Homeಫ್ಯಾಕ್ಟ್‌ಚೆಕ್Fact Check: ಕರ್ನಾಟಕದಲ್ಲಿ ಮಂದಿರವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎಂಬುವುದು ಸುಳ್ಳು

Fact Check: ಕರ್ನಾಟಕದಲ್ಲಿ ಮಂದಿರವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

“ಏಷ್ಯಾದ ಮೊದಲ ಮಸೀದಿ ಮುಂಚೆ ದೇವಾಲಯವಾಗಿತ್ತು. ಕರ್ನಾಟಕದಲ್ಲಿ ಹಿಂದೂ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ” ಇತ್ಯಾದಿ ಬರಹಗಳೊಂದಿಗೆ ಪ್ರಾಚೀನ ಮಸೀದಿಯೊಂದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

‘ಕೇಶವ ಬೀಜಾಡಿ’ ಎಂಬ ಫೇಸ್‌ಬುಕ್ ಬಳಕೆದಾರ “ಏಷ್ಯಾದ ಮೊದಲ ಮಸೀದಿ ಮುಂಚೆ ದೇವಾಲಯವಾಗಿತ್ತು. ಪಣವಿಡುವೆವು ಭಗವಂತನ ಪಾದದ ಮೆಲಾಣೆ.. ಮಂದಿರವಲ್ಲೇ ಕಟ್ಟುವೆವು” ಎಂದು ಪುರಾತನ ಮಸೀದಿಯ ವಿಡಿಯೋ ಹಂಚಿಕೊಂಡಿದ್ದಾರೆ.

ಇನ್ನಿಬ್ಬರು ಎಕ್ಸ್ ಬಳಕೆದಾರರು “ಕರ್ನಾಟಕದಲ್ಲಿ ಹಿಂದೂ ಮಂದಿರವನ್ನು ಜಿಹಾದಿಗಳು ವಶಪಡಿಸಿಕೊಂಡು ಮಸೀದಿಯಾಗಿ ಪರಿವರ್ತಿಸಿದ್ದಾರೆ” ಎಂದು ಹಿಂದಿಯಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಪೋಸ್ಟ್ ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ. ಇದಕ್ಕಾಗಿ ನಾವು ವೈರಲ್‌ ವಿಡಿಯೋದಲ್ಲಿರುವ ಮಸೀದಿಯ ಸ್ಕ್ರೀನ್ ಶಾಟ್ ತೆಗೆದು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ವಿಡಿಯೋದಲ್ಲಿರುವ ಮಸೀದಿಯು ಹಲವಾರು ಯೂಟ್ಯೂಬ್ ಚಾನೆಲ್‌ಗಳಲ್ಲಿ ಕಂಡು ಬಂದಿದೆ.

‘M Shameer’ಎಂಬ ಹೆಸರಿನ ಯೂಟ್ಯೂಬ್ ಚಾನೆಲ್‌ನಲ್ಲಿ ಮಸೀದಿಯ ಸಂಪೂರ್ಣ ವಿಡಿಯೋ ಅಪ್ಲೋಡ್ ಮಾಡಲಾಗಿದ್ದು, ಇದು ಭಾರತದ ಮೂರನೇ ಅತ್ಯಂತ ಪುರಾತನ ಮಸೀದಿಯಾಗಿರುವ ಮಂಗಳೂರಿನ ಝೀನತ್ ಬಕ್ಷ್ ಮಸೀದಿ ಎಂದು ತಿಳಿಸಿದ್ದಾರೆ.

ಯೂಟ್ಯೂಬ್ ಲಿಂಕ್ 

ನಾವು ಗೂಗಲ್‌ನಲ್ಲಿ ‘ಝೀನತ್ ಬಕ್ಷ್’ ಎಂದು ಸರ್ಚ್‌ ಮಾಡಿದಾಗ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಝೀನತ್ ಬಕ್ಸ್‌ ಮಸೀದಿಯ ಕುರಿತು ಮಾಹಿತಿ ದೊರೆತಿದೆ.

ಸರ್ಕಾರದ ವೆಬ್‌ಸೈಟ್‌ನಲ್ಲಿ ಹೇಳಿರುವಂತೆ “ಮಸ್ಜಿದ್ ಝೀನತ್ ಬಕ್ಷ್ ಮಂಗಳೂರಿನ ಬಂದರ್ ಪ್ರದೇಶದಲ್ಲಿದೆ. ಈ ಮಸೀದಿಯು ಪ್ರವಾದಿ ಮೊಹಮ್ಮದ್ ಅವರ ಜೀವನ ಕಥೆಗಳನ್ನು ಚಿತ್ರಿಸುತ್ತದೆ. ಕ್ರಿಸ್ತಶಕ 644 ರಲ್ಲಿ ಅರಬ್ ಮುಸ್ಲಿಂ ವ್ಯಾಪಾರಿಗಳಿಂದ ಇದು ಸ್ಥಾಪಿಸಲ್ಪಟ್ಟಿದೆ ಎಂದು ನಂಬಲಾಗಿದೆ. ಈ ಮಸೀದಿಯು ತನ್ನ ಶುದ್ಧ ಭಾರತೀಯ ವಾಸ್ತುಶಿಲ್ಪದ ಶೈಲಿಯಿಂದಾಗಿ ಎಲ್ಲಾ ಮಸೀದಿಗಳನ್ನು ಮೀರಿಸುತ್ತದೆ. ಇದು ಬಹುಶಃ ಸಂಪೂರ್ಣವಾಗಿ ಮರದಿಂದ ಮಾಡಿದ ಕರ್ನಾಟಕದ ಏಕೈಕ ಮಸೀದಿಯಾಗಿದೆ. ಮಸೀದಿಯ ಮುಖ್ಯ ಮುಖ್ಯಾಂಶವೆಂದರೆ ತೇಗದಿಂದ ಮಾಡಿದ 16 ಕಂಬಗಳನ್ನು ಇದು ಒಳಗೊಂಡಿದೆ.

ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ವೆಬ್‌ಸೈಟ್ ಲಿಂಕ್

ಸರ್ಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಹೇಳಿರುವಂತೆ ಝೀನತ್ ಬಕ್ಷ್ ಮಸೀದಿಯು ಯಾವುದೇ ದೇವಸ್ಥಾನವನ್ನು ಪರಿವರ್ತಿಸಿ ಮಾಡಿರುವಂತದಲ್ಲ.

“ಝೀನತ್ ಬಕ್ಷ್ ಜುಮಾ ಮಸೀದಿ (ಸೌಂದರ್ಯವನ್ನು ಪ್ರತಿಬಿಂಬಿಸುವ ಮಸೀದಿ) ಸಾಮಾನ್ಯವಾಗಿ ಮಸ್ಜಿದ್ ಜೀನತ್ ಬಕ್ಷ್ ಎಂದು ಇದನ್ನು ಕರೆಯಲ್ಪಡುತ್ತದೆ. ಇದು ಭಾರತದ 3 ನೇ ಅತ್ಯಂತ ಹಳೆಯ ಮಸೀದಿಯಾಗಿದೆ ಮತ್ತು 644 ಎಡಿ ಯಲ್ಲಿ ನಿರ್ಮಿಸಲಾದ ಕರ್ನಾಟಕ ರಾಜ್ಯದ ಅತ್ಯಂತ ಹಳೆಯ ಮಸೀದಿಯಾಗಿದೆ. ‘ಬೆಳ್ಳಿಯೆ ಪಲ್ಲಿ’ (ಬ್ಯಾರಿ ಭಾಷೆಯಲ್ಲಿ ದೊಡ್ಡ ಮಸೀದಿ) ಎಂದೂ ಕರೆಯಲ್ಪಡುವ ಈ ಮಸೀದಿಯು ಮಂಗಳೂರು ನಗರದ ಬಂದರ್ ಪ್ರದೇಶದಲ್ಲಿದೆ. ಇದು ಶುದ್ಧ ಭಾರತೀಯ ವಾಸ್ತುಶಿಲ್ಪ ಶೈಲಿಗೆ ಹೆಸರುವಾಸಿಯಾಗಿದೆ” ಎಂದು ವಿಕಿಪೀಡಿಯದಲ್ಲಿ ಮಾಹಿತಿಯಿದೆ.

18ನೇ ಶತಮಾನದಲ್ಲಿ, ಅಂದಿನ ಮೈಸೂರು ಸಂಸ್ಥಾನದ ರಾಜನಾಗಿದ್ದ ಟಿಪ್ಪು ಸುಲ್ತಾನ್ ಅವರು ಮಸೀದಿಯ ನವೀಕರಣ ಕಾರ್ಯ ನಡೆಸಿದ್ದರು. ಮಾತ್ರವಲ್ಲದೆ ಸೊಗಸಾದ ಮರದ ಕೆತ್ತನೆಯಿಂದ ಮಸೀದಿಯನ್ನು ಸುಂದರಗೊಳಿಸಿದ್ದರು. ಅಲ್ಲದೆ, ‘ಮಾಲಿಕ್ ದೀನಾರ್ ವೆಳಿಯ ಜುಮಅತ್ ಮಸ್ಜಿದ್’ ಎಂದಿದ್ದ ಮಸೀದಿಯ ಹೆಸರನ್ನು ‘ಝೀನತ್ ಬಕ್ಷ್’ ಎಂದು ಬದಲಾಯಿಸಿದರು ಎಂದು ಹೇಳಲಾಗಿದೆ.

ವಿಕಿಪೀಡಿಯ ಲಿಂಕ್ 

ಇವಿಷ್ಟೆ ಅಲ್ಲದೆ ಝೀನತ್ ಬಕ್ಷ್ ಮಸೀದಿಯ ಕುರಿತು ಹಲವಾರು ಲೇಖನಗಳು ಆನ್‌ಲೈನ್‌ನಲ್ಲಿ ಲಭ್ಯವಿದೆ. ಇವೆಲ್ಲದರ ಆಧಾರದಲ್ಲಿ ಹೇಳುವುದಾದರೆ, ವೈರಲ್ ವಿಡಿಯೋದಲ್ಲಿರುವುದು ಮಂಗಳೂರಿನ ಝೀನತ್ ಬಕ್ಷ್ ಮಸೀದಿ. ಅದು ಮುಂಚೆ ದೇವಸ್ಥಾನವಾಗಿತ್ತು ಎಂಬುವುದು ಸುಳ್ಳು.

ಮಸೀದಿಯ ಇತಿಹಾಸದ ಕುರಿತ ಇನ್ನಷ್ಟು ಲೇಖನಗಳುಇಲ್ಲಿ ಇಲ್ಲಿ ಇಲ್ಲಿ

ಸುಳ್ಳು : ಏಷ್ಯಾದ ಮೊದಲ ಮಸೀದಿ ಮುಂಚೆ ದೇವಾಲಯವಾಗಿತ್ತು. ಕರ್ನಾಟಕದಲ್ಲಿ ಹಿಂದೂ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ.

ಸತ್ಯ :
ವೈರಲ್ ವಿಡಿಯೋದಲ್ಲಿರುವುದು ಮಂಗಳೂರಿನ ಝೀನತ್ ಬಕ್ಷ್ ಮಸೀದಿ. ಅದು ಮಂದಿರವನ್ನು ಮಸೀದಿಯಾಗಿ ಪರಿವರ್ತಿಸಿದಲ್ಲ. 

ಇದನ್ನೂ ಓದಿ : Fact Check: ಮಸೀದಿ ಮುಂದೆ ಮಹಿಳೆಯರಿಂದ ಅಶ್ಲೀಲ ಕೃತ್ಯವೆಂದು ಸುಳ್ಳು ಸುದ್ದಿ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...