Homeಫ್ಯಾಕ್ಟ್‌ಚೆಕ್Fact Check: ಕರ್ನಾಟಕದಲ್ಲಿ ಮಂದಿರವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎಂಬುವುದು ಸುಳ್ಳು

Fact Check: ಕರ್ನಾಟಕದಲ್ಲಿ ಮಂದಿರವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

“ಏಷ್ಯಾದ ಮೊದಲ ಮಸೀದಿ ಮುಂಚೆ ದೇವಾಲಯವಾಗಿತ್ತು. ಕರ್ನಾಟಕದಲ್ಲಿ ಹಿಂದೂ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ” ಇತ್ಯಾದಿ ಬರಹಗಳೊಂದಿಗೆ ಪ್ರಾಚೀನ ಮಸೀದಿಯೊಂದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

‘ಕೇಶವ ಬೀಜಾಡಿ’ ಎಂಬ ಫೇಸ್‌ಬುಕ್ ಬಳಕೆದಾರ “ಏಷ್ಯಾದ ಮೊದಲ ಮಸೀದಿ ಮುಂಚೆ ದೇವಾಲಯವಾಗಿತ್ತು. ಪಣವಿಡುವೆವು ಭಗವಂತನ ಪಾದದ ಮೆಲಾಣೆ.. ಮಂದಿರವಲ್ಲೇ ಕಟ್ಟುವೆವು” ಎಂದು ಪುರಾತನ ಮಸೀದಿಯ ವಿಡಿಯೋ ಹಂಚಿಕೊಂಡಿದ್ದಾರೆ.

ಇನ್ನಿಬ್ಬರು ಎಕ್ಸ್ ಬಳಕೆದಾರರು “ಕರ್ನಾಟಕದಲ್ಲಿ ಹಿಂದೂ ಮಂದಿರವನ್ನು ಜಿಹಾದಿಗಳು ವಶಪಡಿಸಿಕೊಂಡು ಮಸೀದಿಯಾಗಿ ಪರಿವರ್ತಿಸಿದ್ದಾರೆ” ಎಂದು ಹಿಂದಿಯಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಪೋಸ್ಟ್ ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ. ಇದಕ್ಕಾಗಿ ನಾವು ವೈರಲ್‌ ವಿಡಿಯೋದಲ್ಲಿರುವ ಮಸೀದಿಯ ಸ್ಕ್ರೀನ್ ಶಾಟ್ ತೆಗೆದು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ವಿಡಿಯೋದಲ್ಲಿರುವ ಮಸೀದಿಯು ಹಲವಾರು ಯೂಟ್ಯೂಬ್ ಚಾನೆಲ್‌ಗಳಲ್ಲಿ ಕಂಡು ಬಂದಿದೆ.

‘M Shameer’ಎಂಬ ಹೆಸರಿನ ಯೂಟ್ಯೂಬ್ ಚಾನೆಲ್‌ನಲ್ಲಿ ಮಸೀದಿಯ ಸಂಪೂರ್ಣ ವಿಡಿಯೋ ಅಪ್ಲೋಡ್ ಮಾಡಲಾಗಿದ್ದು, ಇದು ಭಾರತದ ಮೂರನೇ ಅತ್ಯಂತ ಪುರಾತನ ಮಸೀದಿಯಾಗಿರುವ ಮಂಗಳೂರಿನ ಝೀನತ್ ಬಕ್ಷ್ ಮಸೀದಿ ಎಂದು ತಿಳಿಸಿದ್ದಾರೆ.

ಯೂಟ್ಯೂಬ್ ಲಿಂಕ್ 

ನಾವು ಗೂಗಲ್‌ನಲ್ಲಿ ‘ಝೀನತ್ ಬಕ್ಷ್’ ಎಂದು ಸರ್ಚ್‌ ಮಾಡಿದಾಗ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಝೀನತ್ ಬಕ್ಸ್‌ ಮಸೀದಿಯ ಕುರಿತು ಮಾಹಿತಿ ದೊರೆತಿದೆ.

ಸರ್ಕಾರದ ವೆಬ್‌ಸೈಟ್‌ನಲ್ಲಿ ಹೇಳಿರುವಂತೆ “ಮಸ್ಜಿದ್ ಝೀನತ್ ಬಕ್ಷ್ ಮಂಗಳೂರಿನ ಬಂದರ್ ಪ್ರದೇಶದಲ್ಲಿದೆ. ಈ ಮಸೀದಿಯು ಪ್ರವಾದಿ ಮೊಹಮ್ಮದ್ ಅವರ ಜೀವನ ಕಥೆಗಳನ್ನು ಚಿತ್ರಿಸುತ್ತದೆ. ಕ್ರಿಸ್ತಶಕ 644 ರಲ್ಲಿ ಅರಬ್ ಮುಸ್ಲಿಂ ವ್ಯಾಪಾರಿಗಳಿಂದ ಇದು ಸ್ಥಾಪಿಸಲ್ಪಟ್ಟಿದೆ ಎಂದು ನಂಬಲಾಗಿದೆ. ಈ ಮಸೀದಿಯು ತನ್ನ ಶುದ್ಧ ಭಾರತೀಯ ವಾಸ್ತುಶಿಲ್ಪದ ಶೈಲಿಯಿಂದಾಗಿ ಎಲ್ಲಾ ಮಸೀದಿಗಳನ್ನು ಮೀರಿಸುತ್ತದೆ. ಇದು ಬಹುಶಃ ಸಂಪೂರ್ಣವಾಗಿ ಮರದಿಂದ ಮಾಡಿದ ಕರ್ನಾಟಕದ ಏಕೈಕ ಮಸೀದಿಯಾಗಿದೆ. ಮಸೀದಿಯ ಮುಖ್ಯ ಮುಖ್ಯಾಂಶವೆಂದರೆ ತೇಗದಿಂದ ಮಾಡಿದ 16 ಕಂಬಗಳನ್ನು ಇದು ಒಳಗೊಂಡಿದೆ.

ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ವೆಬ್‌ಸೈಟ್ ಲಿಂಕ್

ಸರ್ಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಹೇಳಿರುವಂತೆ ಝೀನತ್ ಬಕ್ಷ್ ಮಸೀದಿಯು ಯಾವುದೇ ದೇವಸ್ಥಾನವನ್ನು ಪರಿವರ್ತಿಸಿ ಮಾಡಿರುವಂತದಲ್ಲ.

“ಝೀನತ್ ಬಕ್ಷ್ ಜುಮಾ ಮಸೀದಿ (ಸೌಂದರ್ಯವನ್ನು ಪ್ರತಿಬಿಂಬಿಸುವ ಮಸೀದಿ) ಸಾಮಾನ್ಯವಾಗಿ ಮಸ್ಜಿದ್ ಜೀನತ್ ಬಕ್ಷ್ ಎಂದು ಇದನ್ನು ಕರೆಯಲ್ಪಡುತ್ತದೆ. ಇದು ಭಾರತದ 3 ನೇ ಅತ್ಯಂತ ಹಳೆಯ ಮಸೀದಿಯಾಗಿದೆ ಮತ್ತು 644 ಎಡಿ ಯಲ್ಲಿ ನಿರ್ಮಿಸಲಾದ ಕರ್ನಾಟಕ ರಾಜ್ಯದ ಅತ್ಯಂತ ಹಳೆಯ ಮಸೀದಿಯಾಗಿದೆ. ‘ಬೆಳ್ಳಿಯೆ ಪಲ್ಲಿ’ (ಬ್ಯಾರಿ ಭಾಷೆಯಲ್ಲಿ ದೊಡ್ಡ ಮಸೀದಿ) ಎಂದೂ ಕರೆಯಲ್ಪಡುವ ಈ ಮಸೀದಿಯು ಮಂಗಳೂರು ನಗರದ ಬಂದರ್ ಪ್ರದೇಶದಲ್ಲಿದೆ. ಇದು ಶುದ್ಧ ಭಾರತೀಯ ವಾಸ್ತುಶಿಲ್ಪ ಶೈಲಿಗೆ ಹೆಸರುವಾಸಿಯಾಗಿದೆ” ಎಂದು ವಿಕಿಪೀಡಿಯದಲ್ಲಿ ಮಾಹಿತಿಯಿದೆ.

18ನೇ ಶತಮಾನದಲ್ಲಿ, ಅಂದಿನ ಮೈಸೂರು ಸಂಸ್ಥಾನದ ರಾಜನಾಗಿದ್ದ ಟಿಪ್ಪು ಸುಲ್ತಾನ್ ಅವರು ಮಸೀದಿಯ ನವೀಕರಣ ಕಾರ್ಯ ನಡೆಸಿದ್ದರು. ಮಾತ್ರವಲ್ಲದೆ ಸೊಗಸಾದ ಮರದ ಕೆತ್ತನೆಯಿಂದ ಮಸೀದಿಯನ್ನು ಸುಂದರಗೊಳಿಸಿದ್ದರು. ಅಲ್ಲದೆ, ‘ಮಾಲಿಕ್ ದೀನಾರ್ ವೆಳಿಯ ಜುಮಅತ್ ಮಸ್ಜಿದ್’ ಎಂದಿದ್ದ ಮಸೀದಿಯ ಹೆಸರನ್ನು ‘ಝೀನತ್ ಬಕ್ಷ್’ ಎಂದು ಬದಲಾಯಿಸಿದರು ಎಂದು ಹೇಳಲಾಗಿದೆ.

ವಿಕಿಪೀಡಿಯ ಲಿಂಕ್ 

ಇವಿಷ್ಟೆ ಅಲ್ಲದೆ ಝೀನತ್ ಬಕ್ಷ್ ಮಸೀದಿಯ ಕುರಿತು ಹಲವಾರು ಲೇಖನಗಳು ಆನ್‌ಲೈನ್‌ನಲ್ಲಿ ಲಭ್ಯವಿದೆ. ಇವೆಲ್ಲದರ ಆಧಾರದಲ್ಲಿ ಹೇಳುವುದಾದರೆ, ವೈರಲ್ ವಿಡಿಯೋದಲ್ಲಿರುವುದು ಮಂಗಳೂರಿನ ಝೀನತ್ ಬಕ್ಷ್ ಮಸೀದಿ. ಅದು ಮುಂಚೆ ದೇವಸ್ಥಾನವಾಗಿತ್ತು ಎಂಬುವುದು ಸುಳ್ಳು.

ಮಸೀದಿಯ ಇತಿಹಾಸದ ಕುರಿತ ಇನ್ನಷ್ಟು ಲೇಖನಗಳುಇಲ್ಲಿ ಇಲ್ಲಿ ಇಲ್ಲಿ

ಸುಳ್ಳು : ಏಷ್ಯಾದ ಮೊದಲ ಮಸೀದಿ ಮುಂಚೆ ದೇವಾಲಯವಾಗಿತ್ತು. ಕರ್ನಾಟಕದಲ್ಲಿ ಹಿಂದೂ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ.

ಸತ್ಯ :
ವೈರಲ್ ವಿಡಿಯೋದಲ್ಲಿರುವುದು ಮಂಗಳೂರಿನ ಝೀನತ್ ಬಕ್ಷ್ ಮಸೀದಿ. ಅದು ಮಂದಿರವನ್ನು ಮಸೀದಿಯಾಗಿ ಪರಿವರ್ತಿಸಿದಲ್ಲ. 

ಇದನ್ನೂ ಓದಿ : Fact Check: ಮಸೀದಿ ಮುಂದೆ ಮಹಿಳೆಯರಿಂದ ಅಶ್ಲೀಲ ಕೃತ್ಯವೆಂದು ಸುಳ್ಳು ಸುದ್ದಿ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...