Homeಫ್ಯಾಕ್ಟ್‌ಚೆಕ್Fact Check: ಕರ್ನಾಟಕದಲ್ಲಿ ಮಂದಿರವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎಂಬುವುದು ಸುಳ್ಳು

Fact Check: ಕರ್ನಾಟಕದಲ್ಲಿ ಮಂದಿರವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

“ಏಷ್ಯಾದ ಮೊದಲ ಮಸೀದಿ ಮುಂಚೆ ದೇವಾಲಯವಾಗಿತ್ತು. ಕರ್ನಾಟಕದಲ್ಲಿ ಹಿಂದೂ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ” ಇತ್ಯಾದಿ ಬರಹಗಳೊಂದಿಗೆ ಪ್ರಾಚೀನ ಮಸೀದಿಯೊಂದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

‘ಕೇಶವ ಬೀಜಾಡಿ’ ಎಂಬ ಫೇಸ್‌ಬುಕ್ ಬಳಕೆದಾರ “ಏಷ್ಯಾದ ಮೊದಲ ಮಸೀದಿ ಮುಂಚೆ ದೇವಾಲಯವಾಗಿತ್ತು. ಪಣವಿಡುವೆವು ಭಗವಂತನ ಪಾದದ ಮೆಲಾಣೆ.. ಮಂದಿರವಲ್ಲೇ ಕಟ್ಟುವೆವು” ಎಂದು ಪುರಾತನ ಮಸೀದಿಯ ವಿಡಿಯೋ ಹಂಚಿಕೊಂಡಿದ್ದಾರೆ.

ಇನ್ನಿಬ್ಬರು ಎಕ್ಸ್ ಬಳಕೆದಾರರು “ಕರ್ನಾಟಕದಲ್ಲಿ ಹಿಂದೂ ಮಂದಿರವನ್ನು ಜಿಹಾದಿಗಳು ವಶಪಡಿಸಿಕೊಂಡು ಮಸೀದಿಯಾಗಿ ಪರಿವರ್ತಿಸಿದ್ದಾರೆ” ಎಂದು ಹಿಂದಿಯಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಪೋಸ್ಟ್ ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ. ಇದಕ್ಕಾಗಿ ನಾವು ವೈರಲ್‌ ವಿಡಿಯೋದಲ್ಲಿರುವ ಮಸೀದಿಯ ಸ್ಕ್ರೀನ್ ಶಾಟ್ ತೆಗೆದು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ವಿಡಿಯೋದಲ್ಲಿರುವ ಮಸೀದಿಯು ಹಲವಾರು ಯೂಟ್ಯೂಬ್ ಚಾನೆಲ್‌ಗಳಲ್ಲಿ ಕಂಡು ಬಂದಿದೆ.

‘M Shameer’ಎಂಬ ಹೆಸರಿನ ಯೂಟ್ಯೂಬ್ ಚಾನೆಲ್‌ನಲ್ಲಿ ಮಸೀದಿಯ ಸಂಪೂರ್ಣ ವಿಡಿಯೋ ಅಪ್ಲೋಡ್ ಮಾಡಲಾಗಿದ್ದು, ಇದು ಭಾರತದ ಮೂರನೇ ಅತ್ಯಂತ ಪುರಾತನ ಮಸೀದಿಯಾಗಿರುವ ಮಂಗಳೂರಿನ ಝೀನತ್ ಬಕ್ಷ್ ಮಸೀದಿ ಎಂದು ತಿಳಿಸಿದ್ದಾರೆ.

ಯೂಟ್ಯೂಬ್ ಲಿಂಕ್ 

ನಾವು ಗೂಗಲ್‌ನಲ್ಲಿ ‘ಝೀನತ್ ಬಕ್ಷ್’ ಎಂದು ಸರ್ಚ್‌ ಮಾಡಿದಾಗ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಝೀನತ್ ಬಕ್ಸ್‌ ಮಸೀದಿಯ ಕುರಿತು ಮಾಹಿತಿ ದೊರೆತಿದೆ.

ಸರ್ಕಾರದ ವೆಬ್‌ಸೈಟ್‌ನಲ್ಲಿ ಹೇಳಿರುವಂತೆ “ಮಸ್ಜಿದ್ ಝೀನತ್ ಬಕ್ಷ್ ಮಂಗಳೂರಿನ ಬಂದರ್ ಪ್ರದೇಶದಲ್ಲಿದೆ. ಈ ಮಸೀದಿಯು ಪ್ರವಾದಿ ಮೊಹಮ್ಮದ್ ಅವರ ಜೀವನ ಕಥೆಗಳನ್ನು ಚಿತ್ರಿಸುತ್ತದೆ. ಕ್ರಿಸ್ತಶಕ 644 ರಲ್ಲಿ ಅರಬ್ ಮುಸ್ಲಿಂ ವ್ಯಾಪಾರಿಗಳಿಂದ ಇದು ಸ್ಥಾಪಿಸಲ್ಪಟ್ಟಿದೆ ಎಂದು ನಂಬಲಾಗಿದೆ. ಈ ಮಸೀದಿಯು ತನ್ನ ಶುದ್ಧ ಭಾರತೀಯ ವಾಸ್ತುಶಿಲ್ಪದ ಶೈಲಿಯಿಂದಾಗಿ ಎಲ್ಲಾ ಮಸೀದಿಗಳನ್ನು ಮೀರಿಸುತ್ತದೆ. ಇದು ಬಹುಶಃ ಸಂಪೂರ್ಣವಾಗಿ ಮರದಿಂದ ಮಾಡಿದ ಕರ್ನಾಟಕದ ಏಕೈಕ ಮಸೀದಿಯಾಗಿದೆ. ಮಸೀದಿಯ ಮುಖ್ಯ ಮುಖ್ಯಾಂಶವೆಂದರೆ ತೇಗದಿಂದ ಮಾಡಿದ 16 ಕಂಬಗಳನ್ನು ಇದು ಒಳಗೊಂಡಿದೆ.

ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ವೆಬ್‌ಸೈಟ್ ಲಿಂಕ್

ಸರ್ಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಹೇಳಿರುವಂತೆ ಝೀನತ್ ಬಕ್ಷ್ ಮಸೀದಿಯು ಯಾವುದೇ ದೇವಸ್ಥಾನವನ್ನು ಪರಿವರ್ತಿಸಿ ಮಾಡಿರುವಂತದಲ್ಲ.

“ಝೀನತ್ ಬಕ್ಷ್ ಜುಮಾ ಮಸೀದಿ (ಸೌಂದರ್ಯವನ್ನು ಪ್ರತಿಬಿಂಬಿಸುವ ಮಸೀದಿ) ಸಾಮಾನ್ಯವಾಗಿ ಮಸ್ಜಿದ್ ಜೀನತ್ ಬಕ್ಷ್ ಎಂದು ಇದನ್ನು ಕರೆಯಲ್ಪಡುತ್ತದೆ. ಇದು ಭಾರತದ 3 ನೇ ಅತ್ಯಂತ ಹಳೆಯ ಮಸೀದಿಯಾಗಿದೆ ಮತ್ತು 644 ಎಡಿ ಯಲ್ಲಿ ನಿರ್ಮಿಸಲಾದ ಕರ್ನಾಟಕ ರಾಜ್ಯದ ಅತ್ಯಂತ ಹಳೆಯ ಮಸೀದಿಯಾಗಿದೆ. ‘ಬೆಳ್ಳಿಯೆ ಪಲ್ಲಿ’ (ಬ್ಯಾರಿ ಭಾಷೆಯಲ್ಲಿ ದೊಡ್ಡ ಮಸೀದಿ) ಎಂದೂ ಕರೆಯಲ್ಪಡುವ ಈ ಮಸೀದಿಯು ಮಂಗಳೂರು ನಗರದ ಬಂದರ್ ಪ್ರದೇಶದಲ್ಲಿದೆ. ಇದು ಶುದ್ಧ ಭಾರತೀಯ ವಾಸ್ತುಶಿಲ್ಪ ಶೈಲಿಗೆ ಹೆಸರುವಾಸಿಯಾಗಿದೆ” ಎಂದು ವಿಕಿಪೀಡಿಯದಲ್ಲಿ ಮಾಹಿತಿಯಿದೆ.

18ನೇ ಶತಮಾನದಲ್ಲಿ, ಅಂದಿನ ಮೈಸೂರು ಸಂಸ್ಥಾನದ ರಾಜನಾಗಿದ್ದ ಟಿಪ್ಪು ಸುಲ್ತಾನ್ ಅವರು ಮಸೀದಿಯ ನವೀಕರಣ ಕಾರ್ಯ ನಡೆಸಿದ್ದರು. ಮಾತ್ರವಲ್ಲದೆ ಸೊಗಸಾದ ಮರದ ಕೆತ್ತನೆಯಿಂದ ಮಸೀದಿಯನ್ನು ಸುಂದರಗೊಳಿಸಿದ್ದರು. ಅಲ್ಲದೆ, ‘ಮಾಲಿಕ್ ದೀನಾರ್ ವೆಳಿಯ ಜುಮಅತ್ ಮಸ್ಜಿದ್’ ಎಂದಿದ್ದ ಮಸೀದಿಯ ಹೆಸರನ್ನು ‘ಝೀನತ್ ಬಕ್ಷ್’ ಎಂದು ಬದಲಾಯಿಸಿದರು ಎಂದು ಹೇಳಲಾಗಿದೆ.

ವಿಕಿಪೀಡಿಯ ಲಿಂಕ್ 

ಇವಿಷ್ಟೆ ಅಲ್ಲದೆ ಝೀನತ್ ಬಕ್ಷ್ ಮಸೀದಿಯ ಕುರಿತು ಹಲವಾರು ಲೇಖನಗಳು ಆನ್‌ಲೈನ್‌ನಲ್ಲಿ ಲಭ್ಯವಿದೆ. ಇವೆಲ್ಲದರ ಆಧಾರದಲ್ಲಿ ಹೇಳುವುದಾದರೆ, ವೈರಲ್ ವಿಡಿಯೋದಲ್ಲಿರುವುದು ಮಂಗಳೂರಿನ ಝೀನತ್ ಬಕ್ಷ್ ಮಸೀದಿ. ಅದು ಮುಂಚೆ ದೇವಸ್ಥಾನವಾಗಿತ್ತು ಎಂಬುವುದು ಸುಳ್ಳು.

ಮಸೀದಿಯ ಇತಿಹಾಸದ ಕುರಿತ ಇನ್ನಷ್ಟು ಲೇಖನಗಳುಇಲ್ಲಿ ಇಲ್ಲಿ ಇಲ್ಲಿ

ಸುಳ್ಳು : ಏಷ್ಯಾದ ಮೊದಲ ಮಸೀದಿ ಮುಂಚೆ ದೇವಾಲಯವಾಗಿತ್ತು. ಕರ್ನಾಟಕದಲ್ಲಿ ಹಿಂದೂ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ.

ಸತ್ಯ :
ವೈರಲ್ ವಿಡಿಯೋದಲ್ಲಿರುವುದು ಮಂಗಳೂರಿನ ಝೀನತ್ ಬಕ್ಷ್ ಮಸೀದಿ. ಅದು ಮಂದಿರವನ್ನು ಮಸೀದಿಯಾಗಿ ಪರಿವರ್ತಿಸಿದಲ್ಲ. 

ಇದನ್ನೂ ಓದಿ : Fact Check: ಮಸೀದಿ ಮುಂದೆ ಮಹಿಳೆಯರಿಂದ ಅಶ್ಲೀಲ ಕೃತ್ಯವೆಂದು ಸುಳ್ಳು ಸುದ್ದಿ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...