶೈಲಿಯಿಂದಾಗಿ ಎಲ್ಲಾ ಮಸೀದಿಗಳನ್ನು ಮೀರಿಸುತ್ತದೆ. ಇದು ಬಹುಶಃ ಸಂಪೂರ್ಣವಾಗಿ ಮರದಿಂದ ಮಾಡಿದ ಕರ್ನಾಟಕದ ಏಕೈಕ ಮಸೀದಿಯಾಗಿದೆ. ಮಸೀದಿಯ ಮುಖ್ಯ ಮುಖ್ಯಾಂಶವೆಂದರೆ ತೇಗದಿಂದ ಮಾಡಿದ 16 ಕಂಬಗಳನ್ನು ಇದು ಒಳಗೊಂಡಿದೆ.

ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ವೆಬ್‌ಸೈಟ್ ಲಿಂಕ್

ಸರ್ಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಹೇಳಿರುವಂತೆ ಝೀನತ್ ಬಕ್ಷ್ ಮಸೀದಿಯು ಯಾವುದೇ ದೇವಸ್ಥಾನವನ್ನು ಪರಿವರ್ತಿಸಿ ಮಾಡಿರುವಂತದಲ್ಲ.

“ಝೀನತ್ ಬಕ್ಷ್ ಜುಮಾ ಮಸೀದಿ (ಸೌಂದರ್ಯವನ್ನು ಪ್ರತಿಬಿಂಬಿಸುವ ಮಸೀದಿ) ಸಾಮಾನ್ಯವಾಗಿ ಮಸ್ಜಿದ್ ಜೀನತ್ ಬಕ್ಷ್ ಎಂದು ಇದನ್ನು ಕರೆಯಲ್ಪಡುತ್ತದೆ. ಇದು ಭಾರತದ 3 ನೇ ಅತ್ಯಂತ ಹಳೆಯ ಮಸೀದಿಯಾಗಿದೆ ಮತ್ತು 644 ಎಡಿ ಯಲ್ಲಿ ನಿರ್ಮಿಸಲಾದ ಕರ್ನಾಟಕ ರಾಜ್ಯದ ಅತ್ಯಂತ ಹಳೆಯ ಮಸೀದಿಯಾಗಿದೆ. ‘ಬೆಳ್ಳಿಯೆ ಪಲ್ಲಿ’ (ಬ್ಯಾರಿ ಭಾಷೆಯಲ್ಲಿ ದೊಡ್ಡ ಮಸೀದಿ) ಎಂದೂ ಕರೆಯಲ್ಪಡುವ ಈ ಮಸೀದಿಯು ಮಂಗಳೂರು ನಗರದ ಬಂದರ್ ಪ್ರದೇಶದಲ್ಲಿದೆ. ಇದು ಶುದ್ಧ ಭಾರತೀಯ ವಾಸ್ತುಶಿಲ್ಪ ಶೈಲಿಗೆ ಹೆಸರುವಾಸಿಯಾಗಿದೆ” ಎಂದು ವಿಕಿಪೀಡಿಯದಲ್ಲಿ ಮಾಹಿತಿಯಿದೆ.

18ನೇ ಶತಮಾನದಲ್ಲಿ, ಅಂದಿನ ಮೈಸೂರು ಸಂಸ್ಥಾನದ ರಾಜನಾಗಿದ್ದ ಟಿಪ್ಪು ಸುಲ್ತಾನ್ ಅವರು ಮಸೀದಿಯ ನವೀಕರಣ ಕಾರ್ಯ ನಡೆಸಿದ್ದರು. ಮಾತ್ರವಲ್ಲದೆ ಸೊಗಸಾದ ಮರದ ಕೆತ್ತನೆಯಿಂದ ಮಸೀದಿಯನ್ನು ಸುಂದರಗೊಳಿಸಿದ್ದರು. ಅಲ್ಲದೆ, ‘ಮಾಲಿಕ್ ದೀನಾರ್ ವೆಳಿಯ ಜುಮಅತ್ ಮಸ್ಜಿದ್’ ಎಂದಿದ್ದ ಮಸೀದಿಯ ಹೆಸರನ್ನು ‘ಝೀನತ್ ಬಕ್ಷ್’ ಎಂದು ಬದಲಾಯಿಸಿದರು ಎಂದು ಹೇಳಲಾಗಿದೆ.

ವಿಕಿಪೀಡಿಯ ಲಿಂಕ್ 

ಇವಿಷ್ಟೆ ಅಲ್ಲದೆ ಝೀನತ್ ಬಕ್ಷ್ ಮಸೀದಿಯ ಕುರಿತು ಹಲವಾರು ಲೇಖನಗಳು ಆನ್‌ಲೈನ್‌ನಲ್ಲಿ ಲಭ್ಯವಿದೆ. ಇವೆಲ್ಲದರ ಆಧಾರದಲ್ಲಿ ಹೇಳುವುದಾದರೆ, ವೈರಲ್ ವಿಡಿಯೋದಲ್ಲಿರುವುದು ಮಂಗಳೂರಿನ ಝೀನತ್ ಬಕ್ಷ್ ಮಸೀದಿ. ಅದು ಮುಂಚೆ ದೇವಸ್ಥಾನವಾಗಿತ್ತು ಎಂಬುವುದು ಸುಳ್ಳು.

ಮಸೀದಿಯ ಇತಿಹಾಸದ ಕುರಿತ ಇನ್ನಷ್ಟು ಲೇಖನಗಳುಇಲ್ಲಿ ಇಲ್ಲಿ ಇಲ್ಲಿ

ಸುಳ್ಳು : ಏಷ್ಯಾದ ಮೊದಲ ಮಸೀದಿ ಮುಂಚೆ ದೇವಾಲಯವಾಗಿತ್ತು. ಕರ್ನಾಟಕದಲ್ಲಿ ಹಿಂದೂ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ.

ಸತ್ಯ :
ವೈರಲ್ ವಿಡಿಯೋದಲ್ಲಿರುವುದು ಮಂಗಳೂರಿನ ಝೀನತ್ ಬಕ್ಷ್ ಮಸೀದಿ. ಅದು ಮಂದಿರವನ್ನು ಮಸೀದಿಯಾಗಿ ಪರಿವರ್ತಿಸಿದಲ್ಲ. 

ಇದನ್ನೂ ಓದಿ : Fact Check: ಮಸೀದಿ ಮುಂದೆ ಮಹಿಳೆಯರಿಂದ ಅಶ್ಲೀಲ ಕೃತ್ಯವೆಂದು ಸುಳ್ಳು ಸುದ್ದಿ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...